Homeಕರ್ನಾಟಕಜಿಂದಾಲ್‍ಗೆ ಭೂಮಿ: ಕೊಟ್ಟರೋ, ಬಿಟ್ಟರೊ? ಈಗೇನಾಗುತ್ತಿದೆ ಗೊತ್ತೆ?

ಜಿಂದಾಲ್‍ಗೆ ಭೂಮಿ: ಕೊಟ್ಟರೋ, ಬಿಟ್ಟರೊ? ಈಗೇನಾಗುತ್ತಿದೆ ಗೊತ್ತೆ?

ಬೆಂಗಳೂರಿನ ರಾಚೇನಹಳ್ಳಿಯಲ್ಲಿ ಡಿನೋಟಿಫೈ ಆದ ಭೂಮಿಯನ್ನು ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪದ ಹತ್ತಿರದ ಸಂಬಂಧಿ 40 ಲಕ್ಷಕ್ಕೆ ಖರೀದಿಸಿ ನಂತರ ಜಿಂದಾಲ್‍ನ ಅಂಗಸಂಸ್ಥೆ ಸೌಥ್ ವೆಸ್ಟ್ ಮೈನಿಂಗ್ ಕಂಪನಿಗೆ 20 ಕೋಟಿ ರೂ.ಗೆ ಮಾರಿದ್ದರು.

- Advertisement -
- Advertisement -

| ಮಲ್ಲನಗೌಡರ್ |

ಜಿಂದಾಲ್‍ಗೆ ಭೂಮಿ ಮಾರುವ ಸರ್ಕಾರದ ನಡೆ ವಿರುದ್ಧ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿಯನ್ನು ಬಿಜೆಪಿ ನಡೆಸಿದೆ. ರಾಜ್ಯ ಸರ್ಕಾರ ಸಚಿವ ಸಂಪುಟದ ಉಪಸಮಿತಿಯ ಮೊರೆ ಹೋಗಿದೆ. ಇದರ ನಡುವೆ ಹಿಂದಿನ ದಶಕದ ‘ಗಣಿ ವೈಭವದ’ ಕತೆಗಳು ಪರಸ್ಪರ ಆರೋಪಾಧನೆಯಲ್ಲಿ ಜಿಟಿಜಿಟಿ ಮಳೆಯ ರೂಪದಲ್ಲಿ ಪ್ರಚಲಿತಕ್ಕೆ ಬಂದಿವೆ. ಆದರೆ, ಅಕ್ರಮ ಅದಿರಿನ ವ್ಯವಹಾರದ ಕಡತಗಳ ಮೇಲಿನ ಧೂಳು ಕೊಡವಲೂ ಯಾರದೂ ಒತಾಯ್ತವೇ ಇಲ್ಲ…

ಆಡಳಿತ ಮತ್ತು ವಿಪಕ್ಷಗಳು ಈಗ ಜೊಂದಾಲ್ ಭೂಮಿ ಪ್ರಕರಣದಲ್ಲಿ ಎಚ್ಚರಿಕೆಯ ನಡೆಯನ್ನೇ ಇಡುತ್ತಿವೆ. ಇದರ ವಿರುದ್ಧ ರಾಜ್ಯಾದ್ಯಂತ ಬಿರುಗಾಳಿಯಂತಹ ಪ್ರತಿಭಟನೆ ಮಾಡಬೇಕಿದ್ದ ಬಿಜೆಪಿ ಬೆಂಗಳೂರಿನ ಸರ್ಕಲ್‍ವೊಂದರಲ್ಲಿ ಹಾಸು ಹೊದ್ದಿ ಮಲಗಿ ಎದ್ದು ಹೋಗಿದೆ. ಸರ್ಕಾರ ಉಪಸಮಿತಿ ಎಂಬ ಜಿಟಿಜಿಟಿ ಮಳೆ ಉದುರಿಸಿ ಕಾಲ ತಳ್ಳಲು ಹೊರಟಿದೆ. ಜಿಂದಾಲ್ ಗೆ ಭೂಮಿ ಕೊಡುವುದನ್ನು ವಿರೋಧಿಸಿ ಬಳ್ಳಾರಿಗೆ ಪಾದಯಾತ್ರೆ ಮಾಡುವುದಿಲ್ಲ, ನಮ್ಮ ಹೋರಾಟ ಇಷ್ಟೇ ಎಂದು ಯಡಿಯೂರಪ್ಪ ಘೋಷಿಸಿದ್ದಾರೆ. ಭಾರಿ ಬಿರುಗಾಳಿ ಎಬ್ಬಿಸಲು ಯಾರಿಗೂ ಮನಸ್ಸಿಲ್ಲ. ಈ ಬಿರುಗಾಳಿ ಬಳ್ಳಾರಿಯ ಅಕ್ರಮ ಗಣಿ ಕಡತಗಳ ಮೇಲೆ ವ್ಯವಸ್ಥೆಯೇ ಕೃತಕವಾಗಿ ಹರಡಿರುವ ಧೂಳನ್ನು ಹುಡಿ ಎಬ್ಬಿಸಿ ಬಿಡುತ್ತದೋ ಎಂಬ ಭಯ!

ಸಿಎಂ ಪ್ರಚೋದನೆ: ಯಡಿಯೂರಪ್ಪಗೆ ‘ಪ್ರೇರಣೆ’
ಚನ್ನಪಟ್ಟಣದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ, ಜಿಂದಾಲ್ ಜೊತೆ ಲೀಸ್ ಕಮ್ ಸೇಲ್ ಒಪ್ಪಂದ ಮಾಡಿಕೊಂಡಿದ್ದು ಯಡಿಯೂರಪ್ಪ ಅವಧಿಯಲ್ಲಿ. ಈಗ ಅವರೇ ಸೇಲ್ ಬೇಡ ಎನ್ನುತ್ತಿದ್ದಾರೆ… ಯಡಿಯೂರಪ್ಪ ಜಿಂದಾಲ್‍ನಿಂದ 20 ಕೋಟಿ ಪಡೆದಿದ್ದರು..’ ಎಂದು ಹೇಳಿದ ಕೂಡಲೇ ಅಹೋರಾತ್ರಿಯೇ ‘ಪ್ರೇರಣೆ’ಗೊಂಡ ಯಡಿಯೂರಪ್ಪ, ಆ ಪ್ರಕರಣದಲ್ಲಿ ಸಿಬಿಐ ಕೋರ್ಟು ತನಗೆ ಕ್ಲೀನ್‍ಚಿಟ್ ನೀಡಿದೆ’ ಎಂದು ಪ್ರತ್ಯುತ್ತರ ನೀಡಿದ್ದಾರೆ. ಆದರೆ 2016ರಲ್ಲಿ ಸಿಬಿಐ ಕೋರ್ಟು ಈ ಪ್ರಕರಣದಲ್ಲಿ ಯಡಿಯೂರಪ್ಪ, ಅವರ ಮಗ ರಾಘವೇಂದ್ರ ಮತ್ತು ಅಳಿಯ ಸೋಹಲ್‍ರನ್ನು ಮುಕ್ತಿಗೊಳಿಸಿತ್ತು. ಪ್ರಾಸಿಕ್ಯೂಷನ್ ಸರಿಯಾದ ಸಾಕ್ಷ್ಯ ಒದಗಿಸಿಲ್ಲ ಎಂಬುದು ಕೋರ್ಟಿನ ವಿವರಣೆಯಾಗಿತ್ತು. ತಮ್ಮ ಅಧಿಕಾರ ಬಳಸಿ ಯಡಿಯೂರಪ್ಪ ಜಿಂದಾಲ್‍ಗೆ ಫೆವರ್ ಮಾಡಿದರು ಅಥವಾ ಜಿಂದಾಲ್ ಆ ಕಾರಣಕ್ಕೆ ಪ್ರೇರಣಾಕ್ಕೆ 20 ಕೋಟಿ ದೇಣಿಗೆ ನೀಡಿತ್ತು ಎಂಬುದಕ್ಕೆ ಆಧಾರಗಳಿಲ್ಲ ಎಂಬುದಷ್ಟೇ ಅದರ ಸಾರಾಂಶವಾಗಿತ್ತು.

ಬೆಂಗಳೂರಿನ ರಾಚೇನಹಳ್ಳಿಯಲ್ಲಿ ಡಿನೋಟಿಫೈ ಆದ ಭೂಮಿಯನ್ನು ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪದ ಹತ್ತಿರದ ಸಂಬಂಧಿ 40 ಲಕ್ಷಕ್ಕೆ ಖರೀದಿಸಿ ನಂತರ ಜಿಂದಾಲ್‍ನ ಅಂಗಸಂಸ್ಥೆ ಸೌಥ್ ವೆಸ್ಟ್ ಮೈನಿಂಗ್ ಕಂಪನಿಗೆ 20 ಕೋಟಿ ರೂ.ಗೆ ಮಾರಿದ್ದರು. ಯಡಿಯೂರಪ್ಪ ಪುತ್ರ ರಾಘವೇಂದ್ರ ಮತ್ತು ಅಳಿಯ ಸೋಹನ್ ಒಡೆತನದ ಪ್ರೇರಣಾ ಟ್ರಸ್ಟ್‍ಗೆ ಜಿಂದಾಲ್ ದೇಣಿಗೆ ನೀಡಿತ್ತು. ಇದೆಲ್ಲ 2008-11ರ ಅವಧಿಯಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ನಡೆದ ಘಟನೆಗಳು.
ಅದಿರು ಧೂಳು ಕೊಡವಲು ಸಿದ್ಧರಿಲ್ಲ!

ಗಣಿ ಅಕ್ರಮಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಸಿದ್ದರಾಮಯ್ಯ ರಚಿಸಿದ್ದ ಉಪಸಮಿತಿಯ ವರದಿಯ ಶಿಫಾರಸುಗಳನ್ನು ಇಂದಿಗೂ ಜಾರಿಗೆ ತಂದಿಲ್ಲ. ಹತ್ತಾರು ಗಣಿಗಳ್ಳರು ಮತ್ತು 700 ಚಿಲ್ಲರೆ ಅಧಿಕಾರಿಗಳ ಮೇಲೆ ಯಾವ ಕ್ರಮವನ್ನೂ ತೆಗೆದುಕೊಂಡಿಲ್ಲ. ಇದೆಲ್ಲ ಮೂರೂ ಪಕ್ಷಗಳಿಗೂ ಬೇಡವಾದ ಸಂಗತಿಯೇ ಆಗಿದೆ. ಇನ್ನು ಮೈಸೂರ್ ಮಿನರಲ್ಸ್‍ಗೆ (ಎಂಎಂಎಲ್) ಜಿಂದಾಲ್ ವಂಚಿಸಿದ ಕತೆ ಶುರುವಾಗಿದ್ದು 2001ರಿಂದಲೇ. 2001-10ರ ಅವಧಿಯಲ್ಲಿ ಜಿಂದಾಲ್ ಎಂಎಂಎಲ್‍ಗೆ ಕಡಿಮೆ ಪ್ರಿಮಿಯಮ್ ದರದಲ್ಲಿ ಅದಿರನ್ನು ನೀಡಿತ್ತು. ಈ ಅವಧಿಯಲ್ಲಿ 1,059.89 ಕೋಟಿ ಮೌಲ್ಯದ 9.25 ಮಿಲಿಯನ್ ಟನ್ ಅದಿರನ್ನು ಮೈನಿಂಗ್ ಮಾಡಿದ್ದ ಜಿಂದಾಲ್ ಎಂಎಂಎಲ್‍ಗೆ ಕೇವಲ 62.17 ಕೋಟಿ ಪ್ರಿಮಿಯಮ್ ನೀಡಿತ್ತು, ಜಿಂದಾಲ್ ಈ ವ್ಯವಹಾರದಲ್ಲಿ 879.19 ಕೋಟಿ ಅನಾಮತ್ತು ಲಾಭ ಪಡೆದಿತ್ತು ಎಂದು 2013ರಲ್ಲಿ ಸಿಎಜಿ ವರದಿ ಹೇಳಿತ್ತು. ಆದರೆ ಸಿದ್ದರಾಮಯ್ಯ ಸರ್ಕಾರವೂ ಕ್ರಮ ಕೈಗೊಳ್ಳಲಿಲ್ಲ, ಎರಡೂ ವಿಪಕ್ಷಗಳಿಗೂ ಇದು ಬೇಕಾಗಿರಲಿಲ್ಲ.

ರಾಜ್ಯ ಅಧೀನದ ಸಂಸ್ಥೆ ಎಂಎಂಎಲ್‍ಗೆ ವಂಚನೆ ಎಂದರೆ ರಾಜ್ಯದ ಬೊಕ್ಕಸಕ್ಕೆ ವಂಚನೆ. ನಮ್ಮದೇ ಸಂಸ್ಥೆಯನ್ನು ತುಳಿದು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವುದೇ ಖಾಸಗೀಕರಣದ ಮೊದಲ ಪಾಠ. ಈ ಪಾಠದ ಅಂತ್ಯದಲ್ಲಿ ಕಿಕ್‍ಬ್ಯಾಕ್ ಪಕ್ಕಾ ಎಂದು ಅಲಿಖಿತ ಸಾಲೂ ಇದೆ! ಒಟ್ಟಿಗೆ ಎಂಎಂಎಲ್‍ಗೆ 1,200 ಕೋಟಿ (ಬಡ್ಡಿ ಸೇರಿದರೆ ಅಂದಾಜು 2 ಸಾವಿರ ಕೋಟಿ) ಹಣವನ್ನು ಜಿಂದಾಲ್‍ನಿಂದ ಕಕ್ಕಿಸುವ ಕೆಲಸಕ್ಕೆ ಯಾರಿಗೂ ಆಸಕ್ತಿಯೇ ಇಲ್ಲವೇ? ಅಷ್ಟು ಹಣ ಸರ್ಕಾರದ ಬೊಕ್ಕಸಕ್ಕೆ ಬಂದರೆ ನೂರಾರು ಅಭಿವೃದ್ದಿ ಕೆಲಸಗಳನ್ನು ಮಾಡಬೇಕಲ್ಲವೇ? ಜಿಂದಾಲ್ ಬಳಿ ಕೊಡಲು ಅಷ್ಟು ಹಣವಿಲ್ಲವೇ? ಆದರೂ 2001ರಿಂದ 2019ರವರೆಗೆ ಈಗಿನ ಕುಮಾರಸ್ವಾಮಿ ಸೇರಿ ಎಂಟು ಮುಖ್ಯಮಂತ್ರಿಗಳು ಆಳಿದ್ದಾರೆ/ಆಳುತ್ತಿದ್ದಾರೆ. ಯಾರಿಗೂ ತಾರ್ಕಿಕ ಅಂತ್ಯಕ್ಕೆ ಹೋಗಲು ಇಷ್ಟವಿಲ್ಲ.

ಜಿಂದಾಲ್‍ಗೆ ಭೂಮಿ ಮಾರಾಟದ ಸುದ್ದಿ ಜಿಟಿ ಜಿಟಿ ಮಳೆಯಲ್ಲಿ ಹಿಂದಕ್ಕೆ ಸರಿಯುತ್ತದೆ, ಉಪ ಸಮಿತಿ ‘ಸಮಾಲೋಚನೆ’ ನಡೆಸುತ್ತದೆ. ಆ ಹೊತ್ತಿಗೆ ಮತ್ತೆ ಆಪರೇಷನ್ ಕಮಲದ 14ನೇ ಅಂಕ ಶುರುವಾಗಿರುತ್ತದೆ. ಗಣಿ ಧೂಳಲ್ಲಿ ಎಲ್ಲ ಮರೆತೇ ಹೋಗುತ್ತದೆ. ದೆಹಲಿಯಲ್ಲಿ ಸಜ್ಜನ್ ಮುಖದಲ್ಲಿ ಸಿಂಚನ ಅರಳುತ್ತದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...