Homeಕರೋನಾ ತಲ್ಲಣಇಡೀ ದೇಶದ ಜನರಿಗೆ ಲಸಿಕೆ ಹಾಕುವುದಾಗಿ ಸರ್ಕಾರ ಎಂದೂ ಹೇಳಿಲ್ಲ: ಉಲ್ಟಾ ಹೊಡೆದ ಆರೋಗ್ಯ ಸಚಿವಾಲಯ

ಇಡೀ ದೇಶದ ಜನರಿಗೆ ಲಸಿಕೆ ಹಾಕುವುದಾಗಿ ಸರ್ಕಾರ ಎಂದೂ ಹೇಳಿಲ್ಲ: ಉಲ್ಟಾ ಹೊಡೆದ ಆರೋಗ್ಯ ಸಚಿವಾಲಯ

"ಇಡೀ ದೇಶಕ್ಕೆ ಲಸಿಕೆ ಹಾಕುವ ಬಗ್ಗೆ ಸರ್ಕಾರ ಎಂದಿಗೂ ಮಾತನಾಡಲಿಲ್ಲ ಎಂಬುದನ್ನು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ’- ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್

- Advertisement -
- Advertisement -

ಕೊರೊನಾವೈರಸ್ ಸಾಂಕ್ರಾಮಿಕ ರೋಗಕ್ಕೆ ಇಡೀ ದೇಶದ ಜನರಿಗೆ ಲಸಿಕೆ ಹಾಕುವ ಬಗ್ಗೆ ಸರ್ಕಾರ ಎಂದಿಗೂ ಮಾತನಾಡಲಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಂಗಳವಾರ ಸ್ಪಷ್ಟನೆ ನೀಡಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ದೇಶದ ಇಡೀ ಜನಸಂಖ್ಯೆಗೆ ಲಸಿಕೆ ಹಾಕುವ ಅವಶ್ಯಕತೆಯಿಲ್ಲದಿರಬಹುದು ಎಂದು ಹೇಳಿದ್ದಾರೆ.

“ಇಡೀ ದೇಶಕ್ಕೆ ಲಸಿಕೆ ಹಾಕುವ ಬಗ್ಗೆ ಸರ್ಕಾರ ಎಂದಿಗೂ ಮಾತನಾಡಲಿಲ್ಲ ಎಂಬುದನ್ನು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಅಂತಹ ವೈಜ್ಞಾನಿಕ ವಿಚಾರಗಳನ್ನು ವಾಸ್ತವ ಮಾಹಿತಿಗಳನ್ನಾಧರಿಸಿ ಚರ್ಚಿಸಬೇಕು, ಒಟ್ಟಾರೆ ಮಾತನಾಡಬಾರದು” ಎಂದು ರಾಜೇಶ್ ಭೂಷಣ್ ತಿಳಿಸಿದರು.

ಆದರೆ ನವೆಂಬರ್ 24 ರಂದು ರಾಜ್ಯಗಳನ್ನುದ್ದೇಶಿಸಿ ಮಾತನಾಡಿದ ದೇಶದ ಪ್ರಧಾನಿ, ದೇಶದ ಪ್ರತಿಯೊಬ್ಬ ಪ್ರಜೆಗೆ ವ್ಯಾಕ್ಸೀನ್ ತಲುಪಲಿದೆ. ಅದಕ್ಕಾಗಿ ಎಲ್ಲಾ ವ್ಯವಸ್ಥೆ ನಡೆದಿದೆ ಎಂದು ಭರವಸೆ ನೀಡಿದ್ದರು. ಸ್ವತಃ ಪ್ರಧಾನಮಂತ್ರಿಗಳ ಕಚೇರಿಯಿಂದ ಬಂದ ಸರ್ಕಾರಿ PIB ಪತ್ರಿಕಾ ಪ್ರಕಟಣೆ ಇದನ್ನು ಹೇಳಿತ್ತು. ಆದರೆ ಈಗ ಇದಕ್ಕೆ ಉಲ್ಟಾ ಹೊಡೆಯುತ್ತಿರುವುದೇಕೆ ಎಂದು ಹಲವರು ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ: 2021 ಏಪ್ರಿಲ್ ವೇಳೆಗೆ ಭಾರತದಲ್ಲಿ ಎಲ್ಲರಿಗೂ ಕೊರೊನಾ ಲಸಿಕೆ- ಆದರ್‌ ಪೂನವಾಲ್ಲಾ

ಐಸಿಎಂಆರ್ ನ ಡಿಜಿ ಬಾಲರಾಮ್ ಭಾರ್ಗವ ಕೂಡ “ಇದು ಲಸಿಕೆಯ ಪರಿಣಾಮಕಾರಿತ್ವವನ್ನು ಅವಲಂಬಿಸಿರುತ್ತದೆ ಮತ್ತು ವೈರಸ್ ಹರಡುವ ಸರಪಳಿ ಮುರಿಯುವುದು ನಮ್ಮ ಉದ್ದೇಶ. ಸೋಂಕು ಹರಡುವುದನ್ನು ತಡೆಯುವುದು ಸಾಧ್ಯವಾದರೇ ನಾವು ಎಲ್ಲರಿಗೂ ಲಸಿಕೆ ನೀಡಬೇಕಾಗಿಲ್ಲ” ಎಂದಿದ್ದಾರೆ.

ಕೊರೊನಾ ವೈರಸ್ ಹರಡುವುದನ್ನು ತಡೆಯುವಲ್ಲಿ ಮಾಸ್ಕ್‌ಗಳ ಪಾತ್ರವು ಬಹಳ ಮುಖ್ಯವಾಗಿದೆ. ವ್ಯಾಕ್ಸಿನೇಷನ್ ನಂತರವೂ ಮಾಸ್ಕ್‌ಗಳ ಬಳಕೆ ಮುಂದುವರಿಯುತ್ತದೆ. ಸೋಂಕು ಹರಡುವುದನ್ನು ತಡೆಯುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಬಾಲರಾಮ್ ಭಾರ್ಗವ ತಿಳಿಸಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ರಾಜ್ಯದ ಎಲ್ಲರಿಗೂ ಉಚಿತ ಕೊರೊಣಾ ಲಸಿಕೆ ನೀಡುವ ಭರವಸೆ ನೀಡಿತ್ತು.

ಕಳೆದ ಕೆಲ ದಿನಗಳ ಹಿಂದೆ ’2024 ರ ವೇಳೆಗೆ ಪ್ರತಿಯೊಬ್ಬ ಭಾರತೀಯನಿಗೂ ಲಸಿಕೆ ನೀಡಲಾಗುವುದು’ ಎಂದು ಕೊರೊನಾ ಲಸಿಕೆ ತಯಾರಕ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ, ಆದರ್‌ ಪೂನವಾಲ್ಲಾ ಹಿಂದೂಸ್ತಾನ್ ಟೈಮ್ಸ್ ಲೀಡರ್‌ಶಿಪ್ ಸಮ್ಮಿಟ್‌- 2020 ಕಾರ್ಯಕ್ರಮದಲ್ಲಿ (HTLS) ಹೇಳಿದ್ದರು. ಆದರೆ ಈಗ ಇದೆಲ್ಲದ್ದಕ್ಕೂ ಉಲ್ಟಾ ಹೊಡೆದಿದ್ದು ಎಲ್ಲರಿಗೂ ಲಸಿಕೆ ಹಾಕುತ್ತೇವೆಂದು ನಾವು ಹೇಳಿಲ್ಲ ಎಂದು ಆರೋಗ್ಯ ಸಚಿವಾಲಯ ಹೇಳಿದೆ.


ಇದನ್ನೂ ಓದಿ: ಆಕ್ಸ್​​ಫರ್ಡ್ ಲಸಿಕೆ ಶೇ.70 ರಷ್ಟು ಪರಿಣಾಮಕಾರಿ: ಆಕ್ಸ್​​ಫರ್ಡ್​ ವಿಶ್ವವಿದ್ಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...