Homeಕರ್ನಾಟಕಮೈಕ್ರೋ ಫೈನಾನ್ಸ್ ದೌರ್ಜನ್ಯ ತಡೆಗೆ ಕಾನೂನು ಜಾರಿ : ಮುಖ್ಯಾಂಶಗಳು ಇಲ್ಲಿದೆ

ಮೈಕ್ರೋ ಫೈನಾನ್ಸ್ ದೌರ್ಜನ್ಯ ತಡೆಗೆ ಕಾನೂನು ಜಾರಿ : ಮುಖ್ಯಾಂಶಗಳು ಇಲ್ಲಿದೆ

- Advertisement -
- Advertisement -

ಮೈಕ್ರೋ ಫೈನಾನ್ಸ್‌ ಕಂಪೆನಿಗಳು‌ ಅಥವಾ ಇತರೆ ಖಾಸಗಿ ಹಣಕಾಸು ಸಂಸ್ಥೆಗಳು / ವ್ಯಕ್ತಿಗಳು ಸಾಲ ವಸೂಲಿಯ ನೆಪದಲ್ಲಿ ಬಡ, ಮಧ್ಯಮ ವರ್ಗದ ಜನರಿಗೆ ನೀಡುತ್ತಿರುವ ಕಿರುಕುಳ, ಮಾನಸಿಕ ಹಿಂಸೆ ಮತ್ತು ದೌರ್ಜನ್ಯದಂತಹ ಅಮಾನವೀಯ, ಕಾನೂನು ಬಾಹಿರ ಕ್ರಮಗಳ ಮೇಲೆ ನಿಯಂತ್ರಣ ಹಾಗೂ ನಿರ್ಬಂಧ ಹೇರುವ ಉದ್ದೇಶದಿಂದ ರಾಜ್ಯ ಸರ್ಕಾರ ಸುಗ್ರಿವಾಜ್ಞೆ ಮೂಲಕ ಹೊಸ ಕಾನೂನು ಜಾರಿ ಮಾಡಿದೆ.

ಕರ್ನಾಟಕ ಕಿರು (Micro)ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಆಧ್ಯಾದೇಶ-2025ಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಬುಧವಾರ (ಫೆ.12) ಸಹಿ ಹಾಕಿದ್ದಾರೆ. ಈ ಬೆನ್ನಲ್ಲೇ ಸರ್ಕಾರ ರಾಜ್ಯಪತ್ರ (ಗೆಜೆಟ್ ನೋಟಿಫಿಕೇಶನ್) ಹೊರಡಿಸಿ ಕಾನೂನು ಜಾರಿಗೊಳಿಸಿದೆ.

ಮೈಕ್ರೋ ಫೈನಾನ್ಸ್‌ ಕಂಪನಿಗಳ ಕಿರುಕುಳ ತಡೆಯಲಾರದೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜನರು ಮನೆಗಳನ್ನೇ ತೊರೆದಿದ್ದರು. ಹಲವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಹಾಗಾಗಿ, ಜನವರಿ 30ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸುಗ್ರಿವಾಜ್ಞೆ ಮೂಲಕ ಹೊಸ ಕಾನೂನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿತ್ತು.

ಬಳಿಕ ಸುಗ್ರಿವಾಜ್ಞೆಯನ್ನು ರಾಜ್ಯಪಾಲರ ಸಹಿಗಾಗಿ ಕಳುಹಿಸಿತ್ತು. ಆದರೆ, ಮೂರು ಕಾರಣಗಳನ್ನು ನೀಡಿ ರಾಜ್ಯಪಾಲರು ಸುಗ್ರಿವಾಜ್ಞೆ ತಿರಸ್ಕರಿಸಿದ್ದರು. ಈ ವಿಚಾರವನ್ನು ಫೆ.7ರಂದು ಸರ್ಕಾರ ತಿಳಿಸಿತ್ತು.

ನಂತರ ರಾಜ್ಯಪಾಲರು ಕೋರಿದ ವಿವರಣೆಯೊಂದಿಗೆ ಸರ್ಕಾರ ಮೈಕ್ರೋ ಫೈನಾನ್ಸ್‌ಗೆ ಸಂಬಂಧಿಸಿದ ಸುಗ್ರಿವಾಜ್ಞೆಯನ್ನು ಮತ್ತೆ ರಾಜಭವನಕ್ಕೆ ಕಳುಹಿಸಿತ್ತು. ಅದಕ್ಕೆ ರಾಜ್ಯಪಾಲರು ಸಹಿ ಹಾಕಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಬುಧವಾರ (ಫೆ.12) ಮಾಹಿತಿ ನೀಡಿದೆ. ರಾಜ್ಯಪಾಲ ಸಹಿ ಬಿದ್ದ ತಕ್ಷಣ ಸರ್ಕಾರ ಕಾನೂನು ಜಾರಿ ಮಾಡಿದೆ.

ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಆಧ್ಯಾದೇಶ 2025 ಅಥವಾ ಮೈಕ್ರೋ ಫೈನಾನ್ಸ್‌ ಕಾನೂನಿನ ಮುಖ್ಯಾಂಶಗಳು ಹೀಗಿವೆ :

  • ಮೈಕ್ರೋ ಫೈನಾನ್ಸ್‌ ಸುಗ್ರಿವಾಜ್ಞೆ 12 ಫೆಬ್ರವರಿ 2025ರಂದು ಕಾನೂನಾಗಿ ಜಾರಿಗೆ ಬಂದಿದೆ.
  • ಸುಗ್ರಿವಾಜ್ಞೆಯು ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಮತ್ತು ಇತರೆ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಲೇವಾದೇವಿಗಾರರು ನೀಡುವ ಹೆಚ್ಚಿನ ಬಡ್ಡಿ ದರಗಳಿಂದ ಸಾಲಗಾರರಿಗೆ ಆಗುವ ಹೊರೆ ಮತ್ತು ಬಲವಂತದ ವಸೂಲಾತಿ ಕ್ರಮಗಳಿಂದ ಆಗುವ ಕಿರುಕುಳಗಳನ್ನು ನಿಯಂತ್ರಿಸುವ ಉದ್ದೇಶ ಹೊಂದಿದೆ.
  • ಇದರಿಂದ ವಿಶೇಷವಾಗಿ ದುರ್ಬಲರು, ಮಹಿಳೆಯರು ಮತ್ತು ರೈತರು, ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಮರುಪಾವತಿ ವಿಷಯದಲ್ಲಿ ಕಿರುಕುಳಗಳನ್ನು ತಪ್ಪಿಸಲು ಸಹಾಯಕವಾಗಿರುತ್ತದೆ.
  • ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಸಾಲಗಾರರಿಂದ ಯಾವುದೇ ಭದ್ರತೆ ಪಡೆಯುವಂತಿಲ್ಲ ಎಂದು ಹೊಸ ಕಾನೂನಿನಲ್ಲಿ ಆದೇಶಿಸಲಾಗಿದೆ.
  • ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಗ್ರಾಹಕರಿಗೆ ವಿಧಿಸುವ ಬಡ್ಡಿದರದ ಬಗ್ಗೆ ಪಾರದರ್ಶಕವಾಗಿ ಸಾಲಗಾರರಿಗೆ ಲಿಖಿತ ರೂಪದಲ್ಲಿ ತಿಳಿಸುವಂತೆ ಆದೇಶಿಸಲಾಗಿದೆ.
  • ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತವಲ್ಲದ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಗೆ ಮಾತ್ರ ಈ ಸುಗ್ರಿವಾಜ್ಞೆ ಅನ್ವಯವಾಗುತ್ತದೆ.
  • ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಅಂದಾಜು ರೂ. 60,000 ಕೋಟಿ ಸಾಲವನ್ನು ಸುಮಾರು 1.09 ಕೋಟಿ ಸಾಲಗಾರರು ಪಡೆದಿದ್ದು, ನೋಂದಣಿಯಾಗದ ಸಂಸ್ಥೆಗಳಿಂದ ಸಾಲ ಪಡೆದವರ ಮಾಹಿತಿ ವಿವರವಾಗಿ ಇಲ್ಲವಾದರೂ ಅಂದಾಜು ರೂ. 40,000 ಕೋಟಿ ಸಾಲ ಪಡೆದಿರುವರು ಎಂದು ಅಂದಾಜಿಸಲಾಗಿದೆ.
  • ಆಯಾ ಜಿಲ್ಲೆಗಳಲ್ಲಿ ವ್ಯವಹರಿಸುತ್ತಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಜಿಲ್ಲಾಧಿಕಾರಿಗಳಲ್ಲಿ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಸದರಿ ಸಂಸ್ಥೆಗಳು ತಾವು ವಿಧಿಸುವ ಬಡ್ಡಿದರ, ಸಾಲಗಾರರ ಮಾಹಿತಿ, ಸುಸ್ಥಿ ಸಾಲಗಳ ವಿವರ ಮುಂತಾದವುಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಬೇಕಾಗಿರುತ್ತದೆ.
  • ಆಯಾ ಜಿಲ್ಲೆಗಳಲ್ಲಿ ವ್ಯವಹರಿಸುತ್ತಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಜಿಲ್ಲಾಧಿಕಾರಿಗಳಿಗೆ ತ್ರೈಮಾಸಿಕ ಮತ್ತು ವಾರ್ಷಿಕ ವ್ಯವಹಾರದ ವಿವರಗಳನ್ನು ಸಲ್ಲಿಸಬೇಕು. ಸದರಿ ಮಾಹಿತಿಯನ್ನು ಸಲ್ಲಿಸದಿದ್ದಲ್ಲಿ, 6 ತಿಂಗಳ ಜೈಲು ಶಿಕ್ಷೆ ಅಥವಾ ರೂ.10,000 ಗಳಿಗೆ ವಿಸ್ತರಿಸಬಹುದಾದ ದಂಡ ಅಥವಾ ಇವೆರಡನ್ನೂ ವಿಧಿಸಲಾಗುತ್ತದೆ
  • ವಿವಾದಗಳನ್ನು ಇತ್ಯರ್ಥ್ಯ ಪಡಿಸುವುದಕ್ಕಾಗಿ ಒಂಬುಡ್ಸ್ ಪರ್ಸನ್‌ಗಳನ್ನು ಸರ್ಕಾರವು ಅಧಿಸೂಚನೆಯ ಮೂಲಕ ನೇಮಕ ಮಾಡಬಹುದು.

ಬಲವಂತದ ವಸೂಲಿ ಕೈಗೊಂಡಲ್ಲಿ ಜೈಲು, ದಂಡ

  • ಬಲವಂತದ ವಸೂಲಿ ಕ್ರಮಗಳನ್ನು ಕೈಗೊಂಡಲ್ಲಿ, ಯಾವುದೇ ವ್ಯಕ್ತಿಯೂ ವಿಚಾರಣೆಗೆ ಒಳಪಡುತ್ತಾರೆ ಮತ್ತು 10 ವರ್ಷಗಳವರೆಗೆ ವಿಸ್ತರಿಸಬಹುದಾದ ಅವಧಿಯ ಜೈಲು ಶಿಕ್ಷೆ ಹಾಗೂ ರೂ. 5 ಲಕ್ಷಗಳವರೆಗೆ ವಿಸ್ತರಿಸಬಹುದಾದ ದಂಡಕ್ಕೆ ಗುರಿಯಾಗುತ್ತಾರೆ.
  • ಈ ಅಪರಾಧಗಳು ಸಂಜ್ಞೇಯ ಅಪರಾಧ/ ಜಾಮೀನು ರಹಿತ (Cognizable / Non Bailable) ಆಗಿರುತ್ತವೆ. ಯಾವುದೇ ಪೋಲೀಸ್‌ ಅಧಿಕಾರಿ ಇಂತಹ ಪ್ರಕರಣಗಳನ್ನು ನೋಂದಣಿ ಮಾಡಿಕೊಳ್ಳುವುದು ನಿರಾಕರಿಸಲಾಗುವುದಿಲ್ಲ.
  • ಪೋಲೀಸ್‌ ಉಪ ಅಧೀಕ್ಷಕರ (DySP) ದರ್ಜೆಗೆ ಕಡಿಮೆಯಿಲ್ಲದ ಅಧಿಕಾರಿಯು ಸ್ವತ: (Suomoto) ಪ್ರಕರಣವನ್ನು ದಾಖಲಿಸಬಹುದು.
  • ಸರ್ಕಾರವು ಕಾಲಕಾಲಕ್ಕೆ ಈ ಸುಗ್ರಿವಾಜ್ಞೆ ಅನುಷ್ಠಾನಕ್ಕಾಗಿ ನಿರ್ದೇಶನಗಳನ್ನು ನೀಡುವ ಅಧಿಕಾರ ಹೊಂದಿರುತ್ತದೆ.

ಈ ಸುಗ್ರಿವಾಜ್ಞೆಯಿಂದ ಭಾರತೀಯ ರಿಸರ್ವ್‌ ಬ್ಯಾಂಕ್‌, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತವಲ್ಲದ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಲ್ಲಿ ಆರ್ಥಿಕ ಶಿಸ್ತು ಹೆಚ್ಚುತ್ತದೆ ಮತ್ತು ಸಾಲಗಾರರಿಗೆ ಕಿರುಕುಳ, ಬಲವಂತದ ವಸೂಲಿ ಕ್ರಮಗಳಿಂದ ಮುಕ್ತಿ ದೊರೆಯುತ್ತದೆ ಎಂದು ಸರ್ಕಾರ ಹೇಳಿದೆ.

ಮೈಕ್ರೋ ಫೈನಾನ್ಸ್‌ ಕಿರುಕುಳ ವಿರೋಧಿ ಕಾನೂನು ಜಾರಿಗೆ – ಸಿದ್ದರಾಮಯ್ಯ ಘೊಷಣೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...