Homeಕರ್ನಾಟಕಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಮೇಲೆ ಅವ್ಯವ್ಯಹಾರಗಳ ಆರೋಪ: ತನಿಖೆಗೆ ಆದೇಶ

ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಮೇಲೆ ಅವ್ಯವ್ಯಹಾರಗಳ ಆರೋಪ: ತನಿಖೆಗೆ ಆದೇಶ

ಸಂಘದ ಯಾವುದೇ ಸಭೆಗಳಲ್ಲಿ ನಿರ್ಣಯ ಮಾಡದೇ 35.02 ಲಕ್ಷ ರೂ ಹಣ ವ್ಯಯಿಸಿ ಕಿಯಾ ಕಾರ್ನಿವಾಲ್ ಎಂಬ ಐಷರಾಮಿ ಕಾರು ಖರೀದಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

- Advertisement -
- Advertisement -

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅವ್ಯವಹಾರ, ಭ್ರಷ್ಟಾಚಾರ, ಹಣ ದುರುಪಯೋಗ ಹಾಗೂ ಇತರ ಚಟುವಟಿಕೆಗಳ ವಿಚಾರಣೆ ನಡೆಸಿ ಸಂಘಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಬೇಕೆಂದು ಸಹಕಾರ ಇಲಾಖೆಯ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.

ವಾರ್ಷಿಕ ರೂ 20 ಕೋಟಿಗೂ ಅಧಿಕ ವಹಿವಾಟು ನಡೆಸುವ, ರಾಜ್ಯದ 5 ಲಕ್ಷಕ್ಕೂ ಹೆಚ್ಚು ಎಲ್ಲಾ ವೃಂದದ ರಾಜ್ಯ ಸರಕಾರಿ ನೌಕರರು ಸದಸ್ಯರಾಗಿರುವ ಮತ್ತು ಕರ್ನಾಟಕ ಸರಕಾರದಿಂದ ಪ್ರತಿ ವರ್ಷ ಕೋಟ್ಯಾಂತರ ರೂ ಸಹಾಯಾನುದಾನ ಪಡೆಯುತ್ತಿರುವ ಕರ್ನಾಟಕ ಸಂಘಗಳ ನೊಂದಣಿ ಅದಿನಿಯಮ 1960 ರಡಿ ನೊಂದಾಯಿತ ಹಾಗು ಸರಕಾರದಿಂದ ಮಾನ್ಯತೆ ಪಡೆದ ಸಂಘ ಆಗಿರುವ, ‘ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಕಬ್ಬನ್ ಉದ್ಯಾನವನ, ಬೆಂಗಳೂರು’ ಸಂಘವು, ಆದಾಯ ತೆರಿಗೆ ಕಾಯ್ದೆ 1961, ಕರ್ನಾಟಕ ಮುನಿಸಿಪಲ್ ಕಾಯ್ದೆ 1964, ಭಾರತೀಯ ದಂಡ ಸಂಹಿತೆ 1860, ಕರ್ನಾಟಕ ಸಂಘಗಳ ನೊಂದಣಿ ಆದಿನಿಯಮ 1960, ಕರ್ನಾಟಕ ನಾಗರೀಕ ಸೇವಾ ನಿಯಮಗಳು, ಸಂಘದ ಬೈಲಾ ನಿಯಮ ಉಲ್ಲಂಘಿಸಿ ತೆರಿಗೆಗಳ್ಳತನ ದಂಥಹ ಗಂಭೀರ ಸ್ವರೂಪದ ಅರ್ಥಿಕ ಅಪರಾಧಗಳು, ಭ್ರಷ್ಟಾಚಾರ, ಹಣ ದುರುಪಯೋಗ, ವಂಚನೆ, ಅವ್ಯವಸ್ಥಿತ ವ್ಯವಸ್ಥಾಪನೆ & ಕಾರ್ಯ ನಿರ್ವಹಣೆಯಂಥಹ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ನಿರತವಾಗಿದೆ ಎಂದು ಐವರು ಸರ್ಕಾರಿ ನೌಕರರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಈ ತಿಂಗಳ ಆರಂಭದಲ್ಲಿ ದೂರು ನೀಡಿದ್ದರು.

ಈ ಹಿಂದೆಯೇ ಸಂಘದ ಸದಸ್ಯರು, ಪದಾಧಿಕಾರಿಗಳು ಸೂಕ್ತ ದಾಖಲೆಗಳೊಂದಿಗೆ ಸಂಘಗಳ ನೊಂದಣಾಧಿಕಾರಿಗಳು, ನಾಲ್ಕನೆ ವಲಯ, ಬೆಂಗಳೂರು ನಗರ ಜಿಲ್ಲೆ, ಮಲ್ಲೇಶ್ವರಂ, ಬೆಂಗಳೂರು ಇವರಿಗೆ ದಿನಾಂಕ 24.10.2020, 30.12.2020, 24/02/2022 ಮತ್ತು ವಿವಿದ ದಿನಾಂಕಗಳಲ್ಲಿ ಈ ಬಗ್ಗೆ ದೂರು ಸಲ್ಲಿಸಿ ಶಾಸನಾತ್ಮಕ ವಿಚಾರಣೆ ಜರುಗಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಕೋರಲಾಗಿದ್ದರೂ ಯಾವುದೇ ಕ್ರಮ ಆಗಿರುವುದಿಲ್ಲ. ಸರಕಾರದ ವಿವಿಧ ಪ್ರಾಧಿಕಾರಿಗಳಿಗೆ ಸಲ್ಲಿಸಿದ ದೂರಿಗೂ ಕ್ರಮ ಆಗಿರುವುದಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹೀಗಾಗಿ ಸಂಘದಲ್ಲಿನ ಕಾನೂನು ಬಾಹಿರ ಚಟುವಟಿಕೆಗಳು, ಅರ್ಥಿಕ ಅಪರಾಧಗಳು, ಅಪ್ರಜಾಸತ್ತಾತ್ಮಕ, ನಿರಂಕುಶಾಡಳಿತ ಮತ್ತು  ಅವ್ಯವಸ್ಥಿತ ಕಾರ್ಯ ನಿರ್ವಹಣೆ ಮುಂದುವರೆದಿದೆ. ಅರ್ಥಿಕ ಅಪರಾಧ, ಭಷ್ಟಾಚಾರ, ಹಣ ದುರುಪಯೋಗ, ವಂಚನೆ ಮೂಲಕ ಸರಕಾರದ ಬೊಕ್ಕಸಕ್ಕೆ ಮತ್ತು ಸಂಘಕ್ಕೆ ಹಾನಿ ಉಂಟು ಮಾಡಿದ್ದಲ್ಲದೇ, ಖೊಟ್ಟಿ ದಾಖಲೆ ಸೃಷ್ಟಿಸಿ ಸರಕಾರಕ್ಕೆ ನೀಡಿದ ಸುಳ್ಳು ಮಾಹಿತಿ ಆಧರಿಸಿ ಹೊರಡಿಸಲ್ಪಟ್ಟ ಸರಕಾರಿ ಆದೇಶದಿಂದ ರಾಜ್ಯದ 3 ಲಕ್ಷಕ್ಕೂ ಹೆಚ್ಚಿನ ಸಂಘದ ಸದಸ್ಯರಿಗೆ ಪ್ರತಿ ವರ್ಷ 3 ಕೋಟಿಗೂ ಅಧಿಕ ಅರ್ಥಿಕ ನಷ್ಟ ಉಂಟು ಮಾಡಿರುವ ರಾಜ್ಯಾಧ್ಯಕ್ಷರ ವಿರುದ್ಧ ಸೂಕ್ತ ಕಾನೂನುಗಳಡಿ ಕ್ರಮ ಕೈಗೊಂಡು ಸದಸ್ಯರ ಸಾಮಾನ್ಯ ಹಿತಾಸಕ್ತಿ ಕಾಪಾಡಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ. ಅದರೊಟ್ಟಿಗೆ ಮೇಲ್ನೋಟಕ್ಕೆ ಸಾಬೀತಾಗುವಂಥಹ 5 ಪ್ರಮುಖ ಸಾಕ್ಷ್ಯ ಪುರಾವೆಗಳನ್ನು ದೂರಿನೊಂದಿಗೆ ಲಗತ್ತಿಸಲಾಗಿದೆ.

ಸಂಘದ ಅಧ್ಯಕ್ಷರು ಸಂಘದ ಸದಸ್ಯರಲ್ಲದವರಿಂದ ರೂ 83 ಲಕ್ಷಕ್ಕೂ ಅಧಿಕ ಹಣವನ್ನು ಜಾಹೀರಾತು ರೂಪದಲ್ಲಿ ಸಂಗ್ರಹಿಸಿದ್ದಾರೆ. ಆದರೆ ಆ ಹಣಕ್ಕೆ ಆದಾಯ ತೆರಿಗೆ ಪಾವತಿಸಿಲ್ಲ. ಸರ್ಕಾರದಿಂದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 2 ಕೋಟಿ ರೂ ಅನುದಾನ ಪಡೆಯಲಾಗಿದೆ ಮತ್ತು ಜಾಹೀರಾತಿನಿಂದ 1 ಕೋಟಿ ರೂ ಸಂಗ್ರಹಿಸಲಾಗಿದೆ. ಆದರೆ ಸಂಘದ ಖಾತೆಗೆ 55,95,000 ರೂ ಗಳನ್ನು ಮಾತ್ರ ಹಾಕಿದ್ದು ಉಳಿದ ಹಣವನ್ನು ಹಾಕಿಲ್ಲ. ಅಲ್ಲದೇ ಸಂಘದ ಯಾವುದೇ ಸಭೆಗಳಲ್ಲಿ ನಿರ್ಣಯ ಮಾಡದೇ 35.02 ಲಕ್ಷ ರೂ ಹಣ ವ್ಯಯಿಸಿ ಕಿಯಾ ಕಾರ್ನಿವಾಲ್ ಎಂಬ ಐಷರಾಮಿ ಕಾರು ಖರೀದಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಖೊಟ್ಟಿ ದಾಖಲೆ ಸೃಷ್ಟಿಸಿ ಸರ್ಕಾರದಿಂದ ಸದಸ್ಯರ ಸದಸ್ಯತ್ವ ಶುಲ್ಕವನ್ನು 100 ರೂ ನಿಂದ 200 ರೂಗೆ ಏರಿಸುವಂತೆ ಆದೇಶ ಹೊರಡಿಸಲಾಗಿದೆ. ಆ ಮೂಲಕ ಸರ್ವಸದಸ್ಯರ ಮಹಾಸಭೆ ನಡೆಸದೇ ಸದಸ್ಯತ್ವ ಶುಲ್ಕ ಹೆಚ್ಚಿಸುವ ಮೂಲಕ ಸಂಘದ ಬೈಲಾವನ್ನು ಉಲ್ಲಂಘಿಸಲಾಗಿದೆ. ಸಂಘದ ಅಧ್ಯಕ್ಷರಿಗೆ ಶಿವಮೊಗ್ಗದಲ್ಲಿ ವಾಸಕ್ಕೆ ಮನೆ ಪಡೆದಿದ್ದರೂ ಸಹ ಬೆಂಗಳೂರಿನಲ್ಲಿ ಸರ್ಕಾರಿ ವಸತಿಗೃಹದಲ್ಲಿನ ಎರಡು ಮನೆಗಳನ್ನು ಒಂದೆಂದು ತೋರಿಸಿ ಬಾಡಿಗೆಗೆ ಪಡೆಯಲಾಗಿದೆ. ಇದಕ್ಕೆ ಸಂಘದಿಂದಲೇ ಬಾಡಿಗೆ ಕಟ್ಟಲಾಗುತ್ತಿದೆ. ಈ ಮೂಲಕ ಕಾನೂನು ಉಲ್ಲಂಘಿಸಲಾಗಿದೆ. ಅಲ್ಲದೇ ಕೋವಿಡ್ ಸಾಂಕ್ರಾಮಿಕ ಇದ್ದಾಗಲೂ ಕಾನೂನುಬಾಹಿರವಾಗಿ 300ಕ್ಕೂ ಅಧಿಕ ಸಂಘದ ಪರಿಷತ್ ಸದಸ್ಯರು ಸಭೆ ಸೇರಿ ಬೈಲಾಗಿ ತಿದ್ದುಪಡಿ ತಂದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್ ಷಡಾಕ್ಷರಿಯವರ ವಿರುದ್ಧ ಈ ರೀತಿಯ ಆರೋಪಗಳು ಬಂದಿರುವ ಹಿನ್ನೆಲೆಯಲ್ಲಿ ಸಹಕಾರ ಸಂಘಗಳ ಉಪ ನಿಬಂಧಕರು ಮತ್ತು ಸಂಘಗಳ ಜಿಲ್ಲಾ ನೊಂದಣಾಧಿಕಾರಿಗಳು ತನಿಖೆ ನಡೆಸಬೇಕೆಂದು ಜೂನ್ 20 ರಂದು ಸಹಕಾರ ಇಲಾಖೆಯ ಅಧೀನ ಕಾರ್ಯದರ್ಶಿ ರಾಘವನ್ ಆರ್‌.ವಿ ಆದೇಶಿಸಿದ್ದಾರೆ.

ಕಳೆದ ತಿಂಗಳು ಆರ್‌ಟಿಐ ಕಾರ್ಯಕರ್ತನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಷಡಾಕ್ಷರಿಯವರ ವಿರುದ್ಧ ಸಾಗದಲ್ಲಿ ಎಫ್‌ಐಆರ್ ದಾಖಲಾಗಿದೆ. ಆ ಬೆನ್ನಲ್ಲೇ ಅವರ ಮೇಲೆ ಭ್ರಷ್ಟಾಚಾರದ ತನಿಖೆಗೆ ಆದೇಶ ನೀಡಲಾಗಿದೆ.

ಇದನ್ನೂ ಓದಿ: ಮರುಕಳಿಸಿದ ಸರ್ವಾಧಿಪತ್ಯದ ಅಪಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...