Homeಕರ್ನಾಟಕಜಿಂದಾಲ್‍ಗೆ ಭೂಮಿ: ಇಂದಿನ ಸಚಿವ ಸಂಪುಟ ಉಪಸಮಿತಿ ಸಭೆಯಿಂದ ಜನರಿಗೆ ನ್ಯಾಯ ಸಿಗುತ್ತಾ?

ಜಿಂದಾಲ್‍ಗೆ ಭೂಮಿ: ಇಂದಿನ ಸಚಿವ ಸಂಪುಟ ಉಪಸಮಿತಿ ಸಭೆಯಿಂದ ಜನರಿಗೆ ನ್ಯಾಯ ಸಿಗುತ್ತಾ?

- Advertisement -
- Advertisement -

| ಪಿ.ಕೆ ಮಲ್ಲನಗೌಡರ್ |

ಬಳ್ಳಾರಿಯಲ್ಲಿ ಜಿಂದಾಲ್‍ಗೆ 3667 ಎಕರೆ ಭೂಮಿಯನ್ನು ಮಾರಾಟ ಮಾಡುವ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತವಾದ ನಂತರ, ಇದನ್ನು ಮರುಪರಿಶೀಲಿಸಲು ಸಂಪುಟ ಉಪಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿ ಇಂದು ಸಭೆ ಸೇರಲಿದ್ದು ಅದು ನೀಡಲಿರುವ ಶಿಫಾರಸುಗಳು ಈ ರಾಜ್ಯದ ಜನತೆಗೆ ನ್ಯಾಯ ಒದಗಿಸಬಲ್ಲವೇ?

ಭೂಮಿ ಮಾರಾಟ ಮಾಡುವುದರಲ್ಲಿ ತಪ್ಪಿಲ್ಲ ಎಂದೋ ಅಥವಾ ಮಾರಾಟ ದರವನ್ನು ಹೆಚ್ಚಿಸಿ ಎಂದೋ ಸಮಿತಿ ಶಿಫಾರಸ್ಸು ಮಾಡಿದರೆ, ಅದು ಜನತೆಯ ಹಿತಾಸಕ್ತಿಯನ್ನು ಕಾಪಾಡುವುದೇ? ಇಂತಹ ಶಿಫಾರಸು ಬಂದರೆ ಬಿಜೆಪಿ ಮತ್ತೆ ಹೋರಾಟಕ್ಕೆ ಇಳಿಯುವುದೇ ಎಂಬ ಸಂಶಯಗಳು ಕಾಡುತ್ತಿವೆ. ಇದನ್ನು ವಿವರಿಸಲು ಈವರೆಗೆ ನಡೆದ ವಿದ್ಯಮಾನ ಮತ್ತು ನಾಟಕೀಯ ಪ್ರಸಂಗಗಳನ್ನು ನೋಡುವುದು ಅಗತ್ಯವಾಗಿದೆ.

ಬಿಜೆಪಿಯ ನಾಮಕಾವಸ್ಥೆ ಪ್ರತಿಭಟನೆ

ಏಕಾಏಕಿ ಮೇ 27ರಂದು ಸಚಿವ ಸಂಪುಟದ ಸಭೆಯಲ್ಲಿ ಜಿಂದಾಲ್ (ಜೆಎಸ್‍ಡ್ಬ್ಲೂ) ಕಂಪನಿಗೆ ಬಳ್ಳಾರಿಯಲ್ಲಿ 3,667 ಎಕರೆ ಭೂಮಿಯನ್ನು ಎಕರೆಗೆ ಒಂದು-ಒಂದೂವರೆ ಲಕ್ಷ ರೂ ದರದಲ್ಲಿ ಮಾರಲು ನಿರ್ಧರಿಸಲಾಗಿತು. ತಕ್ಷಣಕ್ಕೆ ಬಿಜೆಪಿಯಿಂದ ಇದಕ್ಕೆ ಯಾವುದೇ ವಿರೋಧ ವ್ಯಕ್ತವಾಗಲಿಲ್ಲ. ಸಂಪುಟದ ಈ ನಿರ್ಧಾರವನ್ನು ಆಡಳಿತ ಪಕ್ಷದ ಕಾಂಗ್ರೆಸ್ ಶಾಸಕ ಎಚ್‍ಕೆ ಪಾಟೀಲರು ಮರುದಿನವೇ ಸಾರ್ವಜನಿಕವಾಗಿಯೇ ವಿರೋಧಿಸಿ, ರಾಜ್ಯಕ್ಕೆ ಅನ್ಯಾಯ ಎಸಗುವ ನಿರ್ಧಾರವನ್ನು ಕೂಡಲೇ ಕೈಬಿಡಬೇಕು ಎಂದು ಮುಜಖ್ಯಮಂತ್ರಿಗಳಿಗೆ ಪತ್ರ ಬರೆದರು. ಅವರ ಈ ನಿಲುವಿಗೆ ಪೂರಕವಾದ ಅಂಕಿ-ಅಂಶ ಮತ್ತು ದಾಖಲೆಗಳನ್ನು ಅವರು ಬಹಿರಂಗಪಡಿಸಿದರು. ನಾನುಗೌರಿ.ಕಾಮ್ ಮತ್ತು ಇನ್ನಿತರ ಕೆಲವು ಸುದ್ದಿಸಂಸ್ಥೆಗಳು ಹಾಗೂ ಕೆಲವು ಜನಪರ ಸಂಘಟನೆಗಳು ಈ ವಿಷಯವಾಗಿ ಸತತ ಪ್ರತಿರೋಧ ವ್ಯಕ್ತಪಡಿಸಿದ ಮೇಲಷ್ಟೇ ಬಿಜೆಪಿ ತಾನೂ ಸರ್ಕಾರದ ಈ ನಿರ್ಣಯದ ವಿರುದ್ಧ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ ಘೋಷಿಸಿ ಬೆಂಗಳೂರಿನಲ್ಲಿ ಎರಡು ದಿನ ಪ್ರತಿಭಟನೆ ನಡೆಸಿತ್ತು..

ಕಾಲಹರಣದ ಮೊರೆ ಹೋದ ಸರ್ಕಾರ
ಈ ವಿಷಯಕ್ಕೆ ಸಂಬಂಧಿಸಿದಂತೆ ಮರುಪರಿಶೀಲನೆ ನಡೆಸಲು ಸಂಪುಟ ಸಮಿತಿ ರಚಿಸುವುದಾಗಿ ಜೂನ್ 14ರ ಕ್ಯಾಬಿನೆಟ್ ಸಭೆಯಲ್ಲಿ ನಿರ್ಣಯ ತೆಗೆದುಕೊಂಡ ಸರ್ಕಾರ ಉಪ ಸಮಿತಿ ರಚನೆಗೆ ತುರ್ತು ಆಸಕ್ತಿ ತೋರಲಿಲ್ಲ. ಇದನ್ನು ಪ್ರಸ್ನಿಸಬೇಕಾಗಿದ್ದ ಬಿಜೆಪಿ ಮತ್ತು ಕನ್ನಡದ ಬಹುಪಾಲು ಮೀಡಿಯಾಗಳು ನಿರಾಸಕ್ತಿ ತೋರಿದವು. ಆ ಹೊತ್ತಿಗೆ ಅವಕ್ಕೆ ಐಎಂಎ ವಂಚನೆ ವಿಷಯ ಮುಖ್ಯವಾಗಿತ್ತು.

ಮೊನ್ನೆಯಷ್ಟೇ (ಜೂನ್ 26) ಸರ್ಕಾರ ಸಂಪುಟ ಉಪಸಮಿತ ರಚಿಸಿದೆ. ಇದಕ್ಕೆ ಅಧ್ಯಕ್ಷರಾಗಿ ಗೃಹ ಸಚಿವ ಎಂ. ಬಿ ಪಾಟೀಲ್, ಸದಸ್ಯರಾಗಿ ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ್, ಪಂಚಾಯತ್‍ರಾಜ್ ಸಚಿವ ಕೃಷ್ಣ ಭೈರೇಗೌಡ ಮತ್ತು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆಯವರನ್ನು ನೇಮಿಸಲಾಗಿದೆ. ವರದಿ ನೀಡಲು ಯಾವ ಕಾಲಮಿತಿಯನ್ನು ಸೂಚಿಸಿಲ್ಲ.

ಯಾವುದೇ ವ್ಯಕ್ತಿಯ ಸಾಮಥ್ರ್ಯವನ್ನು ಸುಲಭಕ್ಕೆ ಅಂದಾಜಿಸಬಾರದು ಎಂಬ ಅರಿವನ್ನು ಇಟ್ಟುಕೊಂಡು ನೋಡೋಣ. ಉದ್ಯಮಗಳಿಗೆ ಸರ್ಕಾರಿ ಭೂಮಿ ಮಾರುವ ಕುರಿತಂತೆ ಸಮಿತಿಯ ಸದಸ್ಯರಿಗೆ ನೀತಿ ನಿಯಮಗಳ ಜ್ಞಾನವಿದೆಯೇ, ಅವನ್ನೂ ಪರಿಶೀಲಿಸಿದ ನಂತರವೂ ಅವರು ಕ್ಯಾಬಿನೆಟ್ ನಿರ್ಣಯಕ್ಕೆ ವಿರೋಧವಾದ ವರದಿ ನೀಡುವರೇ? ಜಿಂದಾಲ್‍ಗೆ ಭೂಮಿ ಮಾರುವುದೇ ನ್ಯಾಯಯುತ ಎಂದು ವರದಿ ಶಿಫಾರಸು ಮಾಡಿದರೆ ಆಗಲೂ ಬಿಜೆಪಿ ಹೋರಾಟಕ್ಕೆ ಇಳಿಯುವುದೇ ಎಂಬ ಪ್ರಶ್ನೆಗಳು ಏಳುತ್ತವೆ. ಇಂದಿನ ಇಂತಹ ಬಹುತೇಕ ಸಂದರ್ಭಗಳನ್ನು ಅವಲೋಕಿಸಿದಾಗ ಇವೆಲ್ಲ ಅಸಾಧ್ಯ ಅನಿಸುತ್ತಿದೆ.

ಗೃಹ ಖಾತೆ ನೋಡಿಕೊಳ್ಳುತ್ತಿರುವ ಎಂ.ಬಿ. ಪಾಟೀಲರಿಗೆ ಈ ವಿಷಯವನ್ನು ತುರ್ತಾಗಿ ಪರಿಶೀಲಿಸಲು ಅಗತ್ಯವಾದ ಅಧ್ಯಯನ ಮಾಡಲು ಆಸಕ್ತಿ ಇರುವಂತೆ ಕಾಣುತ್ತಿಲ್ಲ. ಲಿಂಗಾಯತ ಧರ್ಮದ ಹೋರಾಟದಲ್ಲೂ ಆಗಾಗ ಕಾಣಿಸಿಕೊಳ್ಳುವ ಅವರಿಗೆ ಪುರುಸೊತ್ತೂ ಇಲ್ಲ. ಸಚಿವ ಕಾಶೆಂಪುರರಿಗೆ ಅಂತಹ ಸ್ಪೀಡು ಮತ್ತು ಚಾಕಚಕ್ಯತೆಯೂ ಇಲ್ಲ. ತನ್ನ ಗುಟ್ಟು ಮುಚ್ಚಿಕೊಳ್ಳಲು ಕಾಂಗ್ರೆಸ್ ಪ್ರಿಯಾಂಕ ಖರ್ಗೆಯವರನ್ನು ಹತೋಟಿ ಮಾಡಬಲ್ಲದು. ಮಿಗಿಲಾಗಿ ಅನನುಭವಿ ಪ್ರಿಯಾಂಕರಿಗೆ ಇದು ಗಂಭೀರ ವಿಷಯವೂ ಅಲ್ಲ. ಅಧ್ಯನಯನಶೀಲ ಸ್ವಭಾವದ, ಪಕ್ಷಪಾತಿಯಲ್ಲದ, ಈ ವಿವಾದದ ಹಿಂದಿನ ಹಿಕ್ಮತ್ತುಗಳನ್ನು ಶೀಘ್ರವಾಗಿ ಅರಿಯಬಲ್ಲ ತಾಕತ್ತಿರುವ ಕೃಷ್ಣ ಭೈರೇಗೌಡ ಒಬ್ಬರೇ ಏನು ಮಾಡಲು ಸಾಧ್ಯ?

ಹೀಗಾಗಿ, ಪಬ್ಲಿಕ್ ಮೆಮರಿ ಇಸ್ ಶಾರ್ಟ್ ಎನ್ನುವಂತೆ ಜನ ಈ ವಿಷಯವನ್ನು ಮರೆಯುತ್ತಾರೆ, ಮಾಧ್ಯಮಗಳು ಜಾಣ ಮರೆವು ಪ್ರದರ್ಶಿಸುತ್ತವೆ. ಜಿಂದಾಲ್ ಪರವಾಗಿರುವ ಎಲ್ಲ ಪಕ್ಷಗಳ ಲಾಬಿ ಕಾರ್ಯಾಚರಣೆಗೆ ಇಳಿಯುತ್ತದೆ. ಒಂದಿ ದಿನ ಯಾವ ದೊಡ್ಡ ಸುದ್ದಿಯಾಗದೇ ಜಿಂದಾಲ್‍ಗೆ ಕ್ರಯಪತ್ರವನ್ನು ಸರ್ಕಾರ ಹಸ್ತಾಂತರಿಸುತ್ತದೆ. ಅಲ್ಲಿಗೇ ಎಲ್ಲವೂ ‘ಸರಿ’ಯಾಗಿರುತ್ತದೆ!

ಸರ್ಕಾರಕ್ಕೆ ಮರುಪರಿಶೀಲನೆಯ ಬಗ್ಗೆ ನಿಜಕ್ಕೂ ಕಾಳಜಿ ಇದ್ದರೆ ಸಂಪುಟ ಉಪಸಮಿತಿ ಬದಲು ಸದನ ಸಮಿತಿ ರಚಿಸಬೇಕಿತ್ತು. ಹಾಗೆ ಮಾಡಿ ಎಂದು ಒತ್ತಾಯಿಸಬೇಕಾಗಿದ್ದ ಬಿಜೆಪಿಯೇ ಚಕಾರ ಎತ್ತಲಿಲ್ಲ. ಈ ವಿಷಯ ಕುರಿತು ಮೊದಲಿಗೆ ದಾಖಲೆ ಸಮೇತ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಶಾಸಕ ಎಚ್.ಕೆ. ಪಾಟೀಲ ನೇತೃತ್ವದಲ್ಲಿ ಸದಸನ ಸಮಿತಿ ರಚಿಸಬಹುದಿತ್ತಲ್ಲ? ಹೀಗೆ ಮಾಡಿ ಎಂದು ಬಿಜೆಪಿಯೂ ಕೇಳಲಿಲ್ಲವಲ್ಲ? ಆದರೂ ಇಂದು ಏನಾಗುತ್ತೆ ನೋಡೋಣ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....