Homeಕರ್ನಾಟಕಈಡೇರದ ಸರ್ಕಾರದ ಭರವಸೆ: 8 ವರ್ಷದಿಂದ ಜೈಲಿನಲ್ಲಿ ಕೊಳೆಯುತ್ತಿರುವ ನಕ್ಸಲರು

ಈಡೇರದ ಸರ್ಕಾರದ ಭರವಸೆ: 8 ವರ್ಷದಿಂದ ಜೈಲಿನಲ್ಲಿ ಕೊಳೆಯುತ್ತಿರುವ ನಕ್ಸಲರು

ಶರಣಾದ ಕನ್ಯಾಕುಮಾರಿ ಅವರು 7-8 ವರ್ಷಗಳಿಂದ ಜೈಲಿನಲ್ಲಿದ್ದಾರೆ. ಈ ನಡುವೆ ಅಲ್ಲಿಯೇ ಅವರು ಮಗುವಿಗೆ ಜನ್ಮ ನೀಡಿದ್ದಾರೆ.

- Advertisement -
- Advertisement -

ಆರು ಮಂದಿ ನಕ್ಸಲ್ ಹೋರಾಟಗಾರರು ಇಂದು (ಜ.8) ಸರ್ಕಾರದ ಮುಂದೆ ಮುಖ್ಯವಾಹಿನಿಗೆ ಬಂದಿದ್ದಾರೆ. ಹಾಗೆಯೇ ಇವರಿಗೆ ನಕ್ಸಲ್ ಪ್ಯಾಕೇಜ್ ಮೂಲಕ ಸೂಕ್ತ ಆರ್ಥಿಕ, ಕಾನೂನು ಸಹಕಾರ ನೀಡುವುದಾಗಿ ಸರ್ಕಾರ ಭರವಸೆ ಕೊಟ್ಟಿದೆ. ಹಾಗೆಯೇ ಇಂದು (ಪೆ.1, 2025)ರಂದು ಮುಖ್ಯವಾಹಿನಿಗೆ ಬಂದಿರುವ ನಕ್ಸಲ್ ರವೀಂದ್ರ ಅವರಿಗೂ ಸರಕಾರ ಇದೆ ಭರವಸೆಯನ್ನು ಕೊಟ್ಟಿದೆ.

ಆದರೆ, ಈ ಹಿಂದೆ ಮುಖ್ಯವಾಹಿನಿಗೆ ಬಂದ ನಕ್ಸಲರಿಗೆ ಸರ್ಕಾರ ಕೊಟ್ಟ ಭರವಸೆಗಳನ್ನು ಈಡೇರಿಸಿದೆಯೇ? ಎಂದು ನೋಡಿದರೆ, ಬಹಳ ಶೋಚನೀಯ ಪರಿಸ್ಥಿತಿ ನಮ್ಮ ಕಣ್ಣಮುಂದೆ ಬರುತ್ತದೆ.

ಈ ಹಿಂದೆ ಕನ್ಯಾಕುಮಾರಿ, ಹೊಸಗದ್ದೆ ಪ್ರಭಾ, ಶೋಭಾ, ಶ್ರೀಮತಿ ಇವರು ಮುಖ್ಯವಾಹಿನಿಗೆ ಬಂದಿದ್ದು, ಬಿ.ಜಿ. ಕೃಷ್ಣಮೂರ್ತಿ, ರಮೇಶ್ ಮತ್ತು ಸಾವಿತ್ರಿ ಅವರನ್ನು ಪೊಲೀಸರು ಬಂಧಿಸಿದ್ದರು. ಇವರಿಗೆ ಸರ್ಕಾರ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. ಈ ಕಾರಣಕ್ಕೆ ಈಗಲೂ ಇವರು ಕಾನೂನು ಸಮರ ನಡೆಸುತ್ತಾ ಸಂಕಷ್ಟದ ಜೀವನ ಮಾಡುತ್ತಿದ್ದಾರೆ. ಕೆಲವರು ಜೈಲಿನಲ್ಲಿ ಕೊಳೆಯುತ್ತಿದ್ದಾರೆ.

ಮುಖ್ಯವಾಹಿನಿಗೆ ಬಂದು ಕಳೆದ 7-8 ವರ್ಷಗಳಿಂದ ಜೈಲಿನಲ್ಲಿ ಕೊಳೆಯುತ್ತಿರುವ ಕನ್ಯಾಕುಮಾರಿ ಅವರು ಬಿಡುಗಡೆಯಾಗುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ.

ಈ ನಡುವೆ ಅವರು ಜೈಲಿನಲ್ಲೇ ಮಗುವಿಗೆ ಜನ್ಮ ನೀಡಿದ್ದು, ಆ ಮಗು ಕೂಡ ತನ್ನ ಬಾಲ್ಯವನ್ನು ಜೈಲಿನಲ್ಲಿ ಕಳೆಯುವಂತಾಗಿದ್ದು, ವ್ಯವಸ್ಥೆಯ ಲೋಪವಾಗಿದೆ.

ಮುಖ್ಯವಾಹಿನಿಗೆ ಬಂದು ಜಾಮೀನಿನ ಮೇಲೆ ಹೊರ ಬಂದಿರುವ ನಿಲುಗುಳಿ ಪದ್ಮನಾಭ್ ಅವರು ನಾನುಗೌರಿ ಜೊತೆ ಮಾತನಾಡಿ, ವಾರದಲ್ಲಿ 3-4 ದಿನ ನ್ಯಾಯಾಲಯಕ್ಕೆ ಅಲೆಯುವಂತಾಗಿದೆ. ಜೀವನೋಪಾಯಕ್ಕಾಗಿ ಯಾವುದೇ ಕೆಲಸ ಮಾಡಲು ಸಾಧ್ಯವಾಗದೇ ಸುಮಾರು 10 ಲಕ್ಷದವರೆಗೂ ಸಾಲ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಇಷ್ಟು ಮಾತ್ರವಲ್ಲದೆ ಪೊಲೀಸರಿಂದ ಬಂಧಿಸಲ್ಪಟ್ಟ ಬಿ.ಜಿ.ಕೃಷ್ಣಮೂರ್ತಿ, ರಮೇಶ್ ಮತ್ತು ಸಾವಿತ್ರಿಯವರು ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ಇವರ ವಿರುದ್ಧ ಹಲವು ಪ್ರಕರಣಗಳು ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ದಾಖಲಾಗಿದ್ದು, ನಿತ್ಯವೂ ನ್ಯಾಯಾಲಯಕ್ಕೆ ಅಲೆಸಲಾಗುತ್ತಿದೆ ಎಂದು ಪದ್ಮನಾಭ್ ದೂರಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಎನ್‌.ಆರ್‌ ಪುರ ನ್ಯಾಯಾಲಯದಲ್ಲಿ ಬಿ.ಜಿ ಕೃಷ್ಣಮೂರ್ತಿ (2022 ಫೆಬ್ರವರಿ 24)

ಸರ್ಕಾರ ಜ.8ರಂದು ಮುಖ್ಯವಾಹಿನಿಗೆ ನಕ್ಸಲರ ಜೊತೆ ಈ ಹಿಂದೆ ಶರಣಾದ, ಮುಖ್ಯವಾಹಿನಿಗೆ ಬಂದ ಮತ್ತು ಬಂಧಿಸಲ್ಪಟ್ಟವರ ಕುರಿತು ವಿಶೇಷ ಮುತುವರ್ಜಿವಹಿಸಿ ಪ್ರಕರಣಗಳನ್ನು ಬಗೆಹರಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ನಮ್ಮ ರಾಜ್ಯದಲ್ಲಿ ಮತ್ತೆ ನಕ್ಸಲ್ ಹೋರಾಟ ತಲೆ ಎತ್ತಬಾರದೆಂದರೆ ನಕ್ಸಲರ ಬೇಡಿಕೆಯನ್ನು ರಾಜ್ಯ ಸರ್ಕಾರ ಈಡೇರಿಸುವುದು ಬಹಳ ಮುಖ್ಯ ಎಂದು ಈ ಹಿಂದೆ ನಕ್ಸಲ್ ಚಟುವಟಿಕೆಯಿಂದ ಮುಖ್ಯವಾಹಿನಿಗೆ ಬಂದಿರುವ ಸಿರಿಮನೆ ನಾಗರಾಜ್ ಅಭಿಪ್ರಾಯಿಸಿದ್ದಾರೆ.

ನೂರ್ ಶ್ರೀಧರ್ ಮತ್ತು ಸಿರಿಮನೆ ನಾಗರಾಜ್ ಅವರು ಮುಖ್ಯವಾಹಿನಿಗೆ ಬಂದ ನಂತರ ಕೆಲವು ದಿನಗಳನ್ನು ಜೈಲಿನಲ್ಲಿ ಕಳೆದು, ಪ್ರಕರಣದಿಂದ ಬೇಗನೆ ಖುಲಾಸೆಗೊಂಡು ಮುಖ್ಯವಾಹಿನಿಯಲ್ಲೇ ಇದ್ದು ಚಳುವಳಿಯನ್ನು ಮುಂದುವರಿಸುತ್ತಿದ್ದೇವೆ. ನಮ್ಮಂತೆ ಇಂದು ಬಿಡುಗಡೆಯಾದ ನಕ್ಸಲರ ಜೊತೆ ಸರ್ಕಾರ ವರ್ತಿಸಬೇಕೆಂದು ಸಿರಿಮನೆ ಒತ್ತಾಯಿಸಿದ್ದಾರೆ.

ನಕ್ಸಲ್ ಶರಣಾಗತಿ ಪ್ರಕ್ರಿಯೆಯಲ್ಲಿ ಬದಲಾವಣೆ; ಸಿಎಂ ಸಮ್ಮುಖದಲ್ಲಿ ಮುಖ್ಯವಾಹಿನಿಗೆ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...