Homeಕರ್ನಾಟಕಜಿಂದಾಲ್‍ಗೆ ಭೂಮಿ: ಕೊಟ್ಟರೋ, ಬಿಟ್ಟರೊ? ಈಗೇನಾಗುತ್ತಿದೆ ಗೊತ್ತೆ?

ಜಿಂದಾಲ್‍ಗೆ ಭೂಮಿ: ಕೊಟ್ಟರೋ, ಬಿಟ್ಟರೊ? ಈಗೇನಾಗುತ್ತಿದೆ ಗೊತ್ತೆ?

ಬೆಂಗಳೂರಿನ ರಾಚೇನಹಳ್ಳಿಯಲ್ಲಿ ಡಿನೋಟಿಫೈ ಆದ ಭೂಮಿಯನ್ನು ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪದ ಹತ್ತಿರದ ಸಂಬಂಧಿ 40 ಲಕ್ಷಕ್ಕೆ ಖರೀದಿಸಿ ನಂತರ ಜಿಂದಾಲ್‍ನ ಅಂಗಸಂಸ್ಥೆ ಸೌಥ್ ವೆಸ್ಟ್ ಮೈನಿಂಗ್ ಕಂಪನಿಗೆ 20 ಕೋಟಿ ರೂ.ಗೆ ಮಾರಿದ್ದರು.

- Advertisement -
- Advertisement -

| ಮಲ್ಲನಗೌಡರ್ |

ಜಿಂದಾಲ್‍ಗೆ ಭೂಮಿ ಮಾರುವ ಸರ್ಕಾರದ ನಡೆ ವಿರುದ್ಧ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿಯನ್ನು ಬಿಜೆಪಿ ನಡೆಸಿದೆ. ರಾಜ್ಯ ಸರ್ಕಾರ ಸಚಿವ ಸಂಪುಟದ ಉಪಸಮಿತಿಯ ಮೊರೆ ಹೋಗಿದೆ. ಇದರ ನಡುವೆ ಹಿಂದಿನ ದಶಕದ ‘ಗಣಿ ವೈಭವದ’ ಕತೆಗಳು ಪರಸ್ಪರ ಆರೋಪಾಧನೆಯಲ್ಲಿ ಜಿಟಿಜಿಟಿ ಮಳೆಯ ರೂಪದಲ್ಲಿ ಪ್ರಚಲಿತಕ್ಕೆ ಬಂದಿವೆ. ಆದರೆ, ಅಕ್ರಮ ಅದಿರಿನ ವ್ಯವಹಾರದ ಕಡತಗಳ ಮೇಲಿನ ಧೂಳು ಕೊಡವಲೂ ಯಾರದೂ ಒತಾಯ್ತವೇ ಇಲ್ಲ…

ಆಡಳಿತ ಮತ್ತು ವಿಪಕ್ಷಗಳು ಈಗ ಜೊಂದಾಲ್ ಭೂಮಿ ಪ್ರಕರಣದಲ್ಲಿ ಎಚ್ಚರಿಕೆಯ ನಡೆಯನ್ನೇ ಇಡುತ್ತಿವೆ. ಇದರ ವಿರುದ್ಧ ರಾಜ್ಯಾದ್ಯಂತ ಬಿರುಗಾಳಿಯಂತಹ ಪ್ರತಿಭಟನೆ ಮಾಡಬೇಕಿದ್ದ ಬಿಜೆಪಿ ಬೆಂಗಳೂರಿನ ಸರ್ಕಲ್‍ವೊಂದರಲ್ಲಿ ಹಾಸು ಹೊದ್ದಿ ಮಲಗಿ ಎದ್ದು ಹೋಗಿದೆ. ಸರ್ಕಾರ ಉಪಸಮಿತಿ ಎಂಬ ಜಿಟಿಜಿಟಿ ಮಳೆ ಉದುರಿಸಿ ಕಾಲ ತಳ್ಳಲು ಹೊರಟಿದೆ. ಜಿಂದಾಲ್ ಗೆ ಭೂಮಿ ಕೊಡುವುದನ್ನು ವಿರೋಧಿಸಿ ಬಳ್ಳಾರಿಗೆ ಪಾದಯಾತ್ರೆ ಮಾಡುವುದಿಲ್ಲ, ನಮ್ಮ ಹೋರಾಟ ಇಷ್ಟೇ ಎಂದು ಯಡಿಯೂರಪ್ಪ ಘೋಷಿಸಿದ್ದಾರೆ. ಭಾರಿ ಬಿರುಗಾಳಿ ಎಬ್ಬಿಸಲು ಯಾರಿಗೂ ಮನಸ್ಸಿಲ್ಲ. ಈ ಬಿರುಗಾಳಿ ಬಳ್ಳಾರಿಯ ಅಕ್ರಮ ಗಣಿ ಕಡತಗಳ ಮೇಲೆ ವ್ಯವಸ್ಥೆಯೇ ಕೃತಕವಾಗಿ ಹರಡಿರುವ ಧೂಳನ್ನು ಹುಡಿ ಎಬ್ಬಿಸಿ ಬಿಡುತ್ತದೋ ಎಂಬ ಭಯ!

ಸಿಎಂ ಪ್ರಚೋದನೆ: ಯಡಿಯೂರಪ್ಪಗೆ ‘ಪ್ರೇರಣೆ’
ಚನ್ನಪಟ್ಟಣದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ, ಜಿಂದಾಲ್ ಜೊತೆ ಲೀಸ್ ಕಮ್ ಸೇಲ್ ಒಪ್ಪಂದ ಮಾಡಿಕೊಂಡಿದ್ದು ಯಡಿಯೂರಪ್ಪ ಅವಧಿಯಲ್ಲಿ. ಈಗ ಅವರೇ ಸೇಲ್ ಬೇಡ ಎನ್ನುತ್ತಿದ್ದಾರೆ… ಯಡಿಯೂರಪ್ಪ ಜಿಂದಾಲ್‍ನಿಂದ 20 ಕೋಟಿ ಪಡೆದಿದ್ದರು..’ ಎಂದು ಹೇಳಿದ ಕೂಡಲೇ ಅಹೋರಾತ್ರಿಯೇ ‘ಪ್ರೇರಣೆ’ಗೊಂಡ ಯಡಿಯೂರಪ್ಪ, ಆ ಪ್ರಕರಣದಲ್ಲಿ ಸಿಬಿಐ ಕೋರ್ಟು ತನಗೆ ಕ್ಲೀನ್‍ಚಿಟ್ ನೀಡಿದೆ’ ಎಂದು ಪ್ರತ್ಯುತ್ತರ ನೀಡಿದ್ದಾರೆ. ಆದರೆ 2016ರಲ್ಲಿ ಸಿಬಿಐ ಕೋರ್ಟು ಈ ಪ್ರಕರಣದಲ್ಲಿ ಯಡಿಯೂರಪ್ಪ, ಅವರ ಮಗ ರಾಘವೇಂದ್ರ ಮತ್ತು ಅಳಿಯ ಸೋಹಲ್‍ರನ್ನು ಮುಕ್ತಿಗೊಳಿಸಿತ್ತು. ಪ್ರಾಸಿಕ್ಯೂಷನ್ ಸರಿಯಾದ ಸಾಕ್ಷ್ಯ ಒದಗಿಸಿಲ್ಲ ಎಂಬುದು ಕೋರ್ಟಿನ ವಿವರಣೆಯಾಗಿತ್ತು. ತಮ್ಮ ಅಧಿಕಾರ ಬಳಸಿ ಯಡಿಯೂರಪ್ಪ ಜಿಂದಾಲ್‍ಗೆ ಫೆವರ್ ಮಾಡಿದರು ಅಥವಾ ಜಿಂದಾಲ್ ಆ ಕಾರಣಕ್ಕೆ ಪ್ರೇರಣಾಕ್ಕೆ 20 ಕೋಟಿ ದೇಣಿಗೆ ನೀಡಿತ್ತು ಎಂಬುದಕ್ಕೆ ಆಧಾರಗಳಿಲ್ಲ ಎಂಬುದಷ್ಟೇ ಅದರ ಸಾರಾಂಶವಾಗಿತ್ತು.

ಬೆಂಗಳೂರಿನ ರಾಚೇನಹಳ್ಳಿಯಲ್ಲಿ ಡಿನೋಟಿಫೈ ಆದ ಭೂಮಿಯನ್ನು ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪದ ಹತ್ತಿರದ ಸಂಬಂಧಿ 40 ಲಕ್ಷಕ್ಕೆ ಖರೀದಿಸಿ ನಂತರ ಜಿಂದಾಲ್‍ನ ಅಂಗಸಂಸ್ಥೆ ಸೌಥ್ ವೆಸ್ಟ್ ಮೈನಿಂಗ್ ಕಂಪನಿಗೆ 20 ಕೋಟಿ ರೂ.ಗೆ ಮಾರಿದ್ದರು. ಯಡಿಯೂರಪ್ಪ ಪುತ್ರ ರಾಘವೇಂದ್ರ ಮತ್ತು ಅಳಿಯ ಸೋಹನ್ ಒಡೆತನದ ಪ್ರೇರಣಾ ಟ್ರಸ್ಟ್‍ಗೆ ಜಿಂದಾಲ್ ದೇಣಿಗೆ ನೀಡಿತ್ತು. ಇದೆಲ್ಲ 2008-11ರ ಅವಧಿಯಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ನಡೆದ ಘಟನೆಗಳು.
ಅದಿರು ಧೂಳು ಕೊಡವಲು ಸಿದ್ಧರಿಲ್ಲ!

ಗಣಿ ಅಕ್ರಮಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಸಿದ್ದರಾಮಯ್ಯ ರಚಿಸಿದ್ದ ಉಪಸಮಿತಿಯ ವರದಿಯ ಶಿಫಾರಸುಗಳನ್ನು ಇಂದಿಗೂ ಜಾರಿಗೆ ತಂದಿಲ್ಲ. ಹತ್ತಾರು ಗಣಿಗಳ್ಳರು ಮತ್ತು 700 ಚಿಲ್ಲರೆ ಅಧಿಕಾರಿಗಳ ಮೇಲೆ ಯಾವ ಕ್ರಮವನ್ನೂ ತೆಗೆದುಕೊಂಡಿಲ್ಲ. ಇದೆಲ್ಲ ಮೂರೂ ಪಕ್ಷಗಳಿಗೂ ಬೇಡವಾದ ಸಂಗತಿಯೇ ಆಗಿದೆ. ಇನ್ನು ಮೈಸೂರ್ ಮಿನರಲ್ಸ್‍ಗೆ (ಎಂಎಂಎಲ್) ಜಿಂದಾಲ್ ವಂಚಿಸಿದ ಕತೆ ಶುರುವಾಗಿದ್ದು 2001ರಿಂದಲೇ. 2001-10ರ ಅವಧಿಯಲ್ಲಿ ಜಿಂದಾಲ್ ಎಂಎಂಎಲ್‍ಗೆ ಕಡಿಮೆ ಪ್ರಿಮಿಯಮ್ ದರದಲ್ಲಿ ಅದಿರನ್ನು ನೀಡಿತ್ತು. ಈ ಅವಧಿಯಲ್ಲಿ 1,059.89 ಕೋಟಿ ಮೌಲ್ಯದ 9.25 ಮಿಲಿಯನ್ ಟನ್ ಅದಿರನ್ನು ಮೈನಿಂಗ್ ಮಾಡಿದ್ದ ಜಿಂದಾಲ್ ಎಂಎಂಎಲ್‍ಗೆ ಕೇವಲ 62.17 ಕೋಟಿ ಪ್ರಿಮಿಯಮ್ ನೀಡಿತ್ತು, ಜಿಂದಾಲ್ ಈ ವ್ಯವಹಾರದಲ್ಲಿ 879.19 ಕೋಟಿ ಅನಾಮತ್ತು ಲಾಭ ಪಡೆದಿತ್ತು ಎಂದು 2013ರಲ್ಲಿ ಸಿಎಜಿ ವರದಿ ಹೇಳಿತ್ತು. ಆದರೆ ಸಿದ್ದರಾಮಯ್ಯ ಸರ್ಕಾರವೂ ಕ್ರಮ ಕೈಗೊಳ್ಳಲಿಲ್ಲ, ಎರಡೂ ವಿಪಕ್ಷಗಳಿಗೂ ಇದು ಬೇಕಾಗಿರಲಿಲ್ಲ.

ರಾಜ್ಯ ಅಧೀನದ ಸಂಸ್ಥೆ ಎಂಎಂಎಲ್‍ಗೆ ವಂಚನೆ ಎಂದರೆ ರಾಜ್ಯದ ಬೊಕ್ಕಸಕ್ಕೆ ವಂಚನೆ. ನಮ್ಮದೇ ಸಂಸ್ಥೆಯನ್ನು ತುಳಿದು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವುದೇ ಖಾಸಗೀಕರಣದ ಮೊದಲ ಪಾಠ. ಈ ಪಾಠದ ಅಂತ್ಯದಲ್ಲಿ ಕಿಕ್‍ಬ್ಯಾಕ್ ಪಕ್ಕಾ ಎಂದು ಅಲಿಖಿತ ಸಾಲೂ ಇದೆ! ಒಟ್ಟಿಗೆ ಎಂಎಂಎಲ್‍ಗೆ 1,200 ಕೋಟಿ (ಬಡ್ಡಿ ಸೇರಿದರೆ ಅಂದಾಜು 2 ಸಾವಿರ ಕೋಟಿ) ಹಣವನ್ನು ಜಿಂದಾಲ್‍ನಿಂದ ಕಕ್ಕಿಸುವ ಕೆಲಸಕ್ಕೆ ಯಾರಿಗೂ ಆಸಕ್ತಿಯೇ ಇಲ್ಲವೇ? ಅಷ್ಟು ಹಣ ಸರ್ಕಾರದ ಬೊಕ್ಕಸಕ್ಕೆ ಬಂದರೆ ನೂರಾರು ಅಭಿವೃದ್ದಿ ಕೆಲಸಗಳನ್ನು ಮಾಡಬೇಕಲ್ಲವೇ? ಜಿಂದಾಲ್ ಬಳಿ ಕೊಡಲು ಅಷ್ಟು ಹಣವಿಲ್ಲವೇ? ಆದರೂ 2001ರಿಂದ 2019ರವರೆಗೆ ಈಗಿನ ಕುಮಾರಸ್ವಾಮಿ ಸೇರಿ ಎಂಟು ಮುಖ್ಯಮಂತ್ರಿಗಳು ಆಳಿದ್ದಾರೆ/ಆಳುತ್ತಿದ್ದಾರೆ. ಯಾರಿಗೂ ತಾರ್ಕಿಕ ಅಂತ್ಯಕ್ಕೆ ಹೋಗಲು ಇಷ್ಟವಿಲ್ಲ.

ಜಿಂದಾಲ್‍ಗೆ ಭೂಮಿ ಮಾರಾಟದ ಸುದ್ದಿ ಜಿಟಿ ಜಿಟಿ ಮಳೆಯಲ್ಲಿ ಹಿಂದಕ್ಕೆ ಸರಿಯುತ್ತದೆ, ಉಪ ಸಮಿತಿ ‘ಸಮಾಲೋಚನೆ’ ನಡೆಸುತ್ತದೆ. ಆ ಹೊತ್ತಿಗೆ ಮತ್ತೆ ಆಪರೇಷನ್ ಕಮಲದ 14ನೇ ಅಂಕ ಶುರುವಾಗಿರುತ್ತದೆ. ಗಣಿ ಧೂಳಲ್ಲಿ ಎಲ್ಲ ಮರೆತೇ ಹೋಗುತ್ತದೆ. ದೆಹಲಿಯಲ್ಲಿ ಸಜ್ಜನ್ ಮುಖದಲ್ಲಿ ಸಿಂಚನ ಅರಳುತ್ತದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...