Homeಕರ್ನಾಟಕಖಾಸಗಿ ಶಾಲೆಗಳ ದುಬಾರಿ ಶುಲ್ಕ ವಸೂಲಾತಿಗೆ ಸರ್ಕಾರ ಕಡಿವಾಣ ಹಾಕಲಿ : SFI ಒತ್ತಾಯ

ಖಾಸಗಿ ಶಾಲೆಗಳ ದುಬಾರಿ ಶುಲ್ಕ ವಸೂಲಾತಿಗೆ ಸರ್ಕಾರ ಕಡಿವಾಣ ಹಾಕಲಿ : SFI ಒತ್ತಾಯ

ಸರ್ಕಾರದ ಆದೇಶ ಕೇವಲ ಕಾಗದ ಪತ್ರಕ್ಕೆ ಸೀಮಿತವಾಗಿದ್ದು, ಬಹುತೇಕ ಖಾಸಗಿ ಶಾಲೆಗಳು ಆದೇಶವನ್ನು ಪಾಲಿಸುತ್ತಿಲ್ಲ ಎಂದು ವಿದ್ಯಾರ್ಥಿ ಸಂಘಟನೆಯು ಆಕ್ರೋಶ ವ್ಯಕ್ತಪಡಿಸಿದೆ.

- Advertisement -
- Advertisement -

ಕೊರೊನಾದಿಂದಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಈ ವರ್ಷ ಬಿಕ್ಕಟ್ಟಿನ ಪರಿಸ್ಥಿತಿ ನಿರ್ಮಾಣವಾಗಿದೆ. ವಿಧ್ಯಾರ್ಥಿ ಸಂಘಟನೆಗಳು, ಪೋಷಕರ ಹೋರಾಟದ ಪ್ರಭಾವದಿಂದ ಈ ಬಾರಿ ಖಾಸಗಿ ಶಾಲೆಗಳಲ್ಲಿ ಹೆಚ್ಚು ಶುಲ್ಕ ವಸೂಲು ಮಾಡಬಾರದು ಎಂದು ರಾಜ್ಯ ಸರ್ಕಾರದ ಆದೇಶ ಮಾಡಿದೆ. ಆದರೆ ಸರ್ಕಾರದ ಆದೇಶ ಕೇವಲ ಕಾಗದ ಪತ್ರಕ್ಕೆ ಸೀಮಿತವಾಗಿದ್ದು, ಬಹುತೇಕ ಖಾಸಗಿ ಶಾಲೆಗಳು ಈ ಆದೇಶವನ್ನು ಪಾಲಿಸುತ್ತಿಲ್ಲ ಎಂದು ಸ್ಟೂಡೆಂಟ್ ಫೆಡರೇಷನ್ ಆಫ್ ಇಂಡಿಯಾ(SFI) ಆಕ್ರೋಶ ವ್ಯಕ್ತಪಡಿಸಿದೆ.

ಖಾಸಗಿ ಶಾಲೆಗಳು ಈ ವರ್ಷ ಶುಲ್ಕ ಹೆಚ್ಚಳ ಮಾಡುವಂತಿಲ್ಲ. ಕಳೆದ ವರ್ಷದ ಶುಲ್ಕದ ಶೇಖಡ 70 ಮೊತ್ತವನ್ನು ಮಾತ್ರ ಪಡೆಯಬೇಕು ಎಂದು ರಾಜ್ಯ ಸರ್ಕಾರವು ಆದೇಶಿಸಿತ್ತು. ಆದರೆ ಇದೀಗ ಸರ್ಕಾರದ ಈ ಆದೇಶವನ್ನು ವಾಪಸ್ ಪಡೆಯಬೇಕೆಂದು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟಗಳು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಒತ್ತಡ ಹಾಕಲು ಯೋಚಿಸಿವೆ. ಇಂತಹ ಯಾವುದೇ ಒತ್ತಡಗಳಿಗೆ ಸರ್ಕಾರ ಮಣಿಯದೆ ಸರ್ಕಾರ ದೃಢವಾಗಿ ತನ್ನ ಆದೇಶವನ್ನು ಜಾರಿಗೆ ತರಬೇಕೆಂದು ಎಂದು SFI ರಾಜ್ಯ ಸಮಿತಿ ಒತ್ತಾಯಿಸಿದೆ.

ಇದನ್ನೂ ಓದಿ: ಶಿಕ್ಷಣದ ಖಾಸಗೀಕರಣ, ಕೇಂದ್ರೀಕರಣ ತೀವ್ರಗೊಳಿಸುವ ಬಜೆಟ್: SFI

“ಮನಸೋಇಚ್ಛೆ ಖಾಸಗಿ ಶಾಲೆಗಳು ಶುಲ್ಕ ಪಾವತಿಸಲು ಪೋಷಕರಿಗೆ ಒತ್ತಡ ಹಾಕುತ್ತಿವೆ. ಈ ಕೊರೊನಾ ಲಾಕ್‌ಡೌನ್‌ನಿಂದ ಉದ್ಯೋಗ, ಆದಾಯ ಇಲ್ಲದೆ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಬಡವರು, ಅಸಂಘಟಿತ ಕಾರ್ಮಿಕರು, ರೈತರು, ದುಡಿಯುವ ವರ್ಗದ ಜನರು ಈ ಖಾಸಗಿ ಶಾಲೆಗಳ ಶುಲ್ಕ ವಸೂಲಾತಿಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರತಿಯೊಂದು ಖಾಸಗಿ ಶಾಲೆಗಳು ಎಷ್ಟು ಶುಲ್ಕ ಪಡೆಯುತ್ತಿವೆ ಎಂದು ಬಹಿರಂಗವಾಗಿ ಫಲಕದಲ್ಲಿ ಶುಲ್ಕ ವಿವರಣೆ ಮಾಹಿತಿಯನ್ನು ಸಾರ್ವಜನಿಕರಿಗೆ ಪ್ರದರ್ಶನ ಮಾಡಬೇಕೆಂಬ ಆದೇಶವನ್ನು ಪಾಲಿಸುತ್ತಿಲ್ಲ.
ಎಲ್ಲಾ ಶಾಲೆಗಳು ಈ ನಿಯಮವನ್ನು ಪಾಲಿಸದೇ ಇರುವುದನ್ನು SFI ಖಂಡಿಸಿದೆ.

ಪ್ರತಿಯೊಂದು ಜಿಲ್ಲೆಯಲ್ಲಿ ಇರುವ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರ (DERA) ಕಮಿಟಿ ಸಕ್ರಿಯವಾಗಿ ಖಾಸಗಿ ಶಾಲೆಗಳಿಗೆ ಭೇಟಿ ನೀಡಿ ಸರ್ಕಾರದ ಆದೇಶ ಪಾಲಿಸದೆ ಇರುವ ಶಾಲೆಗಳ ಮೇಲೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳಬೇಕು ಆ ಮೂಲಕ ಕೊರೋನಾ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟದಲ್ಲಿರುವ ಪೋಷಕರಿಂದ ದುಬಾರಿ ಶುಲ್ಕ ವಸೂಲಿ ಮಾಡುವುದನ್ನು ಕಡಿವಾಣ ಹಾಕಬೇಕೆಂದು SFI ಆಗ್ರಹಿಸಿದೆ.

ಇದನ್ನೂ ಓದಿ: ಅಂಬೇಡ್ಕರ್‌ ಸಂವಿಧಾನ ರಚಿಸಿಲ್ಲ ವಿವಾದ: ಶಿಕ್ಷಣ ಸಚಿವರ ರಾಜಿನಾಮೆಗೆ ಎಸ್ಎಫ್ಐ(SFI) ಒತ್ತಾಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...