Homeಮುಖಪುಟಹಿಂಸಾಚಾರ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ: ಜೆಪಿ ನಡ್ಡಾಗೆ ಮಣಿಪುರ ಬಿಜೆಪಿ ಪತ್ರ

ಹಿಂಸಾಚಾರ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ: ಜೆಪಿ ನಡ್ಡಾಗೆ ಮಣಿಪುರ ಬಿಜೆಪಿ ಪತ್ರ

- Advertisement -
- Advertisement -

”ರಾಜ್ಯದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರವನ್ನು ನಿಯಂತ್ರಿಸಲು ಸರ್ಕಾರ ವಿಫಲವಾಗಿದೆ. ಜನರು ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ” ಎಂದು ಮಣಿಪುರ ರಾಜ್ಯ ಬಿಜೆಪಿ ಘಟಕವು ತನ್ನ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರ ಬರೆದಿದೆ.

ಈ ಪತ್ರಕ್ಕೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಶಾರದಾ ದೇವಿ, ಉಪಾಧ್ಯಕ್ಷ ಚಿದಾನಂದ ಸಿಂಗ್‌ ಹಾಗೂ ಇತರ ಆರು ಜನರು ಸಹಿ ಹಾಕಿದ್ದಾರೆ. ‘ಸಾರ್ವಜನಿಕರ ಆಕ್ರೋಶ ಹಾಗೂ ಪ್ರತಿಭಟನೆಗಳು ಸುದೀರ್ಘ ಕ್ಷೋಭೆಯನ್ನು ನಿಯಂತ್ರಿಸಲು ಸರ್ಕಾರ ವಿಫಲವಾಗಿದೆ. ಜನರ ಆಕ್ರೋಶ ಪಕ್ಷದ ಕಡೆಗೆ ನಿಧಾನವಾಗಿ ತಿರುಗುತ್ತಿದೆ’ ಎಂದು ಉಲ್ಲೇಖಿಸಲಾಗಿದೆ.

355ನೇ ವಿಧಿಯನ್ನು ಹಿಂತೆಗೆದುಕೊಳ್ಳಬೇಕು ಮತ್ತು ಜನರ ವಿಶ್ವಾಸವನ್ನು ಪುನಃಸ್ಥಾಪಿಸಲು ಮುಖ್ಯಮಂತ್ರಿಗೆ ಏಕೀಕೃತ ಆದೇಶವನ್ನು ಮರುಸ್ಥಾಪಿಸುವಂತೆ ತಮ್ಮ ಪತ್ರದಲ್ಲಿ, ಬಿಜೆಪಿ ನಾಯಕರು ನಡ್ಡಾ ಅವರನ್ನು ಕೇಳಿಕೊಂಡಿದ್ದಾರೆ.

”ರಾಷ್ಟ್ರೀಯ ಹೆದ್ದಾರಿಗಳೂ ಸೇರಿದಂತೆ ಎಲ್ಲೆಡೆ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಹಾಗೂ ಗಲಭೆ ಪೂರ್ವ ಸ್ಥಿತಿಯನ್ನು ನಿರ್ಮಿಸುವಂತೆ ಜನರು ಒತ್ತಾಯಿಸುತ್ತಿದ್ದಾರೆ ಎಂಬುದನ್ನು ಪತ್ರದಲ್ಲಿ ಒತ್ತಿ ಹೇಳಲಾಗಿದೆ.

ಹಿಂಸಾಚಾರದಿಂದಾಗಿ ಬೇರೆ ಕಡೆಗೆ ಸ್ಥಳಾಂತರಗೊಂಡಿರುವ ಜನರಿಗೆ ತಕ್ಷಣವೇ ಅವರವರ ನೈಜ ವಾಸಸ್ಮಳಗಳಲ್ಲಿ ಆಶ್ರಯದ ವ್ಯವಸ್ಥೆ ಮಾಡಬೇಕು. ನಮ್ಮ ಸರ್ಕಾರ ರಾಜ್ಯದಲ್ಲಿ ಸಹಜ ಸ್ಥಿತಿ ನಿರ್ಮಾಣ ಮಾಡಲು ಹಗಲು ರಾತ್ರಿ ಪ್ರಯತ್ನ ಮಾಡುತ್ತಿದೆ ಎಂಬುದು ಗೊತ್ತಿದೆ. ಅದೇರೀತಿ ಹೊಸ ಬೆಳವಣಿಗೆಗಳನ್ನು ನಿಭಾಯಿಸಲು ನಮ್ಮ ಪಕ್ಷದ ರಾಜ್ಯ ಘಟಕವೂ ಪ್ರಧಾನ ಪಾತ್ರ ವಹಿಸುತ್ತಿದೆ. ಎಂದು ನಮ್ಮ ಅವರಿಗೆ ತಿಳಿಸಿದೆ.

ಹಿಂಸಾಚಾರದಿಂದಾಗಿ ಮನೆಗಳನ್ನು ಕಳೆದುಕೊಂಡಿರುವವರಿಗೆ ಪರಿಹಾರ ನೀಡುವುದಾಗಿ ಮತ್ತು ತಮ್ಮವರನ್ನು ಕಳೆದುಕೊಂಡಿರುವ ಕುಟುಂಬದವರಿಗೆ ನೆರವು ಒದಗಿಸುವುದಾಗಿ ನೀಡಿರುವ ಭರವಸೆ ವಸಬೇಕು ಎಂದು ಆಗ್ರಹಿಸಿದೆ.

ಗಲಭೆಯಿಂದಾಗಿ ನಿಷ್ಕ್ರಿಯಗೊಂಡಿರುವ ನೆಲದ ಕಾನೂನುಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಮತ್ತು ಹಿಂಸಾಚಾರದಲ್ಲಿ ತೊಡಗಿದರೆ ಭಯೋತ್ಪಾದನಾ ಕೃತ್ಯವೆಂದು ಪರಿಗಣಿಸಬೇಕು ಎಂದೂ ಬೇಡಿಕೆ ಇಟ್ಟಿದೆ.

ರಾಜ್ಯ ಪಕ್ಷದ ಮುಖ್ಯಸ್ಥೆ ಎ ಶಾರದಾ ದೇವಿ ಅವರು, ”ತಮ್ಮ ವೃತ್ತಿ ಜೀವನದಲ್ಲಿ ಆಡಳಿತ ಪಕ್ಷದ ವಿರುದ್ಧ ಈ ರೀತಿಯ ಆಕ್ರಮಣ ಮತ್ತು ಹಗೆತನವನ್ನು ಕಂಡಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಮಹಿಳಾ ಮೀಸಲಾತಿ ಹೆಸರಲ್ಲಿ ಲಿಪ್‌ಸ್ಟಿಕ್ ಹಚ್ಚುವವರು ಸಂಸತ್ತಿಗೆ ಬರುತ್ತಾರೆ’: ಆರ್‌ಜೆಡಿ ನಾಯಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...