Homeಕರ್ನಾಟಕಜಿಂದಾಲ್‍ಗೆ ಭೂಮಿ: ಇಂದಿನ ಸಚಿವ ಸಂಪುಟ ಉಪಸಮಿತಿ ಸಭೆಯಿಂದ ಜನರಿಗೆ ನ್ಯಾಯ ಸಿಗುತ್ತಾ?

ಜಿಂದಾಲ್‍ಗೆ ಭೂಮಿ: ಇಂದಿನ ಸಚಿವ ಸಂಪುಟ ಉಪಸಮಿತಿ ಸಭೆಯಿಂದ ಜನರಿಗೆ ನ್ಯಾಯ ಸಿಗುತ್ತಾ?

- Advertisement -
- Advertisement -

| ಪಿ.ಕೆ ಮಲ್ಲನಗೌಡರ್ |

ಬಳ್ಳಾರಿಯಲ್ಲಿ ಜಿಂದಾಲ್‍ಗೆ 3667 ಎಕರೆ ಭೂಮಿಯನ್ನು ಮಾರಾಟ ಮಾಡುವ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತವಾದ ನಂತರ, ಇದನ್ನು ಮರುಪರಿಶೀಲಿಸಲು ಸಂಪುಟ ಉಪಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿ ಇಂದು ಸಭೆ ಸೇರಲಿದ್ದು ಅದು ನೀಡಲಿರುವ ಶಿಫಾರಸುಗಳು ಈ ರಾಜ್ಯದ ಜನತೆಗೆ ನ್ಯಾಯ ಒದಗಿಸಬಲ್ಲವೇ?

ಭೂಮಿ ಮಾರಾಟ ಮಾಡುವುದರಲ್ಲಿ ತಪ್ಪಿಲ್ಲ ಎಂದೋ ಅಥವಾ ಮಾರಾಟ ದರವನ್ನು ಹೆಚ್ಚಿಸಿ ಎಂದೋ ಸಮಿತಿ ಶಿಫಾರಸ್ಸು ಮಾಡಿದರೆ, ಅದು ಜನತೆಯ ಹಿತಾಸಕ್ತಿಯನ್ನು ಕಾಪಾಡುವುದೇ? ಇಂತಹ ಶಿಫಾರಸು ಬಂದರೆ ಬಿಜೆಪಿ ಮತ್ತೆ ಹೋರಾಟಕ್ಕೆ ಇಳಿಯುವುದೇ ಎಂಬ ಸಂಶಯಗಳು ಕಾಡುತ್ತಿವೆ. ಇದನ್ನು ವಿವರಿಸಲು ಈವರೆಗೆ ನಡೆದ ವಿದ್ಯಮಾನ ಮತ್ತು ನಾಟಕೀಯ ಪ್ರಸಂಗಗಳನ್ನು ನೋಡುವುದು ಅಗತ್ಯವಾಗಿದೆ.

ಬಿಜೆಪಿಯ ನಾಮಕಾವಸ್ಥೆ ಪ್ರತಿಭಟನೆ

ಏಕಾಏಕಿ ಮೇ 27ರಂದು ಸಚಿವ ಸಂಪುಟದ ಸಭೆಯಲ್ಲಿ ಜಿಂದಾಲ್ (ಜೆಎಸ್‍ಡ್ಬ್ಲೂ) ಕಂಪನಿಗೆ ಬಳ್ಳಾರಿಯಲ್ಲಿ 3,667 ಎಕರೆ ಭೂಮಿಯನ್ನು ಎಕರೆಗೆ ಒಂದು-ಒಂದೂವರೆ ಲಕ್ಷ ರೂ ದರದಲ್ಲಿ ಮಾರಲು ನಿರ್ಧರಿಸಲಾಗಿತು. ತಕ್ಷಣಕ್ಕೆ ಬಿಜೆಪಿಯಿಂದ ಇದಕ್ಕೆ ಯಾವುದೇ ವಿರೋಧ ವ್ಯಕ್ತವಾಗಲಿಲ್ಲ. ಸಂಪುಟದ ಈ ನಿರ್ಧಾರವನ್ನು ಆಡಳಿತ ಪಕ್ಷದ ಕಾಂಗ್ರೆಸ್ ಶಾಸಕ ಎಚ್‍ಕೆ ಪಾಟೀಲರು ಮರುದಿನವೇ ಸಾರ್ವಜನಿಕವಾಗಿಯೇ ವಿರೋಧಿಸಿ, ರಾಜ್ಯಕ್ಕೆ ಅನ್ಯಾಯ ಎಸಗುವ ನಿರ್ಧಾರವನ್ನು ಕೂಡಲೇ ಕೈಬಿಡಬೇಕು ಎಂದು ಮುಜಖ್ಯಮಂತ್ರಿಗಳಿಗೆ ಪತ್ರ ಬರೆದರು. ಅವರ ಈ ನಿಲುವಿಗೆ ಪೂರಕವಾದ ಅಂಕಿ-ಅಂಶ ಮತ್ತು ದಾಖಲೆಗಳನ್ನು ಅವರು ಬಹಿರಂಗಪಡಿಸಿದರು. ನಾನುಗೌರಿ.ಕಾಮ್ ಮತ್ತು ಇನ್ನಿತರ ಕೆಲವು ಸುದ್ದಿಸಂಸ್ಥೆಗಳು ಹಾಗೂ ಕೆಲವು ಜನಪರ ಸಂಘಟನೆಗಳು ಈ ವಿಷಯವಾಗಿ ಸತತ ಪ್ರತಿರೋಧ ವ್ಯಕ್ತಪಡಿಸಿದ ಮೇಲಷ್ಟೇ ಬಿಜೆಪಿ ತಾನೂ ಸರ್ಕಾರದ ಈ ನಿರ್ಣಯದ ವಿರುದ್ಧ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ ಘೋಷಿಸಿ ಬೆಂಗಳೂರಿನಲ್ಲಿ ಎರಡು ದಿನ ಪ್ರತಿಭಟನೆ ನಡೆಸಿತ್ತು..

ಕಾಲಹರಣದ ಮೊರೆ ಹೋದ ಸರ್ಕಾರ
ಈ ವಿಷಯಕ್ಕೆ ಸಂಬಂಧಿಸಿದಂತೆ ಮರುಪರಿಶೀಲನೆ ನಡೆಸಲು ಸಂಪುಟ ಸಮಿತಿ ರಚಿಸುವುದಾಗಿ ಜೂನ್ 14ರ ಕ್ಯಾಬಿನೆಟ್ ಸಭೆಯಲ್ಲಿ ನಿರ್ಣಯ ತೆಗೆದುಕೊಂಡ ಸರ್ಕಾರ ಉಪ ಸಮಿತಿ ರಚನೆಗೆ ತುರ್ತು ಆಸಕ್ತಿ ತೋರಲಿಲ್ಲ. ಇದನ್ನು ಪ್ರಸ್ನಿಸಬೇಕಾಗಿದ್ದ ಬಿಜೆಪಿ ಮತ್ತು ಕನ್ನಡದ ಬಹುಪಾಲು ಮೀಡಿಯಾಗಳು ನಿರಾಸಕ್ತಿ ತೋರಿದವು. ಆ ಹೊತ್ತಿಗೆ ಅವಕ್ಕೆ ಐಎಂಎ ವಂಚನೆ ವಿಷಯ ಮುಖ್ಯವಾಗಿತ್ತು.

ಮೊನ್ನೆಯಷ್ಟೇ (ಜೂನ್ 26) ಸರ್ಕಾರ ಸಂಪುಟ ಉಪಸಮಿತ ರಚಿಸಿದೆ. ಇದಕ್ಕೆ ಅಧ್ಯಕ್ಷರಾಗಿ ಗೃಹ ಸಚಿವ ಎಂ. ಬಿ ಪಾಟೀಲ್, ಸದಸ್ಯರಾಗಿ ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ್, ಪಂಚಾಯತ್‍ರಾಜ್ ಸಚಿವ ಕೃಷ್ಣ ಭೈರೇಗೌಡ ಮತ್ತು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆಯವರನ್ನು ನೇಮಿಸಲಾಗಿದೆ. ವರದಿ ನೀಡಲು ಯಾವ ಕಾಲಮಿತಿಯನ್ನು ಸೂಚಿಸಿಲ್ಲ.

ಯಾವುದೇ ವ್ಯಕ್ತಿಯ ಸಾಮಥ್ರ್ಯವನ್ನು ಸುಲಭಕ್ಕೆ ಅಂದಾಜಿಸಬಾರದು ಎಂಬ ಅರಿವನ್ನು ಇಟ್ಟುಕೊಂಡು ನೋಡೋಣ. ಉದ್ಯಮಗಳಿಗೆ ಸರ್ಕಾರಿ ಭೂಮಿ ಮಾರುವ ಕುರಿತಂತೆ ಸಮಿತಿಯ ಸದಸ್ಯರಿಗೆ ನೀತಿ ನಿಯಮಗಳ ಜ್ಞಾನವಿದೆಯೇ, ಅವನ್ನೂ ಪರಿಶೀಲಿಸಿದ ನಂತರವೂ ಅವರು ಕ್ಯಾಬಿನೆಟ್ ನಿರ್ಣಯಕ್ಕೆ ವಿರೋಧವಾದ ವರದಿ ನೀಡುವರೇ? ಜಿಂದಾಲ್‍ಗೆ ಭೂಮಿ ಮಾರುವುದೇ ನ್ಯಾಯಯುತ ಎಂದು ವರದಿ ಶಿಫಾರಸು ಮಾಡಿದರೆ ಆಗಲೂ ಬಿಜೆಪಿ ಹೋರಾಟಕ್ಕೆ ಇಳಿಯುವುದೇ ಎಂಬ ಪ್ರಶ್ನೆಗಳು ಏಳುತ್ತವೆ. ಇಂದಿನ ಇಂತಹ ಬಹುತೇಕ ಸಂದರ್ಭಗಳನ್ನು ಅವಲೋಕಿಸಿದಾಗ ಇವೆಲ್ಲ ಅಸಾಧ್ಯ ಅನಿಸುತ್ತಿದೆ.

ಗೃಹ ಖಾತೆ ನೋಡಿಕೊಳ್ಳುತ್ತಿರುವ ಎಂ.ಬಿ. ಪಾಟೀಲರಿಗೆ ಈ ವಿಷಯವನ್ನು ತುರ್ತಾಗಿ ಪರಿಶೀಲಿಸಲು ಅಗತ್ಯವಾದ ಅಧ್ಯಯನ ಮಾಡಲು ಆಸಕ್ತಿ ಇರುವಂತೆ ಕಾಣುತ್ತಿಲ್ಲ. ಲಿಂಗಾಯತ ಧರ್ಮದ ಹೋರಾಟದಲ್ಲೂ ಆಗಾಗ ಕಾಣಿಸಿಕೊಳ್ಳುವ ಅವರಿಗೆ ಪುರುಸೊತ್ತೂ ಇಲ್ಲ. ಸಚಿವ ಕಾಶೆಂಪುರರಿಗೆ ಅಂತಹ ಸ್ಪೀಡು ಮತ್ತು ಚಾಕಚಕ್ಯತೆಯೂ ಇಲ್ಲ. ತನ್ನ ಗುಟ್ಟು ಮುಚ್ಚಿಕೊಳ್ಳಲು ಕಾಂಗ್ರೆಸ್ ಪ್ರಿಯಾಂಕ ಖರ್ಗೆಯವರನ್ನು ಹತೋಟಿ ಮಾಡಬಲ್ಲದು. ಮಿಗಿಲಾಗಿ ಅನನುಭವಿ ಪ್ರಿಯಾಂಕರಿಗೆ ಇದು ಗಂಭೀರ ವಿಷಯವೂ ಅಲ್ಲ. ಅಧ್ಯನಯನಶೀಲ ಸ್ವಭಾವದ, ಪಕ್ಷಪಾತಿಯಲ್ಲದ, ಈ ವಿವಾದದ ಹಿಂದಿನ ಹಿಕ್ಮತ್ತುಗಳನ್ನು ಶೀಘ್ರವಾಗಿ ಅರಿಯಬಲ್ಲ ತಾಕತ್ತಿರುವ ಕೃಷ್ಣ ಭೈರೇಗೌಡ ಒಬ್ಬರೇ ಏನು ಮಾಡಲು ಸಾಧ್ಯ?

ಹೀಗಾಗಿ, ಪಬ್ಲಿಕ್ ಮೆಮರಿ ಇಸ್ ಶಾರ್ಟ್ ಎನ್ನುವಂತೆ ಜನ ಈ ವಿಷಯವನ್ನು ಮರೆಯುತ್ತಾರೆ, ಮಾಧ್ಯಮಗಳು ಜಾಣ ಮರೆವು ಪ್ರದರ್ಶಿಸುತ್ತವೆ. ಜಿಂದಾಲ್ ಪರವಾಗಿರುವ ಎಲ್ಲ ಪಕ್ಷಗಳ ಲಾಬಿ ಕಾರ್ಯಾಚರಣೆಗೆ ಇಳಿಯುತ್ತದೆ. ಒಂದಿ ದಿನ ಯಾವ ದೊಡ್ಡ ಸುದ್ದಿಯಾಗದೇ ಜಿಂದಾಲ್‍ಗೆ ಕ್ರಯಪತ್ರವನ್ನು ಸರ್ಕಾರ ಹಸ್ತಾಂತರಿಸುತ್ತದೆ. ಅಲ್ಲಿಗೇ ಎಲ್ಲವೂ ‘ಸರಿ’ಯಾಗಿರುತ್ತದೆ!

ಸರ್ಕಾರಕ್ಕೆ ಮರುಪರಿಶೀಲನೆಯ ಬಗ್ಗೆ ನಿಜಕ್ಕೂ ಕಾಳಜಿ ಇದ್ದರೆ ಸಂಪುಟ ಉಪಸಮಿತಿ ಬದಲು ಸದನ ಸಮಿತಿ ರಚಿಸಬೇಕಿತ್ತು. ಹಾಗೆ ಮಾಡಿ ಎಂದು ಒತ್ತಾಯಿಸಬೇಕಾಗಿದ್ದ ಬಿಜೆಪಿಯೇ ಚಕಾರ ಎತ್ತಲಿಲ್ಲ. ಈ ವಿಷಯ ಕುರಿತು ಮೊದಲಿಗೆ ದಾಖಲೆ ಸಮೇತ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಶಾಸಕ ಎಚ್.ಕೆ. ಪಾಟೀಲ ನೇತೃತ್ವದಲ್ಲಿ ಸದಸನ ಸಮಿತಿ ರಚಿಸಬಹುದಿತ್ತಲ್ಲ? ಹೀಗೆ ಮಾಡಿ ಎಂದು ಬಿಜೆಪಿಯೂ ಕೇಳಲಿಲ್ಲವಲ್ಲ? ಆದರೂ ಇಂದು ಏನಾಗುತ್ತೆ ನೋಡೋಣ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...