Homeಕರ್ನಾಟಕಜಿಂದಾಲ್‍ಗೆ ಭೂಮಿ: ಇಂದಿನ ಸಚಿವ ಸಂಪುಟ ಉಪಸಮಿತಿ ಸಭೆಯಿಂದ ಜನರಿಗೆ ನ್ಯಾಯ ಸಿಗುತ್ತಾ?

ಜಿಂದಾಲ್‍ಗೆ ಭೂಮಿ: ಇಂದಿನ ಸಚಿವ ಸಂಪುಟ ಉಪಸಮಿತಿ ಸಭೆಯಿಂದ ಜನರಿಗೆ ನ್ಯಾಯ ಸಿಗುತ್ತಾ?

- Advertisement -
- Advertisement -

| ಪಿ.ಕೆ ಮಲ್ಲನಗೌಡರ್ |

ಬಳ್ಳಾರಿಯಲ್ಲಿ ಜಿಂದಾಲ್‍ಗೆ 3667 ಎಕರೆ ಭೂಮಿಯನ್ನು ಮಾರಾಟ ಮಾಡುವ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತವಾದ ನಂತರ, ಇದನ್ನು ಮರುಪರಿಶೀಲಿಸಲು ಸಂಪುಟ ಉಪಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿ ಇಂದು ಸಭೆ ಸೇರಲಿದ್ದು ಅದು ನೀಡಲಿರುವ ಶಿಫಾರಸುಗಳು ಈ ರಾಜ್ಯದ ಜನತೆಗೆ ನ್ಯಾಯ ಒದಗಿಸಬಲ್ಲವೇ?

ಭೂಮಿ ಮಾರಾಟ ಮಾಡುವುದರಲ್ಲಿ ತಪ್ಪಿಲ್ಲ ಎಂದೋ ಅಥವಾ ಮಾರಾಟ ದರವನ್ನು ಹೆಚ್ಚಿಸಿ ಎಂದೋ ಸಮಿತಿ ಶಿಫಾರಸ್ಸು ಮಾಡಿದರೆ, ಅದು ಜನತೆಯ ಹಿತಾಸಕ್ತಿಯನ್ನು ಕಾಪಾಡುವುದೇ? ಇಂತಹ ಶಿಫಾರಸು ಬಂದರೆ ಬಿಜೆಪಿ ಮತ್ತೆ ಹೋರಾಟಕ್ಕೆ ಇಳಿಯುವುದೇ ಎಂಬ ಸಂಶಯಗಳು ಕಾಡುತ್ತಿವೆ. ಇದನ್ನು ವಿವರಿಸಲು ಈವರೆಗೆ ನಡೆದ ವಿದ್ಯಮಾನ ಮತ್ತು ನಾಟಕೀಯ ಪ್ರಸಂಗಗಳನ್ನು ನೋಡುವುದು ಅಗತ್ಯವಾಗಿದೆ.

ಬಿಜೆಪಿಯ ನಾಮಕಾವಸ್ಥೆ ಪ್ರತಿಭಟನೆ

ಏಕಾಏಕಿ ಮೇ 27ರಂದು ಸಚಿವ ಸಂಪುಟದ ಸಭೆಯಲ್ಲಿ ಜಿಂದಾಲ್ (ಜೆಎಸ್‍ಡ್ಬ್ಲೂ) ಕಂಪನಿಗೆ ಬಳ್ಳಾರಿಯಲ್ಲಿ 3,667 ಎಕರೆ ಭೂಮಿಯನ್ನು ಎಕರೆಗೆ ಒಂದು-ಒಂದೂವರೆ ಲಕ್ಷ ರೂ ದರದಲ್ಲಿ ಮಾರಲು ನಿರ್ಧರಿಸಲಾಗಿತು. ತಕ್ಷಣಕ್ಕೆ ಬಿಜೆಪಿಯಿಂದ ಇದಕ್ಕೆ ಯಾವುದೇ ವಿರೋಧ ವ್ಯಕ್ತವಾಗಲಿಲ್ಲ. ಸಂಪುಟದ ಈ ನಿರ್ಧಾರವನ್ನು ಆಡಳಿತ ಪಕ್ಷದ ಕಾಂಗ್ರೆಸ್ ಶಾಸಕ ಎಚ್‍ಕೆ ಪಾಟೀಲರು ಮರುದಿನವೇ ಸಾರ್ವಜನಿಕವಾಗಿಯೇ ವಿರೋಧಿಸಿ, ರಾಜ್ಯಕ್ಕೆ ಅನ್ಯಾಯ ಎಸಗುವ ನಿರ್ಧಾರವನ್ನು ಕೂಡಲೇ ಕೈಬಿಡಬೇಕು ಎಂದು ಮುಜಖ್ಯಮಂತ್ರಿಗಳಿಗೆ ಪತ್ರ ಬರೆದರು. ಅವರ ಈ ನಿಲುವಿಗೆ ಪೂರಕವಾದ ಅಂಕಿ-ಅಂಶ ಮತ್ತು ದಾಖಲೆಗಳನ್ನು ಅವರು ಬಹಿರಂಗಪಡಿಸಿದರು. ನಾನುಗೌರಿ.ಕಾಮ್ ಮತ್ತು ಇನ್ನಿತರ ಕೆಲವು ಸುದ್ದಿಸಂಸ್ಥೆಗಳು ಹಾಗೂ ಕೆಲವು ಜನಪರ ಸಂಘಟನೆಗಳು ಈ ವಿಷಯವಾಗಿ ಸತತ ಪ್ರತಿರೋಧ ವ್ಯಕ್ತಪಡಿಸಿದ ಮೇಲಷ್ಟೇ ಬಿಜೆಪಿ ತಾನೂ ಸರ್ಕಾರದ ಈ ನಿರ್ಣಯದ ವಿರುದ್ಧ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ ಘೋಷಿಸಿ ಬೆಂಗಳೂರಿನಲ್ಲಿ ಎರಡು ದಿನ ಪ್ರತಿಭಟನೆ ನಡೆಸಿತ್ತು..

ಕಾಲಹರಣದ ಮೊರೆ ಹೋದ ಸರ್ಕಾರ
ಈ ವಿಷಯಕ್ಕೆ ಸಂಬಂಧಿಸಿದಂತೆ ಮರುಪರಿಶೀಲನೆ ನಡೆಸಲು ಸಂಪುಟ ಸಮಿತಿ ರಚಿಸುವುದಾಗಿ ಜೂನ್ 14ರ ಕ್ಯಾಬಿನೆಟ್ ಸಭೆಯಲ್ಲಿ ನಿರ್ಣಯ ತೆಗೆದುಕೊಂಡ ಸರ್ಕಾರ ಉಪ ಸಮಿತಿ ರಚನೆಗೆ ತುರ್ತು ಆಸಕ್ತಿ ತೋರಲಿಲ್ಲ. ಇದನ್ನು ಪ್ರಸ್ನಿಸಬೇಕಾಗಿದ್ದ ಬಿಜೆಪಿ ಮತ್ತು ಕನ್ನಡದ ಬಹುಪಾಲು ಮೀಡಿಯಾಗಳು ನಿರಾಸಕ್ತಿ ತೋರಿದವು. ಆ ಹೊತ್ತಿಗೆ ಅವಕ್ಕೆ ಐಎಂಎ ವಂಚನೆ ವಿಷಯ ಮುಖ್ಯವಾಗಿತ್ತು.

ಮೊನ್ನೆಯಷ್ಟೇ (ಜೂನ್ 26) ಸರ್ಕಾರ ಸಂಪುಟ ಉಪಸಮಿತ ರಚಿಸಿದೆ. ಇದಕ್ಕೆ ಅಧ್ಯಕ್ಷರಾಗಿ ಗೃಹ ಸಚಿವ ಎಂ. ಬಿ ಪಾಟೀಲ್, ಸದಸ್ಯರಾಗಿ ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ್, ಪಂಚಾಯತ್‍ರಾಜ್ ಸಚಿವ ಕೃಷ್ಣ ಭೈರೇಗೌಡ ಮತ್ತು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆಯವರನ್ನು ನೇಮಿಸಲಾಗಿದೆ. ವರದಿ ನೀಡಲು ಯಾವ ಕಾಲಮಿತಿಯನ್ನು ಸೂಚಿಸಿಲ್ಲ.

ಯಾವುದೇ ವ್ಯಕ್ತಿಯ ಸಾಮಥ್ರ್ಯವನ್ನು ಸುಲಭಕ್ಕೆ ಅಂದಾಜಿಸಬಾರದು ಎಂಬ ಅರಿವನ್ನು ಇಟ್ಟುಕೊಂಡು ನೋಡೋಣ. ಉದ್ಯಮಗಳಿಗೆ ಸರ್ಕಾರಿ ಭೂಮಿ ಮಾರುವ ಕುರಿತಂತೆ ಸಮಿತಿಯ ಸದಸ್ಯರಿಗೆ ನೀತಿ ನಿಯಮಗಳ ಜ್ಞಾನವಿದೆಯೇ, ಅವನ್ನೂ ಪರಿಶೀಲಿಸಿದ ನಂತರವೂ ಅವರು ಕ್ಯಾಬಿನೆಟ್ ನಿರ್ಣಯಕ್ಕೆ ವಿರೋಧವಾದ ವರದಿ ನೀಡುವರೇ? ಜಿಂದಾಲ್‍ಗೆ ಭೂಮಿ ಮಾರುವುದೇ ನ್ಯಾಯಯುತ ಎಂದು ವರದಿ ಶಿಫಾರಸು ಮಾಡಿದರೆ ಆಗಲೂ ಬಿಜೆಪಿ ಹೋರಾಟಕ್ಕೆ ಇಳಿಯುವುದೇ ಎಂಬ ಪ್ರಶ್ನೆಗಳು ಏಳುತ್ತವೆ. ಇಂದಿನ ಇಂತಹ ಬಹುತೇಕ ಸಂದರ್ಭಗಳನ್ನು ಅವಲೋಕಿಸಿದಾಗ ಇವೆಲ್ಲ ಅಸಾಧ್ಯ ಅನಿಸುತ್ತಿದೆ.

ಗೃಹ ಖಾತೆ ನೋಡಿಕೊಳ್ಳುತ್ತಿರುವ ಎಂ.ಬಿ. ಪಾಟೀಲರಿಗೆ ಈ ವಿಷಯವನ್ನು ತುರ್ತಾಗಿ ಪರಿಶೀಲಿಸಲು ಅಗತ್ಯವಾದ ಅಧ್ಯಯನ ಮಾಡಲು ಆಸಕ್ತಿ ಇರುವಂತೆ ಕಾಣುತ್ತಿಲ್ಲ. ಲಿಂಗಾಯತ ಧರ್ಮದ ಹೋರಾಟದಲ್ಲೂ ಆಗಾಗ ಕಾಣಿಸಿಕೊಳ್ಳುವ ಅವರಿಗೆ ಪುರುಸೊತ್ತೂ ಇಲ್ಲ. ಸಚಿವ ಕಾಶೆಂಪುರರಿಗೆ ಅಂತಹ ಸ್ಪೀಡು ಮತ್ತು ಚಾಕಚಕ್ಯತೆಯೂ ಇಲ್ಲ. ತನ್ನ ಗುಟ್ಟು ಮುಚ್ಚಿಕೊಳ್ಳಲು ಕಾಂಗ್ರೆಸ್ ಪ್ರಿಯಾಂಕ ಖರ್ಗೆಯವರನ್ನು ಹತೋಟಿ ಮಾಡಬಲ್ಲದು. ಮಿಗಿಲಾಗಿ ಅನನುಭವಿ ಪ್ರಿಯಾಂಕರಿಗೆ ಇದು ಗಂಭೀರ ವಿಷಯವೂ ಅಲ್ಲ. ಅಧ್ಯನಯನಶೀಲ ಸ್ವಭಾವದ, ಪಕ್ಷಪಾತಿಯಲ್ಲದ, ಈ ವಿವಾದದ ಹಿಂದಿನ ಹಿಕ್ಮತ್ತುಗಳನ್ನು ಶೀಘ್ರವಾಗಿ ಅರಿಯಬಲ್ಲ ತಾಕತ್ತಿರುವ ಕೃಷ್ಣ ಭೈರೇಗೌಡ ಒಬ್ಬರೇ ಏನು ಮಾಡಲು ಸಾಧ್ಯ?

ಹೀಗಾಗಿ, ಪಬ್ಲಿಕ್ ಮೆಮರಿ ಇಸ್ ಶಾರ್ಟ್ ಎನ್ನುವಂತೆ ಜನ ಈ ವಿಷಯವನ್ನು ಮರೆಯುತ್ತಾರೆ, ಮಾಧ್ಯಮಗಳು ಜಾಣ ಮರೆವು ಪ್ರದರ್ಶಿಸುತ್ತವೆ. ಜಿಂದಾಲ್ ಪರವಾಗಿರುವ ಎಲ್ಲ ಪಕ್ಷಗಳ ಲಾಬಿ ಕಾರ್ಯಾಚರಣೆಗೆ ಇಳಿಯುತ್ತದೆ. ಒಂದಿ ದಿನ ಯಾವ ದೊಡ್ಡ ಸುದ್ದಿಯಾಗದೇ ಜಿಂದಾಲ್‍ಗೆ ಕ್ರಯಪತ್ರವನ್ನು ಸರ್ಕಾರ ಹಸ್ತಾಂತರಿಸುತ್ತದೆ. ಅಲ್ಲಿಗೇ ಎಲ್ಲವೂ ‘ಸರಿ’ಯಾಗಿರುತ್ತದೆ!

ಸರ್ಕಾರಕ್ಕೆ ಮರುಪರಿಶೀಲನೆಯ ಬಗ್ಗೆ ನಿಜಕ್ಕೂ ಕಾಳಜಿ ಇದ್ದರೆ ಸಂಪುಟ ಉಪಸಮಿತಿ ಬದಲು ಸದನ ಸಮಿತಿ ರಚಿಸಬೇಕಿತ್ತು. ಹಾಗೆ ಮಾಡಿ ಎಂದು ಒತ್ತಾಯಿಸಬೇಕಾಗಿದ್ದ ಬಿಜೆಪಿಯೇ ಚಕಾರ ಎತ್ತಲಿಲ್ಲ. ಈ ವಿಷಯ ಕುರಿತು ಮೊದಲಿಗೆ ದಾಖಲೆ ಸಮೇತ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಶಾಸಕ ಎಚ್.ಕೆ. ಪಾಟೀಲ ನೇತೃತ್ವದಲ್ಲಿ ಸದಸನ ಸಮಿತಿ ರಚಿಸಬಹುದಿತ್ತಲ್ಲ? ಹೀಗೆ ಮಾಡಿ ಎಂದು ಬಿಜೆಪಿಯೂ ಕೇಳಲಿಲ್ಲವಲ್ಲ? ಆದರೂ ಇಂದು ಏನಾಗುತ್ತೆ ನೋಡೋಣ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...