Homeಕರ್ನಾಟಕಈಡೇರದ ಸರ್ಕಾರದ ಭರವಸೆ: 8 ವರ್ಷದಿಂದ ಜೈಲಿನಲ್ಲಿ ಕೊಳೆಯುತ್ತಿರುವ ನಕ್ಸಲರು

ಈಡೇರದ ಸರ್ಕಾರದ ಭರವಸೆ: 8 ವರ್ಷದಿಂದ ಜೈಲಿನಲ್ಲಿ ಕೊಳೆಯುತ್ತಿರುವ ನಕ್ಸಲರು

ಶರಣಾದ ಕನ್ಯಾಕುಮಾರಿ ಅವರು 7-8 ವರ್ಷಗಳಿಂದ ಜೈಲಿನಲ್ಲಿದ್ದಾರೆ. ಈ ನಡುವೆ ಅಲ್ಲಿಯೇ ಅವರು ಮಗುವಿಗೆ ಜನ್ಮ ನೀಡಿದ್ದಾರೆ.

- Advertisement -
- Advertisement -

ಆರು ಮಂದಿ ನಕ್ಸಲ್ ಹೋರಾಟಗಾರರು ಇಂದು (ಜ.8) ಸರ್ಕಾರದ ಮುಂದೆ ಮುಖ್ಯವಾಹಿನಿಗೆ ಬಂದಿದ್ದಾರೆ. ಹಾಗೆಯೇ ಇವರಿಗೆ ನಕ್ಸಲ್ ಪ್ಯಾಕೇಜ್ ಮೂಲಕ ಸೂಕ್ತ ಆರ್ಥಿಕ, ಕಾನೂನು ಸಹಕಾರ ನೀಡುವುದಾಗಿ ಸರ್ಕಾರ ಭರವಸೆ ಕೊಟ್ಟಿದೆ. ಹಾಗೆಯೇ ಇಂದು (ಪೆ.1, 2025)ರಂದು ಮುಖ್ಯವಾಹಿನಿಗೆ ಬಂದಿರುವ ನಕ್ಸಲ್ ರವೀಂದ್ರ ಅವರಿಗೂ ಸರಕಾರ ಇದೆ ಭರವಸೆಯನ್ನು ಕೊಟ್ಟಿದೆ.

ಆದರೆ, ಈ ಹಿಂದೆ ಮುಖ್ಯವಾಹಿನಿಗೆ ಬಂದ ನಕ್ಸಲರಿಗೆ ಸರ್ಕಾರ ಕೊಟ್ಟ ಭರವಸೆಗಳನ್ನು ಈಡೇರಿಸಿದೆಯೇ? ಎಂದು ನೋಡಿದರೆ, ಬಹಳ ಶೋಚನೀಯ ಪರಿಸ್ಥಿತಿ ನಮ್ಮ ಕಣ್ಣಮುಂದೆ ಬರುತ್ತದೆ.

ಈ ಹಿಂದೆ ಕನ್ಯಾಕುಮಾರಿ, ಹೊಸಗದ್ದೆ ಪ್ರಭಾ, ಶೋಭಾ, ಶ್ರೀಮತಿ ಇವರು ಮುಖ್ಯವಾಹಿನಿಗೆ ಬಂದಿದ್ದು, ಬಿ.ಜಿ. ಕೃಷ್ಣಮೂರ್ತಿ, ರಮೇಶ್ ಮತ್ತು ಸಾವಿತ್ರಿ ಅವರನ್ನು ಪೊಲೀಸರು ಬಂಧಿಸಿದ್ದರು. ಇವರಿಗೆ ಸರ್ಕಾರ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. ಈ ಕಾರಣಕ್ಕೆ ಈಗಲೂ ಇವರು ಕಾನೂನು ಸಮರ ನಡೆಸುತ್ತಾ ಸಂಕಷ್ಟದ ಜೀವನ ಮಾಡುತ್ತಿದ್ದಾರೆ. ಕೆಲವರು ಜೈಲಿನಲ್ಲಿ ಕೊಳೆಯುತ್ತಿದ್ದಾರೆ.

ಮುಖ್ಯವಾಹಿನಿಗೆ ಬಂದು ಕಳೆದ 7-8 ವರ್ಷಗಳಿಂದ ಜೈಲಿನಲ್ಲಿ ಕೊಳೆಯುತ್ತಿರುವ ಕನ್ಯಾಕುಮಾರಿ ಅವರು ಬಿಡುಗಡೆಯಾಗುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ.

ಈ ನಡುವೆ ಅವರು ಜೈಲಿನಲ್ಲೇ ಮಗುವಿಗೆ ಜನ್ಮ ನೀಡಿದ್ದು, ಆ ಮಗು ಕೂಡ ತನ್ನ ಬಾಲ್ಯವನ್ನು ಜೈಲಿನಲ್ಲಿ ಕಳೆಯುವಂತಾಗಿದ್ದು, ವ್ಯವಸ್ಥೆಯ ಲೋಪವಾಗಿದೆ.

ಮುಖ್ಯವಾಹಿನಿಗೆ ಬಂದು ಜಾಮೀನಿನ ಮೇಲೆ ಹೊರ ಬಂದಿರುವ ನಿಲುಗುಳಿ ಪದ್ಮನಾಭ್ ಅವರು ನಾನುಗೌರಿ ಜೊತೆ ಮಾತನಾಡಿ, ವಾರದಲ್ಲಿ 3-4 ದಿನ ನ್ಯಾಯಾಲಯಕ್ಕೆ ಅಲೆಯುವಂತಾಗಿದೆ. ಜೀವನೋಪಾಯಕ್ಕಾಗಿ ಯಾವುದೇ ಕೆಲಸ ಮಾಡಲು ಸಾಧ್ಯವಾಗದೇ ಸುಮಾರು 10 ಲಕ್ಷದವರೆಗೂ ಸಾಲ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಇಷ್ಟು ಮಾತ್ರವಲ್ಲದೆ ಪೊಲೀಸರಿಂದ ಬಂಧಿಸಲ್ಪಟ್ಟ ಬಿ.ಜಿ.ಕೃಷ್ಣಮೂರ್ತಿ, ರಮೇಶ್ ಮತ್ತು ಸಾವಿತ್ರಿಯವರು ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ಇವರ ವಿರುದ್ಧ ಹಲವು ಪ್ರಕರಣಗಳು ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ದಾಖಲಾಗಿದ್ದು, ನಿತ್ಯವೂ ನ್ಯಾಯಾಲಯಕ್ಕೆ ಅಲೆಸಲಾಗುತ್ತಿದೆ ಎಂದು ಪದ್ಮನಾಭ್ ದೂರಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಎನ್‌.ಆರ್‌ ಪುರ ನ್ಯಾಯಾಲಯದಲ್ಲಿ ಬಿ.ಜಿ ಕೃಷ್ಣಮೂರ್ತಿ (2022 ಫೆಬ್ರವರಿ 24)

ಸರ್ಕಾರ ಜ.8ರಂದು ಮುಖ್ಯವಾಹಿನಿಗೆ ನಕ್ಸಲರ ಜೊತೆ ಈ ಹಿಂದೆ ಶರಣಾದ, ಮುಖ್ಯವಾಹಿನಿಗೆ ಬಂದ ಮತ್ತು ಬಂಧಿಸಲ್ಪಟ್ಟವರ ಕುರಿತು ವಿಶೇಷ ಮುತುವರ್ಜಿವಹಿಸಿ ಪ್ರಕರಣಗಳನ್ನು ಬಗೆಹರಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ನಮ್ಮ ರಾಜ್ಯದಲ್ಲಿ ಮತ್ತೆ ನಕ್ಸಲ್ ಹೋರಾಟ ತಲೆ ಎತ್ತಬಾರದೆಂದರೆ ನಕ್ಸಲರ ಬೇಡಿಕೆಯನ್ನು ರಾಜ್ಯ ಸರ್ಕಾರ ಈಡೇರಿಸುವುದು ಬಹಳ ಮುಖ್ಯ ಎಂದು ಈ ಹಿಂದೆ ನಕ್ಸಲ್ ಚಟುವಟಿಕೆಯಿಂದ ಮುಖ್ಯವಾಹಿನಿಗೆ ಬಂದಿರುವ ಸಿರಿಮನೆ ನಾಗರಾಜ್ ಅಭಿಪ್ರಾಯಿಸಿದ್ದಾರೆ.

ನೂರ್ ಶ್ರೀಧರ್ ಮತ್ತು ಸಿರಿಮನೆ ನಾಗರಾಜ್ ಅವರು ಮುಖ್ಯವಾಹಿನಿಗೆ ಬಂದ ನಂತರ ಕೆಲವು ದಿನಗಳನ್ನು ಜೈಲಿನಲ್ಲಿ ಕಳೆದು, ಪ್ರಕರಣದಿಂದ ಬೇಗನೆ ಖುಲಾಸೆಗೊಂಡು ಮುಖ್ಯವಾಹಿನಿಯಲ್ಲೇ ಇದ್ದು ಚಳುವಳಿಯನ್ನು ಮುಂದುವರಿಸುತ್ತಿದ್ದೇವೆ. ನಮ್ಮಂತೆ ಇಂದು ಬಿಡುಗಡೆಯಾದ ನಕ್ಸಲರ ಜೊತೆ ಸರ್ಕಾರ ವರ್ತಿಸಬೇಕೆಂದು ಸಿರಿಮನೆ ಒತ್ತಾಯಿಸಿದ್ದಾರೆ.

ನಕ್ಸಲ್ ಶರಣಾಗತಿ ಪ್ರಕ್ರಿಯೆಯಲ್ಲಿ ಬದಲಾವಣೆ; ಸಿಎಂ ಸಮ್ಮುಖದಲ್ಲಿ ಮುಖ್ಯವಾಹಿನಿಗೆ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...