Homeಮುಖಪುಟದೇಶದ ಶೇ.90ರಷ್ಟು ನೌಕರರ ತಿಂಗಳ ಸಂಬಳ 25000 ರುಪಾಯಿಗಳಿಗಿಂತ ಕಡಿಮೆ!

ದೇಶದ ಶೇ.90ರಷ್ಟು ನೌಕರರ ತಿಂಗಳ ಸಂಬಳ 25000 ರುಪಾಯಿಗಳಿಗಿಂತ ಕಡಿಮೆ!

- Advertisement -
- Advertisement -

ಮೊದಲಿಗೆ ಈ ಕೆಲವು ಅಂಕಿಅಂಶಗಳ ಬಗ್ಗೆ ಗಮನ ಹರಿಸೋಣ;

  • ಈ ದೇಶದಲ್ಲಿ ದುಡಿಯುತ್ತಿರುವ ಒಟ್ಟು 60 ಕೋಟಿ ಜನರಲ್ಲಿ 9 ಕೋಟಿ ಜನರ ತಿಂಗಳ ಸರಾಸರಿ ಆದಾಯ 5000 ರುಪಾಯಿಗಿಂತ ಕಡಿಮೆ!
  • 2019-20ರ ಒಟ್ಟು ವಾರ್ಷಿಕ ವೇತನದಲ್ಲಿ ಹೆಚ್ಚು ವೇತನ (ಮೇಲಿನ 1% ಜನ) ಪಡೆಯುವವರ (ಅಂದಾಜು 60 ಲಕ್ಷ ಜನ) ಪಾಲು ಶೇ.6.48!
  • ಅದೇ 2019-20ರ ಒಟ್ಟು ವಾರ್ಷಿಕ ವೇತನದಲ್ಲಿ ಅತ್ಯಂತ ಕಡಿಮೆ ವೇತನ (ಕೆಳಗಿನ 10% ಜನ) ಪಡೆಯುವರ (ಅಂದಾಜು 6 ಕೋಟಿ ಜನ) ಪಾಲು ಕೇವಲ ಕೇವಲ ಶೇ.1.71!
  • ಇದೇ ಸಮಯದಲ್ಲಿ, ಒಟ್ಟು ವಾರ್ಷಿಕ ವೇತನದಲ್ಲಿ ಹೆಚ್ಚು ಸಂಬಳ ಪಡೆಯುವ (ಮೇಲಿನ 10% ಜನ) ಗುಂಪಿನ (ಅಂದಾಜು 6 ಕೋಟಿ) ಜನರ ಪಾಲು ಶೇ.32.5!
  • 2017-18ರಿಂದ 2019-20ರ ನಡುವೆ ಕಡಿಮೆ ವೇತನ (ಕೆಳಗಿನ 50%) ಗುಂಪಿನ ಜನರ ವೇತನ ಶೇ.3.9ನಷ್ಟು ಹೆಚ್ಚಾಗಿದ್ದರೆ, ಹೆಚ್ಚು ವೇತನ ಗುಂಪಿನ (ಮೇಲಿನ 10% ) ಜನರ ವೇತನ ಶೇ.8.1ರಷ್ಟು ಹೆಚ್ಚಾಗಿದೆ.
  • ಅದೇ ಕಾಲಘಟ್ಟದಲ್ಲಿ ಹೆಚ್ಚು ವೇತನ (ಮೇಲಿನ 1%) ಗುಂಪಿನ ಮಂದಿಯ ವೇತನ ಶೇ.15ರಷ್ಟು ಹೆಚ್ಚಾಗಿದೆ!
  • ಇದಕ್ಕೆ ತದ್ವಿರುದ್ಧವಾಗಿ ಕಡಿಮೆ ವೇತನ (ಕೆಳಗಿನ 10%) ಗುಂಪಿನ ಮಂದಿಯ ವೇತನ ಶೇ.1ರಷ್ಟು ಇಳಿಕೆಯಾಗಿದೆ!

ಮೇಲಿನವು ಪ್ರಧಾನಮಂತ್ರಿಯ ಆರ್ಥಿಕ ಸಲಹಾ ಪರಿಷತ್ ಸಿದ್ಧಪಡಿಸಿ ಪ್ರಧಾನಿಗೆ ಸಲ್ಲಿಸಿರುವ ’ಭಾರತದಲ್ಲಿ ಅಸಮಾನತೆಯ ಸ್ಥಿತಿಗತಿ’ ಕುರಿತ ವರದಿಯಲ್ಲಿರುವ ಕೆಲ ಮುಖ್ಯ ಅಂಕಿಅಂಶಗಳು.

ನವ ಉದಾರವಾದಿ ಆರ್ಥಿಕ ನೀತಿಗಳು ವಿಶ್ವದಾದ್ಯಂತ ಅಸಮಾನತೆಯನ್ನು ಹೆಚ್ಚಿಸುತ್ತಲೇ ಇರುವುದು ಈಗ ಮನುಕುಲದ ಭೀಕರ ಸಮಸ್ಯೆಯಾಗಿ ಬಹುತೇಕ ಪರಿವರ್ತಿತವಾಗಿದೆ. ಭಾರತದಲ್ಲೂ ಕೂಡ ಈ ನವ ಆರ್ಥಿಕ ನೀತಿಗಳು ಶ್ರೀಮಂತರನ್ನು ಕಲ್ಪನೆಗೆ ನಿಲುಕದಷ್ಟು ಮತ್ತಷ್ಟು ಶ್ರೀಮಂತರನ್ನಾಗಿಸುತ್ತಾ, ಬಡವರನ್ನು ಮತ್ತಷ್ಟು ಕಡುಭೀಕರ ಬಡತನದತ್ತ ತಳ್ಳುತ್ತ ಬಂದಿವೆ. ಇದು ಉಳ್ಳವರ ಮತ್ತು ಬಡವರ ಮಧ್ಯೆ ಭಾರೀ ಕಂದಕವನ್ನೇ ಸೃಷ್ಟಿಸಿದ್ದು, ಈಗಾಗಲೇ ಇದರ ಘೋರ ದುರಂತಗಳನ್ನು ನಾವು ನೋಡುತ್ತಿದ್ದೇವೆ ಮತ್ತು ಅನುಭವಿಸುತ್ತಿದ್ದೇವೆ.

ಈ ವರ್ಷದ ಜನವರಿಯಲ್ಲಿ ಆಕ್ಸ್‌ಫಾಮ್‌ನವರ (Oxfam report) “ಅಸಮಾನತೆ ಕೊಲ್ಲುತ್ತದೆ” (Inequality kills) ಎಂಬ ವರದಿಯಲ್ಲಿ ಅತ್ಯಂತ ಸ್ಪಷ್ಟ ಅಂಕಿಅಂಶಗಳೊಂದಿಗೆ ಕೋವಿಡ್ ಕಾರಣಕ್ಕೆ ಭಾರತದಲ್ಲಿ (ವಿಶ್ವದ ಬೇರೆ ದೇಶಗಳಲ್ಲಿ ಕೂಡ) ಹೇಗೆ ಬಡವರೇ ಹೆಚ್ಚಾಗಿ ಸತ್ತರು ಎಂಬುದನ್ನು ಆಳವಾದ ಅಧ್ಯಯನದ ಮೂಲಕ ತೋರಿಸಲಾಗಿದೆ. ಮತ್ತು, ಹಾಗೆ ಬಡವರೇ ಹೆಚ್ಚಾಗಿ ಸಾಯಲು ಕೋವಿಡ್‌ಗಿಂತ ಅಸಮಾನತೆಯೇ ಹೇಗೆ ಮುಖ್ಯ ಕಾರಣವಾಗಿತ್ತು ಎಂಬುದನ್ನೂ ಆ ವರದಿಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.

ಅದೇ ವರದಿಯಲ್ಲಿ, ಕೋವಿಡ್ ಲಾಕ್‌ಡೌನ್‌ನಿಂದ ಇಡೀ ದೇಶದ ಆರ್ಥಿಕತೆ ತತ್ತರಿಸಿದ್ದಾಗಲೂ. ಗೌತಮ್ ಅದಾನಿಯವರ ಆಸ್ತಿ ಕೇವಲ ಒಂದೂವರೆ ವರ್ಷಗಳಲ್ಲಿ ಸಾವಿರಾರು ಕೋಟಿಗಳಷ್ಟು ಹೆಚ್ಚಾಗಿದ್ದು, ಭಾರತದಲ್ಲಿ ನೂರು ಜನ ಹೊಸಾ ಬಿಲಿಯನೇರುಗಳು ಸೃಷ್ಟಿಯಾಗಿದ್ದು ಮತ್ತು ಅದೇ ಒಂದೂವರೆ ವರ್ಷಗಳಲ್ಲಿ ಎಂಟೂವರೆ ಕೋಟಿಯಷ್ಟು ಭಾರತೀಯರು ಕಡುಬಡತನಕ್ಕೆ ಜಾರಿದ್ದನ್ನು ಅಧ್ಯಯನದ ಮೂಲಕ ತಿಳಿಸಲಾಗಿದೆ.

ಅಂದರೆ, ಇದು ಭಾರತ ಅಳವಡಿಸಿಕೊಂಡಿರುವ ಆರ್ಥಿಕ ನೀತಿಯ ಕಥೆಯನ್ನು ಹೇಳುತ್ತದೆ. ಹೇಗೆ ಇಡೀ ದೇಶ ಆರ್ಥಿಕವಾಗಿ ಹಿಂಜರಿದಾಗಲೂ ಅತಿ ಶ್ರೀಮಂತರು ಇನ್ನೂ ಶ್ರೀಮಂತರಾಗಲು ದೇಶದ ಆರ್ಥಿಕ ನೀತಿ ಪೂರಕವಾಗಿದೆ ಎಂದು Oxfam ವರದಿ ಸ್ಪಷ್ಟಪಡಿಸುತ್ತದೆ.

ಆದರೆ, Oxfam ವರದಿಯನ್ನು ತಿರಸ್ಕರಿಸಿದ ಒಕ್ಕೂಟ ಸರ್ಕಾರ ಈಗ ತನ್ನದೇ ವರದಿಯಲ್ಲಿ ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಅಸಮಾನತೆ ಜಾಸ್ತಿಯಾಗುತ್ತಲೇ ಬಂದಿರುವುದನ್ನು ಒಪ್ಪಿಕೊಂಡಿದೆ.
ಪ್ರಧಾನ ಮಂತ್ರಿಯ ಆರ್ಥಿಕ ಸಲಹಾ ಪರಿಷತ್ ತನ್ನ ’ಭಾರತದಲ್ಲಿ ಅಸಮಾನತೆಯ ಸ್ಥಿತಿಗತಿ’ ವರದಿಯಲ್ಲಿ ಅಸಮಾನತೆ ಜಾಸ್ತಿಯಾಗುತ್ತಿರುವದನ್ನು ಒಪ್ಪಿಕೊಂಡಿರುವುದಷ್ಟೇ ಅಲ್ಲದೆ, ಇದರ ಅಪಾಯಗಳನ್ನೂ ಗುರುತಿಸಿದೆ.

ಯಾವುದೇ ಸಮಾಜದಲ್ಲಿ ಹೆಚ್ಚುತ್ತಿರುವ ಈ ಅಸಮಾನತೆಯ ತಣ್ಣನೆಯ ಕ್ರೌರ್ಯ ಏನು ಎಂಬುದು ‘Inequality kills ( ಅಸಮಾನತೆ ಕೊಲ್ಲುತ್ತದೆ) ಎನ್ನುವ ಈ ಒಂದೇಒಂದು ಪದಗುಚ್ಚದ ಮೂಲಕ ನಮಗೆ ಸುಲಭವಾಗಿ ಅರ್ಥವಾಗುತ್ತದೆ. ಸದ್ಯದ ಆರ್ಥಿಕ ನೀತಿಯೊಳಗೆ ಈ ಅಸಮಾನತೆಯನ್ನು ಒಂದು ಮಟ್ಟಿಗೆ ಕಡಿಮೆ ಮಾಡಲು ಇರುವ ದಾರಿಯೆಂದರೆ ಸಮಾಜ ಕಲ್ಯಾಣ (Social welfare scheme) ಕಾರ್ಯಕ್ರಮಗಳಿಗೆ ಹೆಚ್ಚುಹೆಚ್ಚು ಹಣ ಒದಗಿಸುವುದು ಮತ್ತು ದೈನಂದಿನ ಬಳಕೆ ವಸ್ತುಗಳ ಬೆಲೆಗಳನ್ನು ನಿಯಂತ್ರಣದಲ್ಲಿಡುವುದು.

ಆದರೆ, ನಮ್ಮ ದೇಶದ ದುರಂತವನ್ನು ಈ ಕಾಲಾನುಕ್ರಮದ ಮೂಲಕ ಅರ್ಥ ಮಾಡಿಕೊಳ್ಳಬಹುದು;

1) ಕಳೆದ ಜನವರಿಯಲ್ಲಿ Oxfam ವರದಿ ಬರುತ್ತದೆ.

2) ಆ ವರದಿಯಲ್ಲಿ ಸ್ಪಷ್ಟವಾಗಿ ಕೋವಿಡ್ ವೇಳೆಯಲ್ಲಿ ದೇಶದೊಳಗೆ ಅಸಮಾನತೆ ಮತ್ತಷ್ಟು ಹೆಚ್ಚಾಗಿರುವುದನ್ನು ತೋರಿಸಲಾಗಿರುತ್ತದೆ.

3) ಇದಕ್ಕೆ ಒಂದು ಮಟ್ಟದ ಪ್ರಮುಖ ಪರಿಹಾರವೆಂದರೆ ಸೋಷಿಯಲ್ ವೆಲ್‌ಫೇರ್ ಸ್ಕೀಮ್‌ಗಳಿಗೆ ಹೆಚ್ಚಿನ ಅನುದಾನ ಕೊಡುವುದೆಂದೂ ಹೇಳಲಾಗಿರುತ್ತದೆ.

ಆದರೆ, ಒಕ್ಕೂಟ ಸರ್ಕಾರ ಈ ಫೆಬ್ರವರಿಯಲ್ಲಿ ಮಂಡಿಸಿದ ಬಜೆಟ್ಟಿನಲ್ಲಿ ಅತ್ಯಂತ ಅಮಾನವೀಯವಾಗಿ ಸೋಷಿಯಲ್ ವೆಲ್‌ಫೇರ್ ಸ್ಕೀಮ್‌ಗಳಿಗೆ ಕಳೆದ ವರ್ಷಕ್ಕಿಂತಲೂ ಕಡಿಮೆ ಹಣ ನಿಗದಿಪಡಿಸುತ್ತದೆ. ಅಂದರೆ, ಈ ದೇಶದಲ್ಲಿ ಅಸಮಾನತೆ ಕಡಿಮೆ ಮಾಡುವ ಯಾವ ಅಶಾಭಾವನೆಯನ್ನೂ ಈ ಬಜೆಟ್ ಹುಟ್ಟುಹಾಕುವುದಿಲ್ಲ.

ಈಗ ಸರ್ಕಾರದ ಸಮಿತಿಯ ವರದಿಯೇ ದೇಶದಲ್ಲಿ ಅಸಮಾನತೆ ಹೆಚ್ಚುತ್ತಿರುವುದಾಗಿ ಹೇಳಿರುವುದನ್ನಾದರೂ ಒಕ್ಕೂಟ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಿದೆ. ಅಸಮಾನತೆಯನ್ನು ತಗ್ಗಿಸಲು ಅಗತ್ಯ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಬೇಕಿದೆ.

ಇಲ್ಲವಾದಲ್ಲಿ, ಈ ದೇಶ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಕುಸಿಯುವ ಅಪಾಯವಿದೆ.

ಡಾ. ಬಿ.ಸಿ. ಬಸವರಾಜು

ಡಾ. ಬಿ.ಸಿ. ಬಸವರಾಜು
ಎಂಜಿನಿಯರಿಂಗ್ ವಿದ್ಯಾಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿ ಕೆಲಸ ನಿರ್ವಹಿಸುತ್ತಿರುವ ಬಸವರಾಜು ಹಾಡುಗಾರರೂ, ಪ್ರಚಲಿತ ವಿದ್ಯಮಾನಗಳಿಗೆ ಲೇಖನಗಳು ಮತ್ತು ವಿಡಿಯೋಗಳ ಮೂಲಕ ನಿರಂತರವಾಗಿ ಪ್ರತಿಕ್ರಿಯಿಸುತ್ತಾರೆ.


ಇದನ್ನೂ ಓದಿ: ವಿಶೇಷ ವರದಿ: ಬಿಜೆಪಿ ಅವಧಿಯಲ್ಲಿ ಪರೀಕ್ಷಾ ಅಕ್ರಮ, ಎಡವಟ್ಟುಗಳು & ಶೈಕ್ಷಣಿಕ ಅವ್ಯವಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....