Homeಮುಖಪುಟನಾಳೆಯಿಂದ ಸಂಸತ್ ಚಳಿಗಾಲದ ಅಧಿವೇಶನ | ಸುಗಮ ಕಲಾಪಕ್ಕೆ ಸಹಕಾರ ಕೋರಿದ ಆಡಳಿತ : ಎಸ್‌ಐಆರ್...

ನಾಳೆಯಿಂದ ಸಂಸತ್ ಚಳಿಗಾಲದ ಅಧಿವೇಶನ | ಸುಗಮ ಕಲಾಪಕ್ಕೆ ಸಹಕಾರ ಕೋರಿದ ಆಡಳಿತ : ಎಸ್‌ಐಆರ್ ಚರ್ಚೆ ಮುಂದಿಟ್ಟ ಪ್ರತಿಪಕ್ಷಗಳು

- Advertisement -
- Advertisement -

ನಾಳೆಯಿಂದ (ಡಿಸೆಂಬರ್ 1) ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭಗೊಳ್ಳಲಿದೆ. ಅದಕ್ಕೂ ಮುನ್ನ ಇಂದು (ನವೆಂಬರ್ 30) ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆದಿದೆ. ಸಭೆಯಲ್ಲಿ ಸುಗಮ ಕಲಾಪಕ್ಕೆ ಸಹಕಾರ ನೀಡುವಂತೆ ಸಚಿವರು ಪ್ರತಿಪಕ್ಷ ನಾಯಕರಲ್ಲಿ ಮನವಿ ಮಾಡಿದ್ದಾರೆ.

ಸಂಸತ್ ಕಲಾಪ ಸ್ಥಗಿತಗೊಳ್ಳಬಾರದು. ಅದು ಸುಗಮವಾಗಿ ನಡೆಯಬೇಕು. ಈ ನಿಟ್ಟಿನಲ್ಲಿ ಸರ್ಕಾರ ಎಲ್ಲಾ ಪಕ್ಷಗಳ ನಾಯಕರೊಂದಿಗೆ ಚರ್ಚೆ ನಡೆಸಿದೆ ಎಂದು ಸರ್ವಪಕ್ಷ ಸಭೆಯ ಬಳಿಕ ಕಿರಣ್ ರಿಜಿಜು ಹೇಳಿದ್ದಾರೆ.

ಎಸ್‌ಐಆರ್ ಕುರಿತು ಚರ್ಚೆ ನಡೆಸಬೇಕೆಂಬ ಪ್ರತಿಪಕ್ಷಗಳ ಬೇಡಿಕೆಯನ್ನು ಅಂಗೀಕರಿಸಲಾಗಿದೆಯೇ? ಎಂದು ಕೇಳಿದಾಗ, ಇಂದು ಸಂಜೆ ಸಭೆ ಸೇರಲಿರುವ ಸಂಸತ್ತಿನ ಕಾರ್ಯ ಕಲಾಪಗಳ ಸಲಹಾ ಸಮಿತಿ (ಬಿಎಸಿ) ಅಧಿವೇಶನದ ಕಾರ್ಯಸೂಚಿಯನ್ನು ನಿರ್ಧರಿಸುತ್ತದೆ ಎಂದು ರಿಜಿಜು ಪ್ರತಿಕ್ರಿಯಿಸಿದ್ದಾರೆ.

ಆಡಳಿತ ತಮ್ಮ ಪಕ್ಷ ವಿರೋಧ ಪಕ್ಷಗಳೊಂದಿಗೆ ಸಹಕರಿಸಿದರೆ ಸುಗಮವಾಗಿ ಕಲಾಪ ನಡೆಸಲು ನಮ್ಮ ಪಕ್ಷ ಸಹಕರಿಸುತ್ತದೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಕಲ್ಯಾಣ್ ಬ್ಯಾನರ್ಜಿ ಹೇಳಿದ್ದಾರೆ.

“ಸರ್ಕಾರವು ಎಸ್‌ಐಆರ್‌ನಂತಹ ವಿಷಯಗಳ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು. ಎಸ್‌ಐಆರ್ ಪ್ರಕ್ರಿಯೆ ವೇಳೆ 40 ಜನರು ಪ್ರಾಣ ಕಳೆದುಕೊಂಡಿದ್ದಾರೆ” ಎಂದು ಕಲ್ಯಾಣ್ ಬ್ಯಾನರ್ಜಿ ತಿಳಿಸಿದ್ದಾರೆ.

ಚಳಿಗಾಲದ ಅಧಿವೇಶನದಲ್ಲಿ ಎಸ್‌ಐಆರ್ ಕುರಿತು ಚರ್ಚೆಗೆ ಒತ್ತಾಯಿಸುವ ವಿಷಯದಲ್ಲಿ ಎಲ್ಲಾ ವಿರೋಧ ಪಕ್ಷಗಳು ಒಮ್ಮತದ ನಿರ್ಧಾರಕ್ಕೆ ಬಂದಿವೆ ಎಂದು ಡಿಎಂಕೆಯ ತಿರುಚಿ ಶಿವ ಹೇಳಿದ್ದಾರೆ.

ಎಸ್‌ಐಆರ್ ಕುರಿತು ಚರ್ಚೆಗೆ ಅವಕಾಶ ನೀಡದಿದ್ದರೆ ಸಂಸತ್ ಕಲಾಪ ನಡೆಯಲು ಅವಕಾಶ ಕೊಡುವುದಿಲ್ಲ ಎಂದು ಸಮಾಜವಾದಿ ಪಕ್ಷ ಹೇಳಿದೆ.

“ಸಮಾಜವಾದಿ ಪಕ್ಷವು ಎಸ್‌ಐಆರ್ ವಿಷಯವನ್ನು ಮುಂದಿಟ್ಟಿದೆ. ಏಕೆಂದರೆ, ಎಸ್‌ಐಆರ್‌ನಲ್ಲಿ ದೊಡ್ಡ ಪ್ರಮಾಣದ ಅಕ್ರಮಗಳು ನಡೆದಿರುವುದನ್ನು ನಾವು ನೋಡಿದ್ದೇವೆ. ಮೊದಲು, ನಾವು ಕೇಳುತ್ತಿದ್ದೆವು, ಆದರೆ ಈಗ ಜನರ ಹೆಸರು ತೆಗೆದು ಹಾಕುತ್ತಿರುವುದನ್ನು ನೋಡುತ್ತಿದ್ದೇವೆ. ಬಿಹಾರದಲ್ಲಿ, ದುಷ್ಕೃತ್ಯಗಳು ನಡೆದಿವೆ. ನಾವು ಅದರ ಬಗ್ಗೆ ಚರ್ಚೆಗೆ ಒತ್ತಾಯಿಸಿದ್ದೇವೆ ಎಂದು ಸಮಾಜವಾದಿ ಪಕ್ಷದ ನಾಯಕ ರಾಮ್ ಗೋಪಾಲ್ ಯಾದವ್ ಹೇಳಿದ್ದಾರೆ. ಚುನಾವಣಾ ಆಯೋಗ ಎಸ್‌ಐಆರ್ ಅಕ್ರಮಗಳಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.

“ತಪ್ಪು ನಡೆಯುತ್ತಿರುವಾಗ ಚರ್ಚೆ ಏಕೆ ಮಾಡಬಾರದು? ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ತೆಗೆದು ಹಾಕಿದರೆ ಚರ್ಚೆ ನಡೆಯುವುದಿಲ್ಲವೇ?” ಎಂದು ಯಾದವ್ ಪ್ರಶ್ನಿಸಿದ್ದಾರೆ.

“ನಾನು ಅನೇಕ ಸ್ಥಳಗಳಿಗೆ ಹೋಗಿದ್ದೇನೆ, ಇನ್ನೂ ಹೋಗುತ್ತಿದ್ದೇನೆ. ನಾನು 1967ರಿಂದ ಮತದಾರನಾಗಿದ್ದೇನೆ. ಇಟಾವಾ ಜಿಲ್ಲೆಯಲ್ಲಿ ನಮ್ಮೆಲ್ಲರನ್ನೂ ಸಿ ವರ್ಗಕ್ಕೆ ಸೇರಿಸಲಾಗಿದೆ. ಇಡೀ ಜಿಲ್ಲೆಯ ಪ್ರತಿಯೊಬ್ಬರನ್ನು ಸಿ ವರ್ಗಕ್ಕೆ ಸೇರಿಸಲಾಗಿದೆ. ನಮ್ಮ ಜಿಲ್ಲೆಯಿಂದ ಸಂಸತ್ತಿನ ಎರಡೂ ಸದನಗಳಲ್ಲಿ ಏಳು ಸಂಸದರು ಮತ್ತು ಮೂವರು ಶಾಸಕರಿದ್ದಾರೆ ಮತ್ತು ಅವರಲ್ಲಿ ಪ್ರತಿಯೊಬ್ಬರನ್ನು ಸಿ ವರ್ಗಕ್ಕೆ ಸೇರಿಸಲಾಗಿದೆ ಎಂದು ಯಾದವ್ ತಿಳಿಸಿದ್ದಾರೆ.

ಸಭೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಇದು ಕೇವಲ ಫಾರ್ಮಾಲಿಟಿಗೆ ನಡೆಸಿದ ಸಭೆಯಾಗಿದೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಪ್ರತಿಪಕ್ಷಗಳೊಂದಿಗೆ ಯಾವುದೇ ಸಮಾಲೋಚನೆ ನಡೆಸದೆ ಅಲ್ಪಾವಧಿಯ ಚರ್ಚೆಗೆ ವಿಷಯವನ್ನು ಪಟ್ಟಿ ಮಾಡುವ ಮೂಲಕ ತನ್ನ ಉದ್ದೇಶಗಳನ್ನು ಸ್ಪಷ್ಟಪಡಿಸಿದೆ ಎಂದಿದ್ದಾರೆ.

ನಾಳೆಯಿಂದ ಪ್ರಾರಂಭವಾಗುವ ಸಂಸತ್ತಿನ ಚಳಿಗಾಲದ ಅಧಿವೇಶನದ ಕಾರ್ಯಸೂಚಿಯನ್ನು ಚರ್ಚಿಸಲು ಮೋದಿ ಸರ್ಕಾರ ಕರೆದಿರುವ ಸರ್ವಪಕ್ಷ ಸಭೆ ಕೇವಲ ಫಾರ್ಮಾಲಿಟಿ ಮಾತ್ರ ಎಂದು ಜೈರಾಮ್ ರಮೇಶ್ ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ.

15 ದಿನಗಳ ಈ ಅಧಿವೇಶನವು ಸಂಸತ್ತಿನ ಇತಿಹಾಸದಲ್ಲಿ ಅತ್ಯಂತ ಕಡಿಮೆ ಅವಧಿಯದ್ದಾಗಿರಲಿದೆ. ಮೋದಿ ಸರ್ಕಾರವು 13 ಮಸೂದೆಗಳನ್ನು ಅಂಗೀಕಾರಕ್ಕಾಗಿ ಪಟ್ಟಿ ಮಾಡಿದೆ. ಇವುಗಳಲ್ಲಿ ಒಂದು ಸುಗ್ರೀವಾಜ್ಞೆಯನ್ನು ಬದಲಾಯಿಸುತ್ತದೆ ಮತ್ತು ಎರಡು ಲೋಕಸಭೆಯ ಸಮಿತಿಯ ಮೂಲಕ ಹೋಗಿವೆ. ಇನ್ನುಳಿದ ಹತ್ತು ಮಸೂದೆಗಳನ್ನು ಸಂಬಂಧಪಟ್ಟ ಸ್ಥಾಯಿ ಸಮಿತಿ ಪರಿಶೀಲಿಸಿಲ್ಲ ಎಂದು ಜೈರಾಮ್ ರಮೇಶ್ ತಿಳಿಸಿದ್ದಾರೆ.

ಸಹಜವಾಗಿಯೇ, ಪ್ರಸ್ತುತ ಪಟ್ಟಿ ಮಾಡದ ಮಸೂದೆಯನ್ನು ಅಲ್ಪಾವಧಿಯ ಅಧಿವೇಶನದ ನಂತರದ ಭಾಗದಲ್ಲಿ ಇದ್ದಕ್ಕಿದ್ದಂತೆ ಮಂಡಿಸುವ ಸಾಧ್ಯತೆಯಿದೆ ಎಂದು ರಮೇಶ್ ಹೇಳಿದ್ದಾರೆ.

ನಾಳೆಯಿಂದ ಪ್ರಾರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಒಟ್ಟು 15 ಕಲಾಪಗಳು ನಡೆಯಲಿವೆ. ಸಂಸತ್ತಿನ ಅಧಿವೇಶನಗಳು ಸಾಮಾನ್ಯವಾಗಿ 20 ಕಲಾಪಗಳನ್ನು ಹೊಂದಿರುತ್ತವೆ.

ರಾಷ್ಟ್ರೀಯ ಭದ್ರತೆ, ವಾಯು ಮಾಲಿನ್ಯ, ಮತದಾರರ ಪಟ್ಟಿಯ ಪರಿಷ್ಕರಣೆ, ರೈತರ ಸಮಸ್ಯೆಗಳು ಮತ್ತು ವಿದೇಶಾಂಗ ನೀತಿಯ ಕುರಿತು ಚರ್ಚೆ ನಡೆಸಬೇಕೆಂದು ತಮ್ಮ ಪಕ್ಷ ಒತ್ತಾಯಿಸಿದೆ ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ಉಪನಾಯಕ ಗೌರವ್ ಗೊಗೊಯ್ ಹೇಳಿದ್ದಾರೆ.

ಪ್ರಧಾನಿ ಮತ್ತು ಗೃಹ ಸಚಿವರ ನೇತೃತ್ವದಲ್ಲಿ ಸರ್ಕಾರವು ಭಾರತದ ಪ್ರಜಾಪ್ರಭುತ್ವ ಮತ್ತು ಸಂಸದೀಯ ಸಂಪ್ರದಾಯಗಳನ್ನು ಕೊನೆಗೊಳಿಸಲು ನೋಡುತ್ತಿರುವಂತೆ ತೋರುತ್ತಿದೆ ಎಂದು ಸರ್ವಪಕ್ಷ ಸಭೆಯ ನಂತರ ಗೊಗೊಯ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ದೆಹಲಿ ಸ್ಫೋಟದ ನಂತರ ರಾಷ್ಟ್ರೀಯ ಭದ್ರತೆಯ ಬಗ್ಗೆ ಚರ್ಚೆ ನಡೆಯಬೇಕೆಂದು ನಮ್ಮ ಪಕ್ಷ ಒತ್ತಾಯಿಸಿದೆ. ರಾಷ್ಟ್ರೀಯ ಭದ್ರತೆಯ ಬಗ್ಗೆ ಅಲ್ಪಾವಧಿಯ ಚರ್ಚೆಯನ್ನೂ ಸರ್ಕಾರ ಬಯಸುವುದಿಲ್ಲ ಎಂದು ತೋರುತ್ತದೆ. ಎರಡನೆಯದ್ದು ಪ್ರಜಾಪ್ರಭುತ್ವದ ಭದ್ರತೆ. ಚುನಾವಣೆಯ ಮೊದಲು, ಚುನಾವಣೆಯ ಸಂದರ್ಭ ಮತ್ತು ನಂತರ ಚುನಾವಣಾ ಆಯೋಗವು ಪಕ್ಷಪಾತದಿಂದ ವರ್ತಿಸುತ್ತಿದೆ. ಮತದಾರರ ಪಟ್ಟಿಯ ಪರಿಷ್ಕರಣೆಯ ಬಗ್ಗೆ ಚರ್ಚೆ ನಡೆಯಬೇಕು ಎಂದು ಗೊಗೊಯ್ ಹೇಳಿದ್ದಾರೆ.

ಸರ್ವಪಕ್ಷ ಸಭೆಯಲ್ಲಿ ಕಾಂಗ್ರೆಸ್‌ನ ಪ್ರಮೋದ್ ತಿವಾರಿ, ಡಿಎಂಕೆಯ ಟಿ.ಆರ್ ಬಾಲು, ಟಿಎಂಸಿಯ ಡೆರೆಕ್ ಒ’ಬ್ರಿಯಾನ್ ಮತ್ತು ಐಯುಎಂಎಲ್‌ನ ಇ.ಟಿ ಮೊಹಮ್ಮದ್ ಬಶೀರ್ ಭಾಗವಹಿಸಿದ್ದರು. ಸರ್ಕಾರ ಕಡೆಯಿಂದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಅರ್ಜುನ್ ರಾಮ್ ಮೇಘವಾಲ್ ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...