Homeಮುಖಪುಟಪುಣ್ಯಕೋಟಿ ಯೋಜನೆಗಾಗಿ ನೌಕರರ ಸಂಬಳ ಕಡಿತಕ್ಕೆ ಸರ್ಕಾರದ ಆದೇಶ: ನೌಕರರ ತೀವ್ರ ವಿರೋಧ

ಪುಣ್ಯಕೋಟಿ ಯೋಜನೆಗಾಗಿ ನೌಕರರ ಸಂಬಳ ಕಡಿತಕ್ಕೆ ಸರ್ಕಾರದ ಆದೇಶ: ನೌಕರರ ತೀವ್ರ ವಿರೋಧ

- Advertisement -
- Advertisement -

ರಾಜ್ಯದ ಸರ್ಕಾರಿ ಮತ್ತು ಖಾಸಗೀ ಗೋಶಾಲೆಗಳಲ್ಲಿರುವ ಗೋವುಗಳನ್ನು ದತ್ತು ತೆಗೆದುಕೊಳ್ಳುವ ಪುಣ್ಯಕೋಟಿ ಯೋಜನೆಗಾಗಿ ಸರ್ಕಾರಿ ನೌಕರರ ನಂವೆಂಬರ್ ತಿಂಗಳ ಸಂಬಳದಲ್ಲಿ ಕಡಿತ ಮಾಡುವುದಾಗಿ ಆದೇಶ ಹೊರಡಿಸಿದೆ. ಈ ಬೆನ್ನಲ್ಲೆ ಹಲವು ಸರ್ಕಾರಿ ನೌಕರರು ತಮ್ಮ ಸಂಬಳ ಕಡಿತಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಿಧಾನಸಭಾ ಸಚಿವಾಲಯದ ನೌಕರರ ಸಂಘದ ಅಧ್ಯಕ್ಷರೆ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಸರ್ಕಾರದ ಆರ್ಥಿಕ ಇಲಾಖೆಯ ಉಪಕಾರ್ಯದರ್ಶಿ ಉಮಾ ಕೆ ರವರು ನಡಾವಳಿ ಪತ್ರ ಹೊರಡಿಸಿದ್ದಾರೆ. “ಕರ್ನಾಟಕ ಸರ್ಕಾರದ ಪುಣ್ಯಕೋಟಿ ದತ್ತು ಯೋಜನೆಯ ಸುಗಮ ಅನುಷ್ಟಾನಗೊಳಿಸಲು ಅನುವಾಗಲು ರಾಜ್ಯ ಸರ್ಕಾರಿ ನೌಕರರು ಹಾಗೂ ನಿಗಮ/ಮಂಡಳಿ/ಪ್ರಾಧಿಕಾರ/ವಿಶ್ವವಿದ್ಯಾಲಯ/ಸ್ವಾಯುತ್ತ ಸಂಸ್ಥೆಗಳ ನೌಕರರ ನವೆಂಬರ್-2022ರ ಮಾಹೆಯ ವೇತನದಿಂದ ಒಂದು ಬಾರಿಗೆ ಸೀಮತವಾಗಿ ವಂತಿಗೆಯನ್ನು ಕಟಾಯಿಸಲು ಹಾಗೂ ನಿಗದಿತ ಯೋಜನೆಗೆ ಬಳಕೆ ಮಾಡಲು ಸರ್ಕಾರವೂ ಮಂಜೂರಾತಿ ನೀಡಿದೆ” ಎಂದು ನಡಾವಳಿಯಲ್ಲಿ ತಿಳಿಸಲಾಗಿದೆ.

ಕ್ಲಾಸ್ ಒನ್ ಅಧಿಕಾರಿಗಳು ತಲಾ 11,000 ರೂ, ಗ್ರೂಪ್ ಬಿ ನೌಕರರು 4,000 ರೂ ಮತ್ತು ಗ್ರೂಪ್ ಸಿ ನೌಕರರ 400 ರೂಗಳನ್ನು ಕಡಿತ ಮಾಡಲಾಗುವುದು. ವೇತನದಿಂದ ವಂತಿಕೆ ಕೊಡಲಿಚ್ಛಿಸದ ನೌಕರರು ತಮ್ಮ ಅಸಮ್ಮತಿಯನ್ನು ಸಂಬಂಧಪಟ್ಟ ಬಡವಾಡೆ ಅಧಿಕಾರಿಗಳಿಗೆ ಲಿಖಿತ ಮೂಲಕ ನವೆಂಬರ್ 25ರೊಳಗೆ ಸಲ್ಲಿಸತಕ್ಕದ್ದು ಎಂದು ಸಹ ನಡಾವಳಿಯಲ್ಲಿ ಹೇಳಲಾಗಿದೆ.

ಆದರೆ ಸರ್ಕಾರ ಈ ಯೋಜನೆಗೆ ಹಿಂದಿನಿಂದಲೂ ಸಹ ವಿರೋಧವಿದ್ದು, ಈಗ ಸಂಬಳ ಕಡಿತಕ್ಕೆ ಬಹಳಷ್ಟು ನೌಕರರು ವಿರೋಧ ವ್ಯಕ್ತಪಡಿಸಿದ್ದಾರೆ. ಹೆಸರು ಹೇಳಲು ಇಚ್ಚಿಸದ, ರಾಯಚೂರಿನಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿರುವ ನೌಕರರೊಬ್ಬರು ನಾನುಗೌರಿ.ಕಾಂ ಜೊತೆ ಮಾತನಾಡಿ, “ಗೋವು ಪೂಜ್ಯನೀಯ, ಹಾಗಾಗಿ ಅದನ್ನು ರಕ್ಷಿಸಲು ಹಣ ಕೊಡಿ ಎಂದು ಕೇಳುತ್ತಿದ್ದಾರೆ. ಅದು ಒಂದು ಧರ್ಮಕ್ಕೆ ಸಂಬಂಧಿಸಿದ ವಿಷಯವಾಗಿದ್ದು ಅದನ್ನು ನಾನು ಅಲ್ಲಗಳೆಯುವುದಿಲ್ಲ. ಆದರೆ ಎಲ್ಲಾ ಧರ್ಮದ ನೌಕರರು ಸಹ ಇದ್ದು ಎಲ್ಲರ ಮೇಲೆ ಒಂದು ಧರ್ಮ ನಂಬಿಕೆಯನ್ನು ಹೇರುವುದು ಸರಿಯಲ್ಲ” ಎಂದರು.

ಸರ್ಕಾರಿ ನೌಕರರ ಸಂಘದ ಸಿ.ಎಸ್ ಷಡಕ್ಷರಿಯವರು ಯಾರೊಂದಿಗೂ ಚರ್ಚಿಸದೆ ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ. ಅವರು ಸಂಘದ ನೌಕರರ ಹಿತ ಕಾಯುವ ಕೆಲಸ ಮಾಡುತ್ತಿಲ್ಲ. ಹಳೆ ಪಿಂಚಣಿ ವ್ಯವಸ್ಥೆಗಾಗಿ ನೌಕರರು ಬಹಳ ದಿನಗಳಿಂದ ಹೋರಾಟ ಮಾಡುತ್ತಿದ್ದಾರೆ. ಆದರೆ ಅದರ ಬಗ್ಗೆ ಸೊಲ್ಲತ್ತೆದ ಅವರು ಉಪಯೋಗಕ್ಕೆ ಬಾರದ ಯೋಜನೆಗೆ ನೌಕರರು ಹಣ ಕೊಡಬೇಕೆಂದು ಒತ್ತಾಯಿಸುವುದು ಒಪ್ಪಲು ಸಾಧ್ಯವಿಲ್ಲ” ಎಂದರು.

ಇಲ್ಲಿ ಹಣದ ಪ್ರಶ್ನೆಯಾಗಿ ಇದನ್ನು ನೋಡುತ್ತಿಲ್ಲ. ನಾವು ಹಿಂದೆ ಕೋವಿಡ್ ಸಮಯದಲ್ಲಿ ಮತ್ತು ನೆರೆ ಸಂದರ್ಭದಲ್ಲಿ ಒಂದು ದಿನದ ವೇತನ ಕೊಟ್ಟಿದ್ದೇವೆ. ಇಂದು ಸಹ ಅಪೌಷ್ಟಿಕ ಮಕ್ಕಳಿಗಾಗಿ, ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಹಣ ಕೇಳಿದರೆ ಒಂದು ದಿನದ ವೇತನ ಕೊಡಲು ಸಿದ್ದರಿದ್ದೇವೆ. ನಮ್ಮ ನಮ್ಮ ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ನಾನು 10,000 ರೂ ಕೊಡಲು ಸಿದ್ದನಿದ್ದೇನೆ. ಆದರೆ ಧರ್ಮದ ಹೆಸರಿನಲ್ಲಿ ಹಣ ಕೇಳುವುದಕ್ಕೆ ನಮ್ಮ ವಿರೋಧವಿದೆ ಎಂದರು.

ಬರಹಗಾರ ಯೋಗೇಶ್ ಮಾಸ್ಟರ್ ಈ ಯೋಜನೆಯ ಕುರಿತು ಪ್ರಶ್ನೆಯೆತ್ತಿದ್ದಾರೆ. “ಗೋ ಸಂತತಿಯು ನಶಿಸುವಂತ ಅಪಾಯದಲ್ಲಿದೆಯೇ? ಈಗ ಕರ್ನಾಟಕ ರಾಜ್ಯವು ಇಂತಹದೊಂದು ಯೋಜನೆಯ ಅಗತ್ಯವನ್ನು ಹೊಂದಿದೆಯೇ? ಈ ರೀತಿಯಲ್ಲಿ ರಾಜ್ಯದ ನೌಕರರ ಹಣವನ್ನು ಇಂತಹದೊಂದು ಯೋಜನೆಗೆ ಬಳಸಿಕೊಳ್ಳಲು ಸೂಕ್ತ ಸಭೆಗಳನ್ನು ನಡೆಸೆ, ಅವರ ಅಭಿಪ್ರಾಯಗಳನ್ನೇನಾದರೂ ಸಂಗ್ರಹಿಸಿರುವುದೇ? ಎಲ್ಲದಕ್ಕಿಂತ ಮುಖ್ಯವಾಗಿ ಗೋ ಸಂತತಿಯನ್ನು ರಕ್ಷಿಸುವಂತ ವಿಷಯವು ಅಷ್ಟೊಂದು ಪ್ರಾಧಾನ್ಯತೆಯನ್ನು ಪಡೆದಿದೆಯೇ?” ಎಂದು ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ಶಿಕ್ಷಣ, ಆರೋಗ್ಯ, ಆಹಾರ, ಉದ್ಯೋಗ, ಶಿಶು ಮರಣ ಪ್ರಮಾಣದ ತಡೆ, ಸರ್ಕಾರಿ ಆಸ್ಪತ್ರೆ / ಶಾಲೆಗಳಲ್ಲಿರುವ ಮೂಲಭೂತ ಸೌಕರ್ಯಗಳ ಕೊರತೆಯನ್ನು ನೀಗಿಸುವಿಕೆ, ರೈತರ ಸಮಸ್ಯೆ, ಗುತ್ತಿಗೆ ಕೆಲಸಗಾರರ ವೇತನಾಶ್ರೇಣಿಯ ಪರಿಷ್ಕರಣೆಗಳೆಲ್ಲದಕ್ಕಿಂತ ಅತ್ಯಗತ್ಯವಾಗಿರುವುದೇ ಈ ಪುಣ್ಯಕೋಟಿ ಯೋಜನೆ? ಅಥವಾ ನೈಸರ್ಗಿಕ ವಿಕೋಪವೋ ಅಥವಾ ಯುದ್ಧ ಅಥವಾ ಕ್ಷಾಮದಂತಹ ದುರ್ಭಿಕ್ಷ ವಕ್ಕರಿಸಿದೆಯೇ?
ರಾಜ್ಯ ಸರ್ಕಾರಕ್ಕೆ ಯೋಜನೆಗಳನ್ನು ರೂಪಿಸುತ್ತಿರುವವರು ಯಾರು? ಅವರಿಗೆ ಜನಪರ ಯೋಜನೆಗಳಿಗಿಂತ, ಗೋ-ಪರ ಯೋಜನೆಗಳು ಮುಖ್ಯವಾಯ್ತೇ? ಎಂದು ಅವರು ಫೇಸ್‌ಬುಕ್ ಪೋಸ್ಟ್‌ ಮೂಲಕ ಪ್ರಶ್ನೆ ಎತ್ತಿದ್ದಾರೆ.

ಈ ಯೋಜನೆಗೆ ಹಿಂದಿನಿಂದಲೂ ಸಹ ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ /ಎಸ್ಟಿ ನೌಕರರ ಸಮನ್ವಯ ಸಮಿತಿಯ ಅಧ್ಯಕ್ಷರಾದ ಡಿ. ಶಿವ ಶಂಕರ್ ಮತ್ತು ವಿಧಾನಸಭಾ ಸಚಿವಾಲಯದ ನೌಕರರ ಸಂಘದ ಪಿ.ಗುರುಸ್ವಾಮಿಯವರು ವಿರೋಧಿಸಿದ್ದಾರೆ.

ಇದನ್ನೂ ಓದಿ; ಪುಣ್ಯಕೋಟಿ ಹಸು ದತ್ತು ಯೋಜನೆಗಾಗಿ ಸರ್ಕಾರಿ ನೌಕರರು 100 ಕೋಟಿ ದೇಣಿಗೆ ನೀಡುತ್ತೇವೆ -ಸಿ.ಎಸ್ ಷಡಕ್ಷರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...