Homeಮುಖಪುಟಪುಣ್ಯಕೋಟಿ ಯೋಜನೆಗಾಗಿ ನೌಕರರ ಸಂಬಳ ಕಡಿತಕ್ಕೆ ಸರ್ಕಾರದ ಆದೇಶ: ನೌಕರರ ತೀವ್ರ ವಿರೋಧ

ಪುಣ್ಯಕೋಟಿ ಯೋಜನೆಗಾಗಿ ನೌಕರರ ಸಂಬಳ ಕಡಿತಕ್ಕೆ ಸರ್ಕಾರದ ಆದೇಶ: ನೌಕರರ ತೀವ್ರ ವಿರೋಧ

- Advertisement -
- Advertisement -

ರಾಜ್ಯದ ಸರ್ಕಾರಿ ಮತ್ತು ಖಾಸಗೀ ಗೋಶಾಲೆಗಳಲ್ಲಿರುವ ಗೋವುಗಳನ್ನು ದತ್ತು ತೆಗೆದುಕೊಳ್ಳುವ ಪುಣ್ಯಕೋಟಿ ಯೋಜನೆಗಾಗಿ ಸರ್ಕಾರಿ ನೌಕರರ ನಂವೆಂಬರ್ ತಿಂಗಳ ಸಂಬಳದಲ್ಲಿ ಕಡಿತ ಮಾಡುವುದಾಗಿ ಆದೇಶ ಹೊರಡಿಸಿದೆ. ಈ ಬೆನ್ನಲ್ಲೆ ಹಲವು ಸರ್ಕಾರಿ ನೌಕರರು ತಮ್ಮ ಸಂಬಳ ಕಡಿತಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಿಧಾನಸಭಾ ಸಚಿವಾಲಯದ ನೌಕರರ ಸಂಘದ ಅಧ್ಯಕ್ಷರೆ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಸರ್ಕಾರದ ಆರ್ಥಿಕ ಇಲಾಖೆಯ ಉಪಕಾರ್ಯದರ್ಶಿ ಉಮಾ ಕೆ ರವರು ನಡಾವಳಿ ಪತ್ರ ಹೊರಡಿಸಿದ್ದಾರೆ. “ಕರ್ನಾಟಕ ಸರ್ಕಾರದ ಪುಣ್ಯಕೋಟಿ ದತ್ತು ಯೋಜನೆಯ ಸುಗಮ ಅನುಷ್ಟಾನಗೊಳಿಸಲು ಅನುವಾಗಲು ರಾಜ್ಯ ಸರ್ಕಾರಿ ನೌಕರರು ಹಾಗೂ ನಿಗಮ/ಮಂಡಳಿ/ಪ್ರಾಧಿಕಾರ/ವಿಶ್ವವಿದ್ಯಾಲಯ/ಸ್ವಾಯುತ್ತ ಸಂಸ್ಥೆಗಳ ನೌಕರರ ನವೆಂಬರ್-2022ರ ಮಾಹೆಯ ವೇತನದಿಂದ ಒಂದು ಬಾರಿಗೆ ಸೀಮತವಾಗಿ ವಂತಿಗೆಯನ್ನು ಕಟಾಯಿಸಲು ಹಾಗೂ ನಿಗದಿತ ಯೋಜನೆಗೆ ಬಳಕೆ ಮಾಡಲು ಸರ್ಕಾರವೂ ಮಂಜೂರಾತಿ ನೀಡಿದೆ” ಎಂದು ನಡಾವಳಿಯಲ್ಲಿ ತಿಳಿಸಲಾಗಿದೆ.

ಕ್ಲಾಸ್ ಒನ್ ಅಧಿಕಾರಿಗಳು ತಲಾ 11,000 ರೂ, ಗ್ರೂಪ್ ಬಿ ನೌಕರರು 4,000 ರೂ ಮತ್ತು ಗ್ರೂಪ್ ಸಿ ನೌಕರರ 400 ರೂಗಳನ್ನು ಕಡಿತ ಮಾಡಲಾಗುವುದು. ವೇತನದಿಂದ ವಂತಿಕೆ ಕೊಡಲಿಚ್ಛಿಸದ ನೌಕರರು ತಮ್ಮ ಅಸಮ್ಮತಿಯನ್ನು ಸಂಬಂಧಪಟ್ಟ ಬಡವಾಡೆ ಅಧಿಕಾರಿಗಳಿಗೆ ಲಿಖಿತ ಮೂಲಕ ನವೆಂಬರ್ 25ರೊಳಗೆ ಸಲ್ಲಿಸತಕ್ಕದ್ದು ಎಂದು ಸಹ ನಡಾವಳಿಯಲ್ಲಿ ಹೇಳಲಾಗಿದೆ.

ಆದರೆ ಸರ್ಕಾರ ಈ ಯೋಜನೆಗೆ ಹಿಂದಿನಿಂದಲೂ ಸಹ ವಿರೋಧವಿದ್ದು, ಈಗ ಸಂಬಳ ಕಡಿತಕ್ಕೆ ಬಹಳಷ್ಟು ನೌಕರರು ವಿರೋಧ ವ್ಯಕ್ತಪಡಿಸಿದ್ದಾರೆ. ಹೆಸರು ಹೇಳಲು ಇಚ್ಚಿಸದ, ರಾಯಚೂರಿನಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿರುವ ನೌಕರರೊಬ್ಬರು ನಾನುಗೌರಿ.ಕಾಂ ಜೊತೆ ಮಾತನಾಡಿ, “ಗೋವು ಪೂಜ್ಯನೀಯ, ಹಾಗಾಗಿ ಅದನ್ನು ರಕ್ಷಿಸಲು ಹಣ ಕೊಡಿ ಎಂದು ಕೇಳುತ್ತಿದ್ದಾರೆ. ಅದು ಒಂದು ಧರ್ಮಕ್ಕೆ ಸಂಬಂಧಿಸಿದ ವಿಷಯವಾಗಿದ್ದು ಅದನ್ನು ನಾನು ಅಲ್ಲಗಳೆಯುವುದಿಲ್ಲ. ಆದರೆ ಎಲ್ಲಾ ಧರ್ಮದ ನೌಕರರು ಸಹ ಇದ್ದು ಎಲ್ಲರ ಮೇಲೆ ಒಂದು ಧರ್ಮ ನಂಬಿಕೆಯನ್ನು ಹೇರುವುದು ಸರಿಯಲ್ಲ” ಎಂದರು.

ಸರ್ಕಾರಿ ನೌಕರರ ಸಂಘದ ಸಿ.ಎಸ್ ಷಡಕ್ಷರಿಯವರು ಯಾರೊಂದಿಗೂ ಚರ್ಚಿಸದೆ ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ. ಅವರು ಸಂಘದ ನೌಕರರ ಹಿತ ಕಾಯುವ ಕೆಲಸ ಮಾಡುತ್ತಿಲ್ಲ. ಹಳೆ ಪಿಂಚಣಿ ವ್ಯವಸ್ಥೆಗಾಗಿ ನೌಕರರು ಬಹಳ ದಿನಗಳಿಂದ ಹೋರಾಟ ಮಾಡುತ್ತಿದ್ದಾರೆ. ಆದರೆ ಅದರ ಬಗ್ಗೆ ಸೊಲ್ಲತ್ತೆದ ಅವರು ಉಪಯೋಗಕ್ಕೆ ಬಾರದ ಯೋಜನೆಗೆ ನೌಕರರು ಹಣ ಕೊಡಬೇಕೆಂದು ಒತ್ತಾಯಿಸುವುದು ಒಪ್ಪಲು ಸಾಧ್ಯವಿಲ್ಲ” ಎಂದರು.

ಇಲ್ಲಿ ಹಣದ ಪ್ರಶ್ನೆಯಾಗಿ ಇದನ್ನು ನೋಡುತ್ತಿಲ್ಲ. ನಾವು ಹಿಂದೆ ಕೋವಿಡ್ ಸಮಯದಲ್ಲಿ ಮತ್ತು ನೆರೆ ಸಂದರ್ಭದಲ್ಲಿ ಒಂದು ದಿನದ ವೇತನ ಕೊಟ್ಟಿದ್ದೇವೆ. ಇಂದು ಸಹ ಅಪೌಷ್ಟಿಕ ಮಕ್ಕಳಿಗಾಗಿ, ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಹಣ ಕೇಳಿದರೆ ಒಂದು ದಿನದ ವೇತನ ಕೊಡಲು ಸಿದ್ದರಿದ್ದೇವೆ. ನಮ್ಮ ನಮ್ಮ ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ನಾನು 10,000 ರೂ ಕೊಡಲು ಸಿದ್ದನಿದ್ದೇನೆ. ಆದರೆ ಧರ್ಮದ ಹೆಸರಿನಲ್ಲಿ ಹಣ ಕೇಳುವುದಕ್ಕೆ ನಮ್ಮ ವಿರೋಧವಿದೆ ಎಂದರು.

ಬರಹಗಾರ ಯೋಗೇಶ್ ಮಾಸ್ಟರ್ ಈ ಯೋಜನೆಯ ಕುರಿತು ಪ್ರಶ್ನೆಯೆತ್ತಿದ್ದಾರೆ. “ಗೋ ಸಂತತಿಯು ನಶಿಸುವಂತ ಅಪಾಯದಲ್ಲಿದೆಯೇ? ಈಗ ಕರ್ನಾಟಕ ರಾಜ್ಯವು ಇಂತಹದೊಂದು ಯೋಜನೆಯ ಅಗತ್ಯವನ್ನು ಹೊಂದಿದೆಯೇ? ಈ ರೀತಿಯಲ್ಲಿ ರಾಜ್ಯದ ನೌಕರರ ಹಣವನ್ನು ಇಂತಹದೊಂದು ಯೋಜನೆಗೆ ಬಳಸಿಕೊಳ್ಳಲು ಸೂಕ್ತ ಸಭೆಗಳನ್ನು ನಡೆಸೆ, ಅವರ ಅಭಿಪ್ರಾಯಗಳನ್ನೇನಾದರೂ ಸಂಗ್ರಹಿಸಿರುವುದೇ? ಎಲ್ಲದಕ್ಕಿಂತ ಮುಖ್ಯವಾಗಿ ಗೋ ಸಂತತಿಯನ್ನು ರಕ್ಷಿಸುವಂತ ವಿಷಯವು ಅಷ್ಟೊಂದು ಪ್ರಾಧಾನ್ಯತೆಯನ್ನು ಪಡೆದಿದೆಯೇ?” ಎಂದು ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ಶಿಕ್ಷಣ, ಆರೋಗ್ಯ, ಆಹಾರ, ಉದ್ಯೋಗ, ಶಿಶು ಮರಣ ಪ್ರಮಾಣದ ತಡೆ, ಸರ್ಕಾರಿ ಆಸ್ಪತ್ರೆ / ಶಾಲೆಗಳಲ್ಲಿರುವ ಮೂಲಭೂತ ಸೌಕರ್ಯಗಳ ಕೊರತೆಯನ್ನು ನೀಗಿಸುವಿಕೆ, ರೈತರ ಸಮಸ್ಯೆ, ಗುತ್ತಿಗೆ ಕೆಲಸಗಾರರ ವೇತನಾಶ್ರೇಣಿಯ ಪರಿಷ್ಕರಣೆಗಳೆಲ್ಲದಕ್ಕಿಂತ ಅತ್ಯಗತ್ಯವಾಗಿರುವುದೇ ಈ ಪುಣ್ಯಕೋಟಿ ಯೋಜನೆ? ಅಥವಾ ನೈಸರ್ಗಿಕ ವಿಕೋಪವೋ ಅಥವಾ ಯುದ್ಧ ಅಥವಾ ಕ್ಷಾಮದಂತಹ ದುರ್ಭಿಕ್ಷ ವಕ್ಕರಿಸಿದೆಯೇ?
ರಾಜ್ಯ ಸರ್ಕಾರಕ್ಕೆ ಯೋಜನೆಗಳನ್ನು ರೂಪಿಸುತ್ತಿರುವವರು ಯಾರು? ಅವರಿಗೆ ಜನಪರ ಯೋಜನೆಗಳಿಗಿಂತ, ಗೋ-ಪರ ಯೋಜನೆಗಳು ಮುಖ್ಯವಾಯ್ತೇ? ಎಂದು ಅವರು ಫೇಸ್‌ಬುಕ್ ಪೋಸ್ಟ್‌ ಮೂಲಕ ಪ್ರಶ್ನೆ ಎತ್ತಿದ್ದಾರೆ.

ಈ ಯೋಜನೆಗೆ ಹಿಂದಿನಿಂದಲೂ ಸಹ ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ /ಎಸ್ಟಿ ನೌಕರರ ಸಮನ್ವಯ ಸಮಿತಿಯ ಅಧ್ಯಕ್ಷರಾದ ಡಿ. ಶಿವ ಶಂಕರ್ ಮತ್ತು ವಿಧಾನಸಭಾ ಸಚಿವಾಲಯದ ನೌಕರರ ಸಂಘದ ಪಿ.ಗುರುಸ್ವಾಮಿಯವರು ವಿರೋಧಿಸಿದ್ದಾರೆ.

ಇದನ್ನೂ ಓದಿ; ಪುಣ್ಯಕೋಟಿ ಹಸು ದತ್ತು ಯೋಜನೆಗಾಗಿ ಸರ್ಕಾರಿ ನೌಕರರು 100 ಕೋಟಿ ದೇಣಿಗೆ ನೀಡುತ್ತೇವೆ -ಸಿ.ಎಸ್ ಷಡಕ್ಷರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...