Homeಮುಖಪುಟಸರ್ಕಾರಿ ಫ್ಯಾಕ್ಟ್‌ಚೆಕ್‌: ಐಟಿ ನಿಯಮಗಳ ತಿದ್ದುಪಡಿಗೆ ಪ್ರತಿಪಕ್ಷಗಳ ಆಕ್ರೋಶ

ಸರ್ಕಾರಿ ಫ್ಯಾಕ್ಟ್‌ಚೆಕ್‌: ಐಟಿ ನಿಯಮಗಳ ತಿದ್ದುಪಡಿಗೆ ಪ್ರತಿಪಕ್ಷಗಳ ಆಕ್ರೋಶ

- Advertisement -
- Advertisement -

ಸುಳ್ಳು ಸುದ್ದಿಗಳ ಪತ್ತೆಗಾಗಿ ಹೊಸ ಫ್ಯಾಕ್ಟ್‌ಚೆಕ್ ಸಂಸ್ಥೆ ಸ್ಥಾಪಿಸುವುದಾಗಿ ಕೇಂದ್ರ ಸರ್ಕಾರ ನಿರ್ಧರಿಸಿರುವುದು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ. “ಬಿಜೆಪಿಗಿರುವ ತೀವ್ರತರನಾದ ಅಭದ್ರತೆಯನ್ನು ಇದು ತೋರಿಸುತ್ತದೆ” ಎಂದು ಪ್ರತಿಪಕ್ಷಗಳು ಟೀಕಿಸಿರುವುದಾಗಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಸರ್ಕಾರದ ಫ್ಯಾಕ್ಟ್‌ಚೆಕ್‌ ಸಂಸ್ಥೆಯು ಯಾವುದನ್ನು ಫೇಕ್‌ ಎಂದು ಗುರುತಿಸುತ್ತದೆಯೋ ಅದನ್ನು ನಿರ್ದಾಕ್ಷಿಣ್ಯವಾಗಿ ಸಾಮಾಜಿಕ ಮಾಧ್ಯಮಗಳಿಂದ ತೆಗೆದುಹಾಕುವ ಕ್ರಮವನ್ನು ಸರ್ಕಾರ ಜರುಗಿಸಿದೆ.

2021 ರ ಮಾಹಿತಿ ತಂತ್ರಜ್ಞಾನ ನಿಯಮಗಳಿಗೆ ತಿದ್ದುಪಡಿ ತಂದು ಫ್ಯಾಕ್ಟ್‌ಚೆಕ್‌ ಸಂಸ್ಥೆಯನ್ನು ರಚಿಸಲು ಮುಂದಾಗಿದೆ.

ಕಾಂಗ್ರೆಸ್ ಸಂವಹನ ಮುಖ್ಯಸ್ಥ ಜೈರಾಮ್ ರಮೇಶ್ ಶುಕ್ರವಾರ ಪ್ರತಿಕ್ರಿಯಿಸಿ, “ಮೋದಿ ಸರ್ಕಾರ ಈ ಕ್ರಮವನ್ನು ಹಿಂತೆಗೆದುಕೊಳ್ಳಬೇಕು. ಆರ್‌ಎಸ್‌ಎಸ್ ಜೊತೆಯಲ್ಲಿ ಸೇರಿಕೊಂಡು ಭಾರತದಲ್ಲಿ ನಕಲಿ ಸೃಷ್ಟಿಸುತ್ತಿರುವ ಅತಿದೊಡ್ಡ ನಿರ್ಮಾಪಕ ಬಿಜೆಪಿಯಾಗಿದೆ” ಎಂದು ಟೀಕಿಸಿದ್ದಾರೆ.

ಮತ್ತೊಬ್ಬ ಕಾಂಗ್ರೆಸ್ ನಾಯಕ ಪವನ್ ಖೇರಾ ಪ್ರತಿಕ್ರಿಯಿಸಿ, “ಸರ್ಕಾರವೇ ನ್ಯಾಯಾಧೀಶರಂತೆ ವರ್ತಿಸುತ್ತಿದೆ, ತೀರ್ಪು ನೀಡುತ್ತಿದೆ, ಶಿಕ್ಷಿಸುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಈ ಸರ್ಕಾರವು ಭಿನ್ನಾಭಿಪ್ರಾಯಗಳಿಗೆ ಹೆದರುತ್ತದೆ. ಪ್ರಶ್ನೆ ಕೇಳುವ ಮೂಲಕ, ಸತ್ಯಗಳನ್ನು ನುಡಿದು ಮೂಲೆಗುಂಪು ಮಾಡುವ ಯಾರಿಗಾದರೂ ಇವರು ಭಯಪಡುತ್ತಾರೆ. ಇದು ನಿಯಮವಾಗದಂತೆ ನಾವು ನಮ್ಮ ಎಲ್ಲಾ ಶಕ್ತಿಯನ್ನು ಮೀರಿ ವಿರೋಧಿಸಬೇಕು” ಎಂದಿದ್ದಾರೆ.

ಮಾಹಿತಿ ಮತ್ತು ಪ್ರಸಾರ ಖಾತೆಯ ಮಾಜಿ ಸಚಿವ ಮನೀಶ್ ತಿವಾರಿ ಪ್ರತಿಕ್ರಿಯಿಸಿ, “ತಮ್ಮ ಬಗೆಗಿನ ಸುದ್ದಿಗಳನ್ನು ಪರಿಶೀಲಿಸಲು ಸಂಸ್ಥೆಯನ್ನು ಸ್ಥಾಪಿಸುವ ಕೇಂದ್ರದ ನಿರ್ಧಾರವು ಸೆನ್ಸಾರ್ಶಿಪ್ ವಿಧಿಸುವುದಕ್ಕೆ ಸಮಾನವಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಯಾವ ಟೀಕೆ ನಕಲಿ ಮತ್ತು ಯಾವುದು ಅಸಲಿ ಎಂಬುದಕ್ಕೆ ಶ್ರೇಯಾ ಸಿಂಘಾಲ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನೀಡಿರುವ ಸುರಕ್ಷತಾ ಕ್ರಮಗಳನ್ನು ಸರ್ಕಾರದ ಅನುಸರಿಸದೆ, ಯಾವುದೇ ಮೇಲ್ಮನವಿ ಇಲ್ಲದೆಯೇ ಸರ್ಕಾರ ಅಂತಿಮ ತೀರ್ಪುಗಾರನಾಗುತ್ತಿರುವುದು ವಿಲಕ್ಷಣವಾಗಿದೆ” ಎಂದು ವಿರೋಧಿಸಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್ ನೆಪದಲ್ಲಿ ಸತ್ಯಕ್ಕೆ ಮೂಗುದಾರ; ಇದು ಕೇಂದ್ರ ಸರ್ಕಾರದ ಹೊಸತಂತ್ರ

ಐಟಿ ನಿಯಮಗಳಿಗೆ ಮಾಡಿರುವ ತಿದ್ದುಪಡಿಗಳನ್ನು ಹಿಂಪಡೆಯಬೇಕು ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಒತ್ತಾಯಿಸಿದೆ. ಇದು ಸಂಪೂರ್ಣ ಪ್ರಜಾಪ್ರಭುತ್ವ ವಿರೋಧಿ ಮತ್ತು ಸ್ವೀಕಾರಾರ್ಹವಲ್ಲ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಜನತಾ ದಳದ ಸಂಸದ ಮನೋಜ್ ಝಾ ಮಾತನಾಡಿ, “ಪ್ರಜಾಸತ್ತಾತ್ಮಕವಲ್ಲದ ಯಾವುದರ ಬಗ್ಗೆಯೂ ಸರ್ಕಾರ ಜಾಗರೂಕರಾಗಿರಬೇಕು. ನಿಮಗೆ ಅಸಹ್ಯಕರವಾದ ಯಾವುದನ್ನಾದರೂ ತೆಗೆದುಹಾಕಲು ನೀವು ಜನರನ್ನು ಒತ್ತಾಯಿಸುತ್ತೀರಾ?” ಎಂದು ಪ್ರಶ್ನಿಸಿದ್ದಾರೆ.

ತೃಣಮೂಲ ಕಾಂಗ್ರೆಸ್ ನಾಯಕ ಡೆರೆಕ್ ಒ’ಬ್ರೇನ್ ಪ್ರತಿಕ್ರಿಯಿಸಿ, “ಬಿಜೆಪಿಯು ನಕಲಿ ಸುದ್ದಿಗಳನ್ನು ಸೃಷ್ಟಿಸುವ ಮಾಸ್ಟರ್. ಆದರೆ ಈಗ ವಿಷಯಗಳನ್ನು ನಿಯಂತ್ರಿಸಲು ಬಯಸುತ್ತಿದೆ” ಎಂದು ಕುಟುಕಿದ್ದಾರೆ.

ಆದರೆ ಪ್ರತಿಪಕ್ಷಗಳ ಟೀಕೆಯನ್ನು ತಳ್ಳಿಹಾಕಿದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, “ಪ್ರತಿಪಕ್ಷಗಳು ತಪ್ಪು ಮಾಹಿತಿಗಳನ್ನು ಹರಡುತ್ತಿವೆ” ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...