Homeಕರ್ನಾಟಕಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಮೇಲೆ ಅವ್ಯವ್ಯಹಾರಗಳ ಆರೋಪ: ತನಿಖೆಗೆ ಆದೇಶ

ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಮೇಲೆ ಅವ್ಯವ್ಯಹಾರಗಳ ಆರೋಪ: ತನಿಖೆಗೆ ಆದೇಶ

ಸಂಘದ ಯಾವುದೇ ಸಭೆಗಳಲ್ಲಿ ನಿರ್ಣಯ ಮಾಡದೇ 35.02 ಲಕ್ಷ ರೂ ಹಣ ವ್ಯಯಿಸಿ ಕಿಯಾ ಕಾರ್ನಿವಾಲ್ ಎಂಬ ಐಷರಾಮಿ ಕಾರು ಖರೀದಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

- Advertisement -
- Advertisement -

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅವ್ಯವಹಾರ, ಭ್ರಷ್ಟಾಚಾರ, ಹಣ ದುರುಪಯೋಗ ಹಾಗೂ ಇತರ ಚಟುವಟಿಕೆಗಳ ವಿಚಾರಣೆ ನಡೆಸಿ ಸಂಘಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಬೇಕೆಂದು ಸಹಕಾರ ಇಲಾಖೆಯ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.

ವಾರ್ಷಿಕ ರೂ 20 ಕೋಟಿಗೂ ಅಧಿಕ ವಹಿವಾಟು ನಡೆಸುವ, ರಾಜ್ಯದ 5 ಲಕ್ಷಕ್ಕೂ ಹೆಚ್ಚು ಎಲ್ಲಾ ವೃಂದದ ರಾಜ್ಯ ಸರಕಾರಿ ನೌಕರರು ಸದಸ್ಯರಾಗಿರುವ ಮತ್ತು ಕರ್ನಾಟಕ ಸರಕಾರದಿಂದ ಪ್ರತಿ ವರ್ಷ ಕೋಟ್ಯಾಂತರ ರೂ ಸಹಾಯಾನುದಾನ ಪಡೆಯುತ್ತಿರುವ ಕರ್ನಾಟಕ ಸಂಘಗಳ ನೊಂದಣಿ ಅದಿನಿಯಮ 1960 ರಡಿ ನೊಂದಾಯಿತ ಹಾಗು ಸರಕಾರದಿಂದ ಮಾನ್ಯತೆ ಪಡೆದ ಸಂಘ ಆಗಿರುವ, ‘ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಕಬ್ಬನ್ ಉದ್ಯಾನವನ, ಬೆಂಗಳೂರು’ ಸಂಘವು, ಆದಾಯ ತೆರಿಗೆ ಕಾಯ್ದೆ 1961, ಕರ್ನಾಟಕ ಮುನಿಸಿಪಲ್ ಕಾಯ್ದೆ 1964, ಭಾರತೀಯ ದಂಡ ಸಂಹಿತೆ 1860, ಕರ್ನಾಟಕ ಸಂಘಗಳ ನೊಂದಣಿ ಆದಿನಿಯಮ 1960, ಕರ್ನಾಟಕ ನಾಗರೀಕ ಸೇವಾ ನಿಯಮಗಳು, ಸಂಘದ ಬೈಲಾ ನಿಯಮ ಉಲ್ಲಂಘಿಸಿ ತೆರಿಗೆಗಳ್ಳತನ ದಂಥಹ ಗಂಭೀರ ಸ್ವರೂಪದ ಅರ್ಥಿಕ ಅಪರಾಧಗಳು, ಭ್ರಷ್ಟಾಚಾರ, ಹಣ ದುರುಪಯೋಗ, ವಂಚನೆ, ಅವ್ಯವಸ್ಥಿತ ವ್ಯವಸ್ಥಾಪನೆ & ಕಾರ್ಯ ನಿರ್ವಹಣೆಯಂಥಹ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ನಿರತವಾಗಿದೆ ಎಂದು ಐವರು ಸರ್ಕಾರಿ ನೌಕರರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಈ ತಿಂಗಳ ಆರಂಭದಲ್ಲಿ ದೂರು ನೀಡಿದ್ದರು.

ಈ ಹಿಂದೆಯೇ ಸಂಘದ ಸದಸ್ಯರು, ಪದಾಧಿಕಾರಿಗಳು ಸೂಕ್ತ ದಾಖಲೆಗಳೊಂದಿಗೆ ಸಂಘಗಳ ನೊಂದಣಾಧಿಕಾರಿಗಳು, ನಾಲ್ಕನೆ ವಲಯ, ಬೆಂಗಳೂರು ನಗರ ಜಿಲ್ಲೆ, ಮಲ್ಲೇಶ್ವರಂ, ಬೆಂಗಳೂರು ಇವರಿಗೆ ದಿನಾಂಕ 24.10.2020, 30.12.2020, 24/02/2022 ಮತ್ತು ವಿವಿದ ದಿನಾಂಕಗಳಲ್ಲಿ ಈ ಬಗ್ಗೆ ದೂರು ಸಲ್ಲಿಸಿ ಶಾಸನಾತ್ಮಕ ವಿಚಾರಣೆ ಜರುಗಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಕೋರಲಾಗಿದ್ದರೂ ಯಾವುದೇ ಕ್ರಮ ಆಗಿರುವುದಿಲ್ಲ. ಸರಕಾರದ ವಿವಿಧ ಪ್ರಾಧಿಕಾರಿಗಳಿಗೆ ಸಲ್ಲಿಸಿದ ದೂರಿಗೂ ಕ್ರಮ ಆಗಿರುವುದಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹೀಗಾಗಿ ಸಂಘದಲ್ಲಿನ ಕಾನೂನು ಬಾಹಿರ ಚಟುವಟಿಕೆಗಳು, ಅರ್ಥಿಕ ಅಪರಾಧಗಳು, ಅಪ್ರಜಾಸತ್ತಾತ್ಮಕ, ನಿರಂಕುಶಾಡಳಿತ ಮತ್ತು  ಅವ್ಯವಸ್ಥಿತ ಕಾರ್ಯ ನಿರ್ವಹಣೆ ಮುಂದುವರೆದಿದೆ. ಅರ್ಥಿಕ ಅಪರಾಧ, ಭಷ್ಟಾಚಾರ, ಹಣ ದುರುಪಯೋಗ, ವಂಚನೆ ಮೂಲಕ ಸರಕಾರದ ಬೊಕ್ಕಸಕ್ಕೆ ಮತ್ತು ಸಂಘಕ್ಕೆ ಹಾನಿ ಉಂಟು ಮಾಡಿದ್ದಲ್ಲದೇ, ಖೊಟ್ಟಿ ದಾಖಲೆ ಸೃಷ್ಟಿಸಿ ಸರಕಾರಕ್ಕೆ ನೀಡಿದ ಸುಳ್ಳು ಮಾಹಿತಿ ಆಧರಿಸಿ ಹೊರಡಿಸಲ್ಪಟ್ಟ ಸರಕಾರಿ ಆದೇಶದಿಂದ ರಾಜ್ಯದ 3 ಲಕ್ಷಕ್ಕೂ ಹೆಚ್ಚಿನ ಸಂಘದ ಸದಸ್ಯರಿಗೆ ಪ್ರತಿ ವರ್ಷ 3 ಕೋಟಿಗೂ ಅಧಿಕ ಅರ್ಥಿಕ ನಷ್ಟ ಉಂಟು ಮಾಡಿರುವ ರಾಜ್ಯಾಧ್ಯಕ್ಷರ ವಿರುದ್ಧ ಸೂಕ್ತ ಕಾನೂನುಗಳಡಿ ಕ್ರಮ ಕೈಗೊಂಡು ಸದಸ್ಯರ ಸಾಮಾನ್ಯ ಹಿತಾಸಕ್ತಿ ಕಾಪಾಡಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ. ಅದರೊಟ್ಟಿಗೆ ಮೇಲ್ನೋಟಕ್ಕೆ ಸಾಬೀತಾಗುವಂಥಹ 5 ಪ್ರಮುಖ ಸಾಕ್ಷ್ಯ ಪುರಾವೆಗಳನ್ನು ದೂರಿನೊಂದಿಗೆ ಲಗತ್ತಿಸಲಾಗಿದೆ.

ಸಂಘದ ಅಧ್ಯಕ್ಷರು ಸಂಘದ ಸದಸ್ಯರಲ್ಲದವರಿಂದ ರೂ 83 ಲಕ್ಷಕ್ಕೂ ಅಧಿಕ ಹಣವನ್ನು ಜಾಹೀರಾತು ರೂಪದಲ್ಲಿ ಸಂಗ್ರಹಿಸಿದ್ದಾರೆ. ಆದರೆ ಆ ಹಣಕ್ಕೆ ಆದಾಯ ತೆರಿಗೆ ಪಾವತಿಸಿಲ್ಲ. ಸರ್ಕಾರದಿಂದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 2 ಕೋಟಿ ರೂ ಅನುದಾನ ಪಡೆಯಲಾಗಿದೆ ಮತ್ತು ಜಾಹೀರಾತಿನಿಂದ 1 ಕೋಟಿ ರೂ ಸಂಗ್ರಹಿಸಲಾಗಿದೆ. ಆದರೆ ಸಂಘದ ಖಾತೆಗೆ 55,95,000 ರೂ ಗಳನ್ನು ಮಾತ್ರ ಹಾಕಿದ್ದು ಉಳಿದ ಹಣವನ್ನು ಹಾಕಿಲ್ಲ. ಅಲ್ಲದೇ ಸಂಘದ ಯಾವುದೇ ಸಭೆಗಳಲ್ಲಿ ನಿರ್ಣಯ ಮಾಡದೇ 35.02 ಲಕ್ಷ ರೂ ಹಣ ವ್ಯಯಿಸಿ ಕಿಯಾ ಕಾರ್ನಿವಾಲ್ ಎಂಬ ಐಷರಾಮಿ ಕಾರು ಖರೀದಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಖೊಟ್ಟಿ ದಾಖಲೆ ಸೃಷ್ಟಿಸಿ ಸರ್ಕಾರದಿಂದ ಸದಸ್ಯರ ಸದಸ್ಯತ್ವ ಶುಲ್ಕವನ್ನು 100 ರೂ ನಿಂದ 200 ರೂಗೆ ಏರಿಸುವಂತೆ ಆದೇಶ ಹೊರಡಿಸಲಾಗಿದೆ. ಆ ಮೂಲಕ ಸರ್ವಸದಸ್ಯರ ಮಹಾಸಭೆ ನಡೆಸದೇ ಸದಸ್ಯತ್ವ ಶುಲ್ಕ ಹೆಚ್ಚಿಸುವ ಮೂಲಕ ಸಂಘದ ಬೈಲಾವನ್ನು ಉಲ್ಲಂಘಿಸಲಾಗಿದೆ. ಸಂಘದ ಅಧ್ಯಕ್ಷರಿಗೆ ಶಿವಮೊಗ್ಗದಲ್ಲಿ ವಾಸಕ್ಕೆ ಮನೆ ಪಡೆದಿದ್ದರೂ ಸಹ ಬೆಂಗಳೂರಿನಲ್ಲಿ ಸರ್ಕಾರಿ ವಸತಿಗೃಹದಲ್ಲಿನ ಎರಡು ಮನೆಗಳನ್ನು ಒಂದೆಂದು ತೋರಿಸಿ ಬಾಡಿಗೆಗೆ ಪಡೆಯಲಾಗಿದೆ. ಇದಕ್ಕೆ ಸಂಘದಿಂದಲೇ ಬಾಡಿಗೆ ಕಟ್ಟಲಾಗುತ್ತಿದೆ. ಈ ಮೂಲಕ ಕಾನೂನು ಉಲ್ಲಂಘಿಸಲಾಗಿದೆ. ಅಲ್ಲದೇ ಕೋವಿಡ್ ಸಾಂಕ್ರಾಮಿಕ ಇದ್ದಾಗಲೂ ಕಾನೂನುಬಾಹಿರವಾಗಿ 300ಕ್ಕೂ ಅಧಿಕ ಸಂಘದ ಪರಿಷತ್ ಸದಸ್ಯರು ಸಭೆ ಸೇರಿ ಬೈಲಾಗಿ ತಿದ್ದುಪಡಿ ತಂದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್ ಷಡಾಕ್ಷರಿಯವರ ವಿರುದ್ಧ ಈ ರೀತಿಯ ಆರೋಪಗಳು ಬಂದಿರುವ ಹಿನ್ನೆಲೆಯಲ್ಲಿ ಸಹಕಾರ ಸಂಘಗಳ ಉಪ ನಿಬಂಧಕರು ಮತ್ತು ಸಂಘಗಳ ಜಿಲ್ಲಾ ನೊಂದಣಾಧಿಕಾರಿಗಳು ತನಿಖೆ ನಡೆಸಬೇಕೆಂದು ಜೂನ್ 20 ರಂದು ಸಹಕಾರ ಇಲಾಖೆಯ ಅಧೀನ ಕಾರ್ಯದರ್ಶಿ ರಾಘವನ್ ಆರ್‌.ವಿ ಆದೇಶಿಸಿದ್ದಾರೆ.

ಕಳೆದ ತಿಂಗಳು ಆರ್‌ಟಿಐ ಕಾರ್ಯಕರ್ತನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಷಡಾಕ್ಷರಿಯವರ ವಿರುದ್ಧ ಸಾಗದಲ್ಲಿ ಎಫ್‌ಐಆರ್ ದಾಖಲಾಗಿದೆ. ಆ ಬೆನ್ನಲ್ಲೇ ಅವರ ಮೇಲೆ ಭ್ರಷ್ಟಾಚಾರದ ತನಿಖೆಗೆ ಆದೇಶ ನೀಡಲಾಗಿದೆ.

ಇದನ್ನೂ ಓದಿ: ಮರುಕಳಿಸಿದ ಸರ್ವಾಧಿಪತ್ಯದ ಅಪಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...