Homeಮುಖಪುಟಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

- Advertisement -
- Advertisement -

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು ಅಥವಾ ಗಂಭೀರ ಗಾಯಗಳಾಗಿವೆ ಎಂದು ಆರೋಪಿಸುವ ಕುಟುಂಬಗಳ ಬಗ್ಗೆ ಸರ್ಕಾರ ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿರುವುದಾಗಿ livelaw.in ವರದಿ ಮಾಡಿದೆ.

ಸಂವಿಧಾನವು ಬದುಕುವ ಹಕ್ಕನ್ನು ಕೇವಲ ‘ತಪ್ಪು ಯಾರದ್ದು’ ಎಂಬ ದೃಷ್ಟಿಕೋನದಿಂದ ಮಾತ್ರ ನೋಡುವುದಿಲ್ಲ ಎಂದು ಅವಲೋಕಿಸಿದ ನ್ಯಾಯಾಲಯವು, ಸಂತ್ರಸ್ತ ಕುಟುಂಬಗಳು ಯಾವುದೇ ಸುಲಭವಾಗಿ ಲಭ್ಯವಿರುವ ಪರಿಹಾರ ವ್ಯವಸ್ಥೆಯಿಲ್ಲದೆ ಸಂಕಷ್ಟಕ್ಕೆ ಸಿಲುಕದಂತೆ ನೋಡಿಕೊಳ್ಳುವ ಸಕಾರಾತ್ಮಕ ಜವಾಬ್ದಾರಿಯನ್ನು ವಿಧಿ 21 ರಾಜ್ಯದ ಮೇಲೆ ಹೇರುತ್ತದೆ ಎಂದು ತಿಳಿಸಿದೆ.

ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠವು, ಕೋವಿಡ್-19 ಲಸಿಕೆ ಪಡೆದ ನಂತರ ಸಂಭವಿಸುವ ಗಂಭೀರ ಪ್ರತಿಕೂಲ ಘಟನೆಗಳಿಗೆ ಸಂಬಂಧಿಸಿದಂತೆ ‘ಯಾರದ್ದೇ ತಪ್ಪಿಲ್ಲದಿದ್ದರೂ ಪರಿಹಾರ ನೀಡುವ’ ನೀತಿಯನ್ನು ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿ ಹೇಳಿದೆ.

ಕೋವಿಡ್-19 ಲಸಿಕೆ ಪಡೆದ ನಂತರ ಸಾವು ಸಂಭವಿಸಿದೆ ಅಥವಾ ತೀವ್ರ ಅನಾರೋಗ್ಯ ಉಂಟಾಗಿದೆ ಎಂದು ಆರೋಪಿಸಿ ಸಂತ್ರಸ್ತ ಕುಟುಂಬಗಳು ಸಲ್ಲಿಸಿದ್ದ ‘ರಚನಾ ಗಂಗು ವರ್ಸಸ್ ಯೂನಿಯನ್ ಆಫ್ ಇಂಡಿಯಾ’ ಸೇರಿದಂತೆ ಹಲವು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ ಈ ಮೇಲಿನ ಮಹತ್ವದ ನಿರ್ದೇಶನಗಳನ್ನು ನೀಡಿದೆ.

“ತಾನು ಲಸಿಕೆಗಳ ಸಾಮರ್ಥ್ಯವನ್ನಾಗಲಿ ಅಥವಾ ಅವುಗಳಿಗೆ ನೀಡಲಾದ ನಿಯಂತ್ರಕ ಅನುಮೋದನೆಯ ಪ್ರಕ್ರಿಯೆಯನ್ನಾಗಲಿ ಪರಿಶೀಲಿಸುತ್ತಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಬದಲಾಗಿ, ಸರ್ಕಾರದ ನೇತೃತ್ವದ ಲಸಿಕಾ ಕಾರ್ಯಕ್ರಮದ ಸಮಯದಲ್ಲಿ ಹಾನಿಗೊಳಗಾದ ವ್ಯಕ್ತಿಗಳಿಗೆ ವ್ಯವಸ್ಥಿತವಾದ ಪರಿಹಾರ ಕಾರ್ಯವಿಧಾನ ಇಲ್ಲದಿರುವುದು ಸಾಂವಿಧಾನಿಕವಾಗಿ ಮಧ್ಯಪ್ರವೇಶಿಸಬೇಕಾದ ಅಗತ್ಯವನ್ನು ಉಂಟುಮಾಡುತ್ತದೆಯೇ ಎಂಬುದು ಮಾತ್ರ ತನ್ನ ಮುಂದಿದ್ದ ಪ್ರಶ್ನೆಯಾಗಿತ್ತು” ಎಂದಿದೆ.

ಅನಿರೀಕ್ಷಿತ ಸಾರ್ವಜನಿಕ ಆರೋಗ್ಯ ಬಿಕ್ಕಟ್ಟಿನ ಸಮಯದಲ್ಲಿ (ಕೋವಿಡ್ ಸಮಯದಲ್ಲಿ) ನಡೆಸಿದ ಲಸಿಕಾ ಅಭಿಯಾನವು ಸರ್ಕಾರದ ನೇತೃತ್ವದ ಉಪಕ್ರಮವಾಗಿತ್ತು ಎಂದು ಒತ್ತಿ ಹೇಳಿದ ನ್ಯಾಯಾಲಯ, ಈ ಅಭಿಯಾನದ ನಂತರ ಉಂಟಾದ ಅಡ್ಡಪರಿಣಾಮಗಳ ಜವಾಬ್ದಾರಿಯಿಂದ ಸರ್ಕಾರ ತನ್ನನ್ನು ತಾನು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ಕೋವಿಡ್ ಲಸಿಕೆ ಪಡೆದ ನಂತರ ಮೃತಪಟ್ಟ ಇಬ್ಬರು ಯುವತಿಯರ ಪೋಷಕರು ಸಲ್ಲಿಸಿದ ರಿಟ್ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿದೆ. ಇಂತಹ ಸಾವುಗಳನ್ನು ಪರೀಕ್ಷಿಸಲು ಸ್ವತಂತ್ರ ವೈದ್ಯಕೀಯ ಮಂಡಳಿಯನ್ನು ರಚಿಸುವುದು, ಲಸಿಕೆ ಹಾಕಿಸಿಕೊಂಡ ನಂತರದ ಪ್ರತಿಕೂಲ ಘಟನೆಗಳನ್ನು ಗುರುತಿಸಲು ಪ್ರೋಟೋಕಾಲ್‌ಗಳನ್ನು ರೂಪಿಸುವುದು ಮತ್ತು ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಒದಗಿಸುವಂತೆ ಈ ಅರ್ಜಿಯಲ್ಲಿ ಕೋರಲಾಗಿತ್ತು.

ಕೇರಳ ಹೈಕೋರ್ಟ್‌ನಲ್ಲೂ ಇಂತಹದ್ದೇ ಅರ್ಜಿಗಳು ಸಲ್ಲಿಕೆಯಾಗಿದ್ದವು. ಅಂತಹ ಒಂದು ಪ್ರಕರಣದಲ್ಲಿ, ಲಸಿಕಾಕರಣದ ನಂತರದ ಪ್ರತಿಕೂಲ ಘಟನೆಗಳನ್ನು ಗುರುತಿಸಲು ಮತ್ತು ಲಸಿಕೆಯಿಂದ ಮೃತಪಟ್ಟಿದ್ದಾರೆ ಎನ್ನಲಾದ ವ್ಯಕ್ತಿಗಳ ಕುಟುಂಬಗಳಿಗೆ ಪರಿಹಾರ ನೀಡಲು ನೀತಿಯೊಂದನ್ನು ರೂಪಿಸುವಂತೆ ಹೈಕೋರ್ಟ್ ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದೆ.

ಕೇರಳ ಹೈಕೋರ್ಟ್ ನೀಡಿದ್ದ ಆ ಮಧ್ಯಂತರ ನಿರ್ದೇಶನವನ್ನು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಇದರೊಂದಿಗೆ, ಕೇರಳ ಹೈಕೋರ್ಟ್‌ನಲ್ಲಿದ್ದ ಇದೇ ರೀತಿಯ ಹಲವಾರು ಪ್ರಕರಣಗಳನ್ನು ಸಹ ವಿಚಾರಣೆಗಾಗಿ ಸುಪ್ರೀಂ ಕೋರ್ಟ್‌ಗೆ ವರ್ಗಾಯಿಸಲಾಗಿತ್ತು.

COURTESY : livelaw.in


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...