Homeಮುಖಪುಟಎಂಎಸ್‌ಪಿಗೆ ಹೊಸ ಪ್ರಸ್ತಾವನೆ ಮುಂದಿಟ್ಟ ಸರ್ಕಾರ: ರೈತರ 'ದೆಹಲಿ ಚಲೋ' ತಾತ್ಕಾಲಿಕ ಸ್ಥಗಿತ

ಎಂಎಸ್‌ಪಿಗೆ ಹೊಸ ಪ್ರಸ್ತಾವನೆ ಮುಂದಿಟ್ಟ ಸರ್ಕಾರ: ರೈತರ ‘ದೆಹಲಿ ಚಲೋ’ ತಾತ್ಕಾಲಿಕ ಸ್ಥಗಿತ

- Advertisement -
- Advertisement -

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನೀಡುವ ಸಂಬಂಧ ಕೇಂದ್ರ ಸರ್ಕಾರ ಹೊಸ ಪ್ರಸ್ತಾವನೆ ಮುಂದಿಟ್ಟಿದೆ. ಈ ಹಿನ್ನೆಲೆ, ಮುಂದಿನ ಎರಡು ದಿನಗಳಲ್ಲಿ ಪ್ರಸ್ತಾವನೆಯನ್ನು ಅಧ್ಯಯನ ಮಾಡುವುದಾಗಿ ರೈತ ಮುಖಂಡರು ಘೋಷಿಸಿದ್ದು, ಅಲ್ಲಿಯವರೆಗೆ ‘ದೆಹಲಿ ಚಲೋ’ ಮೆರವಣಿಗೆಯನ್ನು ಸ್ಥಗಿತಗೊಳಿಸುವುದಾಗಿ ಹೇಳಿದ್ದಾರೆ.

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಅರ್ಜುನ್ ಮುಂಡಾ, ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಮತ್ತು ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಚಂಡೀಗಢದಲ್ಲಿ ರೈತ ಮುಖಂಡರೊಂದಿಗೆ ಭಾನುವಾರ ನಾಲ್ಕನೇ ಸುತ್ತಿನ ಮಾತುಕತೆ ನಡೆಸಿದ್ದಾರೆ. ಆ ಬಳಿಕ ರೈತ ಮುಖಂಡರು ದೆಹಲಿ ಚಲೋ ತಾತ್ಕಾಲಿಕ ಸ್ಥಗಿತಗೊಳಿಸುವ ನಿರ್ಧಾರ ತೆಗೆದುಕೊಂಡಿದ್ದಾರೆ.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪಿಯೂಷ್ ಗೋಯಲ್, “ರೈತರೊಂದಿಗೆ ಒಪ್ಪಂದ ಮಾಡಿಕೊಂಡ ನಂತರ ಐದು ವರ್ಷಗಳವರೆಗೆ ಕನಿಷ್ಠ ಬೆಂಬಲ ಬೆಲೆಯಲ್ಲಿ ದ್ವಿದಳ ಧಾನ್ಯಗಳು, ಮೆಕ್ಕೆಜೋಳ ಮತ್ತು ಹತ್ತಿ ಬೆಳೆಗಳನ್ನು ಸರ್ಕಾರಿ ಸಂಸ್ಥೆಗಳ ಮೂಲಕ ಖರೀದಿಸುವ ಪ್ರಸ್ತಾವನೆಯನ್ನು ಮುಂದಿಡಲಾಗಿದೆ” ಎಂದಿದ್ದಾರೆ.

“ನ್ಯಾಷನಲ್ ಕೋ ಆಪರೇಟಿವ್ ಕನ್ಸ್ಯೂಮರ್ಸ್ ಫೆಡರೇಶನ್ (ಎನ್‌ಸಿಸಿಎಫ್), ನ್ಯಾಷನಲ್ ಅಗ್ರೀಕಲ್ಚರಲ್ ಕೋ ಆಪರೇಟಿವ್ ಮಾರ್ಕೆಟಿಂಗ್ ಫೆಡರೇಶನ್ ಆಫ್ ಇಂಡಿಯಾ (ಎನ್‌ಎಎಫ್‌ಇಡಿ) ನಂತಹ ಸಹಕಾರ ಸಂಘಗಳು ತೊಗರಿ ಬೇಳೆ, ಉದ್ದಿನ ಬೇಳೆ, ಮೆಕ್ಕೆಜೋಳವನ್ನು ಬೆಳೆಯುವ ರೈತರೊಂದಿಗೆ ಒಪ್ಪಂದ ಮಾಡಿಕೊಳ್ಳಲಿವೆ. ಮುಂದಿನ ಐದು ವರ್ಷಗಳವರೆಗೆ ಈ ಸಂಸ್ಥೆಗಳು ರೈತರ ಉತ್ಪನ್ನಗಳನ್ನು ಎಂಎಸ್‌ಪಿ ದರದಲ್ಲಿ ಖರೀದಿಸಲಿದೆ. ರೈತರ ಉತ್ಪನ್ನಗಳನ್ನು ಖರೀದಿಸುವುದಕ್ಕೆ ಯಾವುದೇ ಮಿತಿ ಇರುವುದಿಲ್ಲ. ಅದಕ್ಕಾಗಿ ಪೋರ್ಟಲ್ ಅನ್ನು ಅಭಿವೃದ್ಧಿಪಡಿಸಲಾಗುವುದು” ಎಂದು ಸಭೆಯ ನಂತರ ಗೋಯಲ್ ತಿಳಿಸಿದ್ದಾರೆ.

“ಫೆ.19 ಮತ್ತು 20ರಂದು ನಮ್ಮ ವೇದಿಕೆಗಳಲ್ಲಿ ಸರ್ಕಾರದ ಪ್ರಸ್ತಾವನೆಯ ಕುರಿತು ಚರ್ಚಿಸಿ, ಈ ಬಗ್ಗೆ ತಜ್ಞರ ಅಭಿಪ್ರಾಯನ್ನೂ ಪಡೆದು ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ” ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಹೇಳಿದ್ದಾರೆ.

“ಸಾಲ ಮನ್ನಾ ಮತ್ತು ಇತರ ನಮ್ಮ ಬೇಡಿಕೆಗಳ ಕುರಿತು ಚರ್ಚೆ ಬಾಕಿ ಉಳಿದಿದ್ದು, ಇನ್ನೆರಡು ದಿನಗಳಲ್ಲಿ ಇವುಗಳು ಬಗೆಹರಿಯಲಿವೆ ಎಂದು ನಾವು ಭಾವಿಸುತ್ತೇವೆ. ಪ್ರಸ್ತುತ ‘ದೆಹಲಿ ಚಲೋ’ ಮೆರವಣಿಗೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಫೆಬ್ರವರಿ 21 ರಂದು ಬೆಳಿಗ್ಗೆ 11 ಗಂಟೆಗೆ ಪುನರಾರಂಭಿಸುತ್ತವೆ. ನಮ್ಮ ಎಲ್ಲಾ ಸಮಸ್ಯೆಗಳನ್ನು ಪರಿಹಾರವಾಗಿಲ್ಲ” ಎಂದು ಪಂಧೇರ್ ತಿಳಿಸಿದ್ದಾರೆ.

ನಾವು ಸರ್ಕಾರದೊಂದಿಗೆ ಮಾತುಕತೆಯ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದೇವೆ. ಆದರೆ, ಕಾರಣಾಂತರಗಳಿಂದ ಅದು ಆಗುತ್ತಿಲ್ಲ. ಶಾಂತಿಯುತವಾಗಿ ದೆಹಲಿಗೆ ಹೋಗಲು ಅವಕಾಶ ನೀಡುವಂತೆ ನಾವು ಸರ್ಕಾರವನ್ನು ಕೋರುತ್ತೇವೆ” ಎಂದಿದ್ದಾರೆ.

ಕೇಂದ್ರ ಸಚಿವರು ಮತ್ತು ರೈತ ಮುಖಂಡರು ಈ ಹಿಂದೆ ಫೆಬ್ರವರಿ 8, 12 ಮತ್ತು 15 ರಂದು ಸಭೆ ನಡೆಸಿದ್ದಾರೆ. ಇದುವರೆಗೆ ಒಟ್ಟು ನಾಲ್ಕು ಬಾರಿ ಪರಸ್ಪರ ಚರ್ಚೆ ನಡೆದಿದೆ. ಮೂರು ಸಭೆಗಳಲ್ಲಿ ಯಾವುದೇ ತೀರ್ಮಾನಕ್ಕೆ ಬರಲು ಸಾಧ್ಯವಾಗಿರಲಿಲ್ಲ. ನಾಲ್ಕನೇ ಸಭೆಯಲ್ಲಿ ಸರ್ಕಾರ ಹೊಸ ಪ್ರಸ್ತಾವನೆ ಮುಂದಿಟ್ಟಿದೆ. ಇದಕ್ಕೆ ಒಪ್ಪಿ ರೈತರು ದೆಹಲಿ ಚಲೋ ಕೈ ಬಿಡುತ್ತಾರಾ? ಇಲ್ಲ , ಪ್ರತಿಭಟನೆ ಮುಂದುವರೆಸುತ್ತಾರಾ? ಕಾದು ನೋಡಬೇಕಿದೆ.

ಇದನ್ನೂ ಓದಿ: ಮಣಿಪುರ: ಸರಕಾರಿ ಕಚೇರಿಗಳನ್ನು ಬಲವಂತದಿಂದ ಬಂದ್‌ ಮಾಡಿಸುತ್ತಿರುವ ಕುಕಿ ಗುಂಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...