Homeಮುಖಪುಟಹಿಂಸಾಚಾರ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ: ಜೆಪಿ ನಡ್ಡಾಗೆ ಮಣಿಪುರ ಬಿಜೆಪಿ ಪತ್ರ

ಹಿಂಸಾಚಾರ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ: ಜೆಪಿ ನಡ್ಡಾಗೆ ಮಣಿಪುರ ಬಿಜೆಪಿ ಪತ್ರ

- Advertisement -
- Advertisement -

”ರಾಜ್ಯದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರವನ್ನು ನಿಯಂತ್ರಿಸಲು ಸರ್ಕಾರ ವಿಫಲವಾಗಿದೆ. ಜನರು ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ” ಎಂದು ಮಣಿಪುರ ರಾಜ್ಯ ಬಿಜೆಪಿ ಘಟಕವು ತನ್ನ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರ ಬರೆದಿದೆ.

ಈ ಪತ್ರಕ್ಕೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಶಾರದಾ ದೇವಿ, ಉಪಾಧ್ಯಕ್ಷ ಚಿದಾನಂದ ಸಿಂಗ್‌ ಹಾಗೂ ಇತರ ಆರು ಜನರು ಸಹಿ ಹಾಕಿದ್ದಾರೆ. ‘ಸಾರ್ವಜನಿಕರ ಆಕ್ರೋಶ ಹಾಗೂ ಪ್ರತಿಭಟನೆಗಳು ಸುದೀರ್ಘ ಕ್ಷೋಭೆಯನ್ನು ನಿಯಂತ್ರಿಸಲು ಸರ್ಕಾರ ವಿಫಲವಾಗಿದೆ. ಜನರ ಆಕ್ರೋಶ ಪಕ್ಷದ ಕಡೆಗೆ ನಿಧಾನವಾಗಿ ತಿರುಗುತ್ತಿದೆ’ ಎಂದು ಉಲ್ಲೇಖಿಸಲಾಗಿದೆ.

355ನೇ ವಿಧಿಯನ್ನು ಹಿಂತೆಗೆದುಕೊಳ್ಳಬೇಕು ಮತ್ತು ಜನರ ವಿಶ್ವಾಸವನ್ನು ಪುನಃಸ್ಥಾಪಿಸಲು ಮುಖ್ಯಮಂತ್ರಿಗೆ ಏಕೀಕೃತ ಆದೇಶವನ್ನು ಮರುಸ್ಥಾಪಿಸುವಂತೆ ತಮ್ಮ ಪತ್ರದಲ್ಲಿ, ಬಿಜೆಪಿ ನಾಯಕರು ನಡ್ಡಾ ಅವರನ್ನು ಕೇಳಿಕೊಂಡಿದ್ದಾರೆ.

”ರಾಷ್ಟ್ರೀಯ ಹೆದ್ದಾರಿಗಳೂ ಸೇರಿದಂತೆ ಎಲ್ಲೆಡೆ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಹಾಗೂ ಗಲಭೆ ಪೂರ್ವ ಸ್ಥಿತಿಯನ್ನು ನಿರ್ಮಿಸುವಂತೆ ಜನರು ಒತ್ತಾಯಿಸುತ್ತಿದ್ದಾರೆ ಎಂಬುದನ್ನು ಪತ್ರದಲ್ಲಿ ಒತ್ತಿ ಹೇಳಲಾಗಿದೆ.

ಹಿಂಸಾಚಾರದಿಂದಾಗಿ ಬೇರೆ ಕಡೆಗೆ ಸ್ಥಳಾಂತರಗೊಂಡಿರುವ ಜನರಿಗೆ ತಕ್ಷಣವೇ ಅವರವರ ನೈಜ ವಾಸಸ್ಮಳಗಳಲ್ಲಿ ಆಶ್ರಯದ ವ್ಯವಸ್ಥೆ ಮಾಡಬೇಕು. ನಮ್ಮ ಸರ್ಕಾರ ರಾಜ್ಯದಲ್ಲಿ ಸಹಜ ಸ್ಥಿತಿ ನಿರ್ಮಾಣ ಮಾಡಲು ಹಗಲು ರಾತ್ರಿ ಪ್ರಯತ್ನ ಮಾಡುತ್ತಿದೆ ಎಂಬುದು ಗೊತ್ತಿದೆ. ಅದೇರೀತಿ ಹೊಸ ಬೆಳವಣಿಗೆಗಳನ್ನು ನಿಭಾಯಿಸಲು ನಮ್ಮ ಪಕ್ಷದ ರಾಜ್ಯ ಘಟಕವೂ ಪ್ರಧಾನ ಪಾತ್ರ ವಹಿಸುತ್ತಿದೆ. ಎಂದು ನಮ್ಮ ಅವರಿಗೆ ತಿಳಿಸಿದೆ.

ಹಿಂಸಾಚಾರದಿಂದಾಗಿ ಮನೆಗಳನ್ನು ಕಳೆದುಕೊಂಡಿರುವವರಿಗೆ ಪರಿಹಾರ ನೀಡುವುದಾಗಿ ಮತ್ತು ತಮ್ಮವರನ್ನು ಕಳೆದುಕೊಂಡಿರುವ ಕುಟುಂಬದವರಿಗೆ ನೆರವು ಒದಗಿಸುವುದಾಗಿ ನೀಡಿರುವ ಭರವಸೆ ವಸಬೇಕು ಎಂದು ಆಗ್ರಹಿಸಿದೆ.

ಗಲಭೆಯಿಂದಾಗಿ ನಿಷ್ಕ್ರಿಯಗೊಂಡಿರುವ ನೆಲದ ಕಾನೂನುಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಮತ್ತು ಹಿಂಸಾಚಾರದಲ್ಲಿ ತೊಡಗಿದರೆ ಭಯೋತ್ಪಾದನಾ ಕೃತ್ಯವೆಂದು ಪರಿಗಣಿಸಬೇಕು ಎಂದೂ ಬೇಡಿಕೆ ಇಟ್ಟಿದೆ.

ರಾಜ್ಯ ಪಕ್ಷದ ಮುಖ್ಯಸ್ಥೆ ಎ ಶಾರದಾ ದೇವಿ ಅವರು, ”ತಮ್ಮ ವೃತ್ತಿ ಜೀವನದಲ್ಲಿ ಆಡಳಿತ ಪಕ್ಷದ ವಿರುದ್ಧ ಈ ರೀತಿಯ ಆಕ್ರಮಣ ಮತ್ತು ಹಗೆತನವನ್ನು ಕಂಡಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಮಹಿಳಾ ಮೀಸಲಾತಿ ಹೆಸರಲ್ಲಿ ಲಿಪ್‌ಸ್ಟಿಕ್ ಹಚ್ಚುವವರು ಸಂಸತ್ತಿಗೆ ಬರುತ್ತಾರೆ’: ಆರ್‌ಜೆಡಿ ನಾಯಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...