Homeಮುಖಪುಟಹಿಂಸಾಚಾರ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ: ಜೆಪಿ ನಡ್ಡಾಗೆ ಮಣಿಪುರ ಬಿಜೆಪಿ ಪತ್ರ

ಹಿಂಸಾಚಾರ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ: ಜೆಪಿ ನಡ್ಡಾಗೆ ಮಣಿಪುರ ಬಿಜೆಪಿ ಪತ್ರ

- Advertisement -
- Advertisement -

”ರಾಜ್ಯದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರವನ್ನು ನಿಯಂತ್ರಿಸಲು ಸರ್ಕಾರ ವಿಫಲವಾಗಿದೆ. ಜನರು ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ” ಎಂದು ಮಣಿಪುರ ರಾಜ್ಯ ಬಿಜೆಪಿ ಘಟಕವು ತನ್ನ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರ ಬರೆದಿದೆ.

ಈ ಪತ್ರಕ್ಕೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಶಾರದಾ ದೇವಿ, ಉಪಾಧ್ಯಕ್ಷ ಚಿದಾನಂದ ಸಿಂಗ್‌ ಹಾಗೂ ಇತರ ಆರು ಜನರು ಸಹಿ ಹಾಕಿದ್ದಾರೆ. ‘ಸಾರ್ವಜನಿಕರ ಆಕ್ರೋಶ ಹಾಗೂ ಪ್ರತಿಭಟನೆಗಳು ಸುದೀರ್ಘ ಕ್ಷೋಭೆಯನ್ನು ನಿಯಂತ್ರಿಸಲು ಸರ್ಕಾರ ವಿಫಲವಾಗಿದೆ. ಜನರ ಆಕ್ರೋಶ ಪಕ್ಷದ ಕಡೆಗೆ ನಿಧಾನವಾಗಿ ತಿರುಗುತ್ತಿದೆ’ ಎಂದು ಉಲ್ಲೇಖಿಸಲಾಗಿದೆ.

355ನೇ ವಿಧಿಯನ್ನು ಹಿಂತೆಗೆದುಕೊಳ್ಳಬೇಕು ಮತ್ತು ಜನರ ವಿಶ್ವಾಸವನ್ನು ಪುನಃಸ್ಥಾಪಿಸಲು ಮುಖ್ಯಮಂತ್ರಿಗೆ ಏಕೀಕೃತ ಆದೇಶವನ್ನು ಮರುಸ್ಥಾಪಿಸುವಂತೆ ತಮ್ಮ ಪತ್ರದಲ್ಲಿ, ಬಿಜೆಪಿ ನಾಯಕರು ನಡ್ಡಾ ಅವರನ್ನು ಕೇಳಿಕೊಂಡಿದ್ದಾರೆ.

”ರಾಷ್ಟ್ರೀಯ ಹೆದ್ದಾರಿಗಳೂ ಸೇರಿದಂತೆ ಎಲ್ಲೆಡೆ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಹಾಗೂ ಗಲಭೆ ಪೂರ್ವ ಸ್ಥಿತಿಯನ್ನು ನಿರ್ಮಿಸುವಂತೆ ಜನರು ಒತ್ತಾಯಿಸುತ್ತಿದ್ದಾರೆ ಎಂಬುದನ್ನು ಪತ್ರದಲ್ಲಿ ಒತ್ತಿ ಹೇಳಲಾಗಿದೆ.

ಹಿಂಸಾಚಾರದಿಂದಾಗಿ ಬೇರೆ ಕಡೆಗೆ ಸ್ಥಳಾಂತರಗೊಂಡಿರುವ ಜನರಿಗೆ ತಕ್ಷಣವೇ ಅವರವರ ನೈಜ ವಾಸಸ್ಮಳಗಳಲ್ಲಿ ಆಶ್ರಯದ ವ್ಯವಸ್ಥೆ ಮಾಡಬೇಕು. ನಮ್ಮ ಸರ್ಕಾರ ರಾಜ್ಯದಲ್ಲಿ ಸಹಜ ಸ್ಥಿತಿ ನಿರ್ಮಾಣ ಮಾಡಲು ಹಗಲು ರಾತ್ರಿ ಪ್ರಯತ್ನ ಮಾಡುತ್ತಿದೆ ಎಂಬುದು ಗೊತ್ತಿದೆ. ಅದೇರೀತಿ ಹೊಸ ಬೆಳವಣಿಗೆಗಳನ್ನು ನಿಭಾಯಿಸಲು ನಮ್ಮ ಪಕ್ಷದ ರಾಜ್ಯ ಘಟಕವೂ ಪ್ರಧಾನ ಪಾತ್ರ ವಹಿಸುತ್ತಿದೆ. ಎಂದು ನಮ್ಮ ಅವರಿಗೆ ತಿಳಿಸಿದೆ.

ಹಿಂಸಾಚಾರದಿಂದಾಗಿ ಮನೆಗಳನ್ನು ಕಳೆದುಕೊಂಡಿರುವವರಿಗೆ ಪರಿಹಾರ ನೀಡುವುದಾಗಿ ಮತ್ತು ತಮ್ಮವರನ್ನು ಕಳೆದುಕೊಂಡಿರುವ ಕುಟುಂಬದವರಿಗೆ ನೆರವು ಒದಗಿಸುವುದಾಗಿ ನೀಡಿರುವ ಭರವಸೆ ವಸಬೇಕು ಎಂದು ಆಗ್ರಹಿಸಿದೆ.

ಗಲಭೆಯಿಂದಾಗಿ ನಿಷ್ಕ್ರಿಯಗೊಂಡಿರುವ ನೆಲದ ಕಾನೂನುಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಮತ್ತು ಹಿಂಸಾಚಾರದಲ್ಲಿ ತೊಡಗಿದರೆ ಭಯೋತ್ಪಾದನಾ ಕೃತ್ಯವೆಂದು ಪರಿಗಣಿಸಬೇಕು ಎಂದೂ ಬೇಡಿಕೆ ಇಟ್ಟಿದೆ.

ರಾಜ್ಯ ಪಕ್ಷದ ಮುಖ್ಯಸ್ಥೆ ಎ ಶಾರದಾ ದೇವಿ ಅವರು, ”ತಮ್ಮ ವೃತ್ತಿ ಜೀವನದಲ್ಲಿ ಆಡಳಿತ ಪಕ್ಷದ ವಿರುದ್ಧ ಈ ರೀತಿಯ ಆಕ್ರಮಣ ಮತ್ತು ಹಗೆತನವನ್ನು ಕಂಡಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಮಹಿಳಾ ಮೀಸಲಾತಿ ಹೆಸರಲ್ಲಿ ಲಿಪ್‌ಸ್ಟಿಕ್ ಹಚ್ಚುವವರು ಸಂಸತ್ತಿಗೆ ಬರುತ್ತಾರೆ’: ಆರ್‌ಜೆಡಿ ನಾಯಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...