Homeಕರ್ನಾಟಕಮೈಕ್ರೋ ಫೈನಾನ್ಸ್ ದೌರ್ಜನ್ಯ ತಡೆಗೆ ಕಾನೂನು ಜಾರಿ : ಮುಖ್ಯಾಂಶಗಳು ಇಲ್ಲಿದೆ

ಮೈಕ್ರೋ ಫೈನಾನ್ಸ್ ದೌರ್ಜನ್ಯ ತಡೆಗೆ ಕಾನೂನು ಜಾರಿ : ಮುಖ್ಯಾಂಶಗಳು ಇಲ್ಲಿದೆ

- Advertisement -
- Advertisement -

ಮೈಕ್ರೋ ಫೈನಾನ್ಸ್‌ ಕಂಪೆನಿಗಳು‌ ಅಥವಾ ಇತರೆ ಖಾಸಗಿ ಹಣಕಾಸು ಸಂಸ್ಥೆಗಳು / ವ್ಯಕ್ತಿಗಳು ಸಾಲ ವಸೂಲಿಯ ನೆಪದಲ್ಲಿ ಬಡ, ಮಧ್ಯಮ ವರ್ಗದ ಜನರಿಗೆ ನೀಡುತ್ತಿರುವ ಕಿರುಕುಳ, ಮಾನಸಿಕ ಹಿಂಸೆ ಮತ್ತು ದೌರ್ಜನ್ಯದಂತಹ ಅಮಾನವೀಯ, ಕಾನೂನು ಬಾಹಿರ ಕ್ರಮಗಳ ಮೇಲೆ ನಿಯಂತ್ರಣ ಹಾಗೂ ನಿರ್ಬಂಧ ಹೇರುವ ಉದ್ದೇಶದಿಂದ ರಾಜ್ಯ ಸರ್ಕಾರ ಸುಗ್ರಿವಾಜ್ಞೆ ಮೂಲಕ ಹೊಸ ಕಾನೂನು ಜಾರಿ ಮಾಡಿದೆ.

ಕರ್ನಾಟಕ ಕಿರು (Micro)ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಆಧ್ಯಾದೇಶ-2025ಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಬುಧವಾರ (ಫೆ.12) ಸಹಿ ಹಾಕಿದ್ದಾರೆ. ಈ ಬೆನ್ನಲ್ಲೇ ಸರ್ಕಾರ ರಾಜ್ಯಪತ್ರ (ಗೆಜೆಟ್ ನೋಟಿಫಿಕೇಶನ್) ಹೊರಡಿಸಿ ಕಾನೂನು ಜಾರಿಗೊಳಿಸಿದೆ.

ಮೈಕ್ರೋ ಫೈನಾನ್ಸ್‌ ಕಂಪನಿಗಳ ಕಿರುಕುಳ ತಡೆಯಲಾರದೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜನರು ಮನೆಗಳನ್ನೇ ತೊರೆದಿದ್ದರು. ಹಲವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಹಾಗಾಗಿ, ಜನವರಿ 30ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸುಗ್ರಿವಾಜ್ಞೆ ಮೂಲಕ ಹೊಸ ಕಾನೂನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿತ್ತು.

ಬಳಿಕ ಸುಗ್ರಿವಾಜ್ಞೆಯನ್ನು ರಾಜ್ಯಪಾಲರ ಸಹಿಗಾಗಿ ಕಳುಹಿಸಿತ್ತು. ಆದರೆ, ಮೂರು ಕಾರಣಗಳನ್ನು ನೀಡಿ ರಾಜ್ಯಪಾಲರು ಸುಗ್ರಿವಾಜ್ಞೆ ತಿರಸ್ಕರಿಸಿದ್ದರು. ಈ ವಿಚಾರವನ್ನು ಫೆ.7ರಂದು ಸರ್ಕಾರ ತಿಳಿಸಿತ್ತು.

ನಂತರ ರಾಜ್ಯಪಾಲರು ಕೋರಿದ ವಿವರಣೆಯೊಂದಿಗೆ ಸರ್ಕಾರ ಮೈಕ್ರೋ ಫೈನಾನ್ಸ್‌ಗೆ ಸಂಬಂಧಿಸಿದ ಸುಗ್ರಿವಾಜ್ಞೆಯನ್ನು ಮತ್ತೆ ರಾಜಭವನಕ್ಕೆ ಕಳುಹಿಸಿತ್ತು. ಅದಕ್ಕೆ ರಾಜ್ಯಪಾಲರು ಸಹಿ ಹಾಕಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಬುಧವಾರ (ಫೆ.12) ಮಾಹಿತಿ ನೀಡಿದೆ. ರಾಜ್ಯಪಾಲ ಸಹಿ ಬಿದ್ದ ತಕ್ಷಣ ಸರ್ಕಾರ ಕಾನೂನು ಜಾರಿ ಮಾಡಿದೆ.

ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಆಧ್ಯಾದೇಶ 2025 ಅಥವಾ ಮೈಕ್ರೋ ಫೈನಾನ್ಸ್‌ ಕಾನೂನಿನ ಮುಖ್ಯಾಂಶಗಳು ಹೀಗಿವೆ :

  • ಮೈಕ್ರೋ ಫೈನಾನ್ಸ್‌ ಸುಗ್ರಿವಾಜ್ಞೆ 12 ಫೆಬ್ರವರಿ 2025ರಂದು ಕಾನೂನಾಗಿ ಜಾರಿಗೆ ಬಂದಿದೆ.
  • ಸುಗ್ರಿವಾಜ್ಞೆಯು ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಮತ್ತು ಇತರೆ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಲೇವಾದೇವಿಗಾರರು ನೀಡುವ ಹೆಚ್ಚಿನ ಬಡ್ಡಿ ದರಗಳಿಂದ ಸಾಲಗಾರರಿಗೆ ಆಗುವ ಹೊರೆ ಮತ್ತು ಬಲವಂತದ ವಸೂಲಾತಿ ಕ್ರಮಗಳಿಂದ ಆಗುವ ಕಿರುಕುಳಗಳನ್ನು ನಿಯಂತ್ರಿಸುವ ಉದ್ದೇಶ ಹೊಂದಿದೆ.
  • ಇದರಿಂದ ವಿಶೇಷವಾಗಿ ದುರ್ಬಲರು, ಮಹಿಳೆಯರು ಮತ್ತು ರೈತರು, ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಮರುಪಾವತಿ ವಿಷಯದಲ್ಲಿ ಕಿರುಕುಳಗಳನ್ನು ತಪ್ಪಿಸಲು ಸಹಾಯಕವಾಗಿರುತ್ತದೆ.
  • ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಸಾಲಗಾರರಿಂದ ಯಾವುದೇ ಭದ್ರತೆ ಪಡೆಯುವಂತಿಲ್ಲ ಎಂದು ಹೊಸ ಕಾನೂನಿನಲ್ಲಿ ಆದೇಶಿಸಲಾಗಿದೆ.
  • ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಗ್ರಾಹಕರಿಗೆ ವಿಧಿಸುವ ಬಡ್ಡಿದರದ ಬಗ್ಗೆ ಪಾರದರ್ಶಕವಾಗಿ ಸಾಲಗಾರರಿಗೆ ಲಿಖಿತ ರೂಪದಲ್ಲಿ ತಿಳಿಸುವಂತೆ ಆದೇಶಿಸಲಾಗಿದೆ.
  • ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತವಲ್ಲದ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಗೆ ಮಾತ್ರ ಈ ಸುಗ್ರಿವಾಜ್ಞೆ ಅನ್ವಯವಾಗುತ್ತದೆ.
  • ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಅಂದಾಜು ರೂ. 60,000 ಕೋಟಿ ಸಾಲವನ್ನು ಸುಮಾರು 1.09 ಕೋಟಿ ಸಾಲಗಾರರು ಪಡೆದಿದ್ದು, ನೋಂದಣಿಯಾಗದ ಸಂಸ್ಥೆಗಳಿಂದ ಸಾಲ ಪಡೆದವರ ಮಾಹಿತಿ ವಿವರವಾಗಿ ಇಲ್ಲವಾದರೂ ಅಂದಾಜು ರೂ. 40,000 ಕೋಟಿ ಸಾಲ ಪಡೆದಿರುವರು ಎಂದು ಅಂದಾಜಿಸಲಾಗಿದೆ.
  • ಆಯಾ ಜಿಲ್ಲೆಗಳಲ್ಲಿ ವ್ಯವಹರಿಸುತ್ತಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಜಿಲ್ಲಾಧಿಕಾರಿಗಳಲ್ಲಿ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಸದರಿ ಸಂಸ್ಥೆಗಳು ತಾವು ವಿಧಿಸುವ ಬಡ್ಡಿದರ, ಸಾಲಗಾರರ ಮಾಹಿತಿ, ಸುಸ್ಥಿ ಸಾಲಗಳ ವಿವರ ಮುಂತಾದವುಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಬೇಕಾಗಿರುತ್ತದೆ.
  • ಆಯಾ ಜಿಲ್ಲೆಗಳಲ್ಲಿ ವ್ಯವಹರಿಸುತ್ತಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಜಿಲ್ಲಾಧಿಕಾರಿಗಳಿಗೆ ತ್ರೈಮಾಸಿಕ ಮತ್ತು ವಾರ್ಷಿಕ ವ್ಯವಹಾರದ ವಿವರಗಳನ್ನು ಸಲ್ಲಿಸಬೇಕು. ಸದರಿ ಮಾಹಿತಿಯನ್ನು ಸಲ್ಲಿಸದಿದ್ದಲ್ಲಿ, 6 ತಿಂಗಳ ಜೈಲು ಶಿಕ್ಷೆ ಅಥವಾ ರೂ.10,000 ಗಳಿಗೆ ವಿಸ್ತರಿಸಬಹುದಾದ ದಂಡ ಅಥವಾ ಇವೆರಡನ್ನೂ ವಿಧಿಸಲಾಗುತ್ತದೆ
  • ವಿವಾದಗಳನ್ನು ಇತ್ಯರ್ಥ್ಯ ಪಡಿಸುವುದಕ್ಕಾಗಿ ಒಂಬುಡ್ಸ್ ಪರ್ಸನ್‌ಗಳನ್ನು ಸರ್ಕಾರವು ಅಧಿಸೂಚನೆಯ ಮೂಲಕ ನೇಮಕ ಮಾಡಬಹುದು.

ಬಲವಂತದ ವಸೂಲಿ ಕೈಗೊಂಡಲ್ಲಿ ಜೈಲು, ದಂಡ

  • ಬಲವಂತದ ವಸೂಲಿ ಕ್ರಮಗಳನ್ನು ಕೈಗೊಂಡಲ್ಲಿ, ಯಾವುದೇ ವ್ಯಕ್ತಿಯೂ ವಿಚಾರಣೆಗೆ ಒಳಪಡುತ್ತಾರೆ ಮತ್ತು 10 ವರ್ಷಗಳವರೆಗೆ ವಿಸ್ತರಿಸಬಹುದಾದ ಅವಧಿಯ ಜೈಲು ಶಿಕ್ಷೆ ಹಾಗೂ ರೂ. 5 ಲಕ್ಷಗಳವರೆಗೆ ವಿಸ್ತರಿಸಬಹುದಾದ ದಂಡಕ್ಕೆ ಗುರಿಯಾಗುತ್ತಾರೆ.
  • ಈ ಅಪರಾಧಗಳು ಸಂಜ್ಞೇಯ ಅಪರಾಧ/ ಜಾಮೀನು ರಹಿತ (Cognizable / Non Bailable) ಆಗಿರುತ್ತವೆ. ಯಾವುದೇ ಪೋಲೀಸ್‌ ಅಧಿಕಾರಿ ಇಂತಹ ಪ್ರಕರಣಗಳನ್ನು ನೋಂದಣಿ ಮಾಡಿಕೊಳ್ಳುವುದು ನಿರಾಕರಿಸಲಾಗುವುದಿಲ್ಲ.
  • ಪೋಲೀಸ್‌ ಉಪ ಅಧೀಕ್ಷಕರ (DySP) ದರ್ಜೆಗೆ ಕಡಿಮೆಯಿಲ್ಲದ ಅಧಿಕಾರಿಯು ಸ್ವತ: (Suomoto) ಪ್ರಕರಣವನ್ನು ದಾಖಲಿಸಬಹುದು.
  • ಸರ್ಕಾರವು ಕಾಲಕಾಲಕ್ಕೆ ಈ ಸುಗ್ರಿವಾಜ್ಞೆ ಅನುಷ್ಠಾನಕ್ಕಾಗಿ ನಿರ್ದೇಶನಗಳನ್ನು ನೀಡುವ ಅಧಿಕಾರ ಹೊಂದಿರುತ್ತದೆ.

ಈ ಸುಗ್ರಿವಾಜ್ಞೆಯಿಂದ ಭಾರತೀಯ ರಿಸರ್ವ್‌ ಬ್ಯಾಂಕ್‌, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತವಲ್ಲದ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಲ್ಲಿ ಆರ್ಥಿಕ ಶಿಸ್ತು ಹೆಚ್ಚುತ್ತದೆ ಮತ್ತು ಸಾಲಗಾರರಿಗೆ ಕಿರುಕುಳ, ಬಲವಂತದ ವಸೂಲಿ ಕ್ರಮಗಳಿಂದ ಮುಕ್ತಿ ದೊರೆಯುತ್ತದೆ ಎಂದು ಸರ್ಕಾರ ಹೇಳಿದೆ.

ಮೈಕ್ರೋ ಫೈನಾನ್ಸ್‌ ಕಿರುಕುಳ ವಿರೋಧಿ ಕಾನೂನು ಜಾರಿಗೆ – ಸಿದ್ದರಾಮಯ್ಯ ಘೊಷಣೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...