Homeಕರ್ನಾಟಕಜಿಂದಾಲ್‍ಗೆ ಭೂಮಿ: ಇಂದಿನ ಸಚಿವ ಸಂಪುಟ ಉಪಸಮಿತಿ ಸಭೆಯಿಂದ ಜನರಿಗೆ ನ್ಯಾಯ ಸಿಗುತ್ತಾ?

ಜಿಂದಾಲ್‍ಗೆ ಭೂಮಿ: ಇಂದಿನ ಸಚಿವ ಸಂಪುಟ ಉಪಸಮಿತಿ ಸಭೆಯಿಂದ ಜನರಿಗೆ ನ್ಯಾಯ ಸಿಗುತ್ತಾ?

- Advertisement -
- Advertisement -

| ಪಿ.ಕೆ ಮಲ್ಲನಗೌಡರ್ |

ಬಳ್ಳಾರಿಯಲ್ಲಿ ಜಿಂದಾಲ್‍ಗೆ 3667 ಎಕರೆ ಭೂಮಿಯನ್ನು ಮಾರಾಟ ಮಾಡುವ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತವಾದ ನಂತರ, ಇದನ್ನು ಮರುಪರಿಶೀಲಿಸಲು ಸಂಪುಟ ಉಪಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿ ಇಂದು ಸಭೆ ಸೇರಲಿದ್ದು ಅದು ನೀಡಲಿರುವ ಶಿಫಾರಸುಗಳು ಈ ರಾಜ್ಯದ ಜನತೆಗೆ ನ್ಯಾಯ ಒದಗಿಸಬಲ್ಲವೇ?

ಭೂಮಿ ಮಾರಾಟ ಮಾಡುವುದರಲ್ಲಿ ತಪ್ಪಿಲ್ಲ ಎಂದೋ ಅಥವಾ ಮಾರಾಟ ದರವನ್ನು ಹೆಚ್ಚಿಸಿ ಎಂದೋ ಸಮಿತಿ ಶಿಫಾರಸ್ಸು ಮಾಡಿದರೆ, ಅದು ಜನತೆಯ ಹಿತಾಸಕ್ತಿಯನ್ನು ಕಾಪಾಡುವುದೇ? ಇಂತಹ ಶಿಫಾರಸು ಬಂದರೆ ಬಿಜೆಪಿ ಮತ್ತೆ ಹೋರಾಟಕ್ಕೆ ಇಳಿಯುವುದೇ ಎಂಬ ಸಂಶಯಗಳು ಕಾಡುತ್ತಿವೆ. ಇದನ್ನು ವಿವರಿಸಲು ಈವರೆಗೆ ನಡೆದ ವಿದ್ಯಮಾನ ಮತ್ತು ನಾಟಕೀಯ ಪ್ರಸಂಗಗಳನ್ನು ನೋಡುವುದು ಅಗತ್ಯವಾಗಿದೆ.

ಬಿಜೆಪಿಯ ನಾಮಕಾವಸ್ಥೆ ಪ್ರತಿಭಟನೆ

ಏಕಾಏಕಿ ಮೇ 27ರಂದು ಸಚಿವ ಸಂಪುಟದ ಸಭೆಯಲ್ಲಿ ಜಿಂದಾಲ್ (ಜೆಎಸ್‍ಡ್ಬ್ಲೂ) ಕಂಪನಿಗೆ ಬಳ್ಳಾರಿಯಲ್ಲಿ 3,667 ಎಕರೆ ಭೂಮಿಯನ್ನು ಎಕರೆಗೆ ಒಂದು-ಒಂದೂವರೆ ಲಕ್ಷ ರೂ ದರದಲ್ಲಿ ಮಾರಲು ನಿರ್ಧರಿಸಲಾಗಿತು. ತಕ್ಷಣಕ್ಕೆ ಬಿಜೆಪಿಯಿಂದ ಇದಕ್ಕೆ ಯಾವುದೇ ವಿರೋಧ ವ್ಯಕ್ತವಾಗಲಿಲ್ಲ. ಸಂಪುಟದ ಈ ನಿರ್ಧಾರವನ್ನು ಆಡಳಿತ ಪಕ್ಷದ ಕಾಂಗ್ರೆಸ್ ಶಾಸಕ ಎಚ್‍ಕೆ ಪಾಟೀಲರು ಮರುದಿನವೇ ಸಾರ್ವಜನಿಕವಾಗಿಯೇ ವಿರೋಧಿಸಿ, ರಾಜ್ಯಕ್ಕೆ ಅನ್ಯಾಯ ಎಸಗುವ ನಿರ್ಧಾರವನ್ನು ಕೂಡಲೇ ಕೈಬಿಡಬೇಕು ಎಂದು ಮುಜಖ್ಯಮಂತ್ರಿಗಳಿಗೆ ಪತ್ರ ಬರೆದರು. ಅವರ ಈ ನಿಲುವಿಗೆ ಪೂರಕವಾದ ಅಂಕಿ-ಅಂಶ ಮತ್ತು ದಾಖಲೆಗಳನ್ನು ಅವರು ಬಹಿರಂಗಪಡಿಸಿದರು. ನಾನುಗೌರಿ.ಕಾಮ್ ಮತ್ತು ಇನ್ನಿತರ ಕೆಲವು ಸುದ್ದಿಸಂಸ್ಥೆಗಳು ಹಾಗೂ ಕೆಲವು ಜನಪರ ಸಂಘಟನೆಗಳು ಈ ವಿಷಯವಾಗಿ ಸತತ ಪ್ರತಿರೋಧ ವ್ಯಕ್ತಪಡಿಸಿದ ಮೇಲಷ್ಟೇ ಬಿಜೆಪಿ ತಾನೂ ಸರ್ಕಾರದ ಈ ನಿರ್ಣಯದ ವಿರುದ್ಧ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ ಘೋಷಿಸಿ ಬೆಂಗಳೂರಿನಲ್ಲಿ ಎರಡು ದಿನ ಪ್ರತಿಭಟನೆ ನಡೆಸಿತ್ತು..

ಕಾಲಹರಣದ ಮೊರೆ ಹೋದ ಸರ್ಕಾರ
ಈ ವಿಷಯಕ್ಕೆ ಸಂಬಂಧಿಸಿದಂತೆ ಮರುಪರಿಶೀಲನೆ ನಡೆಸಲು ಸಂಪುಟ ಸಮಿತಿ ರಚಿಸುವುದಾಗಿ ಜೂನ್ 14ರ ಕ್ಯಾಬಿನೆಟ್ ಸಭೆಯಲ್ಲಿ ನಿರ್ಣಯ ತೆಗೆದುಕೊಂಡ ಸರ್ಕಾರ ಉಪ ಸಮಿತಿ ರಚನೆಗೆ ತುರ್ತು ಆಸಕ್ತಿ ತೋರಲಿಲ್ಲ. ಇದನ್ನು ಪ್ರಸ್ನಿಸಬೇಕಾಗಿದ್ದ ಬಿಜೆಪಿ ಮತ್ತು ಕನ್ನಡದ ಬಹುಪಾಲು ಮೀಡಿಯಾಗಳು ನಿರಾಸಕ್ತಿ ತೋರಿದವು. ಆ ಹೊತ್ತಿಗೆ ಅವಕ್ಕೆ ಐಎಂಎ ವಂಚನೆ ವಿಷಯ ಮುಖ್ಯವಾಗಿತ್ತು.

ಮೊನ್ನೆಯಷ್ಟೇ (ಜೂನ್ 26) ಸರ್ಕಾರ ಸಂಪುಟ ಉಪಸಮಿತ ರಚಿಸಿದೆ. ಇದಕ್ಕೆ ಅಧ್ಯಕ್ಷರಾಗಿ ಗೃಹ ಸಚಿವ ಎಂ. ಬಿ ಪಾಟೀಲ್, ಸದಸ್ಯರಾಗಿ ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ್, ಪಂಚಾಯತ್‍ರಾಜ್ ಸಚಿವ ಕೃಷ್ಣ ಭೈರೇಗೌಡ ಮತ್ತು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆಯವರನ್ನು ನೇಮಿಸಲಾಗಿದೆ. ವರದಿ ನೀಡಲು ಯಾವ ಕಾಲಮಿತಿಯನ್ನು ಸೂಚಿಸಿಲ್ಲ.

ಯಾವುದೇ ವ್ಯಕ್ತಿಯ ಸಾಮಥ್ರ್ಯವನ್ನು ಸುಲಭಕ್ಕೆ ಅಂದಾಜಿಸಬಾರದು ಎಂಬ ಅರಿವನ್ನು ಇಟ್ಟುಕೊಂಡು ನೋಡೋಣ. ಉದ್ಯಮಗಳಿಗೆ ಸರ್ಕಾರಿ ಭೂಮಿ ಮಾರುವ ಕುರಿತಂತೆ ಸಮಿತಿಯ ಸದಸ್ಯರಿಗೆ ನೀತಿ ನಿಯಮಗಳ ಜ್ಞಾನವಿದೆಯೇ, ಅವನ್ನೂ ಪರಿಶೀಲಿಸಿದ ನಂತರವೂ ಅವರು ಕ್ಯಾಬಿನೆಟ್ ನಿರ್ಣಯಕ್ಕೆ ವಿರೋಧವಾದ ವರದಿ ನೀಡುವರೇ? ಜಿಂದಾಲ್‍ಗೆ ಭೂಮಿ ಮಾರುವುದೇ ನ್ಯಾಯಯುತ ಎಂದು ವರದಿ ಶಿಫಾರಸು ಮಾಡಿದರೆ ಆಗಲೂ ಬಿಜೆಪಿ ಹೋರಾಟಕ್ಕೆ ಇಳಿಯುವುದೇ ಎಂಬ ಪ್ರಶ್ನೆಗಳು ಏಳುತ್ತವೆ. ಇಂದಿನ ಇಂತಹ ಬಹುತೇಕ ಸಂದರ್ಭಗಳನ್ನು ಅವಲೋಕಿಸಿದಾಗ ಇವೆಲ್ಲ ಅಸಾಧ್ಯ ಅನಿಸುತ್ತಿದೆ.

ಗೃಹ ಖಾತೆ ನೋಡಿಕೊಳ್ಳುತ್ತಿರುವ ಎಂ.ಬಿ. ಪಾಟೀಲರಿಗೆ ಈ ವಿಷಯವನ್ನು ತುರ್ತಾಗಿ ಪರಿಶೀಲಿಸಲು ಅಗತ್ಯವಾದ ಅಧ್ಯಯನ ಮಾಡಲು ಆಸಕ್ತಿ ಇರುವಂತೆ ಕಾಣುತ್ತಿಲ್ಲ. ಲಿಂಗಾಯತ ಧರ್ಮದ ಹೋರಾಟದಲ್ಲೂ ಆಗಾಗ ಕಾಣಿಸಿಕೊಳ್ಳುವ ಅವರಿಗೆ ಪುರುಸೊತ್ತೂ ಇಲ್ಲ. ಸಚಿವ ಕಾಶೆಂಪುರರಿಗೆ ಅಂತಹ ಸ್ಪೀಡು ಮತ್ತು ಚಾಕಚಕ್ಯತೆಯೂ ಇಲ್ಲ. ತನ್ನ ಗುಟ್ಟು ಮುಚ್ಚಿಕೊಳ್ಳಲು ಕಾಂಗ್ರೆಸ್ ಪ್ರಿಯಾಂಕ ಖರ್ಗೆಯವರನ್ನು ಹತೋಟಿ ಮಾಡಬಲ್ಲದು. ಮಿಗಿಲಾಗಿ ಅನನುಭವಿ ಪ್ರಿಯಾಂಕರಿಗೆ ಇದು ಗಂಭೀರ ವಿಷಯವೂ ಅಲ್ಲ. ಅಧ್ಯನಯನಶೀಲ ಸ್ವಭಾವದ, ಪಕ್ಷಪಾತಿಯಲ್ಲದ, ಈ ವಿವಾದದ ಹಿಂದಿನ ಹಿಕ್ಮತ್ತುಗಳನ್ನು ಶೀಘ್ರವಾಗಿ ಅರಿಯಬಲ್ಲ ತಾಕತ್ತಿರುವ ಕೃಷ್ಣ ಭೈರೇಗೌಡ ಒಬ್ಬರೇ ಏನು ಮಾಡಲು ಸಾಧ್ಯ?

ಹೀಗಾಗಿ, ಪಬ್ಲಿಕ್ ಮೆಮರಿ ಇಸ್ ಶಾರ್ಟ್ ಎನ್ನುವಂತೆ ಜನ ಈ ವಿಷಯವನ್ನು ಮರೆಯುತ್ತಾರೆ, ಮಾಧ್ಯಮಗಳು ಜಾಣ ಮರೆವು ಪ್ರದರ್ಶಿಸುತ್ತವೆ. ಜಿಂದಾಲ್ ಪರವಾಗಿರುವ ಎಲ್ಲ ಪಕ್ಷಗಳ ಲಾಬಿ ಕಾರ್ಯಾಚರಣೆಗೆ ಇಳಿಯುತ್ತದೆ. ಒಂದಿ ದಿನ ಯಾವ ದೊಡ್ಡ ಸುದ್ದಿಯಾಗದೇ ಜಿಂದಾಲ್‍ಗೆ ಕ್ರಯಪತ್ರವನ್ನು ಸರ್ಕಾರ ಹಸ್ತಾಂತರಿಸುತ್ತದೆ. ಅಲ್ಲಿಗೇ ಎಲ್ಲವೂ ‘ಸರಿ’ಯಾಗಿರುತ್ತದೆ!

ಸರ್ಕಾರಕ್ಕೆ ಮರುಪರಿಶೀಲನೆಯ ಬಗ್ಗೆ ನಿಜಕ್ಕೂ ಕಾಳಜಿ ಇದ್ದರೆ ಸಂಪುಟ ಉಪಸಮಿತಿ ಬದಲು ಸದನ ಸಮಿತಿ ರಚಿಸಬೇಕಿತ್ತು. ಹಾಗೆ ಮಾಡಿ ಎಂದು ಒತ್ತಾಯಿಸಬೇಕಾಗಿದ್ದ ಬಿಜೆಪಿಯೇ ಚಕಾರ ಎತ್ತಲಿಲ್ಲ. ಈ ವಿಷಯ ಕುರಿತು ಮೊದಲಿಗೆ ದಾಖಲೆ ಸಮೇತ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಶಾಸಕ ಎಚ್.ಕೆ. ಪಾಟೀಲ ನೇತೃತ್ವದಲ್ಲಿ ಸದಸನ ಸಮಿತಿ ರಚಿಸಬಹುದಿತ್ತಲ್ಲ? ಹೀಗೆ ಮಾಡಿ ಎಂದು ಬಿಜೆಪಿಯೂ ಕೇಳಲಿಲ್ಲವಲ್ಲ? ಆದರೂ ಇಂದು ಏನಾಗುತ್ತೆ ನೋಡೋಣ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...