Homeಕರ್ನಾಟಕಈಡೇರದ ಸರ್ಕಾರದ ಭರವಸೆ: 8 ವರ್ಷದಿಂದ ಜೈಲಿನಲ್ಲಿ ಕೊಳೆಯುತ್ತಿರುವ ನಕ್ಸಲರು

ಈಡೇರದ ಸರ್ಕಾರದ ಭರವಸೆ: 8 ವರ್ಷದಿಂದ ಜೈಲಿನಲ್ಲಿ ಕೊಳೆಯುತ್ತಿರುವ ನಕ್ಸಲರು

ಶರಣಾದ ಕನ್ಯಾಕುಮಾರಿ ಅವರು 7-8 ವರ್ಷಗಳಿಂದ ಜೈಲಿನಲ್ಲಿದ್ದಾರೆ. ಈ ನಡುವೆ ಅಲ್ಲಿಯೇ ಅವರು ಮಗುವಿಗೆ ಜನ್ಮ ನೀಡಿದ್ದಾರೆ.

- Advertisement -
- Advertisement -

ಆರು ಮಂದಿ ನಕ್ಸಲ್ ಹೋರಾಟಗಾರರು ಇಂದು (ಜ.8) ಸರ್ಕಾರದ ಮುಂದೆ ಮುಖ್ಯವಾಹಿನಿಗೆ ಬಂದಿದ್ದಾರೆ. ಹಾಗೆಯೇ ಇವರಿಗೆ ನಕ್ಸಲ್ ಪ್ಯಾಕೇಜ್ ಮೂಲಕ ಸೂಕ್ತ ಆರ್ಥಿಕ, ಕಾನೂನು ಸಹಕಾರ ನೀಡುವುದಾಗಿ ಸರ್ಕಾರ ಭರವಸೆ ಕೊಟ್ಟಿದೆ. ಹಾಗೆಯೇ ಇಂದು (ಪೆ.1, 2025)ರಂದು ಮುಖ್ಯವಾಹಿನಿಗೆ ಬಂದಿರುವ ನಕ್ಸಲ್ ರವೀಂದ್ರ ಅವರಿಗೂ ಸರಕಾರ ಇದೆ ಭರವಸೆಯನ್ನು ಕೊಟ್ಟಿದೆ.

ಆದರೆ, ಈ ಹಿಂದೆ ಮುಖ್ಯವಾಹಿನಿಗೆ ಬಂದ ನಕ್ಸಲರಿಗೆ ಸರ್ಕಾರ ಕೊಟ್ಟ ಭರವಸೆಗಳನ್ನು ಈಡೇರಿಸಿದೆಯೇ? ಎಂದು ನೋಡಿದರೆ, ಬಹಳ ಶೋಚನೀಯ ಪರಿಸ್ಥಿತಿ ನಮ್ಮ ಕಣ್ಣಮುಂದೆ ಬರುತ್ತದೆ.

ಈ ಹಿಂದೆ ಕನ್ಯಾಕುಮಾರಿ, ಹೊಸಗದ್ದೆ ಪ್ರಭಾ, ಶೋಭಾ, ಶ್ರೀಮತಿ ಇವರು ಮುಖ್ಯವಾಹಿನಿಗೆ ಬಂದಿದ್ದು, ಬಿ.ಜಿ. ಕೃಷ್ಣಮೂರ್ತಿ, ರಮೇಶ್ ಮತ್ತು ಸಾವಿತ್ರಿ ಅವರನ್ನು ಪೊಲೀಸರು ಬಂಧಿಸಿದ್ದರು. ಇವರಿಗೆ ಸರ್ಕಾರ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. ಈ ಕಾರಣಕ್ಕೆ ಈಗಲೂ ಇವರು ಕಾನೂನು ಸಮರ ನಡೆಸುತ್ತಾ ಸಂಕಷ್ಟದ ಜೀವನ ಮಾಡುತ್ತಿದ್ದಾರೆ. ಕೆಲವರು ಜೈಲಿನಲ್ಲಿ ಕೊಳೆಯುತ್ತಿದ್ದಾರೆ.

ಮುಖ್ಯವಾಹಿನಿಗೆ ಬಂದು ಕಳೆದ 7-8 ವರ್ಷಗಳಿಂದ ಜೈಲಿನಲ್ಲಿ ಕೊಳೆಯುತ್ತಿರುವ ಕನ್ಯಾಕುಮಾರಿ ಅವರು ಬಿಡುಗಡೆಯಾಗುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ.

ಈ ನಡುವೆ ಅವರು ಜೈಲಿನಲ್ಲೇ ಮಗುವಿಗೆ ಜನ್ಮ ನೀಡಿದ್ದು, ಆ ಮಗು ಕೂಡ ತನ್ನ ಬಾಲ್ಯವನ್ನು ಜೈಲಿನಲ್ಲಿ ಕಳೆಯುವಂತಾಗಿದ್ದು, ವ್ಯವಸ್ಥೆಯ ಲೋಪವಾಗಿದೆ.

ಮುಖ್ಯವಾಹಿನಿಗೆ ಬಂದು ಜಾಮೀನಿನ ಮೇಲೆ ಹೊರ ಬಂದಿರುವ ನಿಲುಗುಳಿ ಪದ್ಮನಾಭ್ ಅವರು ನಾನುಗೌರಿ ಜೊತೆ ಮಾತನಾಡಿ, ವಾರದಲ್ಲಿ 3-4 ದಿನ ನ್ಯಾಯಾಲಯಕ್ಕೆ ಅಲೆಯುವಂತಾಗಿದೆ. ಜೀವನೋಪಾಯಕ್ಕಾಗಿ ಯಾವುದೇ ಕೆಲಸ ಮಾಡಲು ಸಾಧ್ಯವಾಗದೇ ಸುಮಾರು 10 ಲಕ್ಷದವರೆಗೂ ಸಾಲ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಇಷ್ಟು ಮಾತ್ರವಲ್ಲದೆ ಪೊಲೀಸರಿಂದ ಬಂಧಿಸಲ್ಪಟ್ಟ ಬಿ.ಜಿ.ಕೃಷ್ಣಮೂರ್ತಿ, ರಮೇಶ್ ಮತ್ತು ಸಾವಿತ್ರಿಯವರು ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ಇವರ ವಿರುದ್ಧ ಹಲವು ಪ್ರಕರಣಗಳು ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ದಾಖಲಾಗಿದ್ದು, ನಿತ್ಯವೂ ನ್ಯಾಯಾಲಯಕ್ಕೆ ಅಲೆಸಲಾಗುತ್ತಿದೆ ಎಂದು ಪದ್ಮನಾಭ್ ದೂರಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಎನ್‌.ಆರ್‌ ಪುರ ನ್ಯಾಯಾಲಯದಲ್ಲಿ ಬಿ.ಜಿ ಕೃಷ್ಣಮೂರ್ತಿ (2022 ಫೆಬ್ರವರಿ 24)

ಸರ್ಕಾರ ಜ.8ರಂದು ಮುಖ್ಯವಾಹಿನಿಗೆ ನಕ್ಸಲರ ಜೊತೆ ಈ ಹಿಂದೆ ಶರಣಾದ, ಮುಖ್ಯವಾಹಿನಿಗೆ ಬಂದ ಮತ್ತು ಬಂಧಿಸಲ್ಪಟ್ಟವರ ಕುರಿತು ವಿಶೇಷ ಮುತುವರ್ಜಿವಹಿಸಿ ಪ್ರಕರಣಗಳನ್ನು ಬಗೆಹರಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ನಮ್ಮ ರಾಜ್ಯದಲ್ಲಿ ಮತ್ತೆ ನಕ್ಸಲ್ ಹೋರಾಟ ತಲೆ ಎತ್ತಬಾರದೆಂದರೆ ನಕ್ಸಲರ ಬೇಡಿಕೆಯನ್ನು ರಾಜ್ಯ ಸರ್ಕಾರ ಈಡೇರಿಸುವುದು ಬಹಳ ಮುಖ್ಯ ಎಂದು ಈ ಹಿಂದೆ ನಕ್ಸಲ್ ಚಟುವಟಿಕೆಯಿಂದ ಮುಖ್ಯವಾಹಿನಿಗೆ ಬಂದಿರುವ ಸಿರಿಮನೆ ನಾಗರಾಜ್ ಅಭಿಪ್ರಾಯಿಸಿದ್ದಾರೆ.

ನೂರ್ ಶ್ರೀಧರ್ ಮತ್ತು ಸಿರಿಮನೆ ನಾಗರಾಜ್ ಅವರು ಮುಖ್ಯವಾಹಿನಿಗೆ ಬಂದ ನಂತರ ಕೆಲವು ದಿನಗಳನ್ನು ಜೈಲಿನಲ್ಲಿ ಕಳೆದು, ಪ್ರಕರಣದಿಂದ ಬೇಗನೆ ಖುಲಾಸೆಗೊಂಡು ಮುಖ್ಯವಾಹಿನಿಯಲ್ಲೇ ಇದ್ದು ಚಳುವಳಿಯನ್ನು ಮುಂದುವರಿಸುತ್ತಿದ್ದೇವೆ. ನಮ್ಮಂತೆ ಇಂದು ಬಿಡುಗಡೆಯಾದ ನಕ್ಸಲರ ಜೊತೆ ಸರ್ಕಾರ ವರ್ತಿಸಬೇಕೆಂದು ಸಿರಿಮನೆ ಒತ್ತಾಯಿಸಿದ್ದಾರೆ.

ನಕ್ಸಲ್ ಶರಣಾಗತಿ ಪ್ರಕ್ರಿಯೆಯಲ್ಲಿ ಬದಲಾವಣೆ; ಸಿಎಂ ಸಮ್ಮುಖದಲ್ಲಿ ಮುಖ್ಯವಾಹಿನಿಗೆ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...