Homeಕರ್ನಾಟಕಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಮೇಲೆ ಅವ್ಯವ್ಯಹಾರಗಳ ಆರೋಪ: ತನಿಖೆಗೆ ಆದೇಶ

ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಮೇಲೆ ಅವ್ಯವ್ಯಹಾರಗಳ ಆರೋಪ: ತನಿಖೆಗೆ ಆದೇಶ

ಸಂಘದ ಯಾವುದೇ ಸಭೆಗಳಲ್ಲಿ ನಿರ್ಣಯ ಮಾಡದೇ 35.02 ಲಕ್ಷ ರೂ ಹಣ ವ್ಯಯಿಸಿ ಕಿಯಾ ಕಾರ್ನಿವಾಲ್ ಎಂಬ ಐಷರಾಮಿ ಕಾರು ಖರೀದಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

- Advertisement -
- Advertisement -

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅವ್ಯವಹಾರ, ಭ್ರಷ್ಟಾಚಾರ, ಹಣ ದುರುಪಯೋಗ ಹಾಗೂ ಇತರ ಚಟುವಟಿಕೆಗಳ ವಿಚಾರಣೆ ನಡೆಸಿ ಸಂಘಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಬೇಕೆಂದು ಸಹಕಾರ ಇಲಾಖೆಯ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.

ವಾರ್ಷಿಕ ರೂ 20 ಕೋಟಿಗೂ ಅಧಿಕ ವಹಿವಾಟು ನಡೆಸುವ, ರಾಜ್ಯದ 5 ಲಕ್ಷಕ್ಕೂ ಹೆಚ್ಚು ಎಲ್ಲಾ ವೃಂದದ ರಾಜ್ಯ ಸರಕಾರಿ ನೌಕರರು ಸದಸ್ಯರಾಗಿರುವ ಮತ್ತು ಕರ್ನಾಟಕ ಸರಕಾರದಿಂದ ಪ್ರತಿ ವರ್ಷ ಕೋಟ್ಯಾಂತರ ರೂ ಸಹಾಯಾನುದಾನ ಪಡೆಯುತ್ತಿರುವ ಕರ್ನಾಟಕ ಸಂಘಗಳ ನೊಂದಣಿ ಅದಿನಿಯಮ 1960 ರಡಿ ನೊಂದಾಯಿತ ಹಾಗು ಸರಕಾರದಿಂದ ಮಾನ್ಯತೆ ಪಡೆದ ಸಂಘ ಆಗಿರುವ, ‘ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಕಬ್ಬನ್ ಉದ್ಯಾನವನ, ಬೆಂಗಳೂರು’ ಸಂಘವು, ಆದಾಯ ತೆರಿಗೆ ಕಾಯ್ದೆ 1961, ಕರ್ನಾಟಕ ಮುನಿಸಿಪಲ್ ಕಾಯ್ದೆ 1964, ಭಾರತೀಯ ದಂಡ ಸಂಹಿತೆ 1860, ಕರ್ನಾಟಕ ಸಂಘಗಳ ನೊಂದಣಿ ಆದಿನಿಯಮ 1960, ಕರ್ನಾಟಕ ನಾಗರೀಕ ಸೇವಾ ನಿಯಮಗಳು, ಸಂಘದ ಬೈಲಾ ನಿಯಮ ಉಲ್ಲಂಘಿಸಿ ತೆರಿಗೆಗಳ್ಳತನ ದಂಥಹ ಗಂಭೀರ ಸ್ವರೂಪದ ಅರ್ಥಿಕ ಅಪರಾಧಗಳು, ಭ್ರಷ್ಟಾಚಾರ, ಹಣ ದುರುಪಯೋಗ, ವಂಚನೆ, ಅವ್ಯವಸ್ಥಿತ ವ್ಯವಸ್ಥಾಪನೆ & ಕಾರ್ಯ ನಿರ್ವಹಣೆಯಂಥಹ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ನಿರತವಾಗಿದೆ ಎಂದು ಐವರು ಸರ್ಕಾರಿ ನೌಕರರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಈ ತಿಂಗಳ ಆರಂಭದಲ್ಲಿ ದೂರು ನೀಡಿದ್ದರು.

ಈ ಹಿಂದೆಯೇ ಸಂಘದ ಸದಸ್ಯರು, ಪದಾಧಿಕಾರಿಗಳು ಸೂಕ್ತ ದಾಖಲೆಗಳೊಂದಿಗೆ ಸಂಘಗಳ ನೊಂದಣಾಧಿಕಾರಿಗಳು, ನಾಲ್ಕನೆ ವಲಯ, ಬೆಂಗಳೂರು ನಗರ ಜಿಲ್ಲೆ, ಮಲ್ಲೇಶ್ವರಂ, ಬೆಂಗಳೂರು ಇವರಿಗೆ ದಿನಾಂಕ 24.10.2020, 30.12.2020, 24/02/2022 ಮತ್ತು ವಿವಿದ ದಿನಾಂಕಗಳಲ್ಲಿ ಈ ಬಗ್ಗೆ ದೂರು ಸಲ್ಲಿಸಿ ಶಾಸನಾತ್ಮಕ ವಿಚಾರಣೆ ಜರುಗಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಕೋರಲಾಗಿದ್ದರೂ ಯಾವುದೇ ಕ್ರಮ ಆಗಿರುವುದಿಲ್ಲ. ಸರಕಾರದ ವಿವಿಧ ಪ್ರಾಧಿಕಾರಿಗಳಿಗೆ ಸಲ್ಲಿಸಿದ ದೂರಿಗೂ ಕ್ರಮ ಆಗಿರುವುದಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹೀಗಾಗಿ ಸಂಘದಲ್ಲಿನ ಕಾನೂನು ಬಾಹಿರ ಚಟುವಟಿಕೆಗಳು, ಅರ್ಥಿಕ ಅಪರಾಧಗಳು, ಅಪ್ರಜಾಸತ್ತಾತ್ಮಕ, ನಿರಂಕುಶಾಡಳಿತ ಮತ್ತು  ಅವ್ಯವಸ್ಥಿತ ಕಾರ್ಯ ನಿರ್ವಹಣೆ ಮುಂದುವರೆದಿದೆ. ಅರ್ಥಿಕ ಅಪರಾಧ, ಭಷ್ಟಾಚಾರ, ಹಣ ದುರುಪಯೋಗ, ವಂಚನೆ ಮೂಲಕ ಸರಕಾರದ ಬೊಕ್ಕಸಕ್ಕೆ ಮತ್ತು ಸಂಘಕ್ಕೆ ಹಾನಿ ಉಂಟು ಮಾಡಿದ್ದಲ್ಲದೇ, ಖೊಟ್ಟಿ ದಾಖಲೆ ಸೃಷ್ಟಿಸಿ ಸರಕಾರಕ್ಕೆ ನೀಡಿದ ಸುಳ್ಳು ಮಾಹಿತಿ ಆಧರಿಸಿ ಹೊರಡಿಸಲ್ಪಟ್ಟ ಸರಕಾರಿ ಆದೇಶದಿಂದ ರಾಜ್ಯದ 3 ಲಕ್ಷಕ್ಕೂ ಹೆಚ್ಚಿನ ಸಂಘದ ಸದಸ್ಯರಿಗೆ ಪ್ರತಿ ವರ್ಷ 3 ಕೋಟಿಗೂ ಅಧಿಕ ಅರ್ಥಿಕ ನಷ್ಟ ಉಂಟು ಮಾಡಿರುವ ರಾಜ್ಯಾಧ್ಯಕ್ಷರ ವಿರುದ್ಧ ಸೂಕ್ತ ಕಾನೂನುಗಳಡಿ ಕ್ರಮ ಕೈಗೊಂಡು ಸದಸ್ಯರ ಸಾಮಾನ್ಯ ಹಿತಾಸಕ್ತಿ ಕಾಪಾಡಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ. ಅದರೊಟ್ಟಿಗೆ ಮೇಲ್ನೋಟಕ್ಕೆ ಸಾಬೀತಾಗುವಂಥಹ 5 ಪ್ರಮುಖ ಸಾಕ್ಷ್ಯ ಪುರಾವೆಗಳನ್ನು ದೂರಿನೊಂದಿಗೆ ಲಗತ್ತಿಸಲಾಗಿದೆ.

ಸಂಘದ ಅಧ್ಯಕ್ಷರು ಸಂಘದ ಸದಸ್ಯರಲ್ಲದವರಿಂದ ರೂ 83 ಲಕ್ಷಕ್ಕೂ ಅಧಿಕ ಹಣವನ್ನು ಜಾಹೀರಾತು ರೂಪದಲ್ಲಿ ಸಂಗ್ರಹಿಸಿದ್ದಾರೆ. ಆದರೆ ಆ ಹಣಕ್ಕೆ ಆದಾಯ ತೆರಿಗೆ ಪಾವತಿಸಿಲ್ಲ. ಸರ್ಕಾರದಿಂದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 2 ಕೋಟಿ ರೂ ಅನುದಾನ ಪಡೆಯಲಾಗಿದೆ ಮತ್ತು ಜಾಹೀರಾತಿನಿಂದ 1 ಕೋಟಿ ರೂ ಸಂಗ್ರಹಿಸಲಾಗಿದೆ. ಆದರೆ ಸಂಘದ ಖಾತೆಗೆ 55,95,000 ರೂ ಗಳನ್ನು ಮಾತ್ರ ಹಾಕಿದ್ದು ಉಳಿದ ಹಣವನ್ನು ಹಾಕಿಲ್ಲ. ಅಲ್ಲದೇ ಸಂಘದ ಯಾವುದೇ ಸಭೆಗಳಲ್ಲಿ ನಿರ್ಣಯ ಮಾಡದೇ 35.02 ಲಕ್ಷ ರೂ ಹಣ ವ್ಯಯಿಸಿ ಕಿಯಾ ಕಾರ್ನಿವಾಲ್ ಎಂಬ ಐಷರಾಮಿ ಕಾರು ಖರೀದಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಖೊಟ್ಟಿ ದಾಖಲೆ ಸೃಷ್ಟಿಸಿ ಸರ್ಕಾರದಿಂದ ಸದಸ್ಯರ ಸದಸ್ಯತ್ವ ಶುಲ್ಕವನ್ನು 100 ರೂ ನಿಂದ 200 ರೂಗೆ ಏರಿಸುವಂತೆ ಆದೇಶ ಹೊರಡಿಸಲಾಗಿದೆ. ಆ ಮೂಲಕ ಸರ್ವಸದಸ್ಯರ ಮಹಾಸಭೆ ನಡೆಸದೇ ಸದಸ್ಯತ್ವ ಶುಲ್ಕ ಹೆಚ್ಚಿಸುವ ಮೂಲಕ ಸಂಘದ ಬೈಲಾವನ್ನು ಉಲ್ಲಂಘಿಸಲಾಗಿದೆ. ಸಂಘದ ಅಧ್ಯಕ್ಷರಿಗೆ ಶಿವಮೊಗ್ಗದಲ್ಲಿ ವಾಸಕ್ಕೆ ಮನೆ ಪಡೆದಿದ್ದರೂ ಸಹ ಬೆಂಗಳೂರಿನಲ್ಲಿ ಸರ್ಕಾರಿ ವಸತಿಗೃಹದಲ್ಲಿನ ಎರಡು ಮನೆಗಳನ್ನು ಒಂದೆಂದು ತೋರಿಸಿ ಬಾಡಿಗೆಗೆ ಪಡೆಯಲಾಗಿದೆ. ಇದಕ್ಕೆ ಸಂಘದಿಂದಲೇ ಬಾಡಿಗೆ ಕಟ್ಟಲಾಗುತ್ತಿದೆ. ಈ ಮೂಲಕ ಕಾನೂನು ಉಲ್ಲಂಘಿಸಲಾಗಿದೆ. ಅಲ್ಲದೇ ಕೋವಿಡ್ ಸಾಂಕ್ರಾಮಿಕ ಇದ್ದಾಗಲೂ ಕಾನೂನುಬಾಹಿರವಾಗಿ 300ಕ್ಕೂ ಅಧಿಕ ಸಂಘದ ಪರಿಷತ್ ಸದಸ್ಯರು ಸಭೆ ಸೇರಿ ಬೈಲಾಗಿ ತಿದ್ದುಪಡಿ ತಂದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್ ಷಡಾಕ್ಷರಿಯವರ ವಿರುದ್ಧ ಈ ರೀತಿಯ ಆರೋಪಗಳು ಬಂದಿರುವ ಹಿನ್ನೆಲೆಯಲ್ಲಿ ಸಹಕಾರ ಸಂಘಗಳ ಉಪ ನಿಬಂಧಕರು ಮತ್ತು ಸಂಘಗಳ ಜಿಲ್ಲಾ ನೊಂದಣಾಧಿಕಾರಿಗಳು ತನಿಖೆ ನಡೆಸಬೇಕೆಂದು ಜೂನ್ 20 ರಂದು ಸಹಕಾರ ಇಲಾಖೆಯ ಅಧೀನ ಕಾರ್ಯದರ್ಶಿ ರಾಘವನ್ ಆರ್‌.ವಿ ಆದೇಶಿಸಿದ್ದಾರೆ.

ಕಳೆದ ತಿಂಗಳು ಆರ್‌ಟಿಐ ಕಾರ್ಯಕರ್ತನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಷಡಾಕ್ಷರಿಯವರ ವಿರುದ್ಧ ಸಾಗದಲ್ಲಿ ಎಫ್‌ಐಆರ್ ದಾಖಲಾಗಿದೆ. ಆ ಬೆನ್ನಲ್ಲೇ ಅವರ ಮೇಲೆ ಭ್ರಷ್ಟಾಚಾರದ ತನಿಖೆಗೆ ಆದೇಶ ನೀಡಲಾಗಿದೆ.

ಇದನ್ನೂ ಓದಿ: ಮರುಕಳಿಸಿದ ಸರ್ವಾಧಿಪತ್ಯದ ಅಪಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...