Homeಕರ್ನಾಟಕಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಮೇಲೆ ಅವ್ಯವ್ಯಹಾರಗಳ ಆರೋಪ: ತನಿಖೆಗೆ ಆದೇಶ

ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಮೇಲೆ ಅವ್ಯವ್ಯಹಾರಗಳ ಆರೋಪ: ತನಿಖೆಗೆ ಆದೇಶ

ಸಂಘದ ಯಾವುದೇ ಸಭೆಗಳಲ್ಲಿ ನಿರ್ಣಯ ಮಾಡದೇ 35.02 ಲಕ್ಷ ರೂ ಹಣ ವ್ಯಯಿಸಿ ಕಿಯಾ ಕಾರ್ನಿವಾಲ್ ಎಂಬ ಐಷರಾಮಿ ಕಾರು ಖರೀದಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

- Advertisement -
- Advertisement -

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅವ್ಯವಹಾರ, ಭ್ರಷ್ಟಾಚಾರ, ಹಣ ದುರುಪಯೋಗ ಹಾಗೂ ಇತರ ಚಟುವಟಿಕೆಗಳ ವಿಚಾರಣೆ ನಡೆಸಿ ಸಂಘಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಬೇಕೆಂದು ಸಹಕಾರ ಇಲಾಖೆಯ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.

ವಾರ್ಷಿಕ ರೂ 20 ಕೋಟಿಗೂ ಅಧಿಕ ವಹಿವಾಟು ನಡೆಸುವ, ರಾಜ್ಯದ 5 ಲಕ್ಷಕ್ಕೂ ಹೆಚ್ಚು ಎಲ್ಲಾ ವೃಂದದ ರಾಜ್ಯ ಸರಕಾರಿ ನೌಕರರು ಸದಸ್ಯರಾಗಿರುವ ಮತ್ತು ಕರ್ನಾಟಕ ಸರಕಾರದಿಂದ ಪ್ರತಿ ವರ್ಷ ಕೋಟ್ಯಾಂತರ ರೂ ಸಹಾಯಾನುದಾನ ಪಡೆಯುತ್ತಿರುವ ಕರ್ನಾಟಕ ಸಂಘಗಳ ನೊಂದಣಿ ಅದಿನಿಯಮ 1960 ರಡಿ ನೊಂದಾಯಿತ ಹಾಗು ಸರಕಾರದಿಂದ ಮಾನ್ಯತೆ ಪಡೆದ ಸಂಘ ಆಗಿರುವ, ‘ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಕಬ್ಬನ್ ಉದ್ಯಾನವನ, ಬೆಂಗಳೂರು’ ಸಂಘವು, ಆದಾಯ ತೆರಿಗೆ ಕಾಯ್ದೆ 1961, ಕರ್ನಾಟಕ ಮುನಿಸಿಪಲ್ ಕಾಯ್ದೆ 1964, ಭಾರತೀಯ ದಂಡ ಸಂಹಿತೆ 1860, ಕರ್ನಾಟಕ ಸಂಘಗಳ ನೊಂದಣಿ ಆದಿನಿಯಮ 1960, ಕರ್ನಾಟಕ ನಾಗರೀಕ ಸೇವಾ ನಿಯಮಗಳು, ಸಂಘದ ಬೈಲಾ ನಿಯಮ ಉಲ್ಲಂಘಿಸಿ ತೆರಿಗೆಗಳ್ಳತನ ದಂಥಹ ಗಂಭೀರ ಸ್ವರೂಪದ ಅರ್ಥಿಕ ಅಪರಾಧಗಳು, ಭ್ರಷ್ಟಾಚಾರ, ಹಣ ದುರುಪಯೋಗ, ವಂಚನೆ, ಅವ್ಯವಸ್ಥಿತ ವ್ಯವಸ್ಥಾಪನೆ & ಕಾರ್ಯ ನಿರ್ವಹಣೆಯಂಥಹ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ನಿರತವಾಗಿದೆ ಎಂದು ಐವರು ಸರ್ಕಾರಿ ನೌಕರರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಈ ತಿಂಗಳ ಆರಂಭದಲ್ಲಿ ದೂರು ನೀಡಿದ್ದರು.

ಈ ಹಿಂದೆಯೇ ಸಂಘದ ಸದಸ್ಯರು, ಪದಾಧಿಕಾರಿಗಳು ಸೂಕ್ತ ದಾಖಲೆಗಳೊಂದಿಗೆ ಸಂಘಗಳ ನೊಂದಣಾಧಿಕಾರಿಗಳು, ನಾಲ್ಕನೆ ವಲಯ, ಬೆಂಗಳೂರು ನಗರ ಜಿಲ್ಲೆ, ಮಲ್ಲೇಶ್ವರಂ, ಬೆಂಗಳೂರು ಇವರಿಗೆ ದಿನಾಂಕ 24.10.2020, 30.12.2020, 24/02/2022 ಮತ್ತು ವಿವಿದ ದಿನಾಂಕಗಳಲ್ಲಿ ಈ ಬಗ್ಗೆ ದೂರು ಸಲ್ಲಿಸಿ ಶಾಸನಾತ್ಮಕ ವಿಚಾರಣೆ ಜರುಗಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಕೋರಲಾಗಿದ್ದರೂ ಯಾವುದೇ ಕ್ರಮ ಆಗಿರುವುದಿಲ್ಲ. ಸರಕಾರದ ವಿವಿಧ ಪ್ರಾಧಿಕಾರಿಗಳಿಗೆ ಸಲ್ಲಿಸಿದ ದೂರಿಗೂ ಕ್ರಮ ಆಗಿರುವುದಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹೀಗಾಗಿ ಸಂಘದಲ್ಲಿನ ಕಾನೂನು ಬಾಹಿರ ಚಟುವಟಿಕೆಗಳು, ಅರ್ಥಿಕ ಅಪರಾಧಗಳು, ಅಪ್ರಜಾಸತ್ತಾತ್ಮಕ, ನಿರಂಕುಶಾಡಳಿತ ಮತ್ತು  ಅವ್ಯವಸ್ಥಿತ ಕಾರ್ಯ ನಿರ್ವಹಣೆ ಮುಂದುವರೆದಿದೆ. ಅರ್ಥಿಕ ಅಪರಾಧ, ಭಷ್ಟಾಚಾರ, ಹಣ ದುರುಪಯೋಗ, ವಂಚನೆ ಮೂಲಕ ಸರಕಾರದ ಬೊಕ್ಕಸಕ್ಕೆ ಮತ್ತು ಸಂಘಕ್ಕೆ ಹಾನಿ ಉಂಟು ಮಾಡಿದ್ದಲ್ಲದೇ, ಖೊಟ್ಟಿ ದಾಖಲೆ ಸೃಷ್ಟಿಸಿ ಸರಕಾರಕ್ಕೆ ನೀಡಿದ ಸುಳ್ಳು ಮಾಹಿತಿ ಆಧರಿಸಿ ಹೊರಡಿಸಲ್ಪಟ್ಟ ಸರಕಾರಿ ಆದೇಶದಿಂದ ರಾಜ್ಯದ 3 ಲಕ್ಷಕ್ಕೂ ಹೆಚ್ಚಿನ ಸಂಘದ ಸದಸ್ಯರಿಗೆ ಪ್ರತಿ ವರ್ಷ 3 ಕೋಟಿಗೂ ಅಧಿಕ ಅರ್ಥಿಕ ನಷ್ಟ ಉಂಟು ಮಾಡಿರುವ ರಾಜ್ಯಾಧ್ಯಕ್ಷರ ವಿರುದ್ಧ ಸೂಕ್ತ ಕಾನೂನುಗಳಡಿ ಕ್ರಮ ಕೈಗೊಂಡು ಸದಸ್ಯರ ಸಾಮಾನ್ಯ ಹಿತಾಸಕ್ತಿ ಕಾಪಾಡಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ. ಅದರೊಟ್ಟಿಗೆ ಮೇಲ್ನೋಟಕ್ಕೆ ಸಾಬೀತಾಗುವಂಥಹ 5 ಪ್ರಮುಖ ಸಾಕ್ಷ್ಯ ಪುರಾವೆಗಳನ್ನು ದೂರಿನೊಂದಿಗೆ ಲಗತ್ತಿಸಲಾಗಿದೆ.

ಸಂಘದ ಅಧ್ಯಕ್ಷರು ಸಂಘದ ಸದಸ್ಯರಲ್ಲದವರಿಂದ ರೂ 83 ಲಕ್ಷಕ್ಕೂ ಅಧಿಕ ಹಣವನ್ನು ಜಾಹೀರಾತು ರೂಪದಲ್ಲಿ ಸಂಗ್ರಹಿಸಿದ್ದಾರೆ. ಆದರೆ ಆ ಹಣಕ್ಕೆ ಆದಾಯ ತೆರಿಗೆ ಪಾವತಿಸಿಲ್ಲ. ಸರ್ಕಾರದಿಂದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 2 ಕೋಟಿ ರೂ ಅನುದಾನ ಪಡೆಯಲಾಗಿದೆ ಮತ್ತು ಜಾಹೀರಾತಿನಿಂದ 1 ಕೋಟಿ ರೂ ಸಂಗ್ರಹಿಸಲಾಗಿದೆ. ಆದರೆ ಸಂಘದ ಖಾತೆಗೆ 55,95,000 ರೂ ಗಳನ್ನು ಮಾತ್ರ ಹಾಕಿದ್ದು ಉಳಿದ ಹಣವನ್ನು ಹಾಕಿಲ್ಲ. ಅಲ್ಲದೇ ಸಂಘದ ಯಾವುದೇ ಸಭೆಗಳಲ್ಲಿ ನಿರ್ಣಯ ಮಾಡದೇ 35.02 ಲಕ್ಷ ರೂ ಹಣ ವ್ಯಯಿಸಿ ಕಿಯಾ ಕಾರ್ನಿವಾಲ್ ಎಂಬ ಐಷರಾಮಿ ಕಾರು ಖರೀದಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಖೊಟ್ಟಿ ದಾಖಲೆ ಸೃಷ್ಟಿಸಿ ಸರ್ಕಾರದಿಂದ ಸದಸ್ಯರ ಸದಸ್ಯತ್ವ ಶುಲ್ಕವನ್ನು 100 ರೂ ನಿಂದ 200 ರೂಗೆ ಏರಿಸುವಂತೆ ಆದೇಶ ಹೊರಡಿಸಲಾಗಿದೆ. ಆ ಮೂಲಕ ಸರ್ವಸದಸ್ಯರ ಮಹಾಸಭೆ ನಡೆಸದೇ ಸದಸ್ಯತ್ವ ಶುಲ್ಕ ಹೆಚ್ಚಿಸುವ ಮೂಲಕ ಸಂಘದ ಬೈಲಾವನ್ನು ಉಲ್ಲಂಘಿಸಲಾಗಿದೆ. ಸಂಘದ ಅಧ್ಯಕ್ಷರಿಗೆ ಶಿವಮೊಗ್ಗದಲ್ಲಿ ವಾಸಕ್ಕೆ ಮನೆ ಪಡೆದಿದ್ದರೂ ಸಹ ಬೆಂಗಳೂರಿನಲ್ಲಿ ಸರ್ಕಾರಿ ವಸತಿಗೃಹದಲ್ಲಿನ ಎರಡು ಮನೆಗಳನ್ನು ಒಂದೆಂದು ತೋರಿಸಿ ಬಾಡಿಗೆಗೆ ಪಡೆಯಲಾಗಿದೆ. ಇದಕ್ಕೆ ಸಂಘದಿಂದಲೇ ಬಾಡಿಗೆ ಕಟ್ಟಲಾಗುತ್ತಿದೆ. ಈ ಮೂಲಕ ಕಾನೂನು ಉಲ್ಲಂಘಿಸಲಾಗಿದೆ. ಅಲ್ಲದೇ ಕೋವಿಡ್ ಸಾಂಕ್ರಾಮಿಕ ಇದ್ದಾಗಲೂ ಕಾನೂನುಬಾಹಿರವಾಗಿ 300ಕ್ಕೂ ಅಧಿಕ ಸಂಘದ ಪರಿಷತ್ ಸದಸ್ಯರು ಸಭೆ ಸೇರಿ ಬೈಲಾಗಿ ತಿದ್ದುಪಡಿ ತಂದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್ ಷಡಾಕ್ಷರಿಯವರ ವಿರುದ್ಧ ಈ ರೀತಿಯ ಆರೋಪಗಳು ಬಂದಿರುವ ಹಿನ್ನೆಲೆಯಲ್ಲಿ ಸಹಕಾರ ಸಂಘಗಳ ಉಪ ನಿಬಂಧಕರು ಮತ್ತು ಸಂಘಗಳ ಜಿಲ್ಲಾ ನೊಂದಣಾಧಿಕಾರಿಗಳು ತನಿಖೆ ನಡೆಸಬೇಕೆಂದು ಜೂನ್ 20 ರಂದು ಸಹಕಾರ ಇಲಾಖೆಯ ಅಧೀನ ಕಾರ್ಯದರ್ಶಿ ರಾಘವನ್ ಆರ್‌.ವಿ ಆದೇಶಿಸಿದ್ದಾರೆ.

ಕಳೆದ ತಿಂಗಳು ಆರ್‌ಟಿಐ ಕಾರ್ಯಕರ್ತನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಷಡಾಕ್ಷರಿಯವರ ವಿರುದ್ಧ ಸಾಗದಲ್ಲಿ ಎಫ್‌ಐಆರ್ ದಾಖಲಾಗಿದೆ. ಆ ಬೆನ್ನಲ್ಲೇ ಅವರ ಮೇಲೆ ಭ್ರಷ್ಟಾಚಾರದ ತನಿಖೆಗೆ ಆದೇಶ ನೀಡಲಾಗಿದೆ.

ಇದನ್ನೂ ಓದಿ: ಮರುಕಳಿಸಿದ ಸರ್ವಾಧಿಪತ್ಯದ ಅಪಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...