Homeಕರೋನಾ ತಲ್ಲಣಇಡೀ ದೇಶದ ಜನರಿಗೆ ಲಸಿಕೆ ಹಾಕುವುದಾಗಿ ಸರ್ಕಾರ ಎಂದೂ ಹೇಳಿಲ್ಲ: ಉಲ್ಟಾ ಹೊಡೆದ ಆರೋಗ್ಯ ಸಚಿವಾಲಯ

ಇಡೀ ದೇಶದ ಜನರಿಗೆ ಲಸಿಕೆ ಹಾಕುವುದಾಗಿ ಸರ್ಕಾರ ಎಂದೂ ಹೇಳಿಲ್ಲ: ಉಲ್ಟಾ ಹೊಡೆದ ಆರೋಗ್ಯ ಸಚಿವಾಲಯ

"ಇಡೀ ದೇಶಕ್ಕೆ ಲಸಿಕೆ ಹಾಕುವ ಬಗ್ಗೆ ಸರ್ಕಾರ ಎಂದಿಗೂ ಮಾತನಾಡಲಿಲ್ಲ ಎಂಬುದನ್ನು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ’- ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್

- Advertisement -
- Advertisement -

ಕೊರೊನಾವೈರಸ್ ಸಾಂಕ್ರಾಮಿಕ ರೋಗಕ್ಕೆ ಇಡೀ ದೇಶದ ಜನರಿಗೆ ಲಸಿಕೆ ಹಾಕುವ ಬಗ್ಗೆ ಸರ್ಕಾರ ಎಂದಿಗೂ ಮಾತನಾಡಲಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಂಗಳವಾರ ಸ್ಪಷ್ಟನೆ ನೀಡಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ದೇಶದ ಇಡೀ ಜನಸಂಖ್ಯೆಗೆ ಲಸಿಕೆ ಹಾಕುವ ಅವಶ್ಯಕತೆಯಿಲ್ಲದಿರಬಹುದು ಎಂದು ಹೇಳಿದ್ದಾರೆ.

“ಇಡೀ ದೇಶಕ್ಕೆ ಲಸಿಕೆ ಹಾಕುವ ಬಗ್ಗೆ ಸರ್ಕಾರ ಎಂದಿಗೂ ಮಾತನಾಡಲಿಲ್ಲ ಎಂಬುದನ್ನು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಅಂತಹ ವೈಜ್ಞಾನಿಕ ವಿಚಾರಗಳನ್ನು ವಾಸ್ತವ ಮಾಹಿತಿಗಳನ್ನಾಧರಿಸಿ ಚರ್ಚಿಸಬೇಕು, ಒಟ್ಟಾರೆ ಮಾತನಾಡಬಾರದು” ಎಂದು ರಾಜೇಶ್ ಭೂಷಣ್ ತಿಳಿಸಿದರು.

ಆದರೆ ನವೆಂಬರ್ 24 ರಂದು ರಾಜ್ಯಗಳನ್ನುದ್ದೇಶಿಸಿ ಮಾತನಾಡಿದ ದೇಶದ ಪ್ರಧಾನಿ, ದೇಶದ ಪ್ರತಿಯೊಬ್ಬ ಪ್ರಜೆಗೆ ವ್ಯಾಕ್ಸೀನ್ ತಲುಪಲಿದೆ. ಅದಕ್ಕಾಗಿ ಎಲ್ಲಾ ವ್ಯವಸ್ಥೆ ನಡೆದಿದೆ ಎಂದು ಭರವಸೆ ನೀಡಿದ್ದರು. ಸ್ವತಃ ಪ್ರಧಾನಮಂತ್ರಿಗಳ ಕಚೇರಿಯಿಂದ ಬಂದ ಸರ್ಕಾರಿ PIB ಪತ್ರಿಕಾ ಪ್ರಕಟಣೆ ಇದನ್ನು ಹೇಳಿತ್ತು. ಆದರೆ ಈಗ ಇದಕ್ಕೆ ಉಲ್ಟಾ ಹೊಡೆಯುತ್ತಿರುವುದೇಕೆ ಎಂದು ಹಲವರು ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ: 2021 ಏಪ್ರಿಲ್ ವೇಳೆಗೆ ಭಾರತದಲ್ಲಿ ಎಲ್ಲರಿಗೂ ಕೊರೊನಾ ಲಸಿಕೆ- ಆದರ್‌ ಪೂನವಾಲ್ಲಾ

ಐಸಿಎಂಆರ್ ನ ಡಿಜಿ ಬಾಲರಾಮ್ ಭಾರ್ಗವ ಕೂಡ “ಇದು ಲಸಿಕೆಯ ಪರಿಣಾಮಕಾರಿತ್ವವನ್ನು ಅವಲಂಬಿಸಿರುತ್ತದೆ ಮತ್ತು ವೈರಸ್ ಹರಡುವ ಸರಪಳಿ ಮುರಿಯುವುದು ನಮ್ಮ ಉದ್ದೇಶ. ಸೋಂಕು ಹರಡುವುದನ್ನು ತಡೆಯುವುದು ಸಾಧ್ಯವಾದರೇ ನಾವು ಎಲ್ಲರಿಗೂ ಲಸಿಕೆ ನೀಡಬೇಕಾಗಿಲ್ಲ” ಎಂದಿದ್ದಾರೆ.

ಕೊರೊನಾ ವೈರಸ್ ಹರಡುವುದನ್ನು ತಡೆಯುವಲ್ಲಿ ಮಾಸ್ಕ್‌ಗಳ ಪಾತ್ರವು ಬಹಳ ಮುಖ್ಯವಾಗಿದೆ. ವ್ಯಾಕ್ಸಿನೇಷನ್ ನಂತರವೂ ಮಾಸ್ಕ್‌ಗಳ ಬಳಕೆ ಮುಂದುವರಿಯುತ್ತದೆ. ಸೋಂಕು ಹರಡುವುದನ್ನು ತಡೆಯುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಬಾಲರಾಮ್ ಭಾರ್ಗವ ತಿಳಿಸಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ರಾಜ್ಯದ ಎಲ್ಲರಿಗೂ ಉಚಿತ ಕೊರೊಣಾ ಲಸಿಕೆ ನೀಡುವ ಭರವಸೆ ನೀಡಿತ್ತು.

ಕಳೆದ ಕೆಲ ದಿನಗಳ ಹಿಂದೆ ’2024 ರ ವೇಳೆಗೆ ಪ್ರತಿಯೊಬ್ಬ ಭಾರತೀಯನಿಗೂ ಲಸಿಕೆ ನೀಡಲಾಗುವುದು’ ಎಂದು ಕೊರೊನಾ ಲಸಿಕೆ ತಯಾರಕ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ, ಆದರ್‌ ಪೂನವಾಲ್ಲಾ ಹಿಂದೂಸ್ತಾನ್ ಟೈಮ್ಸ್ ಲೀಡರ್‌ಶಿಪ್ ಸಮ್ಮಿಟ್‌- 2020 ಕಾರ್ಯಕ್ರಮದಲ್ಲಿ (HTLS) ಹೇಳಿದ್ದರು. ಆದರೆ ಈಗ ಇದೆಲ್ಲದ್ದಕ್ಕೂ ಉಲ್ಟಾ ಹೊಡೆದಿದ್ದು ಎಲ್ಲರಿಗೂ ಲಸಿಕೆ ಹಾಕುತ್ತೇವೆಂದು ನಾವು ಹೇಳಿಲ್ಲ ಎಂದು ಆರೋಗ್ಯ ಸಚಿವಾಲಯ ಹೇಳಿದೆ.


ಇದನ್ನೂ ಓದಿ: ಆಕ್ಸ್​​ಫರ್ಡ್ ಲಸಿಕೆ ಶೇ.70 ರಷ್ಟು ಪರಿಣಾಮಕಾರಿ: ಆಕ್ಸ್​​ಫರ್ಡ್​ ವಿಶ್ವವಿದ್ಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...