Homeಕರ್ನಾಟಕಆಳಂದ ಸೇರಿ ರಾಜ್ಯದ ಎಲ್ಲಾ 'ಮತಗಳ್ಳತನ' ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ಸರ್ಕಾರ

ಆಳಂದ ಸೇರಿ ರಾಜ್ಯದ ಎಲ್ಲಾ ‘ಮತಗಳ್ಳತನ’ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ಸರ್ಕಾರ

- Advertisement -
- Advertisement -

ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರ ಸೇರಿದಂತೆ ರಾಜ್ಯದಾದ್ಯಂತ ದಾಖಲಾಗಿರುವ ಮತ್ತು ಮುಂದೆ ದಾಖಲಾಗಲಿರುವ ಎಲ್ಲಾ ‘ಮತಗಳ್ಳತನ’ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ಶನಿವಾರ (ಸೆ.20) ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ.

2023ರಲ್ಲಿ ಆಳಂದ ವಿಧಾನಸಭಾ ಕ್ಷೇತ್ರದ 256 ಮತಗಟ್ಟೆಗಳ ವ್ಯಾಪ್ತಿಯಲ್ಲಿನ 6 ಸಾವಿರಕ್ಕೂ ಹೆಚ್ಚು ಮತದಾರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಪ್ರಯತ್ನಿಸಿದ ಪ್ರಕರಣವನ್ನು ಮುಖ್ಯವಾಗಿ ಪರಿಗಣಿಸಲಾಗಿದೆ.

ಒಳಾಡಳಿತ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ ಎಸ್.ಅಂಬಿಕಾ ಅವರು ಎಸ್‌ಐಟಿ ರಚನೆ ಬಗ್ಗೆ ಆದೇಶ ಹೊರಡಿಸಿದ್ದು, ಸಿಐಡಿ ಘಟಕದ ಅಪರ ಪೋಲೀಸ್ ಮಹಾನಿರ್ದೇಶಕ ಬಿ.ಕೆ.ಸಿಂಗ್ ನೇತೃತ್ವದ ತನಿಖಾ ತಂಡದಲ್ಲಿ ಐಪಿಎಸ್ ಅಧಿಕಾರಿಗಳಾದ ಸಿಸಿಡಿ, ಸಿಐಡಿ ಪೊಲೀಸ್ ಅಧೀಕ್ಷಕ ಸೈದುಲ್ ಅದಾವತ್, ಎಸ್‍ಇಡಿ ಸಿಐಡಿಯ ಪೊಲೀಸ್ ಅಧೀಕ್ಷಕಿ ಶುಭಾನ್ವಿತ ಅವರು ಸದಸ್ಯರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 6,018 ಮತದಾರರ ಹೆಸರುಗಳನ್ನು ಅನಧಿಕೃತವಾಗಿ ಅಳಿಸಲು ಯತ್ನಿಸಲಾಗಿತ್ತು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ.

ಎಸ್‌ಐಟಿಗೆ ಪೊಲೀಸ್‌ ಠಾಣೆಯ ಸ್ಥಾನ ನೀಡಿ, ಇಡೀ ರಾಜ್ಯದ ವ್ಯಾಪ್ತಿಯಲ್ಲಿ ತನಿಖೆ ನಡೆಸುವ ಅಧಿಕಾರ ನೀಡಲಾಗಿದೆ. ಆಳಂದ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ (26/2023), ಬೇರೆ ಠಾಣೆಗಳಲ್ಲಿ ಈಗಾಗಲೇ ದಾಖಲಾಗಿರುವ ದೂರುಗಳು ಮತ್ತು ಮುಂದೆ ದಾಖಲಾಗಿರುವ ದೂರುಗಳನ್ನು ಎಸ್‌ಐಟಿ ತನಿಖೆಗೆ ಒಳಪಡಿಸಲಿದೆ.

ಆಳಂದ ಮತಗಳ್ಳತನ ಪ್ರಕರಣ 2023ರ ವಿಧಾನಸಭಾ ಚುನಾವಣೆಗೆ ಮುನ್ನ ನಕಲು ಫಾರ್ಮ್ 7ರ ಮೂಲಕ ಮತದಾರರ ಹೆಸರುಗಳನ್ನು ತೆಗೆದುಹಾಕಲು ನಡೆಸಿದ್ದ ಪಿತೂರಿಗೆ ಸಂಬಂಧಿಸಿದೆ. ಈ ಪ್ರಕರಣದ ಆರೋಪಿಗಳನ್ನು ಬಂಧಿಸಲು ಅಗತ್ಯವಾದ ನಿರ್ಣಾಯಕ ದತ್ತಾಂಶಗಳನ್ನು ಚುನಾವಣಾ ಆಯೋಗ ಸಿಐಡಿ ಜೊತೆ ಇನ್ನೂ ಹಂಚಿಕೊಳ್ಳದ ಕಾರಣ ಪ್ರಕರಣ ಬಹುತೇಕ ಹಳ್ಳಹಿಡಿದಂತೆ ಕಾಣುತ್ತಿದೆ ಎಂದು ದಿ ಹಿಂದೂ ಪತ್ರಿಕೆ ಭಾನುವಾರ (ಸೆ.7) ವಿಸ್ತೃತ ವರದಿ ಪ್ರಕಟಿಸಿತ್ತು.

ಸೆಪ್ಟೆಂಬರ್ 18ರಂದು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ರಾಹುಲ್ ಗಾಂಧಿ ಆಳಂದ ಪ್ರಕರಣದ ದಾಖಲೆ ಬಿಡುಗಡೆ ಮಾಡಿದ್ದರು.

ಆಳಂದ ಮತಗಳ್ಳತನ ಕುರಿತ ಸಂಪೂರ್ಣ ವಿವರಗಳನ್ನು ಈ ಕೆಳಗಿನ ವರದಿಗಳಲ್ಲಿ ಓದಿ

‘ಆಳಂದ’ ಕ್ಷೇತ್ರದಲ್ಲಿ ಮತಗಳ್ಳತನ ಪ್ರಕರಣ: ಸಿಐಡಿ ತನಿಖೆಗೆ ಸ್ಪಂದಿಸದ ಚುನಾವಣಾ ಆಯೋಗ!

ಮುಖ್ಯ ಚುನಾವಣಾ ಆಯುಕ್ತ ‘ಮತಗಳ್ಳರ ರಕ್ಷಕ’ ಎಂದ ರಾಹುಲ್ ಗಾಂಧಿ: ಆಳಂದ ಮತಗಳ್ಳತನದ ದಾಖಲೆ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...