Homeಮುಖಪುಟದೇಶದ ಶೇ.90ರಷ್ಟು ನೌಕರರ ತಿಂಗಳ ಸಂಬಳ 25000 ರುಪಾಯಿಗಳಿಗಿಂತ ಕಡಿಮೆ!

ದೇಶದ ಶೇ.90ರಷ್ಟು ನೌಕರರ ತಿಂಗಳ ಸಂಬಳ 25000 ರುಪಾಯಿಗಳಿಗಿಂತ ಕಡಿಮೆ!

- Advertisement -
- Advertisement -

ಮೊದಲಿಗೆ ಈ ಕೆಲವು ಅಂಕಿಅಂಶಗಳ ಬಗ್ಗೆ ಗಮನ ಹರಿಸೋಣ;

  • ಈ ದೇಶದಲ್ಲಿ ದುಡಿಯುತ್ತಿರುವ ಒಟ್ಟು 60 ಕೋಟಿ ಜನರಲ್ಲಿ 9 ಕೋಟಿ ಜನರ ತಿಂಗಳ ಸರಾಸರಿ ಆದಾಯ 5000 ರುಪಾಯಿಗಿಂತ ಕಡಿಮೆ!
  • 2019-20ರ ಒಟ್ಟು ವಾರ್ಷಿಕ ವೇತನದಲ್ಲಿ ಹೆಚ್ಚು ವೇತನ (ಮೇಲಿನ 1% ಜನ) ಪಡೆಯುವವರ (ಅಂದಾಜು 60 ಲಕ್ಷ ಜನ) ಪಾಲು ಶೇ.6.48!
  • ಅದೇ 2019-20ರ ಒಟ್ಟು ವಾರ್ಷಿಕ ವೇತನದಲ್ಲಿ ಅತ್ಯಂತ ಕಡಿಮೆ ವೇತನ (ಕೆಳಗಿನ 10% ಜನ) ಪಡೆಯುವರ (ಅಂದಾಜು 6 ಕೋಟಿ ಜನ) ಪಾಲು ಕೇವಲ ಕೇವಲ ಶೇ.1.71!
  • ಇದೇ ಸಮಯದಲ್ಲಿ, ಒಟ್ಟು ವಾರ್ಷಿಕ ವೇತನದಲ್ಲಿ ಹೆಚ್ಚು ಸಂಬಳ ಪಡೆಯುವ (ಮೇಲಿನ 10% ಜನ) ಗುಂಪಿನ (ಅಂದಾಜು 6 ಕೋಟಿ) ಜನರ ಪಾಲು ಶೇ.32.5!
  • 2017-18ರಿಂದ 2019-20ರ ನಡುವೆ ಕಡಿಮೆ ವೇತನ (ಕೆಳಗಿನ 50%) ಗುಂಪಿನ ಜನರ ವೇತನ ಶೇ.3.9ನಷ್ಟು ಹೆಚ್ಚಾಗಿದ್ದರೆ, ಹೆಚ್ಚು ವೇತನ ಗುಂಪಿನ (ಮೇಲಿನ 10% ) ಜನರ ವೇತನ ಶೇ.8.1ರಷ್ಟು ಹೆಚ್ಚಾಗಿದೆ.
  • ಅದೇ ಕಾಲಘಟ್ಟದಲ್ಲಿ ಹೆಚ್ಚು ವೇತನ (ಮೇಲಿನ 1%) ಗುಂಪಿನ ಮಂದಿಯ ವೇತನ ಶೇ.15ರಷ್ಟು ಹೆಚ್ಚಾಗಿದೆ!
  • ಇದಕ್ಕೆ ತದ್ವಿರುದ್ಧವಾಗಿ ಕಡಿಮೆ ವೇತನ (ಕೆಳಗಿನ 10%) ಗುಂಪಿನ ಮಂದಿಯ ವೇತನ ಶೇ.1ರಷ್ಟು ಇಳಿಕೆಯಾಗಿದೆ!

ಮೇಲಿನವು ಪ್ರಧಾನಮಂತ್ರಿಯ ಆರ್ಥಿಕ ಸಲಹಾ ಪರಿಷತ್ ಸಿದ್ಧಪಡಿಸಿ ಪ್ರಧಾನಿಗೆ ಸಲ್ಲಿಸಿರುವ ’ಭಾರತದಲ್ಲಿ ಅಸಮಾನತೆಯ ಸ್ಥಿತಿಗತಿ’ ಕುರಿತ ವರದಿಯಲ್ಲಿರುವ ಕೆಲ ಮುಖ್ಯ ಅಂಕಿಅಂಶಗಳು.

ನವ ಉದಾರವಾದಿ ಆರ್ಥಿಕ ನೀತಿಗಳು ವಿಶ್ವದಾದ್ಯಂತ ಅಸಮಾನತೆಯನ್ನು ಹೆಚ್ಚಿಸುತ್ತಲೇ ಇರುವುದು ಈಗ ಮನುಕುಲದ ಭೀಕರ ಸಮಸ್ಯೆಯಾಗಿ ಬಹುತೇಕ ಪರಿವರ್ತಿತವಾಗಿದೆ. ಭಾರತದಲ್ಲೂ ಕೂಡ ಈ ನವ ಆರ್ಥಿಕ ನೀತಿಗಳು ಶ್ರೀಮಂತರನ್ನು ಕಲ್ಪನೆಗೆ ನಿಲುಕದಷ್ಟು ಮತ್ತಷ್ಟು ಶ್ರೀಮಂತರನ್ನಾಗಿಸುತ್ತಾ, ಬಡವರನ್ನು ಮತ್ತಷ್ಟು ಕಡುಭೀಕರ ಬಡತನದತ್ತ ತಳ್ಳುತ್ತ ಬಂದಿವೆ. ಇದು ಉಳ್ಳವರ ಮತ್ತು ಬಡವರ ಮಧ್ಯೆ ಭಾರೀ ಕಂದಕವನ್ನೇ ಸೃಷ್ಟಿಸಿದ್ದು, ಈಗಾಗಲೇ ಇದರ ಘೋರ ದುರಂತಗಳನ್ನು ನಾವು ನೋಡುತ್ತಿದ್ದೇವೆ ಮತ್ತು ಅನುಭವಿಸುತ್ತಿದ್ದೇವೆ.

ಈ ವರ್ಷದ ಜನವರಿಯಲ್ಲಿ ಆಕ್ಸ್‌ಫಾಮ್‌ನವರ (Oxfam report) “ಅಸಮಾನತೆ ಕೊಲ್ಲುತ್ತದೆ” (Inequality kills) ಎಂಬ ವರದಿಯಲ್ಲಿ ಅತ್ಯಂತ ಸ್ಪಷ್ಟ ಅಂಕಿಅಂಶಗಳೊಂದಿಗೆ ಕೋವಿಡ್ ಕಾರಣಕ್ಕೆ ಭಾರತದಲ್ಲಿ (ವಿಶ್ವದ ಬೇರೆ ದೇಶಗಳಲ್ಲಿ ಕೂಡ) ಹೇಗೆ ಬಡವರೇ ಹೆಚ್ಚಾಗಿ ಸತ್ತರು ಎಂಬುದನ್ನು ಆಳವಾದ ಅಧ್ಯಯನದ ಮೂಲಕ ತೋರಿಸಲಾಗಿದೆ. ಮತ್ತು, ಹಾಗೆ ಬಡವರೇ ಹೆಚ್ಚಾಗಿ ಸಾಯಲು ಕೋವಿಡ್‌ಗಿಂತ ಅಸಮಾನತೆಯೇ ಹೇಗೆ ಮುಖ್ಯ ಕಾರಣವಾಗಿತ್ತು ಎಂಬುದನ್ನೂ ಆ ವರದಿಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.

ಅದೇ ವರದಿಯಲ್ಲಿ, ಕೋವಿಡ್ ಲಾಕ್‌ಡೌನ್‌ನಿಂದ ಇಡೀ ದೇಶದ ಆರ್ಥಿಕತೆ ತತ್ತರಿಸಿದ್ದಾಗಲೂ. ಗೌತಮ್ ಅದಾನಿಯವರ ಆಸ್ತಿ ಕೇವಲ ಒಂದೂವರೆ ವರ್ಷಗಳಲ್ಲಿ ಸಾವಿರಾರು ಕೋಟಿಗಳಷ್ಟು ಹೆಚ್ಚಾಗಿದ್ದು, ಭಾರತದಲ್ಲಿ ನೂರು ಜನ ಹೊಸಾ ಬಿಲಿಯನೇರುಗಳು ಸೃಷ್ಟಿಯಾಗಿದ್ದು ಮತ್ತು ಅದೇ ಒಂದೂವರೆ ವರ್ಷಗಳಲ್ಲಿ ಎಂಟೂವರೆ ಕೋಟಿಯಷ್ಟು ಭಾರತೀಯರು ಕಡುಬಡತನಕ್ಕೆ ಜಾರಿದ್ದನ್ನು ಅಧ್ಯಯನದ ಮೂಲಕ ತಿಳಿಸಲಾಗಿದೆ.

ಅಂದರೆ, ಇದು ಭಾರತ ಅಳವಡಿಸಿಕೊಂಡಿರುವ ಆರ್ಥಿಕ ನೀತಿಯ ಕಥೆಯನ್ನು ಹೇಳುತ್ತದೆ. ಹೇಗೆ ಇಡೀ ದೇಶ ಆರ್ಥಿಕವಾಗಿ ಹಿಂಜರಿದಾಗಲೂ ಅತಿ ಶ್ರೀಮಂತರು ಇನ್ನೂ ಶ್ರೀಮಂತರಾಗಲು ದೇಶದ ಆರ್ಥಿಕ ನೀತಿ ಪೂರಕವಾಗಿದೆ ಎಂದು Oxfam ವರದಿ ಸ್ಪಷ್ಟಪಡಿಸುತ್ತದೆ.

ಆದರೆ, Oxfam ವರದಿಯನ್ನು ತಿರಸ್ಕರಿಸಿದ ಒಕ್ಕೂಟ ಸರ್ಕಾರ ಈಗ ತನ್ನದೇ ವರದಿಯಲ್ಲಿ ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಅಸಮಾನತೆ ಜಾಸ್ತಿಯಾಗುತ್ತಲೇ ಬಂದಿರುವುದನ್ನು ಒಪ್ಪಿಕೊಂಡಿದೆ.
ಪ್ರಧಾನ ಮಂತ್ರಿಯ ಆರ್ಥಿಕ ಸಲಹಾ ಪರಿಷತ್ ತನ್ನ ’ಭಾರತದಲ್ಲಿ ಅಸಮಾನತೆಯ ಸ್ಥಿತಿಗತಿ’ ವರದಿಯಲ್ಲಿ ಅಸಮಾನತೆ ಜಾಸ್ತಿಯಾಗುತ್ತಿರುವದನ್ನು ಒಪ್ಪಿಕೊಂಡಿರುವುದಷ್ಟೇ ಅಲ್ಲದೆ, ಇದರ ಅಪಾಯಗಳನ್ನೂ ಗುರುತಿಸಿದೆ.

ಯಾವುದೇ ಸಮಾಜದಲ್ಲಿ ಹೆಚ್ಚುತ್ತಿರುವ ಈ ಅಸಮಾನತೆಯ ತಣ್ಣನೆಯ ಕ್ರೌರ್ಯ ಏನು ಎಂಬುದು ‘Inequality kills ( ಅಸಮಾನತೆ ಕೊಲ್ಲುತ್ತದೆ) ಎನ್ನುವ ಈ ಒಂದೇಒಂದು ಪದಗುಚ್ಚದ ಮೂಲಕ ನಮಗೆ ಸುಲಭವಾಗಿ ಅರ್ಥವಾಗುತ್ತದೆ. ಸದ್ಯದ ಆರ್ಥಿಕ ನೀತಿಯೊಳಗೆ ಈ ಅಸಮಾನತೆಯನ್ನು ಒಂದು ಮಟ್ಟಿಗೆ ಕಡಿಮೆ ಮಾಡಲು ಇರುವ ದಾರಿಯೆಂದರೆ ಸಮಾಜ ಕಲ್ಯಾಣ (Social welfare scheme) ಕಾರ್ಯಕ್ರಮಗಳಿಗೆ ಹೆಚ್ಚುಹೆಚ್ಚು ಹಣ ಒದಗಿಸುವುದು ಮತ್ತು ದೈನಂದಿನ ಬಳಕೆ ವಸ್ತುಗಳ ಬೆಲೆಗಳನ್ನು ನಿಯಂತ್ರಣದಲ್ಲಿಡುವುದು.

ಆದರೆ, ನಮ್ಮ ದೇಶದ ದುರಂತವನ್ನು ಈ ಕಾಲಾನುಕ್ರಮದ ಮೂಲಕ ಅರ್ಥ ಮಾಡಿಕೊಳ್ಳಬಹುದು;

1) ಕಳೆದ ಜನವರಿಯಲ್ಲಿ Oxfam ವರದಿ ಬರುತ್ತದೆ.

2) ಆ ವರದಿಯಲ್ಲಿ ಸ್ಪಷ್ಟವಾಗಿ ಕೋವಿಡ್ ವೇಳೆಯಲ್ಲಿ ದೇಶದೊಳಗೆ ಅಸಮಾನತೆ ಮತ್ತಷ್ಟು ಹೆಚ್ಚಾಗಿರುವುದನ್ನು ತೋರಿಸಲಾಗಿರುತ್ತದೆ.

3) ಇದಕ್ಕೆ ಒಂದು ಮಟ್ಟದ ಪ್ರಮುಖ ಪರಿಹಾರವೆಂದರೆ ಸೋಷಿಯಲ್ ವೆಲ್‌ಫೇರ್ ಸ್ಕೀಮ್‌ಗಳಿಗೆ ಹೆಚ್ಚಿನ ಅನುದಾನ ಕೊಡುವುದೆಂದೂ ಹೇಳಲಾಗಿರುತ್ತದೆ.

ಆದರೆ, ಒಕ್ಕೂಟ ಸರ್ಕಾರ ಈ ಫೆಬ್ರವರಿಯಲ್ಲಿ ಮಂಡಿಸಿದ ಬಜೆಟ್ಟಿನಲ್ಲಿ ಅತ್ಯಂತ ಅಮಾನವೀಯವಾಗಿ ಸೋಷಿಯಲ್ ವೆಲ್‌ಫೇರ್ ಸ್ಕೀಮ್‌ಗಳಿಗೆ ಕಳೆದ ವರ್ಷಕ್ಕಿಂತಲೂ ಕಡಿಮೆ ಹಣ ನಿಗದಿಪಡಿಸುತ್ತದೆ. ಅಂದರೆ, ಈ ದೇಶದಲ್ಲಿ ಅಸಮಾನತೆ ಕಡಿಮೆ ಮಾಡುವ ಯಾವ ಅಶಾಭಾವನೆಯನ್ನೂ ಈ ಬಜೆಟ್ ಹುಟ್ಟುಹಾಕುವುದಿಲ್ಲ.

ಈಗ ಸರ್ಕಾರದ ಸಮಿತಿಯ ವರದಿಯೇ ದೇಶದಲ್ಲಿ ಅಸಮಾನತೆ ಹೆಚ್ಚುತ್ತಿರುವುದಾಗಿ ಹೇಳಿರುವುದನ್ನಾದರೂ ಒಕ್ಕೂಟ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಿದೆ. ಅಸಮಾನತೆಯನ್ನು ತಗ್ಗಿಸಲು ಅಗತ್ಯ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಬೇಕಿದೆ.

ಇಲ್ಲವಾದಲ್ಲಿ, ಈ ದೇಶ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಕುಸಿಯುವ ಅಪಾಯವಿದೆ.

ಡಾ. ಬಿ.ಸಿ. ಬಸವರಾಜು

ಡಾ. ಬಿ.ಸಿ. ಬಸವರಾಜು
ಎಂಜಿನಿಯರಿಂಗ್ ವಿದ್ಯಾಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿ ಕೆಲಸ ನಿರ್ವಹಿಸುತ್ತಿರುವ ಬಸವರಾಜು ಹಾಡುಗಾರರೂ, ಪ್ರಚಲಿತ ವಿದ್ಯಮಾನಗಳಿಗೆ ಲೇಖನಗಳು ಮತ್ತು ವಿಡಿಯೋಗಳ ಮೂಲಕ ನಿರಂತರವಾಗಿ ಪ್ರತಿಕ್ರಿಯಿಸುತ್ತಾರೆ.


ಇದನ್ನೂ ಓದಿ: ವಿಶೇಷ ವರದಿ: ಬಿಜೆಪಿ ಅವಧಿಯಲ್ಲಿ ಪರೀಕ್ಷಾ ಅಕ್ರಮ, ಎಡವಟ್ಟುಗಳು & ಶೈಕ್ಷಣಿಕ ಅವ್ಯವಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...