Homeಕರ್ನಾಟಕಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಮೇಲೆ ಅವ್ಯವ್ಯಹಾರಗಳ ಆರೋಪ: ತನಿಖೆಗೆ ಆದೇಶ

ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಮೇಲೆ ಅವ್ಯವ್ಯಹಾರಗಳ ಆರೋಪ: ತನಿಖೆಗೆ ಆದೇಶ

ಸಂಘದ ಯಾವುದೇ ಸಭೆಗಳಲ್ಲಿ ನಿರ್ಣಯ ಮಾಡದೇ 35.02 ಲಕ್ಷ ರೂ ಹಣ ವ್ಯಯಿಸಿ ಕಿಯಾ ಕಾರ್ನಿವಾಲ್ ಎಂಬ ಐಷರಾಮಿ ಕಾರು ಖರೀದಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

- Advertisement -
- Advertisement -

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅವ್ಯವಹಾರ, ಭ್ರಷ್ಟಾಚಾರ, ಹಣ ದುರುಪಯೋಗ ಹಾಗೂ ಇತರ ಚಟುವಟಿಕೆಗಳ ವಿಚಾರಣೆ ನಡೆಸಿ ಸಂಘಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಬೇಕೆಂದು ಸಹಕಾರ ಇಲಾಖೆಯ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.

ವಾರ್ಷಿಕ ರೂ 20 ಕೋಟಿಗೂ ಅಧಿಕ ವಹಿವಾಟು ನಡೆಸುವ, ರಾಜ್ಯದ 5 ಲಕ್ಷಕ್ಕೂ ಹೆಚ್ಚು ಎಲ್ಲಾ ವೃಂದದ ರಾಜ್ಯ ಸರಕಾರಿ ನೌಕರರು ಸದಸ್ಯರಾಗಿರುವ ಮತ್ತು ಕರ್ನಾಟಕ ಸರಕಾರದಿಂದ ಪ್ರತಿ ವರ್ಷ ಕೋಟ್ಯಾಂತರ ರೂ ಸಹಾಯಾನುದಾನ ಪಡೆಯುತ್ತಿರುವ ಕರ್ನಾಟಕ ಸಂಘಗಳ ನೊಂದಣಿ ಅದಿನಿಯಮ 1960 ರಡಿ ನೊಂದಾಯಿತ ಹಾಗು ಸರಕಾರದಿಂದ ಮಾನ್ಯತೆ ಪಡೆದ ಸಂಘ ಆಗಿರುವ, ‘ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಕಬ್ಬನ್ ಉದ್ಯಾನವನ, ಬೆಂಗಳೂರು’ ಸಂಘವು, ಆದಾಯ ತೆರಿಗೆ ಕಾಯ್ದೆ 1961, ಕರ್ನಾಟಕ ಮುನಿಸಿಪಲ್ ಕಾಯ್ದೆ 1964, ಭಾರತೀಯ ದಂಡ ಸಂಹಿತೆ 1860, ಕರ್ನಾಟಕ ಸಂಘಗಳ ನೊಂದಣಿ ಆದಿನಿಯಮ 1960, ಕರ್ನಾಟಕ ನಾಗರೀಕ ಸೇವಾ ನಿಯಮಗಳು, ಸಂಘದ ಬೈಲಾ ನಿಯಮ ಉಲ್ಲಂಘಿಸಿ ತೆರಿಗೆಗಳ್ಳತನ ದಂಥಹ ಗಂಭೀರ ಸ್ವರೂಪದ ಅರ್ಥಿಕ ಅಪರಾಧಗಳು, ಭ್ರಷ್ಟಾಚಾರ, ಹಣ ದುರುಪಯೋಗ, ವಂಚನೆ, ಅವ್ಯವಸ್ಥಿತ ವ್ಯವಸ್ಥಾಪನೆ & ಕಾರ್ಯ ನಿರ್ವಹಣೆಯಂಥಹ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ನಿರತವಾಗಿದೆ ಎಂದು ಐವರು ಸರ್ಕಾರಿ ನೌಕರರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಈ ತಿಂಗಳ ಆರಂಭದಲ್ಲಿ ದೂರು ನೀಡಿದ್ದರು.

ಈ ಹಿಂದೆಯೇ ಸಂಘದ ಸದಸ್ಯರು, ಪದಾಧಿಕಾರಿಗಳು ಸೂಕ್ತ ದಾಖಲೆಗಳೊಂದಿಗೆ ಸಂಘಗಳ ನೊಂದಣಾಧಿಕಾರಿಗಳು, ನಾಲ್ಕನೆ ವಲಯ, ಬೆಂಗಳೂರು ನಗರ ಜಿಲ್ಲೆ, ಮಲ್ಲೇಶ್ವರಂ, ಬೆಂಗಳೂರು ಇವರಿಗೆ ದಿನಾಂಕ 24.10.2020, 30.12.2020, 24/02/2022 ಮತ್ತು ವಿವಿದ ದಿನಾಂಕಗಳಲ್ಲಿ ಈ ಬಗ್ಗೆ ದೂರು ಸಲ್ಲಿಸಿ ಶಾಸನಾತ್ಮಕ ವಿಚಾರಣೆ ಜರುಗಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಕೋರಲಾಗಿದ್ದರೂ ಯಾವುದೇ ಕ್ರಮ ಆಗಿರುವುದಿಲ್ಲ. ಸರಕಾರದ ವಿವಿಧ ಪ್ರಾಧಿಕಾರಿಗಳಿಗೆ ಸಲ್ಲಿಸಿದ ದೂರಿಗೂ ಕ್ರಮ ಆಗಿರುವುದಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹೀಗಾಗಿ ಸಂಘದಲ್ಲಿನ ಕಾನೂನು ಬಾಹಿರ ಚಟುವಟಿಕೆಗಳು, ಅರ್ಥಿಕ ಅಪರಾಧಗಳು, ಅಪ್ರಜಾಸತ್ತಾತ್ಮಕ, ನಿರಂಕುಶಾಡಳಿತ ಮತ್ತು  ಅವ್ಯವಸ್ಥಿತ ಕಾರ್ಯ ನಿರ್ವಹಣೆ ಮುಂದುವರೆದಿದೆ. ಅರ್ಥಿಕ ಅಪರಾಧ, ಭಷ್ಟಾಚಾರ, ಹಣ ದುರುಪಯೋಗ, ವಂಚನೆ ಮೂಲಕ ಸರಕಾರದ ಬೊಕ್ಕಸಕ್ಕೆ ಮತ್ತು ಸಂಘಕ್ಕೆ ಹಾನಿ ಉಂಟು ಮಾಡಿದ್ದಲ್ಲದೇ, ಖೊಟ್ಟಿ ದಾಖಲೆ ಸೃಷ್ಟಿಸಿ ಸರಕಾರಕ್ಕೆ ನೀಡಿದ ಸುಳ್ಳು ಮಾಹಿತಿ ಆಧರಿಸಿ ಹೊರಡಿಸಲ್ಪಟ್ಟ ಸರಕಾರಿ ಆದೇಶದಿಂದ ರಾಜ್ಯದ 3 ಲಕ್ಷಕ್ಕೂ ಹೆಚ್ಚಿನ ಸಂಘದ ಸದಸ್ಯರಿಗೆ ಪ್ರತಿ ವರ್ಷ 3 ಕೋಟಿಗೂ ಅಧಿಕ ಅರ್ಥಿಕ ನಷ್ಟ ಉಂಟು ಮಾಡಿರುವ ರಾಜ್ಯಾಧ್ಯಕ್ಷರ ವಿರುದ್ಧ ಸೂಕ್ತ ಕಾನೂನುಗಳಡಿ ಕ್ರಮ ಕೈಗೊಂಡು ಸದಸ್ಯರ ಸಾಮಾನ್ಯ ಹಿತಾಸಕ್ತಿ ಕಾಪಾಡಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ. ಅದರೊಟ್ಟಿಗೆ ಮೇಲ್ನೋಟಕ್ಕೆ ಸಾಬೀತಾಗುವಂಥಹ 5 ಪ್ರಮುಖ ಸಾಕ್ಷ್ಯ ಪುರಾವೆಗಳನ್ನು ದೂರಿನೊಂದಿಗೆ ಲಗತ್ತಿಸಲಾಗಿದೆ.

ಸಂಘದ ಅಧ್ಯಕ್ಷರು ಸಂಘದ ಸದಸ್ಯರಲ್ಲದವರಿಂದ ರೂ 83 ಲಕ್ಷಕ್ಕೂ ಅಧಿಕ ಹಣವನ್ನು ಜಾಹೀರಾತು ರೂಪದಲ್ಲಿ ಸಂಗ್ರಹಿಸಿದ್ದಾರೆ. ಆದರೆ ಆ ಹಣಕ್ಕೆ ಆದಾಯ ತೆರಿಗೆ ಪಾವತಿಸಿಲ್ಲ. ಸರ್ಕಾರದಿಂದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 2 ಕೋಟಿ ರೂ ಅನುದಾನ ಪಡೆಯಲಾಗಿದೆ ಮತ್ತು ಜಾಹೀರಾತಿನಿಂದ 1 ಕೋಟಿ ರೂ ಸಂಗ್ರಹಿಸಲಾಗಿದೆ. ಆದರೆ ಸಂಘದ ಖಾತೆಗೆ 55,95,000 ರೂ ಗಳನ್ನು ಮಾತ್ರ ಹಾಕಿದ್ದು ಉಳಿದ ಹಣವನ್ನು ಹಾಕಿಲ್ಲ. ಅಲ್ಲದೇ ಸಂಘದ ಯಾವುದೇ ಸಭೆಗಳಲ್ಲಿ ನಿರ್ಣಯ ಮಾಡದೇ 35.02 ಲಕ್ಷ ರೂ ಹಣ ವ್ಯಯಿಸಿ ಕಿಯಾ ಕಾರ್ನಿವಾಲ್ ಎಂಬ ಐಷರಾಮಿ ಕಾರು ಖರೀದಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಖೊಟ್ಟಿ ದಾಖಲೆ ಸೃಷ್ಟಿಸಿ ಸರ್ಕಾರದಿಂದ ಸದಸ್ಯರ ಸದಸ್ಯತ್ವ ಶುಲ್ಕವನ್ನು 100 ರೂ ನಿಂದ 200 ರೂಗೆ ಏರಿಸುವಂತೆ ಆದೇಶ ಹೊರಡಿಸಲಾಗಿದೆ. ಆ ಮೂಲಕ ಸರ್ವಸದಸ್ಯರ ಮಹಾಸಭೆ ನಡೆಸದೇ ಸದಸ್ಯತ್ವ ಶುಲ್ಕ ಹೆಚ್ಚಿಸುವ ಮೂಲಕ ಸಂಘದ ಬೈಲಾವನ್ನು ಉಲ್ಲಂಘಿಸಲಾಗಿದೆ. ಸಂಘದ ಅಧ್ಯಕ್ಷರಿಗೆ ಶಿವಮೊಗ್ಗದಲ್ಲಿ ವಾಸಕ್ಕೆ ಮನೆ ಪಡೆದಿದ್ದರೂ ಸಹ ಬೆಂಗಳೂರಿನಲ್ಲಿ ಸರ್ಕಾರಿ ವಸತಿಗೃಹದಲ್ಲಿನ ಎರಡು ಮನೆಗಳನ್ನು ಒಂದೆಂದು ತೋರಿಸಿ ಬಾಡಿಗೆಗೆ ಪಡೆಯಲಾಗಿದೆ. ಇದಕ್ಕೆ ಸಂಘದಿಂದಲೇ ಬಾಡಿಗೆ ಕಟ್ಟಲಾಗುತ್ತಿದೆ. ಈ ಮೂಲಕ ಕಾನೂನು ಉಲ್ಲಂಘಿಸಲಾಗಿದೆ. ಅಲ್ಲದೇ ಕೋವಿಡ್ ಸಾಂಕ್ರಾಮಿಕ ಇದ್ದಾಗಲೂ ಕಾನೂನುಬಾಹಿರವಾಗಿ 300ಕ್ಕೂ ಅಧಿಕ ಸಂಘದ ಪರಿಷತ್ ಸದಸ್ಯರು ಸಭೆ ಸೇರಿ ಬೈಲಾಗಿ ತಿದ್ದುಪಡಿ ತಂದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್ ಷಡಾಕ್ಷರಿಯವರ ವಿರುದ್ಧ ಈ ರೀತಿಯ ಆರೋಪಗಳು ಬಂದಿರುವ ಹಿನ್ನೆಲೆಯಲ್ಲಿ ಸಹಕಾರ ಸಂಘಗಳ ಉಪ ನಿಬಂಧಕರು ಮತ್ತು ಸಂಘಗಳ ಜಿಲ್ಲಾ ನೊಂದಣಾಧಿಕಾರಿಗಳು ತನಿಖೆ ನಡೆಸಬೇಕೆಂದು ಜೂನ್ 20 ರಂದು ಸಹಕಾರ ಇಲಾಖೆಯ ಅಧೀನ ಕಾರ್ಯದರ್ಶಿ ರಾಘವನ್ ಆರ್‌.ವಿ ಆದೇಶಿಸಿದ್ದಾರೆ.

ಕಳೆದ ತಿಂಗಳು ಆರ್‌ಟಿಐ ಕಾರ್ಯಕರ್ತನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಷಡಾಕ್ಷರಿಯವರ ವಿರುದ್ಧ ಸಾಗದಲ್ಲಿ ಎಫ್‌ಐಆರ್ ದಾಖಲಾಗಿದೆ. ಆ ಬೆನ್ನಲ್ಲೇ ಅವರ ಮೇಲೆ ಭ್ರಷ್ಟಾಚಾರದ ತನಿಖೆಗೆ ಆದೇಶ ನೀಡಲಾಗಿದೆ.

ಇದನ್ನೂ ಓದಿ: ಮರುಕಳಿಸಿದ ಸರ್ವಾಧಿಪತ್ಯದ ಅಪಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...