Homeಮುಖಪುಟನಾಳೆಯಿಂದ ಸಂಸತ್ ಚಳಿಗಾಲದ ಅಧಿವೇಶನ | ಸುಗಮ ಕಲಾಪಕ್ಕೆ ಸಹಕಾರ ಕೋರಿದ ಆಡಳಿತ : ಎಸ್‌ಐಆರ್...

ನಾಳೆಯಿಂದ ಸಂಸತ್ ಚಳಿಗಾಲದ ಅಧಿವೇಶನ | ಸುಗಮ ಕಲಾಪಕ್ಕೆ ಸಹಕಾರ ಕೋರಿದ ಆಡಳಿತ : ಎಸ್‌ಐಆರ್ ಚರ್ಚೆ ಮುಂದಿಟ್ಟ ಪ್ರತಿಪಕ್ಷಗಳು

- Advertisement -
- Advertisement -

ನಾಳೆಯಿಂದ (ಡಿಸೆಂಬರ್ 1) ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭಗೊಳ್ಳಲಿದೆ. ಅದಕ್ಕೂ ಮುನ್ನ ಇಂದು (ನವೆಂಬರ್ 30) ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆದಿದೆ. ಸಭೆಯಲ್ಲಿ ಸುಗಮ ಕಲಾಪಕ್ಕೆ ಸಹಕಾರ ನೀಡುವಂತೆ ಸಚಿವರು ಪ್ರತಿಪಕ್ಷ ನಾಯಕರಲ್ಲಿ ಮನವಿ ಮಾಡಿದ್ದಾರೆ.

ಸಂಸತ್ ಕಲಾಪ ಸ್ಥಗಿತಗೊಳ್ಳಬಾರದು. ಅದು ಸುಗಮವಾಗಿ ನಡೆಯಬೇಕು. ಈ ನಿಟ್ಟಿನಲ್ಲಿ ಸರ್ಕಾರ ಎಲ್ಲಾ ಪಕ್ಷಗಳ ನಾಯಕರೊಂದಿಗೆ ಚರ್ಚೆ ನಡೆಸಿದೆ ಎಂದು ಸರ್ವಪಕ್ಷ ಸಭೆಯ ಬಳಿಕ ಕಿರಣ್ ರಿಜಿಜು ಹೇಳಿದ್ದಾರೆ.

ಎಸ್‌ಐಆರ್ ಕುರಿತು ಚರ್ಚೆ ನಡೆಸಬೇಕೆಂಬ ಪ್ರತಿಪಕ್ಷಗಳ ಬೇಡಿಕೆಯನ್ನು ಅಂಗೀಕರಿಸಲಾಗಿದೆಯೇ? ಎಂದು ಕೇಳಿದಾಗ, ಇಂದು ಸಂಜೆ ಸಭೆ ಸೇರಲಿರುವ ಸಂಸತ್ತಿನ ಕಾರ್ಯ ಕಲಾಪಗಳ ಸಲಹಾ ಸಮಿತಿ (ಬಿಎಸಿ) ಅಧಿವೇಶನದ ಕಾರ್ಯಸೂಚಿಯನ್ನು ನಿರ್ಧರಿಸುತ್ತದೆ ಎಂದು ರಿಜಿಜು ಪ್ರತಿಕ್ರಿಯಿಸಿದ್ದಾರೆ.

ಆಡಳಿತ ತಮ್ಮ ಪಕ್ಷ ವಿರೋಧ ಪಕ್ಷಗಳೊಂದಿಗೆ ಸಹಕರಿಸಿದರೆ ಸುಗಮವಾಗಿ ಕಲಾಪ ನಡೆಸಲು ನಮ್ಮ ಪಕ್ಷ ಸಹಕರಿಸುತ್ತದೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಕಲ್ಯಾಣ್ ಬ್ಯಾನರ್ಜಿ ಹೇಳಿದ್ದಾರೆ.

“ಸರ್ಕಾರವು ಎಸ್‌ಐಆರ್‌ನಂತಹ ವಿಷಯಗಳ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು. ಎಸ್‌ಐಆರ್ ಪ್ರಕ್ರಿಯೆ ವೇಳೆ 40 ಜನರು ಪ್ರಾಣ ಕಳೆದುಕೊಂಡಿದ್ದಾರೆ” ಎಂದು ಕಲ್ಯಾಣ್ ಬ್ಯಾನರ್ಜಿ ತಿಳಿಸಿದ್ದಾರೆ.

ಚಳಿಗಾಲದ ಅಧಿವೇಶನದಲ್ಲಿ ಎಸ್‌ಐಆರ್ ಕುರಿತು ಚರ್ಚೆಗೆ ಒತ್ತಾಯಿಸುವ ವಿಷಯದಲ್ಲಿ ಎಲ್ಲಾ ವಿರೋಧ ಪಕ್ಷಗಳು ಒಮ್ಮತದ ನಿರ್ಧಾರಕ್ಕೆ ಬಂದಿವೆ ಎಂದು ಡಿಎಂಕೆಯ ತಿರುಚಿ ಶಿವ ಹೇಳಿದ್ದಾರೆ.

ಎಸ್‌ಐಆರ್ ಕುರಿತು ಚರ್ಚೆಗೆ ಅವಕಾಶ ನೀಡದಿದ್ದರೆ ಸಂಸತ್ ಕಲಾಪ ನಡೆಯಲು ಅವಕಾಶ ಕೊಡುವುದಿಲ್ಲ ಎಂದು ಸಮಾಜವಾದಿ ಪಕ್ಷ ಹೇಳಿದೆ.

“ಸಮಾಜವಾದಿ ಪಕ್ಷವು ಎಸ್‌ಐಆರ್ ವಿಷಯವನ್ನು ಮುಂದಿಟ್ಟಿದೆ. ಏಕೆಂದರೆ, ಎಸ್‌ಐಆರ್‌ನಲ್ಲಿ ದೊಡ್ಡ ಪ್ರಮಾಣದ ಅಕ್ರಮಗಳು ನಡೆದಿರುವುದನ್ನು ನಾವು ನೋಡಿದ್ದೇವೆ. ಮೊದಲು, ನಾವು ಕೇಳುತ್ತಿದ್ದೆವು, ಆದರೆ ಈಗ ಜನರ ಹೆಸರು ತೆಗೆದು ಹಾಕುತ್ತಿರುವುದನ್ನು ನೋಡುತ್ತಿದ್ದೇವೆ. ಬಿಹಾರದಲ್ಲಿ, ದುಷ್ಕೃತ್ಯಗಳು ನಡೆದಿವೆ. ನಾವು ಅದರ ಬಗ್ಗೆ ಚರ್ಚೆಗೆ ಒತ್ತಾಯಿಸಿದ್ದೇವೆ ಎಂದು ಸಮಾಜವಾದಿ ಪಕ್ಷದ ನಾಯಕ ರಾಮ್ ಗೋಪಾಲ್ ಯಾದವ್ ಹೇಳಿದ್ದಾರೆ. ಚುನಾವಣಾ ಆಯೋಗ ಎಸ್‌ಐಆರ್ ಅಕ್ರಮಗಳಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.

“ತಪ್ಪು ನಡೆಯುತ್ತಿರುವಾಗ ಚರ್ಚೆ ಏಕೆ ಮಾಡಬಾರದು? ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ತೆಗೆದು ಹಾಕಿದರೆ ಚರ್ಚೆ ನಡೆಯುವುದಿಲ್ಲವೇ?” ಎಂದು ಯಾದವ್ ಪ್ರಶ್ನಿಸಿದ್ದಾರೆ.

“ನಾನು ಅನೇಕ ಸ್ಥಳಗಳಿಗೆ ಹೋಗಿದ್ದೇನೆ, ಇನ್ನೂ ಹೋಗುತ್ತಿದ್ದೇನೆ. ನಾನು 1967ರಿಂದ ಮತದಾರನಾಗಿದ್ದೇನೆ. ಇಟಾವಾ ಜಿಲ್ಲೆಯಲ್ಲಿ ನಮ್ಮೆಲ್ಲರನ್ನೂ ಸಿ ವರ್ಗಕ್ಕೆ ಸೇರಿಸಲಾಗಿದೆ. ಇಡೀ ಜಿಲ್ಲೆಯ ಪ್ರತಿಯೊಬ್ಬರನ್ನು ಸಿ ವರ್ಗಕ್ಕೆ ಸೇರಿಸಲಾಗಿದೆ. ನಮ್ಮ ಜಿಲ್ಲೆಯಿಂದ ಸಂಸತ್ತಿನ ಎರಡೂ ಸದನಗಳಲ್ಲಿ ಏಳು ಸಂಸದರು ಮತ್ತು ಮೂವರು ಶಾಸಕರಿದ್ದಾರೆ ಮತ್ತು ಅವರಲ್ಲಿ ಪ್ರತಿಯೊಬ್ಬರನ್ನು ಸಿ ವರ್ಗಕ್ಕೆ ಸೇರಿಸಲಾಗಿದೆ ಎಂದು ಯಾದವ್ ತಿಳಿಸಿದ್ದಾರೆ.

ಸಭೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಇದು ಕೇವಲ ಫಾರ್ಮಾಲಿಟಿಗೆ ನಡೆಸಿದ ಸಭೆಯಾಗಿದೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಪ್ರತಿಪಕ್ಷಗಳೊಂದಿಗೆ ಯಾವುದೇ ಸಮಾಲೋಚನೆ ನಡೆಸದೆ ಅಲ್ಪಾವಧಿಯ ಚರ್ಚೆಗೆ ವಿಷಯವನ್ನು ಪಟ್ಟಿ ಮಾಡುವ ಮೂಲಕ ತನ್ನ ಉದ್ದೇಶಗಳನ್ನು ಸ್ಪಷ್ಟಪಡಿಸಿದೆ ಎಂದಿದ್ದಾರೆ.

ನಾಳೆಯಿಂದ ಪ್ರಾರಂಭವಾಗುವ ಸಂಸತ್ತಿನ ಚಳಿಗಾಲದ ಅಧಿವೇಶನದ ಕಾರ್ಯಸೂಚಿಯನ್ನು ಚರ್ಚಿಸಲು ಮೋದಿ ಸರ್ಕಾರ ಕರೆದಿರುವ ಸರ್ವಪಕ್ಷ ಸಭೆ ಕೇವಲ ಫಾರ್ಮಾಲಿಟಿ ಮಾತ್ರ ಎಂದು ಜೈರಾಮ್ ರಮೇಶ್ ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ.

15 ದಿನಗಳ ಈ ಅಧಿವೇಶನವು ಸಂಸತ್ತಿನ ಇತಿಹಾಸದಲ್ಲಿ ಅತ್ಯಂತ ಕಡಿಮೆ ಅವಧಿಯದ್ದಾಗಿರಲಿದೆ. ಮೋದಿ ಸರ್ಕಾರವು 13 ಮಸೂದೆಗಳನ್ನು ಅಂಗೀಕಾರಕ್ಕಾಗಿ ಪಟ್ಟಿ ಮಾಡಿದೆ. ಇವುಗಳಲ್ಲಿ ಒಂದು ಸುಗ್ರೀವಾಜ್ಞೆಯನ್ನು ಬದಲಾಯಿಸುತ್ತದೆ ಮತ್ತು ಎರಡು ಲೋಕಸಭೆಯ ಸಮಿತಿಯ ಮೂಲಕ ಹೋಗಿವೆ. ಇನ್ನುಳಿದ ಹತ್ತು ಮಸೂದೆಗಳನ್ನು ಸಂಬಂಧಪಟ್ಟ ಸ್ಥಾಯಿ ಸಮಿತಿ ಪರಿಶೀಲಿಸಿಲ್ಲ ಎಂದು ಜೈರಾಮ್ ರಮೇಶ್ ತಿಳಿಸಿದ್ದಾರೆ.

ಸಹಜವಾಗಿಯೇ, ಪ್ರಸ್ತುತ ಪಟ್ಟಿ ಮಾಡದ ಮಸೂದೆಯನ್ನು ಅಲ್ಪಾವಧಿಯ ಅಧಿವೇಶನದ ನಂತರದ ಭಾಗದಲ್ಲಿ ಇದ್ದಕ್ಕಿದ್ದಂತೆ ಮಂಡಿಸುವ ಸಾಧ್ಯತೆಯಿದೆ ಎಂದು ರಮೇಶ್ ಹೇಳಿದ್ದಾರೆ.

ನಾಳೆಯಿಂದ ಪ್ರಾರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಒಟ್ಟು 15 ಕಲಾಪಗಳು ನಡೆಯಲಿವೆ. ಸಂಸತ್ತಿನ ಅಧಿವೇಶನಗಳು ಸಾಮಾನ್ಯವಾಗಿ 20 ಕಲಾಪಗಳನ್ನು ಹೊಂದಿರುತ್ತವೆ.

ರಾಷ್ಟ್ರೀಯ ಭದ್ರತೆ, ವಾಯು ಮಾಲಿನ್ಯ, ಮತದಾರರ ಪಟ್ಟಿಯ ಪರಿಷ್ಕರಣೆ, ರೈತರ ಸಮಸ್ಯೆಗಳು ಮತ್ತು ವಿದೇಶಾಂಗ ನೀತಿಯ ಕುರಿತು ಚರ್ಚೆ ನಡೆಸಬೇಕೆಂದು ತಮ್ಮ ಪಕ್ಷ ಒತ್ತಾಯಿಸಿದೆ ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ಉಪನಾಯಕ ಗೌರವ್ ಗೊಗೊಯ್ ಹೇಳಿದ್ದಾರೆ.

ಪ್ರಧಾನಿ ಮತ್ತು ಗೃಹ ಸಚಿವರ ನೇತೃತ್ವದಲ್ಲಿ ಸರ್ಕಾರವು ಭಾರತದ ಪ್ರಜಾಪ್ರಭುತ್ವ ಮತ್ತು ಸಂಸದೀಯ ಸಂಪ್ರದಾಯಗಳನ್ನು ಕೊನೆಗೊಳಿಸಲು ನೋಡುತ್ತಿರುವಂತೆ ತೋರುತ್ತಿದೆ ಎಂದು ಸರ್ವಪಕ್ಷ ಸಭೆಯ ನಂತರ ಗೊಗೊಯ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ದೆಹಲಿ ಸ್ಫೋಟದ ನಂತರ ರಾಷ್ಟ್ರೀಯ ಭದ್ರತೆಯ ಬಗ್ಗೆ ಚರ್ಚೆ ನಡೆಯಬೇಕೆಂದು ನಮ್ಮ ಪಕ್ಷ ಒತ್ತಾಯಿಸಿದೆ. ರಾಷ್ಟ್ರೀಯ ಭದ್ರತೆಯ ಬಗ್ಗೆ ಅಲ್ಪಾವಧಿಯ ಚರ್ಚೆಯನ್ನೂ ಸರ್ಕಾರ ಬಯಸುವುದಿಲ್ಲ ಎಂದು ತೋರುತ್ತದೆ. ಎರಡನೆಯದ್ದು ಪ್ರಜಾಪ್ರಭುತ್ವದ ಭದ್ರತೆ. ಚುನಾವಣೆಯ ಮೊದಲು, ಚುನಾವಣೆಯ ಸಂದರ್ಭ ಮತ್ತು ನಂತರ ಚುನಾವಣಾ ಆಯೋಗವು ಪಕ್ಷಪಾತದಿಂದ ವರ್ತಿಸುತ್ತಿದೆ. ಮತದಾರರ ಪಟ್ಟಿಯ ಪರಿಷ್ಕರಣೆಯ ಬಗ್ಗೆ ಚರ್ಚೆ ನಡೆಯಬೇಕು ಎಂದು ಗೊಗೊಯ್ ಹೇಳಿದ್ದಾರೆ.

ಸರ್ವಪಕ್ಷ ಸಭೆಯಲ್ಲಿ ಕಾಂಗ್ರೆಸ್‌ನ ಪ್ರಮೋದ್ ತಿವಾರಿ, ಡಿಎಂಕೆಯ ಟಿ.ಆರ್ ಬಾಲು, ಟಿಎಂಸಿಯ ಡೆರೆಕ್ ಒ’ಬ್ರಿಯಾನ್ ಮತ್ತು ಐಯುಎಂಎಲ್‌ನ ಇ.ಟಿ ಮೊಹಮ್ಮದ್ ಬಶೀರ್ ಭಾಗವಹಿಸಿದ್ದರು. ಸರ್ಕಾರ ಕಡೆಯಿಂದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಅರ್ಜುನ್ ರಾಮ್ ಮೇಘವಾಲ್ ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...