Homeಮುಖಪುಟಪುಣ್ಯಕೋಟಿ ಹಸು ದತ್ತು ಯೋಜನೆಗಾಗಿ ಸರ್ಕಾರಿ ನೌಕರರು 100 ಕೋಟಿ ದೇಣಿಗೆ ನೀಡುತ್ತೇವೆ -ಸಿ.ಎಸ್ ಷಡಕ್ಷರಿ

ಪುಣ್ಯಕೋಟಿ ಹಸು ದತ್ತು ಯೋಜನೆಗಾಗಿ ಸರ್ಕಾರಿ ನೌಕರರು 100 ಕೋಟಿ ದೇಣಿಗೆ ನೀಡುತ್ತೇವೆ -ಸಿ.ಎಸ್ ಷಡಕ್ಷರಿ

ಹಸಿವಿನಿಂದ ಅಸಂಖ್ಯಾತ ಮಕ್ಕಳು ಸಾಯುತ್ತಿರುವಾಗ ಹಸುಗಳನ್ನು ಮಾತ್ರ ಸಾಕಿ ಎನ್ನುವುದು ಸರಿಯೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ /ಎಸ್ಟಿ ನೌಕರರ ಸಮನ್ವಯ ಸಮಿತಿಯ ಅಧ್ಯಕ್ಷರಾದ ಡಿ. ಶಿವ ಶಂಕರ್ ಪ್ರಶ್ನಿಸಿದ್ದಾರೆ.

- Advertisement -
- Advertisement -

ಗೋವುಗಳನ್ನು ದತ್ತು ಪಡೆಯುವ ಸರ್ಕಾರದ ಪುಣ್ಯಕೋಟಿ ದತ್ತು ಯೋಜನೆಗಾಗಿ ಸರ್ಕಾರಿ ನೌಕರರು ನವೆಂಬರ್ ತಿಂಗಳಿನಲ್ಲಿ ದೇಣಿಗೆ ನೀಡುತ್ತಿದ್ದೇವೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಅಧ್ಯಕ್ಷರಾದ ಸಿ.ಎಸ್ ಷಡಕ್ಷರಿಯವರು ತಿಳಿಸಿದ್ದಾರೆ.

ಸರ್ಕಾರಿ ನೌಕರರು ಮತ್ತು ನಿಗಮ ಮಂಡಳಿಗಳ ಪ್ರತಿನಿಧಿಗಳನ್ನೊಳಗೊಂಡ ನಿಯೋಗವು ಇಂದು ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿದ ನಂತರ ಮಾತನಾಡಿದ ಅವರು, ರಾಜ್ಯದ 9.5 ಲಕ್ಷ ಸರಕಾರಿ ನೌಕರರು, ನಿಗಮ ಮಂಡಳಿಗಳ ನೌಕರರು ದೇಣಿಗೆ ನೀಡಲು ಮುಂದಾಗಿದ್ದೇವೆ ಎಂದಿದ್ದಾರೆ.

ಸರ್ಕಾರಿ ನೌಕರರು ಇದುವರೆಗೂ ನೆರೆ, ಭೂಕಂಪ, ಕಾರ್ಗಿಲ್ ಯುದ್ದ, ಕೋವಿಡ್‌ನಂತಹ ದುರಂತದ ಸಂದರ್ಭದಲ್ಲಿ ದೇಣಿಗೆ ನೀಡುವ ಮೂಲಕ ಸಾಮಾಜಿಕ ಕಾಳಜಿಯ ಬದ್ದತೆಯ ಪ್ರದರ್ಶನ ಮಾಡಿದ್ದೇವೆ. ಈಗ ಸಿಎಂ ಬಸವರಾಜ ಬೊಮ್ಮಾಯಿಯವರು ಮನವಿ ಮಾಡಿರುವುದರಿಂದ ಕ್ಲಾಸ್ ಒನ್ ಅಧಿಕಾರಿಗಳು ತಲಾ 11,000 ರೂ, ಗ್ರೂಪ್ ಬಿ ನೌಕರರು 5,000 ರೂ ಮತ್ತು ಗ್ರೂಪ್ ಸಿ ನೌಕರರು 400 ರೂ ನೀಡುವ ಮೂಲಕ ಯೋಜನೆಗೆ ಕೈ ಜೋಡಿಸುತ್ತಿದ್ದೇವೆ ಎಂದಿದ್ದಾರೆ.

ಹೀಗೆ ಸಂಗ್ರಹವಾಗುವ ಸುಮಾರು 80- 100 ಕೋಟಿ ರೂ ವೆಚ್ಚದಲ್ಲಿ 1 ಲಕ್ಷ ಗೋವುಗಳನ್ನು ಅದರಲ್ಲಿಯೂ ಅಶಕ್ತ, ಕಸಾಯಿಖಾನೆಗೆ ಕಳಿಸುವ ಗೋವುಗಳನ್ನು ಸಾಕುವಂತಹ ಪುಣ್ಯಕೋಟಿ ಕಾರ್ಯಕ್ಕೆ ನಾಲ್ಕನೇ ಹಂತವಾಗಿ ತೊಡಗಿಸಿಕೊಂಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಈ ಪುಣ್ಯಕೋಟಿ ಯೋಜನೆಗೆ ಸರ್ಕಾರಿ ನೌಕರರಿಂದ ದೇಣಿಗೆ ವಸೂಲಿ ಮಾಡುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ /ಎಸ್ಟಿ ನೌಕರರ ಸಮನ್ವಯ ಸಮಿತಿಯು ದೇಣಿಗೆ ನೀಡಬೇಕೆಂಬ ಪ್ರಸ್ತಾಪವನ್ನು ತಿರಸ್ಕರಿಸಿದೆ.

ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ /ಎಸ್ಟಿ ನೌಕರರ ಸಮನ್ವಯ ಸಮಿತಿಯ ಅಧ್ಯಕ್ಷರಾದ ಡಿ. ಶಿವ ಶಂಕರ್ ರವರು ನಾನುಗೌರಿ.ಕಾಂ ಜೊತೆ ಮಾತನಾಡಿ, “ಸರ್ಕಾರಿ ನೌಕರರು ದೇಣಿಗೆ ಕೊಡಲೇಬೇಕೆಂದು ಸರ್ಕಾರ ಕಡ್ಡಾಯ ಮಾಡಿಲ್ಲ. ಸಾಧ್ಯವಾದವರು ಇಚ್ಚಾನುಸಾರ ದೇಣಿಗೆ ಕೊಡಿ ಎಂದಿದೆ. ಆದರೆ ಈ ಕುರಿತು ತಳಮಟ್ಟದ ನೌಕರರ ಜೊತೆ ಚರ್ಚಿಸಿ ಒಪ್ಪಿಗೆ ಪಡೆದು ದೇಣಿಗೆ ಸಂಗ್ರಹಿಸಬೇಕಿದ್ದ ನೌಕರರ ಸಂಘದ ಅಧ್ಯಕ್ಷರು ಎಲ್ಲೊ ಕುಳಿತು ತೀರ್ಮಾನ ಮಾಡಿ ಸರ್ಕಾರವನ್ನು ಒಲೈಸುವ ಕೆಲಸ ಮಾಡುತ್ತಿದ್ದಾರೆ. ನೀವು ತಳಮಟ್ಟದಲ್ಲಿ ಯಾವುದೇ ನೌಕರರನ್ನು ಕೇಳಿದರೆ ಅವರು ವಿರೋಧ ವ್ಯಕ್ತಪಡಿಸುತ್ತಾರೆ. ಆದರೆ ಸಂಘದವರು ನೇರವಾಗಿ ನೌಕರರ ಖಾತೆಯಿಂದ ಹಣ ಕಟ್ ಮಾಡಿಕೊಳ್ಳುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಂದು ಅಸಂಖ್ಯಾತ ಮಕ್ಕಳು ಹಸಿವಿನಿಂದ ಸಾಯುತ್ತಿದ್ದಾರೆ. ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಇದಕ್ಕಾಗಿ ದೇಣಿಗೆ ಕೇಳಿದರೆ ನಾವು ಸಂತೋಷದಿಂದ ಕೊಡುತ್ತೇವೆ. ಅಧಿಕಾರಿಗಳು ಈ ಮಕ್ಕಳನ್ನು ದತ್ತು ತೆಗೆದುಕೊಳ್ಳಲು ಮುಂದಾಗಬೇಕು. ಅವರಿಗೆ ಉತ್ತಮ ಶಿಕ್ಷಣ ಕೊಟ್ಟು ಉತ್ತಮ ನಾಗರೀಕರನ್ನಾಗಿ ರೂಪಿಸಬೇಕು. ಆಗ ಮಾತ್ರ ನಮ್ಮ ದೇಶ ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.

ಆದರೆ ಹಸಿವಿನಿಂದ ಮಕ್ಕಳು ಸಾಯುತ್ತಿರುವಾಗ ಹಸುಗಳನ್ನು ಮಾತ್ರ ಸಾಕಿ ಎನ್ನುವುದು ಎಷ್ಟು ವೈಜ್ಞಾನಿಕ? ನಮ್ಮದು ಜಾತ್ಯಾತೀತ ದೇಶ. ಯಾವುದೇ ಒಂದು ಭಾಷೆ, ಒಂದು ಧರ್ಮಕ್ಕೆ ಮಣೆ ಹಾಕುವುದು ಸರಿಯಲ್ಲ. ಆದರೆ ನೌಕರರ ಸಂಘದ ನಡೆ ನೋಡಿದರೆ ಒಂದು ಜಾತಿಯ, ಒಂದು ಧರ್ಮದ ಪರವಾಗಿ ಕೆಲಸ ಮಾಡುವ ಷಡ್ಯಂತ್ರ ನಡೆಯುತ್ತಿದೆ. ಮುಖ್ಯಮಂತ್ರಿಗಳನ್ನು ಒಲೈಸುವ ಭರದಲ್ಲಿ ನಡೆಯುತ್ತಿರುವ ಜನಾನುರಾಗಿಯಲ್ಲದ, ಜನೋಪಯೋಗಿಯಲ್ಲದ ಈ ಕೆಲಸವನ್ನು ನಾವು ಖಂಡಿಸುತ್ತೇವೆ ಎಂದು ಡಿ.ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದರು.

ಏನಿದು ಪುಣ್ಯಕೋಟಿ ಯೋಜನೆ

ರಾಜ್ಯದ ಸರ್ಕಾರಿ ಮತ್ತು ಖಾಸಗೀ ಗೋಶಾಲೆಗಳಲ್ಲಿರುವ ಅಲ್ಲದೆ ವಯಸ್ಸಾದ, ಖಾಯಿಲೆಗೊಳಗಾದ, ತಪ್ಪಿಸಿಕೊಂಡ ಹಾಗೂ ಅಕ್ರಮ ಸಾಗಾಟದಲ್ಲಿ ವಶಕ್ಕೆ ಪಡೆದ ಗೋವುಗಳನ್ನು ಸಾಕುವುದಕ್ಕಾಗಿ ಕರ್ನಾಟಕ ಸರ್ಕಾರವು ಪುಣ್ಯಕೋಟಿ ದತ್ತು ಯೋಜನೆಯನ್ನು ಜಾರಿಗೆ ತಂದಿದೆ. ಚಿತ್ರನಟ ಸುದೀಪ್‌ರವರನ್ನು ರಾಯಭಾರಿಯನ್ನಾಗಿ ನೇಮಿಸಿದೆ. ಆದರೆ ಈ ಯೋಜನೆ ಜಾರಿಗೆ ಆರ್ಥಿಕ ಮುಗ್ಗಟ್ಟು ಉಂಟಾಗಿದ್ದರಿಂದ ಸಿಎಂ ಬಸವರಾಜ ಬೊಮ್ಮಾಯಿಯವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟಕ್ಕೆ ಪತ್ರ ಬರೆದು ಸರ್ಕಾರಿ ನೌಕರರು ದೇಣಿಗೆ ನೀಡಬೇಕೆಂದು ಮನವಿ ಮಾಡಿದ್ದರು.

ಇದನ್ನೂ ಓದಿ: ಋತುಮತಿಯಾಗದ ಬಾಲಕಿ ಮೇಲೆ ಅತ್ಯಾಚಾರ; ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರ ಮತ್ತಷ್ಟ ವಿಕೃತಿ ಬಯಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...