Homeಮುಖಪುಟಪುಣ್ಯಕೋಟಿ ಹಸು ದತ್ತು ಯೋಜನೆಗಾಗಿ ಸರ್ಕಾರಿ ನೌಕರರು 100 ಕೋಟಿ ದೇಣಿಗೆ ನೀಡುತ್ತೇವೆ -ಸಿ.ಎಸ್ ಷಡಕ್ಷರಿ

ಪುಣ್ಯಕೋಟಿ ಹಸು ದತ್ತು ಯೋಜನೆಗಾಗಿ ಸರ್ಕಾರಿ ನೌಕರರು 100 ಕೋಟಿ ದೇಣಿಗೆ ನೀಡುತ್ತೇವೆ -ಸಿ.ಎಸ್ ಷಡಕ್ಷರಿ

ಹಸಿವಿನಿಂದ ಅಸಂಖ್ಯಾತ ಮಕ್ಕಳು ಸಾಯುತ್ತಿರುವಾಗ ಹಸುಗಳನ್ನು ಮಾತ್ರ ಸಾಕಿ ಎನ್ನುವುದು ಸರಿಯೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ /ಎಸ್ಟಿ ನೌಕರರ ಸಮನ್ವಯ ಸಮಿತಿಯ ಅಧ್ಯಕ್ಷರಾದ ಡಿ. ಶಿವ ಶಂಕರ್ ಪ್ರಶ್ನಿಸಿದ್ದಾರೆ.

- Advertisement -
- Advertisement -

ಗೋವುಗಳನ್ನು ದತ್ತು ಪಡೆಯುವ ಸರ್ಕಾರದ ಪುಣ್ಯಕೋಟಿ ದತ್ತು ಯೋಜನೆಗಾಗಿ ಸರ್ಕಾರಿ ನೌಕರರು ನವೆಂಬರ್ ತಿಂಗಳಿನಲ್ಲಿ ದೇಣಿಗೆ ನೀಡುತ್ತಿದ್ದೇವೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಅಧ್ಯಕ್ಷರಾದ ಸಿ.ಎಸ್ ಷಡಕ್ಷರಿಯವರು ತಿಳಿಸಿದ್ದಾರೆ.

ಸರ್ಕಾರಿ ನೌಕರರು ಮತ್ತು ನಿಗಮ ಮಂಡಳಿಗಳ ಪ್ರತಿನಿಧಿಗಳನ್ನೊಳಗೊಂಡ ನಿಯೋಗವು ಇಂದು ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿದ ನಂತರ ಮಾತನಾಡಿದ ಅವರು, ರಾಜ್ಯದ 9.5 ಲಕ್ಷ ಸರಕಾರಿ ನೌಕರರು, ನಿಗಮ ಮಂಡಳಿಗಳ ನೌಕರರು ದೇಣಿಗೆ ನೀಡಲು ಮುಂದಾಗಿದ್ದೇವೆ ಎಂದಿದ್ದಾರೆ.

ಸರ್ಕಾರಿ ನೌಕರರು ಇದುವರೆಗೂ ನೆರೆ, ಭೂಕಂಪ, ಕಾರ್ಗಿಲ್ ಯುದ್ದ, ಕೋವಿಡ್‌ನಂತಹ ದುರಂತದ ಸಂದರ್ಭದಲ್ಲಿ ದೇಣಿಗೆ ನೀಡುವ ಮೂಲಕ ಸಾಮಾಜಿಕ ಕಾಳಜಿಯ ಬದ್ದತೆಯ ಪ್ರದರ್ಶನ ಮಾಡಿದ್ದೇವೆ. ಈಗ ಸಿಎಂ ಬಸವರಾಜ ಬೊಮ್ಮಾಯಿಯವರು ಮನವಿ ಮಾಡಿರುವುದರಿಂದ ಕ್ಲಾಸ್ ಒನ್ ಅಧಿಕಾರಿಗಳು ತಲಾ 11,000 ರೂ, ಗ್ರೂಪ್ ಬಿ ನೌಕರರು 5,000 ರೂ ಮತ್ತು ಗ್ರೂಪ್ ಸಿ ನೌಕರರು 400 ರೂ ನೀಡುವ ಮೂಲಕ ಯೋಜನೆಗೆ ಕೈ ಜೋಡಿಸುತ್ತಿದ್ದೇವೆ ಎಂದಿದ್ದಾರೆ.

ಹೀಗೆ ಸಂಗ್ರಹವಾಗುವ ಸುಮಾರು 80- 100 ಕೋಟಿ ರೂ ವೆಚ್ಚದಲ್ಲಿ 1 ಲಕ್ಷ ಗೋವುಗಳನ್ನು ಅದರಲ್ಲಿಯೂ ಅಶಕ್ತ, ಕಸಾಯಿಖಾನೆಗೆ ಕಳಿಸುವ ಗೋವುಗಳನ್ನು ಸಾಕುವಂತಹ ಪುಣ್ಯಕೋಟಿ ಕಾರ್ಯಕ್ಕೆ ನಾಲ್ಕನೇ ಹಂತವಾಗಿ ತೊಡಗಿಸಿಕೊಂಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಈ ಪುಣ್ಯಕೋಟಿ ಯೋಜನೆಗೆ ಸರ್ಕಾರಿ ನೌಕರರಿಂದ ದೇಣಿಗೆ ವಸೂಲಿ ಮಾಡುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ /ಎಸ್ಟಿ ನೌಕರರ ಸಮನ್ವಯ ಸಮಿತಿಯು ದೇಣಿಗೆ ನೀಡಬೇಕೆಂಬ ಪ್ರಸ್ತಾಪವನ್ನು ತಿರಸ್ಕರಿಸಿದೆ.

ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ /ಎಸ್ಟಿ ನೌಕರರ ಸಮನ್ವಯ ಸಮಿತಿಯ ಅಧ್ಯಕ್ಷರಾದ ಡಿ. ಶಿವ ಶಂಕರ್ ರವರು ನಾನುಗೌರಿ.ಕಾಂ ಜೊತೆ ಮಾತನಾಡಿ, “ಸರ್ಕಾರಿ ನೌಕರರು ದೇಣಿಗೆ ಕೊಡಲೇಬೇಕೆಂದು ಸರ್ಕಾರ ಕಡ್ಡಾಯ ಮಾಡಿಲ್ಲ. ಸಾಧ್ಯವಾದವರು ಇಚ್ಚಾನುಸಾರ ದೇಣಿಗೆ ಕೊಡಿ ಎಂದಿದೆ. ಆದರೆ ಈ ಕುರಿತು ತಳಮಟ್ಟದ ನೌಕರರ ಜೊತೆ ಚರ್ಚಿಸಿ ಒಪ್ಪಿಗೆ ಪಡೆದು ದೇಣಿಗೆ ಸಂಗ್ರಹಿಸಬೇಕಿದ್ದ ನೌಕರರ ಸಂಘದ ಅಧ್ಯಕ್ಷರು ಎಲ್ಲೊ ಕುಳಿತು ತೀರ್ಮಾನ ಮಾಡಿ ಸರ್ಕಾರವನ್ನು ಒಲೈಸುವ ಕೆಲಸ ಮಾಡುತ್ತಿದ್ದಾರೆ. ನೀವು ತಳಮಟ್ಟದಲ್ಲಿ ಯಾವುದೇ ನೌಕರರನ್ನು ಕೇಳಿದರೆ ಅವರು ವಿರೋಧ ವ್ಯಕ್ತಪಡಿಸುತ್ತಾರೆ. ಆದರೆ ಸಂಘದವರು ನೇರವಾಗಿ ನೌಕರರ ಖಾತೆಯಿಂದ ಹಣ ಕಟ್ ಮಾಡಿಕೊಳ್ಳುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಂದು ಅಸಂಖ್ಯಾತ ಮಕ್ಕಳು ಹಸಿವಿನಿಂದ ಸಾಯುತ್ತಿದ್ದಾರೆ. ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಇದಕ್ಕಾಗಿ ದೇಣಿಗೆ ಕೇಳಿದರೆ ನಾವು ಸಂತೋಷದಿಂದ ಕೊಡುತ್ತೇವೆ. ಅಧಿಕಾರಿಗಳು ಈ ಮಕ್ಕಳನ್ನು ದತ್ತು ತೆಗೆದುಕೊಳ್ಳಲು ಮುಂದಾಗಬೇಕು. ಅವರಿಗೆ ಉತ್ತಮ ಶಿಕ್ಷಣ ಕೊಟ್ಟು ಉತ್ತಮ ನಾಗರೀಕರನ್ನಾಗಿ ರೂಪಿಸಬೇಕು. ಆಗ ಮಾತ್ರ ನಮ್ಮ ದೇಶ ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.

ಆದರೆ ಹಸಿವಿನಿಂದ ಮಕ್ಕಳು ಸಾಯುತ್ತಿರುವಾಗ ಹಸುಗಳನ್ನು ಮಾತ್ರ ಸಾಕಿ ಎನ್ನುವುದು ಎಷ್ಟು ವೈಜ್ಞಾನಿಕ? ನಮ್ಮದು ಜಾತ್ಯಾತೀತ ದೇಶ. ಯಾವುದೇ ಒಂದು ಭಾಷೆ, ಒಂದು ಧರ್ಮಕ್ಕೆ ಮಣೆ ಹಾಕುವುದು ಸರಿಯಲ್ಲ. ಆದರೆ ನೌಕರರ ಸಂಘದ ನಡೆ ನೋಡಿದರೆ ಒಂದು ಜಾತಿಯ, ಒಂದು ಧರ್ಮದ ಪರವಾಗಿ ಕೆಲಸ ಮಾಡುವ ಷಡ್ಯಂತ್ರ ನಡೆಯುತ್ತಿದೆ. ಮುಖ್ಯಮಂತ್ರಿಗಳನ್ನು ಒಲೈಸುವ ಭರದಲ್ಲಿ ನಡೆಯುತ್ತಿರುವ ಜನಾನುರಾಗಿಯಲ್ಲದ, ಜನೋಪಯೋಗಿಯಲ್ಲದ ಈ ಕೆಲಸವನ್ನು ನಾವು ಖಂಡಿಸುತ್ತೇವೆ ಎಂದು ಡಿ.ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದರು.

ಏನಿದು ಪುಣ್ಯಕೋಟಿ ಯೋಜನೆ

ರಾಜ್ಯದ ಸರ್ಕಾರಿ ಮತ್ತು ಖಾಸಗೀ ಗೋಶಾಲೆಗಳಲ್ಲಿರುವ ಅಲ್ಲದೆ ವಯಸ್ಸಾದ, ಖಾಯಿಲೆಗೊಳಗಾದ, ತಪ್ಪಿಸಿಕೊಂಡ ಹಾಗೂ ಅಕ್ರಮ ಸಾಗಾಟದಲ್ಲಿ ವಶಕ್ಕೆ ಪಡೆದ ಗೋವುಗಳನ್ನು ಸಾಕುವುದಕ್ಕಾಗಿ ಕರ್ನಾಟಕ ಸರ್ಕಾರವು ಪುಣ್ಯಕೋಟಿ ದತ್ತು ಯೋಜನೆಯನ್ನು ಜಾರಿಗೆ ತಂದಿದೆ. ಚಿತ್ರನಟ ಸುದೀಪ್‌ರವರನ್ನು ರಾಯಭಾರಿಯನ್ನಾಗಿ ನೇಮಿಸಿದೆ. ಆದರೆ ಈ ಯೋಜನೆ ಜಾರಿಗೆ ಆರ್ಥಿಕ ಮುಗ್ಗಟ್ಟು ಉಂಟಾಗಿದ್ದರಿಂದ ಸಿಎಂ ಬಸವರಾಜ ಬೊಮ್ಮಾಯಿಯವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟಕ್ಕೆ ಪತ್ರ ಬರೆದು ಸರ್ಕಾರಿ ನೌಕರರು ದೇಣಿಗೆ ನೀಡಬೇಕೆಂದು ಮನವಿ ಮಾಡಿದ್ದರು.

ಇದನ್ನೂ ಓದಿ: ಋತುಮತಿಯಾಗದ ಬಾಲಕಿ ಮೇಲೆ ಅತ್ಯಾಚಾರ; ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರ ಮತ್ತಷ್ಟ ವಿಕೃತಿ ಬಯಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...