Homeಮುಖಪುಟನಾಳೆಯಿಂದ ಸಂಸತ್ ಚಳಿಗಾಲದ ಅಧಿವೇಶನ | ಸುಗಮ ಕಲಾಪಕ್ಕೆ ಸಹಕಾರ ಕೋರಿದ ಆಡಳಿತ : ಎಸ್‌ಐಆರ್...

ನಾಳೆಯಿಂದ ಸಂಸತ್ ಚಳಿಗಾಲದ ಅಧಿವೇಶನ | ಸುಗಮ ಕಲಾಪಕ್ಕೆ ಸಹಕಾರ ಕೋರಿದ ಆಡಳಿತ : ಎಸ್‌ಐಆರ್ ಚರ್ಚೆ ಮುಂದಿಟ್ಟ ಪ್ರತಿಪಕ್ಷಗಳು

- Advertisement -
- Advertisement -

ನಾಳೆಯಿಂದ (ಡಿಸೆಂಬರ್ 1) ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭಗೊಳ್ಳಲಿದೆ. ಅದಕ್ಕೂ ಮುನ್ನ ಇಂದು (ನವೆಂಬರ್ 30) ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆದಿದೆ. ಸಭೆಯಲ್ಲಿ ಸುಗಮ ಕಲಾಪಕ್ಕೆ ಸಹಕಾರ ನೀಡುವಂತೆ ಸಚಿವರು ಪ್ರತಿಪಕ್ಷ ನಾಯಕರಲ್ಲಿ ಮನವಿ ಮಾಡಿದ್ದಾರೆ.

ಸಂಸತ್ ಕಲಾಪ ಸ್ಥಗಿತಗೊಳ್ಳಬಾರದು. ಅದು ಸುಗಮವಾಗಿ ನಡೆಯಬೇಕು. ಈ ನಿಟ್ಟಿನಲ್ಲಿ ಸರ್ಕಾರ ಎಲ್ಲಾ ಪಕ್ಷಗಳ ನಾಯಕರೊಂದಿಗೆ ಚರ್ಚೆ ನಡೆಸಿದೆ ಎಂದು ಸರ್ವಪಕ್ಷ ಸಭೆಯ ಬಳಿಕ ಕಿರಣ್ ರಿಜಿಜು ಹೇಳಿದ್ದಾರೆ.

ಎಸ್‌ಐಆರ್ ಕುರಿತು ಚರ್ಚೆ ನಡೆಸಬೇಕೆಂಬ ಪ್ರತಿಪಕ್ಷಗಳ ಬೇಡಿಕೆಯನ್ನು ಅಂಗೀಕರಿಸಲಾಗಿದೆಯೇ? ಎಂದು ಕೇಳಿದಾಗ, ಇಂದು ಸಂಜೆ ಸಭೆ ಸೇರಲಿರುವ ಸಂಸತ್ತಿನ ಕಾರ್ಯ ಕಲಾಪಗಳ ಸಲಹಾ ಸಮಿತಿ (ಬಿಎಸಿ) ಅಧಿವೇಶನದ ಕಾರ್ಯಸೂಚಿಯನ್ನು ನಿರ್ಧರಿಸುತ್ತದೆ ಎಂದು ರಿಜಿಜು ಪ್ರತಿಕ್ರಿಯಿಸಿದ್ದಾರೆ.

ಆಡಳಿತ ತಮ್ಮ ಪಕ್ಷ ವಿರೋಧ ಪಕ್ಷಗಳೊಂದಿಗೆ ಸಹಕರಿಸಿದರೆ ಸುಗಮವಾಗಿ ಕಲಾಪ ನಡೆಸಲು ನಮ್ಮ ಪಕ್ಷ ಸಹಕರಿಸುತ್ತದೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಕಲ್ಯಾಣ್ ಬ್ಯಾನರ್ಜಿ ಹೇಳಿದ್ದಾರೆ.

“ಸರ್ಕಾರವು ಎಸ್‌ಐಆರ್‌ನಂತಹ ವಿಷಯಗಳ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು. ಎಸ್‌ಐಆರ್ ಪ್ರಕ್ರಿಯೆ ವೇಳೆ 40 ಜನರು ಪ್ರಾಣ ಕಳೆದುಕೊಂಡಿದ್ದಾರೆ” ಎಂದು ಕಲ್ಯಾಣ್ ಬ್ಯಾನರ್ಜಿ ತಿಳಿಸಿದ್ದಾರೆ.

ಚಳಿಗಾಲದ ಅಧಿವೇಶನದಲ್ಲಿ ಎಸ್‌ಐಆರ್ ಕುರಿತು ಚರ್ಚೆಗೆ ಒತ್ತಾಯಿಸುವ ವಿಷಯದಲ್ಲಿ ಎಲ್ಲಾ ವಿರೋಧ ಪಕ್ಷಗಳು ಒಮ್ಮತದ ನಿರ್ಧಾರಕ್ಕೆ ಬಂದಿವೆ ಎಂದು ಡಿಎಂಕೆಯ ತಿರುಚಿ ಶಿವ ಹೇಳಿದ್ದಾರೆ.

ಎಸ್‌ಐಆರ್ ಕುರಿತು ಚರ್ಚೆಗೆ ಅವಕಾಶ ನೀಡದಿದ್ದರೆ ಸಂಸತ್ ಕಲಾಪ ನಡೆಯಲು ಅವಕಾಶ ಕೊಡುವುದಿಲ್ಲ ಎಂದು ಸಮಾಜವಾದಿ ಪಕ್ಷ ಹೇಳಿದೆ.

“ಸಮಾಜವಾದಿ ಪಕ್ಷವು ಎಸ್‌ಐಆರ್ ವಿಷಯವನ್ನು ಮುಂದಿಟ್ಟಿದೆ. ಏಕೆಂದರೆ, ಎಸ್‌ಐಆರ್‌ನಲ್ಲಿ ದೊಡ್ಡ ಪ್ರಮಾಣದ ಅಕ್ರಮಗಳು ನಡೆದಿರುವುದನ್ನು ನಾವು ನೋಡಿದ್ದೇವೆ. ಮೊದಲು, ನಾವು ಕೇಳುತ್ತಿದ್ದೆವು, ಆದರೆ ಈಗ ಜನರ ಹೆಸರು ತೆಗೆದು ಹಾಕುತ್ತಿರುವುದನ್ನು ನೋಡುತ್ತಿದ್ದೇವೆ. ಬಿಹಾರದಲ್ಲಿ, ದುಷ್ಕೃತ್ಯಗಳು ನಡೆದಿವೆ. ನಾವು ಅದರ ಬಗ್ಗೆ ಚರ್ಚೆಗೆ ಒತ್ತಾಯಿಸಿದ್ದೇವೆ ಎಂದು ಸಮಾಜವಾದಿ ಪಕ್ಷದ ನಾಯಕ ರಾಮ್ ಗೋಪಾಲ್ ಯಾದವ್ ಹೇಳಿದ್ದಾರೆ. ಚುನಾವಣಾ ಆಯೋಗ ಎಸ್‌ಐಆರ್ ಅಕ್ರಮಗಳಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.

“ತಪ್ಪು ನಡೆಯುತ್ತಿರುವಾಗ ಚರ್ಚೆ ಏಕೆ ಮಾಡಬಾರದು? ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ತೆಗೆದು ಹಾಕಿದರೆ ಚರ್ಚೆ ನಡೆಯುವುದಿಲ್ಲವೇ?” ಎಂದು ಯಾದವ್ ಪ್ರಶ್ನಿಸಿದ್ದಾರೆ.

“ನಾನು ಅನೇಕ ಸ್ಥಳಗಳಿಗೆ ಹೋಗಿದ್ದೇನೆ, ಇನ್ನೂ ಹೋಗುತ್ತಿದ್ದೇನೆ. ನಾನು 1967ರಿಂದ ಮತದಾರನಾಗಿದ್ದೇನೆ. ಇಟಾವಾ ಜಿಲ್ಲೆಯಲ್ಲಿ ನಮ್ಮೆಲ್ಲರನ್ನೂ ಸಿ ವರ್ಗಕ್ಕೆ ಸೇರಿಸಲಾಗಿದೆ. ಇಡೀ ಜಿಲ್ಲೆಯ ಪ್ರತಿಯೊಬ್ಬರನ್ನು ಸಿ ವರ್ಗಕ್ಕೆ ಸೇರಿಸಲಾಗಿದೆ. ನಮ್ಮ ಜಿಲ್ಲೆಯಿಂದ ಸಂಸತ್ತಿನ ಎರಡೂ ಸದನಗಳಲ್ಲಿ ಏಳು ಸಂಸದರು ಮತ್ತು ಮೂವರು ಶಾಸಕರಿದ್ದಾರೆ ಮತ್ತು ಅವರಲ್ಲಿ ಪ್ರತಿಯೊಬ್ಬರನ್ನು ಸಿ ವರ್ಗಕ್ಕೆ ಸೇರಿಸಲಾಗಿದೆ ಎಂದು ಯಾದವ್ ತಿಳಿಸಿದ್ದಾರೆ.

ಸಭೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಇದು ಕೇವಲ ಫಾರ್ಮಾಲಿಟಿಗೆ ನಡೆಸಿದ ಸಭೆಯಾಗಿದೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಪ್ರತಿಪಕ್ಷಗಳೊಂದಿಗೆ ಯಾವುದೇ ಸಮಾಲೋಚನೆ ನಡೆಸದೆ ಅಲ್ಪಾವಧಿಯ ಚರ್ಚೆಗೆ ವಿಷಯವನ್ನು ಪಟ್ಟಿ ಮಾಡುವ ಮೂಲಕ ತನ್ನ ಉದ್ದೇಶಗಳನ್ನು ಸ್ಪಷ್ಟಪಡಿಸಿದೆ ಎಂದಿದ್ದಾರೆ.

ನಾಳೆಯಿಂದ ಪ್ರಾರಂಭವಾಗುವ ಸಂಸತ್ತಿನ ಚಳಿಗಾಲದ ಅಧಿವೇಶನದ ಕಾರ್ಯಸೂಚಿಯನ್ನು ಚರ್ಚಿಸಲು ಮೋದಿ ಸರ್ಕಾರ ಕರೆದಿರುವ ಸರ್ವಪಕ್ಷ ಸಭೆ ಕೇವಲ ಫಾರ್ಮಾಲಿಟಿ ಮಾತ್ರ ಎಂದು ಜೈರಾಮ್ ರಮೇಶ್ ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ.

15 ದಿನಗಳ ಈ ಅಧಿವೇಶನವು ಸಂಸತ್ತಿನ ಇತಿಹಾಸದಲ್ಲಿ ಅತ್ಯಂತ ಕಡಿಮೆ ಅವಧಿಯದ್ದಾಗಿರಲಿದೆ. ಮೋದಿ ಸರ್ಕಾರವು 13 ಮಸೂದೆಗಳನ್ನು ಅಂಗೀಕಾರಕ್ಕಾಗಿ ಪಟ್ಟಿ ಮಾಡಿದೆ. ಇವುಗಳಲ್ಲಿ ಒಂದು ಸುಗ್ರೀವಾಜ್ಞೆಯನ್ನು ಬದಲಾಯಿಸುತ್ತದೆ ಮತ್ತು ಎರಡು ಲೋಕಸಭೆಯ ಸಮಿತಿಯ ಮೂಲಕ ಹೋಗಿವೆ. ಇನ್ನುಳಿದ ಹತ್ತು ಮಸೂದೆಗಳನ್ನು ಸಂಬಂಧಪಟ್ಟ ಸ್ಥಾಯಿ ಸಮಿತಿ ಪರಿಶೀಲಿಸಿಲ್ಲ ಎಂದು ಜೈರಾಮ್ ರಮೇಶ್ ತಿಳಿಸಿದ್ದಾರೆ.

ಸಹಜವಾಗಿಯೇ, ಪ್ರಸ್ತುತ ಪಟ್ಟಿ ಮಾಡದ ಮಸೂದೆಯನ್ನು ಅಲ್ಪಾವಧಿಯ ಅಧಿವೇಶನದ ನಂತರದ ಭಾಗದಲ್ಲಿ ಇದ್ದಕ್ಕಿದ್ದಂತೆ ಮಂಡಿಸುವ ಸಾಧ್ಯತೆಯಿದೆ ಎಂದು ರಮೇಶ್ ಹೇಳಿದ್ದಾರೆ.

ನಾಳೆಯಿಂದ ಪ್ರಾರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಒಟ್ಟು 15 ಕಲಾಪಗಳು ನಡೆಯಲಿವೆ. ಸಂಸತ್ತಿನ ಅಧಿವೇಶನಗಳು ಸಾಮಾನ್ಯವಾಗಿ 20 ಕಲಾಪಗಳನ್ನು ಹೊಂದಿರುತ್ತವೆ.

ರಾಷ್ಟ್ರೀಯ ಭದ್ರತೆ, ವಾಯು ಮಾಲಿನ್ಯ, ಮತದಾರರ ಪಟ್ಟಿಯ ಪರಿಷ್ಕರಣೆ, ರೈತರ ಸಮಸ್ಯೆಗಳು ಮತ್ತು ವಿದೇಶಾಂಗ ನೀತಿಯ ಕುರಿತು ಚರ್ಚೆ ನಡೆಸಬೇಕೆಂದು ತಮ್ಮ ಪಕ್ಷ ಒತ್ತಾಯಿಸಿದೆ ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ಉಪನಾಯಕ ಗೌರವ್ ಗೊಗೊಯ್ ಹೇಳಿದ್ದಾರೆ.

ಪ್ರಧಾನಿ ಮತ್ತು ಗೃಹ ಸಚಿವರ ನೇತೃತ್ವದಲ್ಲಿ ಸರ್ಕಾರವು ಭಾರತದ ಪ್ರಜಾಪ್ರಭುತ್ವ ಮತ್ತು ಸಂಸದೀಯ ಸಂಪ್ರದಾಯಗಳನ್ನು ಕೊನೆಗೊಳಿಸಲು ನೋಡುತ್ತಿರುವಂತೆ ತೋರುತ್ತಿದೆ ಎಂದು ಸರ್ವಪಕ್ಷ ಸಭೆಯ ನಂತರ ಗೊಗೊಯ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ದೆಹಲಿ ಸ್ಫೋಟದ ನಂತರ ರಾಷ್ಟ್ರೀಯ ಭದ್ರತೆಯ ಬಗ್ಗೆ ಚರ್ಚೆ ನಡೆಯಬೇಕೆಂದು ನಮ್ಮ ಪಕ್ಷ ಒತ್ತಾಯಿಸಿದೆ. ರಾಷ್ಟ್ರೀಯ ಭದ್ರತೆಯ ಬಗ್ಗೆ ಅಲ್ಪಾವಧಿಯ ಚರ್ಚೆಯನ್ನೂ ಸರ್ಕಾರ ಬಯಸುವುದಿಲ್ಲ ಎಂದು ತೋರುತ್ತದೆ. ಎರಡನೆಯದ್ದು ಪ್ರಜಾಪ್ರಭುತ್ವದ ಭದ್ರತೆ. ಚುನಾವಣೆಯ ಮೊದಲು, ಚುನಾವಣೆಯ ಸಂದರ್ಭ ಮತ್ತು ನಂತರ ಚುನಾವಣಾ ಆಯೋಗವು ಪಕ್ಷಪಾತದಿಂದ ವರ್ತಿಸುತ್ತಿದೆ. ಮತದಾರರ ಪಟ್ಟಿಯ ಪರಿಷ್ಕರಣೆಯ ಬಗ್ಗೆ ಚರ್ಚೆ ನಡೆಯಬೇಕು ಎಂದು ಗೊಗೊಯ್ ಹೇಳಿದ್ದಾರೆ.

ಸರ್ವಪಕ್ಷ ಸಭೆಯಲ್ಲಿ ಕಾಂಗ್ರೆಸ್‌ನ ಪ್ರಮೋದ್ ತಿವಾರಿ, ಡಿಎಂಕೆಯ ಟಿ.ಆರ್ ಬಾಲು, ಟಿಎಂಸಿಯ ಡೆರೆಕ್ ಒ’ಬ್ರಿಯಾನ್ ಮತ್ತು ಐಯುಎಂಎಲ್‌ನ ಇ.ಟಿ ಮೊಹಮ್ಮದ್ ಬಶೀರ್ ಭಾಗವಹಿಸಿದ್ದರು. ಸರ್ಕಾರ ಕಡೆಯಿಂದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಅರ್ಜುನ್ ರಾಮ್ ಮೇಘವಾಲ್ ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...