Homeಕರ್ನಾಟಕಜಿಂದಾಲ್‍ಗೆ ಭೂಮಿ: ಕೊಟ್ಟರೋ, ಬಿಟ್ಟರೊ? ಈಗೇನಾಗುತ್ತಿದೆ ಗೊತ್ತೆ?

ಜಿಂದಾಲ್‍ಗೆ ಭೂಮಿ: ಕೊಟ್ಟರೋ, ಬಿಟ್ಟರೊ? ಈಗೇನಾಗುತ್ತಿದೆ ಗೊತ್ತೆ?

ಬೆಂಗಳೂರಿನ ರಾಚೇನಹಳ್ಳಿಯಲ್ಲಿ ಡಿನೋಟಿಫೈ ಆದ ಭೂಮಿಯನ್ನು ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪದ ಹತ್ತಿರದ ಸಂಬಂಧಿ 40 ಲಕ್ಷಕ್ಕೆ ಖರೀದಿಸಿ ನಂತರ ಜಿಂದಾಲ್‍ನ ಅಂಗಸಂಸ್ಥೆ ಸೌಥ್ ವೆಸ್ಟ್ ಮೈನಿಂಗ್ ಕಂಪನಿಗೆ 20 ಕೋಟಿ ರೂ.ಗೆ ಮಾರಿದ್ದರು.

- Advertisement -
- Advertisement -

| ಮಲ್ಲನಗೌಡರ್ |

ಜಿಂದಾಲ್‍ಗೆ ಭೂಮಿ ಮಾರುವ ಸರ್ಕಾರದ ನಡೆ ವಿರುದ್ಧ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿಯನ್ನು ಬಿಜೆಪಿ ನಡೆಸಿದೆ. ರಾಜ್ಯ ಸರ್ಕಾರ ಸಚಿವ ಸಂಪುಟದ ಉಪಸಮಿತಿಯ ಮೊರೆ ಹೋಗಿದೆ. ಇದರ ನಡುವೆ ಹಿಂದಿನ ದಶಕದ ‘ಗಣಿ ವೈಭವದ’ ಕತೆಗಳು ಪರಸ್ಪರ ಆರೋಪಾಧನೆಯಲ್ಲಿ ಜಿಟಿಜಿಟಿ ಮಳೆಯ ರೂಪದಲ್ಲಿ ಪ್ರಚಲಿತಕ್ಕೆ ಬಂದಿವೆ. ಆದರೆ, ಅಕ್ರಮ ಅದಿರಿನ ವ್ಯವಹಾರದ ಕಡತಗಳ ಮೇಲಿನ ಧೂಳು ಕೊಡವಲೂ ಯಾರದೂ ಒತಾಯ್ತವೇ ಇಲ್ಲ…

ಆಡಳಿತ ಮತ್ತು ವಿಪಕ್ಷಗಳು ಈಗ ಜೊಂದಾಲ್ ಭೂಮಿ ಪ್ರಕರಣದಲ್ಲಿ ಎಚ್ಚರಿಕೆಯ ನಡೆಯನ್ನೇ ಇಡುತ್ತಿವೆ. ಇದರ ವಿರುದ್ಧ ರಾಜ್ಯಾದ್ಯಂತ ಬಿರುಗಾಳಿಯಂತಹ ಪ್ರತಿಭಟನೆ ಮಾಡಬೇಕಿದ್ದ ಬಿಜೆಪಿ ಬೆಂಗಳೂರಿನ ಸರ್ಕಲ್‍ವೊಂದರಲ್ಲಿ ಹಾಸು ಹೊದ್ದಿ ಮಲಗಿ ಎದ್ದು ಹೋಗಿದೆ. ಸರ್ಕಾರ ಉಪಸಮಿತಿ ಎಂಬ ಜಿಟಿಜಿಟಿ ಮಳೆ ಉದುರಿಸಿ ಕಾಲ ತಳ್ಳಲು ಹೊರಟಿದೆ. ಜಿಂದಾಲ್ ಗೆ ಭೂಮಿ ಕೊಡುವುದನ್ನು ವಿರೋಧಿಸಿ ಬಳ್ಳಾರಿಗೆ ಪಾದಯಾತ್ರೆ ಮಾಡುವುದಿಲ್ಲ, ನಮ್ಮ ಹೋರಾಟ ಇಷ್ಟೇ ಎಂದು ಯಡಿಯೂರಪ್ಪ ಘೋಷಿಸಿದ್ದಾರೆ. ಭಾರಿ ಬಿರುಗಾಳಿ ಎಬ್ಬಿಸಲು ಯಾರಿಗೂ ಮನಸ್ಸಿಲ್ಲ. ಈ ಬಿರುಗಾಳಿ ಬಳ್ಳಾರಿಯ ಅಕ್ರಮ ಗಣಿ ಕಡತಗಳ ಮೇಲೆ ವ್ಯವಸ್ಥೆಯೇ ಕೃತಕವಾಗಿ ಹರಡಿರುವ ಧೂಳನ್ನು ಹುಡಿ ಎಬ್ಬಿಸಿ ಬಿಡುತ್ತದೋ ಎಂಬ ಭಯ!

ಸಿಎಂ ಪ್ರಚೋದನೆ: ಯಡಿಯೂರಪ್ಪಗೆ ‘ಪ್ರೇರಣೆ’
ಚನ್ನಪಟ್ಟಣದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ, ಜಿಂದಾಲ್ ಜೊತೆ ಲೀಸ್ ಕಮ್ ಸೇಲ್ ಒಪ್ಪಂದ ಮಾಡಿಕೊಂಡಿದ್ದು ಯಡಿಯೂರಪ್ಪ ಅವಧಿಯಲ್ಲಿ. ಈಗ ಅವರೇ ಸೇಲ್ ಬೇಡ ಎನ್ನುತ್ತಿದ್ದಾರೆ… ಯಡಿಯೂರಪ್ಪ ಜಿಂದಾಲ್‍ನಿಂದ 20 ಕೋಟಿ ಪಡೆದಿದ್ದರು..’ ಎಂದು ಹೇಳಿದ ಕೂಡಲೇ ಅಹೋರಾತ್ರಿಯೇ ‘ಪ್ರೇರಣೆ’ಗೊಂಡ ಯಡಿಯೂರಪ್ಪ, ಆ ಪ್ರಕರಣದಲ್ಲಿ ಸಿಬಿಐ ಕೋರ್ಟು ತನಗೆ ಕ್ಲೀನ್‍ಚಿಟ್ ನೀಡಿದೆ’ ಎಂದು ಪ್ರತ್ಯುತ್ತರ ನೀಡಿದ್ದಾರೆ. ಆದರೆ 2016ರಲ್ಲಿ ಸಿಬಿಐ ಕೋರ್ಟು ಈ ಪ್ರಕರಣದಲ್ಲಿ ಯಡಿಯೂರಪ್ಪ, ಅವರ ಮಗ ರಾಘವೇಂದ್ರ ಮತ್ತು ಅಳಿಯ ಸೋಹಲ್‍ರನ್ನು ಮುಕ್ತಿಗೊಳಿಸಿತ್ತು. ಪ್ರಾಸಿಕ್ಯೂಷನ್ ಸರಿಯಾದ ಸಾಕ್ಷ್ಯ ಒದಗಿಸಿಲ್ಲ ಎಂಬುದು ಕೋರ್ಟಿನ ವಿವರಣೆಯಾಗಿತ್ತು. ತಮ್ಮ ಅಧಿಕಾರ ಬಳಸಿ ಯಡಿಯೂರಪ್ಪ ಜಿಂದಾಲ್‍ಗೆ ಫೆವರ್ ಮಾಡಿದರು ಅಥವಾ ಜಿಂದಾಲ್ ಆ ಕಾರಣಕ್ಕೆ ಪ್ರೇರಣಾಕ್ಕೆ 20 ಕೋಟಿ ದೇಣಿಗೆ ನೀಡಿತ್ತು ಎಂಬುದಕ್ಕೆ ಆಧಾರಗಳಿಲ್ಲ ಎಂಬುದಷ್ಟೇ ಅದರ ಸಾರಾಂಶವಾಗಿತ್ತು.

ಬೆಂಗಳೂರಿನ ರಾಚೇನಹಳ್ಳಿಯಲ್ಲಿ ಡಿನೋಟಿಫೈ ಆದ ಭೂಮಿಯನ್ನು ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪದ ಹತ್ತಿರದ ಸಂಬಂಧಿ 40 ಲಕ್ಷಕ್ಕೆ ಖರೀದಿಸಿ ನಂತರ ಜಿಂದಾಲ್‍ನ ಅಂಗಸಂಸ್ಥೆ ಸೌಥ್ ವೆಸ್ಟ್ ಮೈನಿಂಗ್ ಕಂಪನಿಗೆ 20 ಕೋಟಿ ರೂ.ಗೆ ಮಾರಿದ್ದರು. ಯಡಿಯೂರಪ್ಪ ಪುತ್ರ ರಾಘವೇಂದ್ರ ಮತ್ತು ಅಳಿಯ ಸೋಹನ್ ಒಡೆತನದ ಪ್ರೇರಣಾ ಟ್ರಸ್ಟ್‍ಗೆ ಜಿಂದಾಲ್ ದೇಣಿಗೆ ನೀಡಿತ್ತು. ಇದೆಲ್ಲ 2008-11ರ ಅವಧಿಯಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ನಡೆದ ಘಟನೆಗಳು.
ಅದಿರು ಧೂಳು ಕೊಡವಲು ಸಿದ್ಧರಿಲ್ಲ!

ಗಣಿ ಅಕ್ರಮಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಸಿದ್ದರಾಮಯ್ಯ ರಚಿಸಿದ್ದ ಉಪಸಮಿತಿಯ ವರದಿಯ ಶಿಫಾರಸುಗಳನ್ನು ಇಂದಿಗೂ ಜಾರಿಗೆ ತಂದಿಲ್ಲ. ಹತ್ತಾರು ಗಣಿಗಳ್ಳರು ಮತ್ತು 700 ಚಿಲ್ಲರೆ ಅಧಿಕಾರಿಗಳ ಮೇಲೆ ಯಾವ ಕ್ರಮವನ್ನೂ ತೆಗೆದುಕೊಂಡಿಲ್ಲ. ಇದೆಲ್ಲ ಮೂರೂ ಪಕ್ಷಗಳಿಗೂ ಬೇಡವಾದ ಸಂಗತಿಯೇ ಆಗಿದೆ. ಇನ್ನು ಮೈಸೂರ್ ಮಿನರಲ್ಸ್‍ಗೆ (ಎಂಎಂಎಲ್) ಜಿಂದಾಲ್ ವಂಚಿಸಿದ ಕತೆ ಶುರುವಾಗಿದ್ದು 2001ರಿಂದಲೇ. 2001-10ರ ಅವಧಿಯಲ್ಲಿ ಜಿಂದಾಲ್ ಎಂಎಂಎಲ್‍ಗೆ ಕಡಿಮೆ ಪ್ರಿಮಿಯಮ್ ದರದಲ್ಲಿ ಅದಿರನ್ನು ನೀಡಿತ್ತು. ಈ ಅವಧಿಯಲ್ಲಿ 1,059.89 ಕೋಟಿ ಮೌಲ್ಯದ 9.25 ಮಿಲಿಯನ್ ಟನ್ ಅದಿರನ್ನು ಮೈನಿಂಗ್ ಮಾಡಿದ್ದ ಜಿಂದಾಲ್ ಎಂಎಂಎಲ್‍ಗೆ ಕೇವಲ 62.17 ಕೋಟಿ ಪ್ರಿಮಿಯಮ್ ನೀಡಿತ್ತು, ಜಿಂದಾಲ್ ಈ ವ್ಯವಹಾರದಲ್ಲಿ 879.19 ಕೋಟಿ ಅನಾಮತ್ತು ಲಾಭ ಪಡೆದಿತ್ತು ಎಂದು 2013ರಲ್ಲಿ ಸಿಎಜಿ ವರದಿ ಹೇಳಿತ್ತು. ಆದರೆ ಸಿದ್ದರಾಮಯ್ಯ ಸರ್ಕಾರವೂ ಕ್ರಮ ಕೈಗೊಳ್ಳಲಿಲ್ಲ, ಎರಡೂ ವಿಪಕ್ಷಗಳಿಗೂ ಇದು ಬೇಕಾಗಿರಲಿಲ್ಲ.

ರಾಜ್ಯ ಅಧೀನದ ಸಂಸ್ಥೆ ಎಂಎಂಎಲ್‍ಗೆ ವಂಚನೆ ಎಂದರೆ ರಾಜ್ಯದ ಬೊಕ್ಕಸಕ್ಕೆ ವಂಚನೆ. ನಮ್ಮದೇ ಸಂಸ್ಥೆಯನ್ನು ತುಳಿದು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವುದೇ ಖಾಸಗೀಕರಣದ ಮೊದಲ ಪಾಠ. ಈ ಪಾಠದ ಅಂತ್ಯದಲ್ಲಿ ಕಿಕ್‍ಬ್ಯಾಕ್ ಪಕ್ಕಾ ಎಂದು ಅಲಿಖಿತ ಸಾಲೂ ಇದೆ! ಒಟ್ಟಿಗೆ ಎಂಎಂಎಲ್‍ಗೆ 1,200 ಕೋಟಿ (ಬಡ್ಡಿ ಸೇರಿದರೆ ಅಂದಾಜು 2 ಸಾವಿರ ಕೋಟಿ) ಹಣವನ್ನು ಜಿಂದಾಲ್‍ನಿಂದ ಕಕ್ಕಿಸುವ ಕೆಲಸಕ್ಕೆ ಯಾರಿಗೂ ಆಸಕ್ತಿಯೇ ಇಲ್ಲವೇ? ಅಷ್ಟು ಹಣ ಸರ್ಕಾರದ ಬೊಕ್ಕಸಕ್ಕೆ ಬಂದರೆ ನೂರಾರು ಅಭಿವೃದ್ದಿ ಕೆಲಸಗಳನ್ನು ಮಾಡಬೇಕಲ್ಲವೇ? ಜಿಂದಾಲ್ ಬಳಿ ಕೊಡಲು ಅಷ್ಟು ಹಣವಿಲ್ಲವೇ? ಆದರೂ 2001ರಿಂದ 2019ರವರೆಗೆ ಈಗಿನ ಕುಮಾರಸ್ವಾಮಿ ಸೇರಿ ಎಂಟು ಮುಖ್ಯಮಂತ್ರಿಗಳು ಆಳಿದ್ದಾರೆ/ಆಳುತ್ತಿದ್ದಾರೆ. ಯಾರಿಗೂ ತಾರ್ಕಿಕ ಅಂತ್ಯಕ್ಕೆ ಹೋಗಲು ಇಷ್ಟವಿಲ್ಲ.

ಜಿಂದಾಲ್‍ಗೆ ಭೂಮಿ ಮಾರಾಟದ ಸುದ್ದಿ ಜಿಟಿ ಜಿಟಿ ಮಳೆಯಲ್ಲಿ ಹಿಂದಕ್ಕೆ ಸರಿಯುತ್ತದೆ, ಉಪ ಸಮಿತಿ ‘ಸಮಾಲೋಚನೆ’ ನಡೆಸುತ್ತದೆ. ಆ ಹೊತ್ತಿಗೆ ಮತ್ತೆ ಆಪರೇಷನ್ ಕಮಲದ 14ನೇ ಅಂಕ ಶುರುವಾಗಿರುತ್ತದೆ. ಗಣಿ ಧೂಳಲ್ಲಿ ಎಲ್ಲ ಮರೆತೇ ಹೋಗುತ್ತದೆ. ದೆಹಲಿಯಲ್ಲಿ ಸಜ್ಜನ್ ಮುಖದಲ್ಲಿ ಸಿಂಚನ ಅರಳುತ್ತದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...