Homeಕರೋನಾ ತಲ್ಲಣಕೊರೊನಾ ಓಡಿಸಲು ಜಾಗಟೆ ಬಾರಿಸಿದ ಅಯೋಗ್ಯ ಸರ್ಕಾರಕ್ಕೆ ಸೋಂಕು ಪರೀಕ್ಷೆ ನಡೆಸಲು ಗೊತ್ತಿಲ್ಲ: ಸಿದ್ದರಾಮಯ್ಯ ಕಿಡಿ

ಕೊರೊನಾ ಓಡಿಸಲು ಜಾಗಟೆ ಬಾರಿಸಿದ ಅಯೋಗ್ಯ ಸರ್ಕಾರಕ್ಕೆ ಸೋಂಕು ಪರೀಕ್ಷೆ ನಡೆಸಲು ಗೊತ್ತಿಲ್ಲ: ಸಿದ್ದರಾಮಯ್ಯ ಕಿಡಿ

ಕೊರೊನಾ ಪರೀಕ್ಷೆಯ ಒಟ್ಟು ಸಾಮರ್ಥ್ಯದ ಶೇಕಡಾ 44.7 ರಷ್ಟು ಮಾತ್ರ ಬಳಕೆ ಮಾಡುವ ರಾಜ್ಯ ಸರ್ಕಾರದ ಅಯೋಗ್ಯತೆಗೆ ಬೇರೆ ಸಾಕ್ಷಿ ಬೇಕೇ? ಎಂದು ಆಕ್ರೋಶ.

- Advertisement -
- Advertisement -

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಎಂದು ದಿನಕ್ಕೆರಡು ಬಾರಿ ಮುಖ್ಯಮಂತ್ರಿಗಳು ಮತ್ತು ಸಚಿವರು ಅಬ್ಬರಿಸುತ್ತಿದ್ದಾರೆ, ಸ್ಯಾಂಪಲ್‌ಗಾಗಿ ಒಂದೆರಡು ಆಸ್ಪತ್ರೆಗಳ ವಿರುದ್ಧ ‘ಕಠಿಣ ಕ್ರಮ’ ಕೈಗೊಳ್ಳಬಾರದೇಕೆ? ಸರ್ಕಾರ ಯಾರಿಗೆ ಮತ್ತು ಯಾಕೆ ಹೆದರುತ್ತಿದೆ? ಎಂದು ವಿರೋದ ಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ಇರುವ ಏಕೈಕ ಮಾರ್ಗ ಎಂದರೆ ಸೋಂಕು ಪರೀಕ್ಷೆ ಎನ್ನುವುದನ್ನು ವಿಶ್ವದಾದ್ಯಂತ ವೈದ್ಯರು-ತಜ್ಞರು ಹೇಳುತ್ತಲೇ ಇದ್ದಾರೆ. ಕೊರೊನಾ ಓಡಿಸಲು ಜಾಗಟೆ ಬಾರಿಸಿದ ಅಯೋಗ್ಯ ಸರ್ಕಾರಕ್ಕೆ ಸೋಂಕು ಪರೀಕ್ಷೆಯನ್ನು ಸರಿಯಾಗಿ ನಡೆಸಬೇಕೆಂದು ಮಾತ್ರ ಗೊತ್ತಾಗಿಲ್ಲ ಎಂದು ಅವರು ಅಸಮಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ಪರೀಕ್ಷಾ ಕೇಂದ್ರಗಳಿರುವುದು ಕೇವಲ 59. ಅವುಗಳ ದಿನದ ಪರೀಕ್ಷಾ ಸಾಮರ್ಥ್ಯ 31,116. ಈಗ ಪ್ರತಿದಿನ ನಡೆಯುತ್ತಿರುವುದು ಕೇವಲ 13,910 ಪರೀಕ್ಷೆ ಮಾತ್ರ. ಅಂದರೆ‌ ಒಟ್ಟು ಸಾಮರ್ಥ್ಯದ ಶೇಕಡಾ 44.7 ರಷ್ಟು ಮಾತ್ರ ಬಳಕೆ. ರಾಜ್ಯ ಸರ್ಕಾರದ ಅಯೋಗ್ಯತೆಗೆ ಬೇರೆ ಸಾಕ್ಷಿ ಬೇಕೇ?, ಎಂದು ಹೇಳಿದ್ದಾರೆ.

ಕೊರೊನಾ ಸೋಂಕು ಪರೀಕ್ಷೆ ಹೆಚ್ಚು ನಡೆಸಿದರೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತದೆ. ಆಗ‌ ಅದೇ ಪ್ರಮಾಣದಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕಾಗುತ್ತದೆ ಎನ್ನುವ ಕಾರಣಕ್ಕೆ ಮುಖ್ಯಮಂತ್ರಿಗಳು ಸೋಂಕು ಪರೀಕ್ಷೆ ಹೆಚ್ಚು ನಡೆಸುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಜನರ ಸಾವಿಗೆ ಕಾರಣವಾದ ಸರ್ಕಾರವನ್ನು ಕೊಲೆಗಡುಕ ಸರ್ಕಾರ ಎಂದು ಕರೆದರೆ ತಪ್ಪಾದೀತೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.


ಓದಿ: ಸಿದ್ದರಾಮಯ್ಯ ವಿಶೇಷ ಸಂದರ್ಶನ: ನಾನು ಸಿಎಂ ಆಗಿದ್ದಿದ್ದರೆ ಈ ಜನದ್ರೋಹಿ ಸುಗ್ರೀವಾಜ್ಞೆ ತರಲ್ಲ ಅಂತ ಕೇಂದ್ರದ ಮುಖಕ್ಕೆ ಹೇಳ್ತಿದ್ದೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...