Homeಕರ್ನಾಟಕಜಿಂದಾಲ್‍ಗೆ ಭೂಮಿ: ಕೊಟ್ಟರೋ, ಬಿಟ್ಟರೊ? ಈಗೇನಾಗುತ್ತಿದೆ ಗೊತ್ತೆ?

ಜಿಂದಾಲ್‍ಗೆ ಭೂಮಿ: ಕೊಟ್ಟರೋ, ಬಿಟ್ಟರೊ? ಈಗೇನಾಗುತ್ತಿದೆ ಗೊತ್ತೆ?

ಬೆಂಗಳೂರಿನ ರಾಚೇನಹಳ್ಳಿಯಲ್ಲಿ ಡಿನೋಟಿಫೈ ಆದ ಭೂಮಿಯನ್ನು ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪದ ಹತ್ತಿರದ ಸಂಬಂಧಿ 40 ಲಕ್ಷಕ್ಕೆ ಖರೀದಿಸಿ ನಂತರ ಜಿಂದಾಲ್‍ನ ಅಂಗಸಂಸ್ಥೆ ಸೌಥ್ ವೆಸ್ಟ್ ಮೈನಿಂಗ್ ಕಂಪನಿಗೆ 20 ಕೋಟಿ ರೂ.ಗೆ ಮಾರಿದ್ದರು.

- Advertisement -
- Advertisement -

| ಮಲ್ಲನಗೌಡರ್ |

ಜಿಂದಾಲ್‍ಗೆ ಭೂಮಿ ಮಾರುವ ಸರ್ಕಾರದ ನಡೆ ವಿರುದ್ಧ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿಯನ್ನು ಬಿಜೆಪಿ ನಡೆಸಿದೆ. ರಾಜ್ಯ ಸರ್ಕಾರ ಸಚಿವ ಸಂಪುಟದ ಉಪಸಮಿತಿಯ ಮೊರೆ ಹೋಗಿದೆ. ಇದರ ನಡುವೆ ಹಿಂದಿನ ದಶಕದ ‘ಗಣಿ ವೈಭವದ’ ಕತೆಗಳು ಪರಸ್ಪರ ಆರೋಪಾಧನೆಯಲ್ಲಿ ಜಿಟಿಜಿಟಿ ಮಳೆಯ ರೂಪದಲ್ಲಿ ಪ್ರಚಲಿತಕ್ಕೆ ಬಂದಿವೆ. ಆದರೆ, ಅಕ್ರಮ ಅದಿರಿನ ವ್ಯವಹಾರದ ಕಡತಗಳ ಮೇಲಿನ ಧೂಳು ಕೊಡವಲೂ ಯಾರದೂ ಒತಾಯ್ತವೇ ಇಲ್ಲ…

ಆಡಳಿತ ಮತ್ತು ವಿಪಕ್ಷಗಳು ಈಗ ಜೊಂದಾಲ್ ಭೂಮಿ ಪ್ರಕರಣದಲ್ಲಿ ಎಚ್ಚರಿಕೆಯ ನಡೆಯನ್ನೇ ಇಡುತ್ತಿವೆ. ಇದರ ವಿರುದ್ಧ ರಾಜ್ಯಾದ್ಯಂತ ಬಿರುಗಾಳಿಯಂತಹ ಪ್ರತಿಭಟನೆ ಮಾಡಬೇಕಿದ್ದ ಬಿಜೆಪಿ ಬೆಂಗಳೂರಿನ ಸರ್ಕಲ್‍ವೊಂದರಲ್ಲಿ ಹಾಸು ಹೊದ್ದಿ ಮಲಗಿ ಎದ್ದು ಹೋಗಿದೆ. ಸರ್ಕಾರ ಉಪಸಮಿತಿ ಎಂಬ ಜಿಟಿಜಿಟಿ ಮಳೆ ಉದುರಿಸಿ ಕಾಲ ತಳ್ಳಲು ಹೊರಟಿದೆ. ಜಿಂದಾಲ್ ಗೆ ಭೂಮಿ ಕೊಡುವುದನ್ನು ವಿರೋಧಿಸಿ ಬಳ್ಳಾರಿಗೆ ಪಾದಯಾತ್ರೆ ಮಾಡುವುದಿಲ್ಲ, ನಮ್ಮ ಹೋರಾಟ ಇಷ್ಟೇ ಎಂದು ಯಡಿಯೂರಪ್ಪ ಘೋಷಿಸಿದ್ದಾರೆ. ಭಾರಿ ಬಿರುಗಾಳಿ ಎಬ್ಬಿಸಲು ಯಾರಿಗೂ ಮನಸ್ಸಿಲ್ಲ. ಈ ಬಿರುಗಾಳಿ ಬಳ್ಳಾರಿಯ ಅಕ್ರಮ ಗಣಿ ಕಡತಗಳ ಮೇಲೆ ವ್ಯವಸ್ಥೆಯೇ ಕೃತಕವಾಗಿ ಹರಡಿರುವ ಧೂಳನ್ನು ಹುಡಿ ಎಬ್ಬಿಸಿ ಬಿಡುತ್ತದೋ ಎಂಬ ಭಯ!

ಸಿಎಂ ಪ್ರಚೋದನೆ: ಯಡಿಯೂರಪ್ಪಗೆ ‘ಪ್ರೇರಣೆ’
ಚನ್ನಪಟ್ಟಣದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ, ಜಿಂದಾಲ್ ಜೊತೆ ಲೀಸ್ ಕಮ್ ಸೇಲ್ ಒಪ್ಪಂದ ಮಾಡಿಕೊಂಡಿದ್ದು ಯಡಿಯೂರಪ್ಪ ಅವಧಿಯಲ್ಲಿ. ಈಗ ಅವರೇ ಸೇಲ್ ಬೇಡ ಎನ್ನುತ್ತಿದ್ದಾರೆ… ಯಡಿಯೂರಪ್ಪ ಜಿಂದಾಲ್‍ನಿಂದ 20 ಕೋಟಿ ಪಡೆದಿದ್ದರು..’ ಎಂದು ಹೇಳಿದ ಕೂಡಲೇ ಅಹೋರಾತ್ರಿಯೇ ‘ಪ್ರೇರಣೆ’ಗೊಂಡ ಯಡಿಯೂರಪ್ಪ, ಆ ಪ್ರಕರಣದಲ್ಲಿ ಸಿಬಿಐ ಕೋರ್ಟು ತನಗೆ ಕ್ಲೀನ್‍ಚಿಟ್ ನೀಡಿದೆ’ ಎಂದು ಪ್ರತ್ಯುತ್ತರ ನೀಡಿದ್ದಾರೆ. ಆದರೆ 2016ರಲ್ಲಿ ಸಿಬಿಐ ಕೋರ್ಟು ಈ ಪ್ರಕರಣದಲ್ಲಿ ಯಡಿಯೂರಪ್ಪ, ಅವರ ಮಗ ರಾಘವೇಂದ್ರ ಮತ್ತು ಅಳಿಯ ಸೋಹಲ್‍ರನ್ನು ಮುಕ್ತಿಗೊಳಿಸಿತ್ತು. ಪ್ರಾಸಿಕ್ಯೂಷನ್ ಸರಿಯಾದ ಸಾಕ್ಷ್ಯ ಒದಗಿಸಿಲ್ಲ ಎಂಬುದು ಕೋರ್ಟಿನ ವಿವರಣೆಯಾಗಿತ್ತು. ತಮ್ಮ ಅಧಿಕಾರ ಬಳಸಿ ಯಡಿಯೂರಪ್ಪ ಜಿಂದಾಲ್‍ಗೆ ಫೆವರ್ ಮಾಡಿದರು ಅಥವಾ ಜಿಂದಾಲ್ ಆ ಕಾರಣಕ್ಕೆ ಪ್ರೇರಣಾಕ್ಕೆ 20 ಕೋಟಿ ದೇಣಿಗೆ ನೀಡಿತ್ತು ಎಂಬುದಕ್ಕೆ ಆಧಾರಗಳಿಲ್ಲ ಎಂಬುದಷ್ಟೇ ಅದರ ಸಾರಾಂಶವಾಗಿತ್ತು.

ಬೆಂಗಳೂರಿನ ರಾಚೇನಹಳ್ಳಿಯಲ್ಲಿ ಡಿನೋಟಿಫೈ ಆದ ಭೂಮಿಯನ್ನು ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪದ ಹತ್ತಿರದ ಸಂಬಂಧಿ 40 ಲಕ್ಷಕ್ಕೆ ಖರೀದಿಸಿ ನಂತರ ಜಿಂದಾಲ್‍ನ ಅಂಗಸಂಸ್ಥೆ ಸೌಥ್ ವೆಸ್ಟ್ ಮೈನಿಂಗ್ ಕಂಪನಿಗೆ 20 ಕೋಟಿ ರೂ.ಗೆ ಮಾರಿದ್ದರು. ಯಡಿಯೂರಪ್ಪ ಪುತ್ರ ರಾಘವೇಂದ್ರ ಮತ್ತು ಅಳಿಯ ಸೋಹನ್ ಒಡೆತನದ ಪ್ರೇರಣಾ ಟ್ರಸ್ಟ್‍ಗೆ ಜಿಂದಾಲ್ ದೇಣಿಗೆ ನೀಡಿತ್ತು. ಇದೆಲ್ಲ 2008-11ರ ಅವಧಿಯಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ನಡೆದ ಘಟನೆಗಳು.
ಅದಿರು ಧೂಳು ಕೊಡವಲು ಸಿದ್ಧರಿಲ್ಲ!

ಗಣಿ ಅಕ್ರಮಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಸಿದ್ದರಾಮಯ್ಯ ರಚಿಸಿದ್ದ ಉಪಸಮಿತಿಯ ವರದಿಯ ಶಿಫಾರಸುಗಳನ್ನು ಇಂದಿಗೂ ಜಾರಿಗೆ ತಂದಿಲ್ಲ. ಹತ್ತಾರು ಗಣಿಗಳ್ಳರು ಮತ್ತು 700 ಚಿಲ್ಲರೆ ಅಧಿಕಾರಿಗಳ ಮೇಲೆ ಯಾವ ಕ್ರಮವನ್ನೂ ತೆಗೆದುಕೊಂಡಿಲ್ಲ. ಇದೆಲ್ಲ ಮೂರೂ ಪಕ್ಷಗಳಿಗೂ ಬೇಡವಾದ ಸಂಗತಿಯೇ ಆಗಿದೆ. ಇನ್ನು ಮೈಸೂರ್ ಮಿನರಲ್ಸ್‍ಗೆ (ಎಂಎಂಎಲ್) ಜಿಂದಾಲ್ ವಂಚಿಸಿದ ಕತೆ ಶುರುವಾಗಿದ್ದು 2001ರಿಂದಲೇ. 2001-10ರ ಅವಧಿಯಲ್ಲಿ ಜಿಂದಾಲ್ ಎಂಎಂಎಲ್‍ಗೆ ಕಡಿಮೆ ಪ್ರಿಮಿಯಮ್ ದರದಲ್ಲಿ ಅದಿರನ್ನು ನೀಡಿತ್ತು. ಈ ಅವಧಿಯಲ್ಲಿ 1,059.89 ಕೋಟಿ ಮೌಲ್ಯದ 9.25 ಮಿಲಿಯನ್ ಟನ್ ಅದಿರನ್ನು ಮೈನಿಂಗ್ ಮಾಡಿದ್ದ ಜಿಂದಾಲ್ ಎಂಎಂಎಲ್‍ಗೆ ಕೇವಲ 62.17 ಕೋಟಿ ಪ್ರಿಮಿಯಮ್ ನೀಡಿತ್ತು, ಜಿಂದಾಲ್ ಈ ವ್ಯವಹಾರದಲ್ಲಿ 879.19 ಕೋಟಿ ಅನಾಮತ್ತು ಲಾಭ ಪಡೆದಿತ್ತು ಎಂದು 2013ರಲ್ಲಿ ಸಿಎಜಿ ವರದಿ ಹೇಳಿತ್ತು. ಆದರೆ ಸಿದ್ದರಾಮಯ್ಯ ಸರ್ಕಾರವೂ ಕ್ರಮ ಕೈಗೊಳ್ಳಲಿಲ್ಲ, ಎರಡೂ ವಿಪಕ್ಷಗಳಿಗೂ ಇದು ಬೇಕಾಗಿರಲಿಲ್ಲ.

ರಾಜ್ಯ ಅಧೀನದ ಸಂಸ್ಥೆ ಎಂಎಂಎಲ್‍ಗೆ ವಂಚನೆ ಎಂದರೆ ರಾಜ್ಯದ ಬೊಕ್ಕಸಕ್ಕೆ ವಂಚನೆ. ನಮ್ಮದೇ ಸಂಸ್ಥೆಯನ್ನು ತುಳಿದು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವುದೇ ಖಾಸಗೀಕರಣದ ಮೊದಲ ಪಾಠ. ಈ ಪಾಠದ ಅಂತ್ಯದಲ್ಲಿ ಕಿಕ್‍ಬ್ಯಾಕ್ ಪಕ್ಕಾ ಎಂದು ಅಲಿಖಿತ ಸಾಲೂ ಇದೆ! ಒಟ್ಟಿಗೆ ಎಂಎಂಎಲ್‍ಗೆ 1,200 ಕೋಟಿ (ಬಡ್ಡಿ ಸೇರಿದರೆ ಅಂದಾಜು 2 ಸಾವಿರ ಕೋಟಿ) ಹಣವನ್ನು ಜಿಂದಾಲ್‍ನಿಂದ ಕಕ್ಕಿಸುವ ಕೆಲಸಕ್ಕೆ ಯಾರಿಗೂ ಆಸಕ್ತಿಯೇ ಇಲ್ಲವೇ? ಅಷ್ಟು ಹಣ ಸರ್ಕಾರದ ಬೊಕ್ಕಸಕ್ಕೆ ಬಂದರೆ ನೂರಾರು ಅಭಿವೃದ್ದಿ ಕೆಲಸಗಳನ್ನು ಮಾಡಬೇಕಲ್ಲವೇ? ಜಿಂದಾಲ್ ಬಳಿ ಕೊಡಲು ಅಷ್ಟು ಹಣವಿಲ್ಲವೇ? ಆದರೂ 2001ರಿಂದ 2019ರವರೆಗೆ ಈಗಿನ ಕುಮಾರಸ್ವಾಮಿ ಸೇರಿ ಎಂಟು ಮುಖ್ಯಮಂತ್ರಿಗಳು ಆಳಿದ್ದಾರೆ/ಆಳುತ್ತಿದ್ದಾರೆ. ಯಾರಿಗೂ ತಾರ್ಕಿಕ ಅಂತ್ಯಕ್ಕೆ ಹೋಗಲು ಇಷ್ಟವಿಲ್ಲ.

ಜಿಂದಾಲ್‍ಗೆ ಭೂಮಿ ಮಾರಾಟದ ಸುದ್ದಿ ಜಿಟಿ ಜಿಟಿ ಮಳೆಯಲ್ಲಿ ಹಿಂದಕ್ಕೆ ಸರಿಯುತ್ತದೆ, ಉಪ ಸಮಿತಿ ‘ಸಮಾಲೋಚನೆ’ ನಡೆಸುತ್ತದೆ. ಆ ಹೊತ್ತಿಗೆ ಮತ್ತೆ ಆಪರೇಷನ್ ಕಮಲದ 14ನೇ ಅಂಕ ಶುರುವಾಗಿರುತ್ತದೆ. ಗಣಿ ಧೂಳಲ್ಲಿ ಎಲ್ಲ ಮರೆತೇ ಹೋಗುತ್ತದೆ. ದೆಹಲಿಯಲ್ಲಿ ಸಜ್ಜನ್ ಮುಖದಲ್ಲಿ ಸಿಂಚನ ಅರಳುತ್ತದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...