Homeಕರ್ನಾಟಕರೈತರ ಹೋರಾಟಕ್ಕೆ ಸ್ಪಂದಿಸಿದ ರಾಜ್ಯ ಸರ್ಕಾರ : ಪ್ರತಿ ಟನ್‌ ಕಬ್ಬಿಗೆ 3,300 ರೂ. ದರ...

ರೈತರ ಹೋರಾಟಕ್ಕೆ ಸ್ಪಂದಿಸಿದ ರಾಜ್ಯ ಸರ್ಕಾರ : ಪ್ರತಿ ಟನ್‌ ಕಬ್ಬಿಗೆ 3,300 ರೂ. ದರ ನಿಗದಿ

- Advertisement -
- Advertisement -

ಸಾಗಣೆ, ಕಟಾವು ವೆಚ್ಚ ಹೊರತುಪಡಿಸಿ ಸಕ್ಕರೆ ಕಾರ್ಖಾನೆಗಳಿಗೆ ಪೂರೈಸುವ ಪ್ರತಿ ಟನ್‌ ಕಬ್ಬಿಗೆ 3,500 ರೂಪಾಯಿ ದರ ನೀಡಬೇಕು ಎಂದು ಆಗ್ರಹಿಸಿ ಹೋರಾಟ ನಡೆಸುತ್ತಿದ್ದ ರೈತರಿಗೆ ರಾಜ್ಯ ಸರ್ಕಾರ ಸ್ಪಂದಿಸಿದೆ. ಪ್ರತಿ ಟನ್ ಕಬ್ಬಿಗೆ ಟನ್ ಕಬ್ಬಿಗೆ 3,300 ರೂಪಾಯಿ ದರ ನಿಗದಿ ಮಾಡಿದೆ.

ಶುಕ್ರವಾರ (ನ.7) ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರ ಜೊತೆ ಸುದೀರ್ಘ 7 ಗಂಟೆಗಳ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಳಿಕ ಪತ್ರಿಕಾಗೋಷ್ಠಿ ನಡೆಸಿ ಸರ್ಕಾರದ ನಿರ್ಧಾರ ಪ್ರಕಟಿಸಿದರು.

ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರು ತಲಾ 50ರೂ ಸೇರಿಸಿ ರೈತರ ಪ್ರತಿ ಟನ್‌ ಕಬ್ಬಿಗೆ 3,300 ಕೊಡಲು ತೀರ್ಮಾನ ಮಾಡಲಾಗಿದೆ ಎಂದು ಸಿಎಂ ತಿಳಿಸಿದರು.

ರಾಜ್ಯದಲ್ಲಿ 81 ಸಕ್ಕರೆ ಕಾರ್ಖಾನೆಗಳಿವೆ. ಇವುಗಳಲ್ಲಿ 11 ಸಹಕಾರಿ ಕಾರ್ಖಾನೆಗಳು ಒಂದು ಮಾತ್ರ ಸರ್ಕಾರಿ ಸೌಮ್ಯದ್ದು. ಉಳಿದವೆಲ್ಲಾ ಖಾಸಗಿ ಸಕ್ಕರೆ ಕಾರ್ಖಾನೆಗಳಾಗಿವೆ. ಅಕ್ಟೋಬರ್ 30ರಿಂದ ಬೆಳಗಾವಿ ರೈತರು ಪಿಆರ್‌ಫಿ ದರ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆಗೆ ಇಳಿದಿದ್ದಾರೆ. ಪ್ರತಿಭಟನಾ ನಿರತ ರೈತ ಮುಖಂಡರ ಜೊತೆಗೆ ಬೆಳಗಾವಿ ಜಿಲ್ಲಾಧಿಕಾರಿಗಳು ಮಾತುಕತೆ ನಡೆಸಿದ್ದರು. ಆದರೆ, ಮಾತುಕತೆ ವಿಫಲವಾದ ಹಿನ್ನೆಲೆ ಸಚಿವರನ್ನು ಮಾತುಕತೆಗೆ ಕಳುಹಿಸಿದ್ದೆ ಎಂದು ಸಿಎಂ ಹೇಳಿದರು.

10.25 ರಿಕವರಿ ಇರುವ ಕಬ್ಬಿನ ಪ್ರತಿ ಟನ್‌ಗೆ 3,100 ರೂಪಾಯಿ, 11.25 ರಿಕವರಿ ಕಬ್ಬಿನ ಪ್ರತಿ ಟನ್‌ಗೆ 3,200 ರೂಪಾಯಿ ಕೊಡುವುದಾಗಿ ಸಚಿವರು ತಿಳಿಸಿದ್ದರು. ಇದಕ್ಕೆ ಪ್ರತಿಭಟನಾ ನಿರತ ರೈತರು ಒಪ್ಪಿರಲಿಲ್ಲ. ಕಾನೂನು ಸಚಿವ ಹೆಚ್.ಕೆ ಪಾಟೀಲ್, ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ ಅವರ ಮನವೊಲಿಕೆ ವಿಫಲವಾಗಿತ್ತು. ಬಳಿಕ ಸಚಿವ ಸಂಪುಟದಲ್ಲಿ ಚರ್ಚಿಸಿ, ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ರೈತ ಮುಖಂಡರ ಜೊತೆ ಚರ್ಚೆ ನಡೆಸುವ ಜೊತೆಗೆ ಸಮಸ್ಯೆ ಸೃಷ್ಟಿಸಿರುವ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ತೀರ್ಮಾನಿಸಲಾಗಿತ್ತು ಎಂದರು.

ಸಂಪುಟದ ತೀರ್ಮಾನದಂತೆ ಇಂದು ಬೆಳಗ್ಗೆಯಿಂದ ಸತತ 7 ಗಂಟೆ ಕಾಲ ಸಭೆ ನಡೆಸಿದ್ದೇವೆ. ಈ ವೇಳೆ ಕಾರ್ಖಾನೆ ಮಾಲೀಕರು ಮತ್ತು ರೈತರು ತಮ್ಮ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಇಬ್ಬರೂ ಕೇಂದ್ರ ಸರ್ಕಾರದ ನೀತಿಗಳಿಂದ ಆಗಿರುವ ನಷ್ಟ ಮತ್ತು ಸಮಸ್ಯೆಗಳನ್ನೂ ಹೇಳಿಕೊಂಡಿದ್ದಾರೆ. ಕೇಂದ್ರದಿಂದ ಆಗುತ್ತಿರುವ ತೊಂದರೆ ಬಗ್ಗೆ ಚರ್ಚಿಸಲು ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನಿಸಿದ್ದೇವೆ. ಇದಕ್ಕೆ ಮಾಲೀಕರುಗಳೂ ಒಪ್ಪಿಕೊಂಡಿದ್ದಾರೆ ಎಂದು ಸಿಎಂ ಹೇಳಿದರು.

ಕಬ್ಬಿನ ಇಳುವರಿ ಪ್ರಮಾಣ ಜಿಲ್ಲೆಯಿಂದ ಜಿಲ್ಲೆಗೆ ವ್ಯತ್ಯಾಸ ಆಗುತ್ತದೆ. ಆದರೆ, ಎಲ್ಲಾ ಇಳುವರಿಗೂ 100 ರೂಪಾಯಿ ಹೆಚ್ಚಳ ಆಗಲಿದೆ. ರಾಜ್ಯದಲ್ಲಿ 81 ಸಕ್ಕರೆ ಕಾರ್ಖಾನೆಗಳಿವೆ. ಕೇಂದ್ರ ಸರ್ಕಾರ 10-5-2025ರಂದು ಕಟಾವು ಮತ್ತು ಸಾಗಣೆ ಶುಲ್ಕ ಸೇರಿಸಿ 10.5 ರಿಕವರಿ ಇರುವ ಕಬ್ಬಿನ ಪ್ರತಿ ಮೆಟ್ರಿಕ್ ಟನ್‌ಗೆ 3,550 ರೂಪಾಯಿ ನಿಗದಿಪಡಿಸಿದೆ ಎಂದರು.

ರಾಜ್ಯದಲ್ಲಿ ಕಳೆದ ವರ್ಷ 5.6 ಕೋಟಿ ಮೆಟ್ರಿಕ್ ಟನ್ ಸಕ್ಕರೆ ಉತ್ಪಾದಿಸಲಾಗಿದ್ದು, ಈ ವರ್ಷ ಸುಮಾರು 6 ಕೋಟಿಗೂ ಹೆಚ್ಚು ಮೆಟ್ರಿಕ್ ಟನ್ ಉತ್ಪಾದನೆ ಅಂದಾಜಿಸಿದೆ. ಇಂದಿನ ಸಭೆಯಲ್ಲಿ ಕಟಾವು ಮತ್ತು ಸಾಗಾಟ ವೆಚ್ಚ ಹೊರತುಪಡಿಸಿ, 11.25 ರಿಕವರಿ ಇರುವ ಕಬ್ಬಿಗೆ 3,250 ರೂಪಾಯಿ ಸಕ್ಕರೆ ಕಾರ್ಖಾನೆಗಳು ಪಾವತಿಸಬೇಕು. ಇದಕ್ಕೆ ಸರ್ಕಾರ 50 ರೂಪಾಯಿ ಹೆಚ್ಚುವರಿಯಾಗಿ ಪಾವತಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಇದು ಬೆಳಗಾವಿ ಜಿಲ್ಲಾಧಿಕಾರಿ ಅವರು ಅಂತಿಮಗೊಳಿಸಿದ್ದ ದರಕ್ಕಿಂತ 100 ರೂಪಾಯಿ ಹೆಚ್ಚಾಗಿದೆ. ಇದಕ್ಕೆ ಬಹುತೇಕ ಎಲ್ಲಾ ಸಕ್ಕರೆ ಕಾರ್ಖಾನೆ ಮಾಲೀಕರು ಒಪ್ಪಿಗೆ ಸೂಚಿಸಿದ್ದಾರೆ. ರಿಕವರಿ ದರಕ್ಕೆ ಅನುಗುಣವಾಗಿ ಜಿಲ್ಲೆಯಿಂದ ಜಿಲ್ಲೆಗೆ ಪ್ರತ್ಯೇಕ ದರ ನಿಗದಿಪಡಿಸಲಾಗುವುದು. ಇದಕ್ಕೆ ರೈತರು ಒಪ್ಪಿಗೆ ಸೂಚಿಸುವ ವಿಶ್ವಾಸವಿದೆ ಎಂದು ಸಿಎಂ ತಿಳಿಸಿದರು.

ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಬದ್ಧವಾಗಿದೆ. ಸಂಕಷ್ಟದಲ್ಲಿರುವ ರೈತರ ನೆರವಿಗೆ ಮುಂದಾಬೇಕೆಂದು ಎಲ್ಲಾ ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಮನವಿ ಮಾಡಲಾಗಿದೆ. ರೈತರು ಕೂಡ ತಮ್ಮ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದುಕೊಂಡು ಕಾನೂನು ವ್ಯವಸ್ಥೆ ಸುಗಮವಾಗಲು ಸಹಕರಿಸಬೇಕು ಎಂದು ಮನವಿ ಮಾಡಿದ್ದೇವೆ ಎಂದರು.

ಸಕ್ಕರೆ ಎಂಎಸ್‌ಪಿ ಹೆಚ್ಚಳ, ಎಥೆನಾಲ್ ಹಂಚಿಕೆ ಹೆಚ್ಚಳ, ಸಕ್ಕರೆ ರಫ್ತು ಮಿತಿಯನ್ನು ಹೆಚ್ಚಿಸುವುದು ಸೇರಿದಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಕೇಂದ್ರಕ್ಕೆ ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳನ್ನು ಒಳಗೊಂಡ ನಿಯೋಗ ಕರೆದುಕೊಂಡು ಹೋಗಲು ಸಿದ್ಧ ಎಂದು ಹೇಳಿದ್ದೇವೆ. ಇದಕ್ಕೆ ಎಲ್ಲರೂ ಒಪ್ಪಿಗೆ ನೀಡಿದ್ದಾರೆ. ಸಕ್ಕರೆ ಕಾರ್ಖಾನೆಗಳು ಎದುರಿಸುತ್ತಿರುವ ಸಮಸ್ಯೆಗಳು, ಅದೇ ರೀತಿ ಕಬ್ಬು ಬೆಳೆಗಾರರು ಸಕ್ಕರೆ ಕಾರ್ಖಾನೆಗಳಿಂದ ಎದುರಿಸುತ್ತಿರುವ ಸಮಸ್ಯೆ ಕುರಿತು ಸಮಾಲೋಚನೆ ನಡೆಸಿ ಪರಿಹಾರ ಒದಗಿಸಲು ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

‘ನಾವು ರೈತರ ಪರವಾಗಿ ನಿಲ್ಲುತ್ತೇವೆ, ಸಮಸ್ಯೆ ಬಗೆಹರಿಸಲು ಕೇಂದ್ರವೂ ಸಿದ್ದವಾಗಬೇಕು’: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....