Homeಮುಖಪುಟಪುಣ್ಯಕೋಟಿ ಯೋಜನೆಗಾಗಿ ನೌಕರರ ಸಂಬಳ ಕಡಿತಕ್ಕೆ ಸರ್ಕಾರದ ಆದೇಶ: ನೌಕರರ ತೀವ್ರ ವಿರೋಧ

ಪುಣ್ಯಕೋಟಿ ಯೋಜನೆಗಾಗಿ ನೌಕರರ ಸಂಬಳ ಕಡಿತಕ್ಕೆ ಸರ್ಕಾರದ ಆದೇಶ: ನೌಕರರ ತೀವ್ರ ವಿರೋಧ

- Advertisement -
- Advertisement -

ರಾಜ್ಯದ ಸರ್ಕಾರಿ ಮತ್ತು ಖಾಸಗೀ ಗೋಶಾಲೆಗಳಲ್ಲಿರುವ ಗೋವುಗಳನ್ನು ದತ್ತು ತೆಗೆದುಕೊಳ್ಳುವ ಪುಣ್ಯಕೋಟಿ ಯೋಜನೆಗಾಗಿ ಸರ್ಕಾರಿ ನೌಕರರ ನಂವೆಂಬರ್ ತಿಂಗಳ ಸಂಬಳದಲ್ಲಿ ಕಡಿತ ಮಾಡುವುದಾಗಿ ಆದೇಶ ಹೊರಡಿಸಿದೆ. ಈ ಬೆನ್ನಲ್ಲೆ ಹಲವು ಸರ್ಕಾರಿ ನೌಕರರು ತಮ್ಮ ಸಂಬಳ ಕಡಿತಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಿಧಾನಸಭಾ ಸಚಿವಾಲಯದ ನೌಕರರ ಸಂಘದ ಅಧ್ಯಕ್ಷರೆ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಸರ್ಕಾರದ ಆರ್ಥಿಕ ಇಲಾಖೆಯ ಉಪಕಾರ್ಯದರ್ಶಿ ಉಮಾ ಕೆ ರವರು ನಡಾವಳಿ ಪತ್ರ ಹೊರಡಿಸಿದ್ದಾರೆ. “ಕರ್ನಾಟಕ ಸರ್ಕಾರದ ಪುಣ್ಯಕೋಟಿ ದತ್ತು ಯೋಜನೆಯ ಸುಗಮ ಅನುಷ್ಟಾನಗೊಳಿಸಲು ಅನುವಾಗಲು ರಾಜ್ಯ ಸರ್ಕಾರಿ ನೌಕರರು ಹಾಗೂ ನಿಗಮ/ಮಂಡಳಿ/ಪ್ರಾಧಿಕಾರ/ವಿಶ್ವವಿದ್ಯಾಲಯ/ಸ್ವಾಯುತ್ತ ಸಂಸ್ಥೆಗಳ ನೌಕರರ ನವೆಂಬರ್-2022ರ ಮಾಹೆಯ ವೇತನದಿಂದ ಒಂದು ಬಾರಿಗೆ ಸೀಮತವಾಗಿ ವಂತಿಗೆಯನ್ನು ಕಟಾಯಿಸಲು ಹಾಗೂ ನಿಗದಿತ ಯೋಜನೆಗೆ ಬಳಕೆ ಮಾಡಲು ಸರ್ಕಾರವೂ ಮಂಜೂರಾತಿ ನೀಡಿದೆ” ಎಂದು ನಡಾವಳಿಯಲ್ಲಿ ತಿಳಿಸಲಾಗಿದೆ.

ಕ್ಲಾಸ್ ಒನ್ ಅಧಿಕಾರಿಗಳು ತಲಾ 11,000 ರೂ, ಗ್ರೂಪ್ ಬಿ ನೌಕರರು 4,000 ರೂ ಮತ್ತು ಗ್ರೂಪ್ ಸಿ ನೌಕರರ 400 ರೂಗಳನ್ನು ಕಡಿತ ಮಾಡಲಾಗುವುದು. ವೇತನದಿಂದ ವಂತಿಕೆ ಕೊಡಲಿಚ್ಛಿಸದ ನೌಕರರು ತಮ್ಮ ಅಸಮ್ಮತಿಯನ್ನು ಸಂಬಂಧಪಟ್ಟ ಬಡವಾಡೆ ಅಧಿಕಾರಿಗಳಿಗೆ ಲಿಖಿತ ಮೂಲಕ ನವೆಂಬರ್ 25ರೊಳಗೆ ಸಲ್ಲಿಸತಕ್ಕದ್ದು ಎಂದು ಸಹ ನಡಾವಳಿಯಲ್ಲಿ ಹೇಳಲಾಗಿದೆ.

ಆದರೆ ಸರ್ಕಾರ ಈ ಯೋಜನೆಗೆ ಹಿಂದಿನಿಂದಲೂ ಸಹ ವಿರೋಧವಿದ್ದು, ಈಗ ಸಂಬಳ ಕಡಿತಕ್ಕೆ ಬಹಳಷ್ಟು ನೌಕರರು ವಿರೋಧ ವ್ಯಕ್ತಪಡಿಸಿದ್ದಾರೆ. ಹೆಸರು ಹೇಳಲು ಇಚ್ಚಿಸದ, ರಾಯಚೂರಿನಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿರುವ ನೌಕರರೊಬ್ಬರು ನಾನುಗೌರಿ.ಕಾಂ ಜೊತೆ ಮಾತನಾಡಿ, “ಗೋವು ಪೂಜ್ಯನೀಯ, ಹಾಗಾಗಿ ಅದನ್ನು ರಕ್ಷಿಸಲು ಹಣ ಕೊಡಿ ಎಂದು ಕೇಳುತ್ತಿದ್ದಾರೆ. ಅದು ಒಂದು ಧರ್ಮಕ್ಕೆ ಸಂಬಂಧಿಸಿದ ವಿಷಯವಾಗಿದ್ದು ಅದನ್ನು ನಾನು ಅಲ್ಲಗಳೆಯುವುದಿಲ್ಲ. ಆದರೆ ಎಲ್ಲಾ ಧರ್ಮದ ನೌಕರರು ಸಹ ಇದ್ದು ಎಲ್ಲರ ಮೇಲೆ ಒಂದು ಧರ್ಮ ನಂಬಿಕೆಯನ್ನು ಹೇರುವುದು ಸರಿಯಲ್ಲ” ಎಂದರು.

ಸರ್ಕಾರಿ ನೌಕರರ ಸಂಘದ ಸಿ.ಎಸ್ ಷಡಕ್ಷರಿಯವರು ಯಾರೊಂದಿಗೂ ಚರ್ಚಿಸದೆ ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ. ಅವರು ಸಂಘದ ನೌಕರರ ಹಿತ ಕಾಯುವ ಕೆಲಸ ಮಾಡುತ್ತಿಲ್ಲ. ಹಳೆ ಪಿಂಚಣಿ ವ್ಯವಸ್ಥೆಗಾಗಿ ನೌಕರರು ಬಹಳ ದಿನಗಳಿಂದ ಹೋರಾಟ ಮಾಡುತ್ತಿದ್ದಾರೆ. ಆದರೆ ಅದರ ಬಗ್ಗೆ ಸೊಲ್ಲತ್ತೆದ ಅವರು ಉಪಯೋಗಕ್ಕೆ ಬಾರದ ಯೋಜನೆಗೆ ನೌಕರರು ಹಣ ಕೊಡಬೇಕೆಂದು ಒತ್ತಾಯಿಸುವುದು ಒಪ್ಪಲು ಸಾಧ್ಯವಿಲ್ಲ” ಎಂದರು.

ಇಲ್ಲಿ ಹಣದ ಪ್ರಶ್ನೆಯಾಗಿ ಇದನ್ನು ನೋಡುತ್ತಿಲ್ಲ. ನಾವು ಹಿಂದೆ ಕೋವಿಡ್ ಸಮಯದಲ್ಲಿ ಮತ್ತು ನೆರೆ ಸಂದರ್ಭದಲ್ಲಿ ಒಂದು ದಿನದ ವೇತನ ಕೊಟ್ಟಿದ್ದೇವೆ. ಇಂದು ಸಹ ಅಪೌಷ್ಟಿಕ ಮಕ್ಕಳಿಗಾಗಿ, ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಹಣ ಕೇಳಿದರೆ ಒಂದು ದಿನದ ವೇತನ ಕೊಡಲು ಸಿದ್ದರಿದ್ದೇವೆ. ನಮ್ಮ ನಮ್ಮ ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ನಾನು 10,000 ರೂ ಕೊಡಲು ಸಿದ್ದನಿದ್ದೇನೆ. ಆದರೆ ಧರ್ಮದ ಹೆಸರಿನಲ್ಲಿ ಹಣ ಕೇಳುವುದಕ್ಕೆ ನಮ್ಮ ವಿರೋಧವಿದೆ ಎಂದರು.

ಬರಹಗಾರ ಯೋಗೇಶ್ ಮಾಸ್ಟರ್ ಈ ಯೋಜನೆಯ ಕುರಿತು ಪ್ರಶ್ನೆಯೆತ್ತಿದ್ದಾರೆ. “ಗೋ ಸಂತತಿಯು ನಶಿಸುವಂತ ಅಪಾಯದಲ್ಲಿದೆಯೇ? ಈಗ ಕರ್ನಾಟಕ ರಾಜ್ಯವು ಇಂತಹದೊಂದು ಯೋಜನೆಯ ಅಗತ್ಯವನ್ನು ಹೊಂದಿದೆಯೇ? ಈ ರೀತಿಯಲ್ಲಿ ರಾಜ್ಯದ ನೌಕರರ ಹಣವನ್ನು ಇಂತಹದೊಂದು ಯೋಜನೆಗೆ ಬಳಸಿಕೊಳ್ಳಲು ಸೂಕ್ತ ಸಭೆಗಳನ್ನು ನಡೆಸೆ, ಅವರ ಅಭಿಪ್ರಾಯಗಳನ್ನೇನಾದರೂ ಸಂಗ್ರಹಿಸಿರುವುದೇ? ಎಲ್ಲದಕ್ಕಿಂತ ಮುಖ್ಯವಾಗಿ ಗೋ ಸಂತತಿಯನ್ನು ರಕ್ಷಿಸುವಂತ ವಿಷಯವು ಅಷ್ಟೊಂದು ಪ್ರಾಧಾನ್ಯತೆಯನ್ನು ಪಡೆದಿದೆಯೇ?” ಎಂದು ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ಶಿಕ್ಷಣ, ಆರೋಗ್ಯ, ಆಹಾರ, ಉದ್ಯೋಗ, ಶಿಶು ಮರಣ ಪ್ರಮಾಣದ ತಡೆ, ಸರ್ಕಾರಿ ಆಸ್ಪತ್ರೆ / ಶಾಲೆಗಳಲ್ಲಿರುವ ಮೂಲಭೂತ ಸೌಕರ್ಯಗಳ ಕೊರತೆಯನ್ನು ನೀಗಿಸುವಿಕೆ, ರೈತರ ಸಮಸ್ಯೆ, ಗುತ್ತಿಗೆ ಕೆಲಸಗಾರರ ವೇತನಾಶ್ರೇಣಿಯ ಪರಿಷ್ಕರಣೆಗಳೆಲ್ಲದಕ್ಕಿಂತ ಅತ್ಯಗತ್ಯವಾಗಿರುವುದೇ ಈ ಪುಣ್ಯಕೋಟಿ ಯೋಜನೆ? ಅಥವಾ ನೈಸರ್ಗಿಕ ವಿಕೋಪವೋ ಅಥವಾ ಯುದ್ಧ ಅಥವಾ ಕ್ಷಾಮದಂತಹ ದುರ್ಭಿಕ್ಷ ವಕ್ಕರಿಸಿದೆಯೇ?
ರಾಜ್ಯ ಸರ್ಕಾರಕ್ಕೆ ಯೋಜನೆಗಳನ್ನು ರೂಪಿಸುತ್ತಿರುವವರು ಯಾರು? ಅವರಿಗೆ ಜನಪರ ಯೋಜನೆಗಳಿಗಿಂತ, ಗೋ-ಪರ ಯೋಜನೆಗಳು ಮುಖ್ಯವಾಯ್ತೇ? ಎಂದು ಅವರು ಫೇಸ್‌ಬುಕ್ ಪೋಸ್ಟ್‌ ಮೂಲಕ ಪ್ರಶ್ನೆ ಎತ್ತಿದ್ದಾರೆ.

ಈ ಯೋಜನೆಗೆ ಹಿಂದಿನಿಂದಲೂ ಸಹ ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ /ಎಸ್ಟಿ ನೌಕರರ ಸಮನ್ವಯ ಸಮಿತಿಯ ಅಧ್ಯಕ್ಷರಾದ ಡಿ. ಶಿವ ಶಂಕರ್ ಮತ್ತು ವಿಧಾನಸಭಾ ಸಚಿವಾಲಯದ ನೌಕರರ ಸಂಘದ ಪಿ.ಗುರುಸ್ವಾಮಿಯವರು ವಿರೋಧಿಸಿದ್ದಾರೆ.

ಇದನ್ನೂ ಓದಿ; ಪುಣ್ಯಕೋಟಿ ಹಸು ದತ್ತು ಯೋಜನೆಗಾಗಿ ಸರ್ಕಾರಿ ನೌಕರರು 100 ಕೋಟಿ ದೇಣಿಗೆ ನೀಡುತ್ತೇವೆ -ಸಿ.ಎಸ್ ಷಡಕ್ಷರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...