Homeಮುಖಪುಟದೇಶದ ಶೇ.90ರಷ್ಟು ನೌಕರರ ತಿಂಗಳ ಸಂಬಳ 25000 ರುಪಾಯಿಗಳಿಗಿಂತ ಕಡಿಮೆ!

ದೇಶದ ಶೇ.90ರಷ್ಟು ನೌಕರರ ತಿಂಗಳ ಸಂಬಳ 25000 ರುಪಾಯಿಗಳಿಗಿಂತ ಕಡಿಮೆ!

- Advertisement -
- Advertisement -

ಮೊದಲಿಗೆ ಈ ಕೆಲವು ಅಂಕಿಅಂಶಗಳ ಬಗ್ಗೆ ಗಮನ ಹರಿಸೋಣ;

  • ಈ ದೇಶದಲ್ಲಿ ದುಡಿಯುತ್ತಿರುವ ಒಟ್ಟು 60 ಕೋಟಿ ಜನರಲ್ಲಿ 9 ಕೋಟಿ ಜನರ ತಿಂಗಳ ಸರಾಸರಿ ಆದಾಯ 5000 ರುಪಾಯಿಗಿಂತ ಕಡಿಮೆ!
  • 2019-20ರ ಒಟ್ಟು ವಾರ್ಷಿಕ ವೇತನದಲ್ಲಿ ಹೆಚ್ಚು ವೇತನ (ಮೇಲಿನ 1% ಜನ) ಪಡೆಯುವವರ (ಅಂದಾಜು 60 ಲಕ್ಷ ಜನ) ಪಾಲು ಶೇ.6.48!
  • ಅದೇ 2019-20ರ ಒಟ್ಟು ವಾರ್ಷಿಕ ವೇತನದಲ್ಲಿ ಅತ್ಯಂತ ಕಡಿಮೆ ವೇತನ (ಕೆಳಗಿನ 10% ಜನ) ಪಡೆಯುವರ (ಅಂದಾಜು 6 ಕೋಟಿ ಜನ) ಪಾಲು ಕೇವಲ ಕೇವಲ ಶೇ.1.71!
  • ಇದೇ ಸಮಯದಲ್ಲಿ, ಒಟ್ಟು ವಾರ್ಷಿಕ ವೇತನದಲ್ಲಿ ಹೆಚ್ಚು ಸಂಬಳ ಪಡೆಯುವ (ಮೇಲಿನ 10% ಜನ) ಗುಂಪಿನ (ಅಂದಾಜು 6 ಕೋಟಿ) ಜನರ ಪಾಲು ಶೇ.32.5!
  • 2017-18ರಿಂದ 2019-20ರ ನಡುವೆ ಕಡಿಮೆ ವೇತನ (ಕೆಳಗಿನ 50%) ಗುಂಪಿನ ಜನರ ವೇತನ ಶೇ.3.9ನಷ್ಟು ಹೆಚ್ಚಾಗಿದ್ದರೆ, ಹೆಚ್ಚು ವೇತನ ಗುಂಪಿನ (ಮೇಲಿನ 10% ) ಜನರ ವೇತನ ಶೇ.8.1ರಷ್ಟು ಹೆಚ್ಚಾಗಿದೆ.
  • ಅದೇ ಕಾಲಘಟ್ಟದಲ್ಲಿ ಹೆಚ್ಚು ವೇತನ (ಮೇಲಿನ 1%) ಗುಂಪಿನ ಮಂದಿಯ ವೇತನ ಶೇ.15ರಷ್ಟು ಹೆಚ್ಚಾಗಿದೆ!
  • ಇದಕ್ಕೆ ತದ್ವಿರುದ್ಧವಾಗಿ ಕಡಿಮೆ ವೇತನ (ಕೆಳಗಿನ 10%) ಗುಂಪಿನ ಮಂದಿಯ ವೇತನ ಶೇ.1ರಷ್ಟು ಇಳಿಕೆಯಾಗಿದೆ!

ಮೇಲಿನವು ಪ್ರಧಾನಮಂತ್ರಿಯ ಆರ್ಥಿಕ ಸಲಹಾ ಪರಿಷತ್ ಸಿದ್ಧಪಡಿಸಿ ಪ್ರಧಾನಿಗೆ ಸಲ್ಲಿಸಿರುವ ’ಭಾರತದಲ್ಲಿ ಅಸಮಾನತೆಯ ಸ್ಥಿತಿಗತಿ’ ಕುರಿತ ವರದಿಯಲ್ಲಿರುವ ಕೆಲ ಮುಖ್ಯ ಅಂಕಿಅಂಶಗಳು.

ನವ ಉದಾರವಾದಿ ಆರ್ಥಿಕ ನೀತಿಗಳು ವಿಶ್ವದಾದ್ಯಂತ ಅಸಮಾನತೆಯನ್ನು ಹೆಚ್ಚಿಸುತ್ತಲೇ ಇರುವುದು ಈಗ ಮನುಕುಲದ ಭೀಕರ ಸಮಸ್ಯೆಯಾಗಿ ಬಹುತೇಕ ಪರಿವರ್ತಿತವಾಗಿದೆ. ಭಾರತದಲ್ಲೂ ಕೂಡ ಈ ನವ ಆರ್ಥಿಕ ನೀತಿಗಳು ಶ್ರೀಮಂತರನ್ನು ಕಲ್ಪನೆಗೆ ನಿಲುಕದಷ್ಟು ಮತ್ತಷ್ಟು ಶ್ರೀಮಂತರನ್ನಾಗಿಸುತ್ತಾ, ಬಡವರನ್ನು ಮತ್ತಷ್ಟು ಕಡುಭೀಕರ ಬಡತನದತ್ತ ತಳ್ಳುತ್ತ ಬಂದಿವೆ. ಇದು ಉಳ್ಳವರ ಮತ್ತು ಬಡವರ ಮಧ್ಯೆ ಭಾರೀ ಕಂದಕವನ್ನೇ ಸೃಷ್ಟಿಸಿದ್ದು, ಈಗಾಗಲೇ ಇದರ ಘೋರ ದುರಂತಗಳನ್ನು ನಾವು ನೋಡುತ್ತಿದ್ದೇವೆ ಮತ್ತು ಅನುಭವಿಸುತ್ತಿದ್ದೇವೆ.

ಈ ವರ್ಷದ ಜನವರಿಯಲ್ಲಿ ಆಕ್ಸ್‌ಫಾಮ್‌ನವರ (Oxfam report) “ಅಸಮಾನತೆ ಕೊಲ್ಲುತ್ತದೆ” (Inequality kills) ಎಂಬ ವರದಿಯಲ್ಲಿ ಅತ್ಯಂತ ಸ್ಪಷ್ಟ ಅಂಕಿಅಂಶಗಳೊಂದಿಗೆ ಕೋವಿಡ್ ಕಾರಣಕ್ಕೆ ಭಾರತದಲ್ಲಿ (ವಿಶ್ವದ ಬೇರೆ ದೇಶಗಳಲ್ಲಿ ಕೂಡ) ಹೇಗೆ ಬಡವರೇ ಹೆಚ್ಚಾಗಿ ಸತ್ತರು ಎಂಬುದನ್ನು ಆಳವಾದ ಅಧ್ಯಯನದ ಮೂಲಕ ತೋರಿಸಲಾಗಿದೆ. ಮತ್ತು, ಹಾಗೆ ಬಡವರೇ ಹೆಚ್ಚಾಗಿ ಸಾಯಲು ಕೋವಿಡ್‌ಗಿಂತ ಅಸಮಾನತೆಯೇ ಹೇಗೆ ಮುಖ್ಯ ಕಾರಣವಾಗಿತ್ತು ಎಂಬುದನ್ನೂ ಆ ವರದಿಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.

ಅದೇ ವರದಿಯಲ್ಲಿ, ಕೋವಿಡ್ ಲಾಕ್‌ಡೌನ್‌ನಿಂದ ಇಡೀ ದೇಶದ ಆರ್ಥಿಕತೆ ತತ್ತರಿಸಿದ್ದಾಗಲೂ. ಗೌತಮ್ ಅದಾನಿಯವರ ಆಸ್ತಿ ಕೇವಲ ಒಂದೂವರೆ ವರ್ಷಗಳಲ್ಲಿ ಸಾವಿರಾರು ಕೋಟಿಗಳಷ್ಟು ಹೆಚ್ಚಾಗಿದ್ದು, ಭಾರತದಲ್ಲಿ ನೂರು ಜನ ಹೊಸಾ ಬಿಲಿಯನೇರುಗಳು ಸೃಷ್ಟಿಯಾಗಿದ್ದು ಮತ್ತು ಅದೇ ಒಂದೂವರೆ ವರ್ಷಗಳಲ್ಲಿ ಎಂಟೂವರೆ ಕೋಟಿಯಷ್ಟು ಭಾರತೀಯರು ಕಡುಬಡತನಕ್ಕೆ ಜಾರಿದ್ದನ್ನು ಅಧ್ಯಯನದ ಮೂಲಕ ತಿಳಿಸಲಾಗಿದೆ.

ಅಂದರೆ, ಇದು ಭಾರತ ಅಳವಡಿಸಿಕೊಂಡಿರುವ ಆರ್ಥಿಕ ನೀತಿಯ ಕಥೆಯನ್ನು ಹೇಳುತ್ತದೆ. ಹೇಗೆ ಇಡೀ ದೇಶ ಆರ್ಥಿಕವಾಗಿ ಹಿಂಜರಿದಾಗಲೂ ಅತಿ ಶ್ರೀಮಂತರು ಇನ್ನೂ ಶ್ರೀಮಂತರಾಗಲು ದೇಶದ ಆರ್ಥಿಕ ನೀತಿ ಪೂರಕವಾಗಿದೆ ಎಂದು Oxfam ವರದಿ ಸ್ಪಷ್ಟಪಡಿಸುತ್ತದೆ.

ಆದರೆ, Oxfam ವರದಿಯನ್ನು ತಿರಸ್ಕರಿಸಿದ ಒಕ್ಕೂಟ ಸರ್ಕಾರ ಈಗ ತನ್ನದೇ ವರದಿಯಲ್ಲಿ ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಅಸಮಾನತೆ ಜಾಸ್ತಿಯಾಗುತ್ತಲೇ ಬಂದಿರುವುದನ್ನು ಒಪ್ಪಿಕೊಂಡಿದೆ.
ಪ್ರಧಾನ ಮಂತ್ರಿಯ ಆರ್ಥಿಕ ಸಲಹಾ ಪರಿಷತ್ ತನ್ನ ’ಭಾರತದಲ್ಲಿ ಅಸಮಾನತೆಯ ಸ್ಥಿತಿಗತಿ’ ವರದಿಯಲ್ಲಿ ಅಸಮಾನತೆ ಜಾಸ್ತಿಯಾಗುತ್ತಿರುವದನ್ನು ಒಪ್ಪಿಕೊಂಡಿರುವುದಷ್ಟೇ ಅಲ್ಲದೆ, ಇದರ ಅಪಾಯಗಳನ್ನೂ ಗುರುತಿಸಿದೆ.

ಯಾವುದೇ ಸಮಾಜದಲ್ಲಿ ಹೆಚ್ಚುತ್ತಿರುವ ಈ ಅಸಮಾನತೆಯ ತಣ್ಣನೆಯ ಕ್ರೌರ್ಯ ಏನು ಎಂಬುದು ‘Inequality kills ( ಅಸಮಾನತೆ ಕೊಲ್ಲುತ್ತದೆ) ಎನ್ನುವ ಈ ಒಂದೇಒಂದು ಪದಗುಚ್ಚದ ಮೂಲಕ ನಮಗೆ ಸುಲಭವಾಗಿ ಅರ್ಥವಾಗುತ್ತದೆ. ಸದ್ಯದ ಆರ್ಥಿಕ ನೀತಿಯೊಳಗೆ ಈ ಅಸಮಾನತೆಯನ್ನು ಒಂದು ಮಟ್ಟಿಗೆ ಕಡಿಮೆ ಮಾಡಲು ಇರುವ ದಾರಿಯೆಂದರೆ ಸಮಾಜ ಕಲ್ಯಾಣ (Social welfare scheme) ಕಾರ್ಯಕ್ರಮಗಳಿಗೆ ಹೆಚ್ಚುಹೆಚ್ಚು ಹಣ ಒದಗಿಸುವುದು ಮತ್ತು ದೈನಂದಿನ ಬಳಕೆ ವಸ್ತುಗಳ ಬೆಲೆಗಳನ್ನು ನಿಯಂತ್ರಣದಲ್ಲಿಡುವುದು.

ಆದರೆ, ನಮ್ಮ ದೇಶದ ದುರಂತವನ್ನು ಈ ಕಾಲಾನುಕ್ರಮದ ಮೂಲಕ ಅರ್ಥ ಮಾಡಿಕೊಳ್ಳಬಹುದು;

1) ಕಳೆದ ಜನವರಿಯಲ್ಲಿ Oxfam ವರದಿ ಬರುತ್ತದೆ.

2) ಆ ವರದಿಯಲ್ಲಿ ಸ್ಪಷ್ಟವಾಗಿ ಕೋವಿಡ್ ವೇಳೆಯಲ್ಲಿ ದೇಶದೊಳಗೆ ಅಸಮಾನತೆ ಮತ್ತಷ್ಟು ಹೆಚ್ಚಾಗಿರುವುದನ್ನು ತೋರಿಸಲಾಗಿರುತ್ತದೆ.

3) ಇದಕ್ಕೆ ಒಂದು ಮಟ್ಟದ ಪ್ರಮುಖ ಪರಿಹಾರವೆಂದರೆ ಸೋಷಿಯಲ್ ವೆಲ್‌ಫೇರ್ ಸ್ಕೀಮ್‌ಗಳಿಗೆ ಹೆಚ್ಚಿನ ಅನುದಾನ ಕೊಡುವುದೆಂದೂ ಹೇಳಲಾಗಿರುತ್ತದೆ.

ಆದರೆ, ಒಕ್ಕೂಟ ಸರ್ಕಾರ ಈ ಫೆಬ್ರವರಿಯಲ್ಲಿ ಮಂಡಿಸಿದ ಬಜೆಟ್ಟಿನಲ್ಲಿ ಅತ್ಯಂತ ಅಮಾನವೀಯವಾಗಿ ಸೋಷಿಯಲ್ ವೆಲ್‌ಫೇರ್ ಸ್ಕೀಮ್‌ಗಳಿಗೆ ಕಳೆದ ವರ್ಷಕ್ಕಿಂತಲೂ ಕಡಿಮೆ ಹಣ ನಿಗದಿಪಡಿಸುತ್ತದೆ. ಅಂದರೆ, ಈ ದೇಶದಲ್ಲಿ ಅಸಮಾನತೆ ಕಡಿಮೆ ಮಾಡುವ ಯಾವ ಅಶಾಭಾವನೆಯನ್ನೂ ಈ ಬಜೆಟ್ ಹುಟ್ಟುಹಾಕುವುದಿಲ್ಲ.

ಈಗ ಸರ್ಕಾರದ ಸಮಿತಿಯ ವರದಿಯೇ ದೇಶದಲ್ಲಿ ಅಸಮಾನತೆ ಹೆಚ್ಚುತ್ತಿರುವುದಾಗಿ ಹೇಳಿರುವುದನ್ನಾದರೂ ಒಕ್ಕೂಟ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಿದೆ. ಅಸಮಾನತೆಯನ್ನು ತಗ್ಗಿಸಲು ಅಗತ್ಯ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಬೇಕಿದೆ.

ಇಲ್ಲವಾದಲ್ಲಿ, ಈ ದೇಶ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಕುಸಿಯುವ ಅಪಾಯವಿದೆ.

ಡಾ. ಬಿ.ಸಿ. ಬಸವರಾಜು

ಡಾ. ಬಿ.ಸಿ. ಬಸವರಾಜು
ಎಂಜಿನಿಯರಿಂಗ್ ವಿದ್ಯಾಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿ ಕೆಲಸ ನಿರ್ವಹಿಸುತ್ತಿರುವ ಬಸವರಾಜು ಹಾಡುಗಾರರೂ, ಪ್ರಚಲಿತ ವಿದ್ಯಮಾನಗಳಿಗೆ ಲೇಖನಗಳು ಮತ್ತು ವಿಡಿಯೋಗಳ ಮೂಲಕ ನಿರಂತರವಾಗಿ ಪ್ರತಿಕ್ರಿಯಿಸುತ್ತಾರೆ.


ಇದನ್ನೂ ಓದಿ: ವಿಶೇಷ ವರದಿ: ಬಿಜೆಪಿ ಅವಧಿಯಲ್ಲಿ ಪರೀಕ್ಷಾ ಅಕ್ರಮ, ಎಡವಟ್ಟುಗಳು & ಶೈಕ್ಷಣಿಕ ಅವ್ಯವಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...