Homeಮುಖಪುಟಸರ್ಕಾರಿ ಫ್ಯಾಕ್ಟ್‌ಚೆಕ್‌: ಐಟಿ ನಿಯಮಗಳ ತಿದ್ದುಪಡಿಗೆ ಪ್ರತಿಪಕ್ಷಗಳ ಆಕ್ರೋಶ

ಸರ್ಕಾರಿ ಫ್ಯಾಕ್ಟ್‌ಚೆಕ್‌: ಐಟಿ ನಿಯಮಗಳ ತಿದ್ದುಪಡಿಗೆ ಪ್ರತಿಪಕ್ಷಗಳ ಆಕ್ರೋಶ

- Advertisement -
- Advertisement -

ಸುಳ್ಳು ಸುದ್ದಿಗಳ ಪತ್ತೆಗಾಗಿ ಹೊಸ ಫ್ಯಾಕ್ಟ್‌ಚೆಕ್ ಸಂಸ್ಥೆ ಸ್ಥಾಪಿಸುವುದಾಗಿ ಕೇಂದ್ರ ಸರ್ಕಾರ ನಿರ್ಧರಿಸಿರುವುದು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ. “ಬಿಜೆಪಿಗಿರುವ ತೀವ್ರತರನಾದ ಅಭದ್ರತೆಯನ್ನು ಇದು ತೋರಿಸುತ್ತದೆ” ಎಂದು ಪ್ರತಿಪಕ್ಷಗಳು ಟೀಕಿಸಿರುವುದಾಗಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಸರ್ಕಾರದ ಫ್ಯಾಕ್ಟ್‌ಚೆಕ್‌ ಸಂಸ್ಥೆಯು ಯಾವುದನ್ನು ಫೇಕ್‌ ಎಂದು ಗುರುತಿಸುತ್ತದೆಯೋ ಅದನ್ನು ನಿರ್ದಾಕ್ಷಿಣ್ಯವಾಗಿ ಸಾಮಾಜಿಕ ಮಾಧ್ಯಮಗಳಿಂದ ತೆಗೆದುಹಾಕುವ ಕ್ರಮವನ್ನು ಸರ್ಕಾರ ಜರುಗಿಸಿದೆ.

2021 ರ ಮಾಹಿತಿ ತಂತ್ರಜ್ಞಾನ ನಿಯಮಗಳಿಗೆ ತಿದ್ದುಪಡಿ ತಂದು ಫ್ಯಾಕ್ಟ್‌ಚೆಕ್‌ ಸಂಸ್ಥೆಯನ್ನು ರಚಿಸಲು ಮುಂದಾಗಿದೆ.

ಕಾಂಗ್ರೆಸ್ ಸಂವಹನ ಮುಖ್ಯಸ್ಥ ಜೈರಾಮ್ ರಮೇಶ್ ಶುಕ್ರವಾರ ಪ್ರತಿಕ್ರಿಯಿಸಿ, “ಮೋದಿ ಸರ್ಕಾರ ಈ ಕ್ರಮವನ್ನು ಹಿಂತೆಗೆದುಕೊಳ್ಳಬೇಕು. ಆರ್‌ಎಸ್‌ಎಸ್ ಜೊತೆಯಲ್ಲಿ ಸೇರಿಕೊಂಡು ಭಾರತದಲ್ಲಿ ನಕಲಿ ಸೃಷ್ಟಿಸುತ್ತಿರುವ ಅತಿದೊಡ್ಡ ನಿರ್ಮಾಪಕ ಬಿಜೆಪಿಯಾಗಿದೆ” ಎಂದು ಟೀಕಿಸಿದ್ದಾರೆ.

ಮತ್ತೊಬ್ಬ ಕಾಂಗ್ರೆಸ್ ನಾಯಕ ಪವನ್ ಖೇರಾ ಪ್ರತಿಕ್ರಿಯಿಸಿ, “ಸರ್ಕಾರವೇ ನ್ಯಾಯಾಧೀಶರಂತೆ ವರ್ತಿಸುತ್ತಿದೆ, ತೀರ್ಪು ನೀಡುತ್ತಿದೆ, ಶಿಕ್ಷಿಸುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಈ ಸರ್ಕಾರವು ಭಿನ್ನಾಭಿಪ್ರಾಯಗಳಿಗೆ ಹೆದರುತ್ತದೆ. ಪ್ರಶ್ನೆ ಕೇಳುವ ಮೂಲಕ, ಸತ್ಯಗಳನ್ನು ನುಡಿದು ಮೂಲೆಗುಂಪು ಮಾಡುವ ಯಾರಿಗಾದರೂ ಇವರು ಭಯಪಡುತ್ತಾರೆ. ಇದು ನಿಯಮವಾಗದಂತೆ ನಾವು ನಮ್ಮ ಎಲ್ಲಾ ಶಕ್ತಿಯನ್ನು ಮೀರಿ ವಿರೋಧಿಸಬೇಕು” ಎಂದಿದ್ದಾರೆ.

ಮಾಹಿತಿ ಮತ್ತು ಪ್ರಸಾರ ಖಾತೆಯ ಮಾಜಿ ಸಚಿವ ಮನೀಶ್ ತಿವಾರಿ ಪ್ರತಿಕ್ರಿಯಿಸಿ, “ತಮ್ಮ ಬಗೆಗಿನ ಸುದ್ದಿಗಳನ್ನು ಪರಿಶೀಲಿಸಲು ಸಂಸ್ಥೆಯನ್ನು ಸ್ಥಾಪಿಸುವ ಕೇಂದ್ರದ ನಿರ್ಧಾರವು ಸೆನ್ಸಾರ್ಶಿಪ್ ವಿಧಿಸುವುದಕ್ಕೆ ಸಮಾನವಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಯಾವ ಟೀಕೆ ನಕಲಿ ಮತ್ತು ಯಾವುದು ಅಸಲಿ ಎಂಬುದಕ್ಕೆ ಶ್ರೇಯಾ ಸಿಂಘಾಲ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನೀಡಿರುವ ಸುರಕ್ಷತಾ ಕ್ರಮಗಳನ್ನು ಸರ್ಕಾರದ ಅನುಸರಿಸದೆ, ಯಾವುದೇ ಮೇಲ್ಮನವಿ ಇಲ್ಲದೆಯೇ ಸರ್ಕಾರ ಅಂತಿಮ ತೀರ್ಪುಗಾರನಾಗುತ್ತಿರುವುದು ವಿಲಕ್ಷಣವಾಗಿದೆ” ಎಂದು ವಿರೋಧಿಸಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್ ನೆಪದಲ್ಲಿ ಸತ್ಯಕ್ಕೆ ಮೂಗುದಾರ; ಇದು ಕೇಂದ್ರ ಸರ್ಕಾರದ ಹೊಸತಂತ್ರ

ಐಟಿ ನಿಯಮಗಳಿಗೆ ಮಾಡಿರುವ ತಿದ್ದುಪಡಿಗಳನ್ನು ಹಿಂಪಡೆಯಬೇಕು ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಒತ್ತಾಯಿಸಿದೆ. ಇದು ಸಂಪೂರ್ಣ ಪ್ರಜಾಪ್ರಭುತ್ವ ವಿರೋಧಿ ಮತ್ತು ಸ್ವೀಕಾರಾರ್ಹವಲ್ಲ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಜನತಾ ದಳದ ಸಂಸದ ಮನೋಜ್ ಝಾ ಮಾತನಾಡಿ, “ಪ್ರಜಾಸತ್ತಾತ್ಮಕವಲ್ಲದ ಯಾವುದರ ಬಗ್ಗೆಯೂ ಸರ್ಕಾರ ಜಾಗರೂಕರಾಗಿರಬೇಕು. ನಿಮಗೆ ಅಸಹ್ಯಕರವಾದ ಯಾವುದನ್ನಾದರೂ ತೆಗೆದುಹಾಕಲು ನೀವು ಜನರನ್ನು ಒತ್ತಾಯಿಸುತ್ತೀರಾ?” ಎಂದು ಪ್ರಶ್ನಿಸಿದ್ದಾರೆ.

ತೃಣಮೂಲ ಕಾಂಗ್ರೆಸ್ ನಾಯಕ ಡೆರೆಕ್ ಒ’ಬ್ರೇನ್ ಪ್ರತಿಕ್ರಿಯಿಸಿ, “ಬಿಜೆಪಿಯು ನಕಲಿ ಸುದ್ದಿಗಳನ್ನು ಸೃಷ್ಟಿಸುವ ಮಾಸ್ಟರ್. ಆದರೆ ಈಗ ವಿಷಯಗಳನ್ನು ನಿಯಂತ್ರಿಸಲು ಬಯಸುತ್ತಿದೆ” ಎಂದು ಕುಟುಕಿದ್ದಾರೆ.

ಆದರೆ ಪ್ರತಿಪಕ್ಷಗಳ ಟೀಕೆಯನ್ನು ತಳ್ಳಿಹಾಕಿದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, “ಪ್ರತಿಪಕ್ಷಗಳು ತಪ್ಪು ಮಾಹಿತಿಗಳನ್ನು ಹರಡುತ್ತಿವೆ” ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...