Homeಮುಖಪುಟಪುಣ್ಯಕೋಟಿ ಯೋಜನೆಗಾಗಿ ನೌಕರರ ಸಂಬಳ ಕಡಿತಕ್ಕೆ ಸರ್ಕಾರದ ಆದೇಶ: ನೌಕರರ ತೀವ್ರ ವಿರೋಧ

ಪುಣ್ಯಕೋಟಿ ಯೋಜನೆಗಾಗಿ ನೌಕರರ ಸಂಬಳ ಕಡಿತಕ್ಕೆ ಸರ್ಕಾರದ ಆದೇಶ: ನೌಕರರ ತೀವ್ರ ವಿರೋಧ

- Advertisement -
- Advertisement -

ರಾಜ್ಯದ ಸರ್ಕಾರಿ ಮತ್ತು ಖಾಸಗೀ ಗೋಶಾಲೆಗಳಲ್ಲಿರುವ ಗೋವುಗಳನ್ನು ದತ್ತು ತೆಗೆದುಕೊಳ್ಳುವ ಪುಣ್ಯಕೋಟಿ ಯೋಜನೆಗಾಗಿ ಸರ್ಕಾರಿ ನೌಕರರ ನಂವೆಂಬರ್ ತಿಂಗಳ ಸಂಬಳದಲ್ಲಿ ಕಡಿತ ಮಾಡುವುದಾಗಿ ಆದೇಶ ಹೊರಡಿಸಿದೆ. ಈ ಬೆನ್ನಲ್ಲೆ ಹಲವು ಸರ್ಕಾರಿ ನೌಕರರು ತಮ್ಮ ಸಂಬಳ ಕಡಿತಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಿಧಾನಸಭಾ ಸಚಿವಾಲಯದ ನೌಕರರ ಸಂಘದ ಅಧ್ಯಕ್ಷರೆ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಸರ್ಕಾರದ ಆರ್ಥಿಕ ಇಲಾಖೆಯ ಉಪಕಾರ್ಯದರ್ಶಿ ಉಮಾ ಕೆ ರವರು ನಡಾವಳಿ ಪತ್ರ ಹೊರಡಿಸಿದ್ದಾರೆ. “ಕರ್ನಾಟಕ ಸರ್ಕಾರದ ಪುಣ್ಯಕೋಟಿ ದತ್ತು ಯೋಜನೆಯ ಸುಗಮ ಅನುಷ್ಟಾನಗೊಳಿಸಲು ಅನುವಾಗಲು ರಾಜ್ಯ ಸರ್ಕಾರಿ ನೌಕರರು ಹಾಗೂ ನಿಗಮ/ಮಂಡಳಿ/ಪ್ರಾಧಿಕಾರ/ವಿಶ್ವವಿದ್ಯಾಲಯ/ಸ್ವಾಯುತ್ತ ಸಂಸ್ಥೆಗಳ ನೌಕರರ ನವೆಂಬರ್-2022ರ ಮಾಹೆಯ ವೇತನದಿಂದ ಒಂದು ಬಾರಿಗೆ ಸೀಮತವಾಗಿ ವಂತಿಗೆಯನ್ನು ಕಟಾಯಿಸಲು ಹಾಗೂ ನಿಗದಿತ ಯೋಜನೆಗೆ ಬಳಕೆ ಮಾಡಲು ಸರ್ಕಾರವೂ ಮಂಜೂರಾತಿ ನೀಡಿದೆ” ಎಂದು ನಡಾವಳಿಯಲ್ಲಿ ತಿಳಿಸಲಾಗಿದೆ.

ಕ್ಲಾಸ್ ಒನ್ ಅಧಿಕಾರಿಗಳು ತಲಾ 11,000 ರೂ, ಗ್ರೂಪ್ ಬಿ ನೌಕರರು 4,000 ರೂ ಮತ್ತು ಗ್ರೂಪ್ ಸಿ ನೌಕರರ 400 ರೂಗಳನ್ನು ಕಡಿತ ಮಾಡಲಾಗುವುದು. ವೇತನದಿಂದ ವಂತಿಕೆ ಕೊಡಲಿಚ್ಛಿಸದ ನೌಕರರು ತಮ್ಮ ಅಸಮ್ಮತಿಯನ್ನು ಸಂಬಂಧಪಟ್ಟ ಬಡವಾಡೆ ಅಧಿಕಾರಿಗಳಿಗೆ ಲಿಖಿತ ಮೂಲಕ ನವೆಂಬರ್ 25ರೊಳಗೆ ಸಲ್ಲಿಸತಕ್ಕದ್ದು ಎಂದು ಸಹ ನಡಾವಳಿಯಲ್ಲಿ ಹೇಳಲಾಗಿದೆ.

ಆದರೆ ಸರ್ಕಾರ ಈ ಯೋಜನೆಗೆ ಹಿಂದಿನಿಂದಲೂ ಸಹ ವಿರೋಧವಿದ್ದು, ಈಗ ಸಂಬಳ ಕಡಿತಕ್ಕೆ ಬಹಳಷ್ಟು ನೌಕರರು ವಿರೋಧ ವ್ಯಕ್ತಪಡಿಸಿದ್ದಾರೆ. ಹೆಸರು ಹೇಳಲು ಇಚ್ಚಿಸದ, ರಾಯಚೂರಿನಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿರುವ ನೌಕರರೊಬ್ಬರು ನಾನುಗೌರಿ.ಕಾಂ ಜೊತೆ ಮಾತನಾಡಿ, “ಗೋವು ಪೂಜ್ಯನೀಯ, ಹಾಗಾಗಿ ಅದನ್ನು ರಕ್ಷಿಸಲು ಹಣ ಕೊಡಿ ಎಂದು ಕೇಳುತ್ತಿದ್ದಾರೆ. ಅದು ಒಂದು ಧರ್ಮಕ್ಕೆ ಸಂಬಂಧಿಸಿದ ವಿಷಯವಾಗಿದ್ದು ಅದನ್ನು ನಾನು ಅಲ್ಲಗಳೆಯುವುದಿಲ್ಲ. ಆದರೆ ಎಲ್ಲಾ ಧರ್ಮದ ನೌಕರರು ಸಹ ಇದ್ದು ಎಲ್ಲರ ಮೇಲೆ ಒಂದು ಧರ್ಮ ನಂಬಿಕೆಯನ್ನು ಹೇರುವುದು ಸರಿಯಲ್ಲ” ಎಂದರು.

ಸರ್ಕಾರಿ ನೌಕರರ ಸಂಘದ ಸಿ.ಎಸ್ ಷಡಕ್ಷರಿಯವರು ಯಾರೊಂದಿಗೂ ಚರ್ಚಿಸದೆ ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ. ಅವರು ಸಂಘದ ನೌಕರರ ಹಿತ ಕಾಯುವ ಕೆಲಸ ಮಾಡುತ್ತಿಲ್ಲ. ಹಳೆ ಪಿಂಚಣಿ ವ್ಯವಸ್ಥೆಗಾಗಿ ನೌಕರರು ಬಹಳ ದಿನಗಳಿಂದ ಹೋರಾಟ ಮಾಡುತ್ತಿದ್ದಾರೆ. ಆದರೆ ಅದರ ಬಗ್ಗೆ ಸೊಲ್ಲತ್ತೆದ ಅವರು ಉಪಯೋಗಕ್ಕೆ ಬಾರದ ಯೋಜನೆಗೆ ನೌಕರರು ಹಣ ಕೊಡಬೇಕೆಂದು ಒತ್ತಾಯಿಸುವುದು ಒಪ್ಪಲು ಸಾಧ್ಯವಿಲ್ಲ” ಎಂದರು.

ಇಲ್ಲಿ ಹಣದ ಪ್ರಶ್ನೆಯಾಗಿ ಇದನ್ನು ನೋಡುತ್ತಿಲ್ಲ. ನಾವು ಹಿಂದೆ ಕೋವಿಡ್ ಸಮಯದಲ್ಲಿ ಮತ್ತು ನೆರೆ ಸಂದರ್ಭದಲ್ಲಿ ಒಂದು ದಿನದ ವೇತನ ಕೊಟ್ಟಿದ್ದೇವೆ. ಇಂದು ಸಹ ಅಪೌಷ್ಟಿಕ ಮಕ್ಕಳಿಗಾಗಿ, ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಹಣ ಕೇಳಿದರೆ ಒಂದು ದಿನದ ವೇತನ ಕೊಡಲು ಸಿದ್ದರಿದ್ದೇವೆ. ನಮ್ಮ ನಮ್ಮ ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ನಾನು 10,000 ರೂ ಕೊಡಲು ಸಿದ್ದನಿದ್ದೇನೆ. ಆದರೆ ಧರ್ಮದ ಹೆಸರಿನಲ್ಲಿ ಹಣ ಕೇಳುವುದಕ್ಕೆ ನಮ್ಮ ವಿರೋಧವಿದೆ ಎಂದರು.

ಬರಹಗಾರ ಯೋಗೇಶ್ ಮಾಸ್ಟರ್ ಈ ಯೋಜನೆಯ ಕುರಿತು ಪ್ರಶ್ನೆಯೆತ್ತಿದ್ದಾರೆ. “ಗೋ ಸಂತತಿಯು ನಶಿಸುವಂತ ಅಪಾಯದಲ್ಲಿದೆಯೇ? ಈಗ ಕರ್ನಾಟಕ ರಾಜ್ಯವು ಇಂತಹದೊಂದು ಯೋಜನೆಯ ಅಗತ್ಯವನ್ನು ಹೊಂದಿದೆಯೇ? ಈ ರೀತಿಯಲ್ಲಿ ರಾಜ್ಯದ ನೌಕರರ ಹಣವನ್ನು ಇಂತಹದೊಂದು ಯೋಜನೆಗೆ ಬಳಸಿಕೊಳ್ಳಲು ಸೂಕ್ತ ಸಭೆಗಳನ್ನು ನಡೆಸೆ, ಅವರ ಅಭಿಪ್ರಾಯಗಳನ್ನೇನಾದರೂ ಸಂಗ್ರಹಿಸಿರುವುದೇ? ಎಲ್ಲದಕ್ಕಿಂತ ಮುಖ್ಯವಾಗಿ ಗೋ ಸಂತತಿಯನ್ನು ರಕ್ಷಿಸುವಂತ ವಿಷಯವು ಅಷ್ಟೊಂದು ಪ್ರಾಧಾನ್ಯತೆಯನ್ನು ಪಡೆದಿದೆಯೇ?” ಎಂದು ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ಶಿಕ್ಷಣ, ಆರೋಗ್ಯ, ಆಹಾರ, ಉದ್ಯೋಗ, ಶಿಶು ಮರಣ ಪ್ರಮಾಣದ ತಡೆ, ಸರ್ಕಾರಿ ಆಸ್ಪತ್ರೆ / ಶಾಲೆಗಳಲ್ಲಿರುವ ಮೂಲಭೂತ ಸೌಕರ್ಯಗಳ ಕೊರತೆಯನ್ನು ನೀಗಿಸುವಿಕೆ, ರೈತರ ಸಮಸ್ಯೆ, ಗುತ್ತಿಗೆ ಕೆಲಸಗಾರರ ವೇತನಾಶ್ರೇಣಿಯ ಪರಿಷ್ಕರಣೆಗಳೆಲ್ಲದಕ್ಕಿಂತ ಅತ್ಯಗತ್ಯವಾಗಿರುವುದೇ ಈ ಪುಣ್ಯಕೋಟಿ ಯೋಜನೆ? ಅಥವಾ ನೈಸರ್ಗಿಕ ವಿಕೋಪವೋ ಅಥವಾ ಯುದ್ಧ ಅಥವಾ ಕ್ಷಾಮದಂತಹ ದುರ್ಭಿಕ್ಷ ವಕ್ಕರಿಸಿದೆಯೇ?
ರಾಜ್ಯ ಸರ್ಕಾರಕ್ಕೆ ಯೋಜನೆಗಳನ್ನು ರೂಪಿಸುತ್ತಿರುವವರು ಯಾರು? ಅವರಿಗೆ ಜನಪರ ಯೋಜನೆಗಳಿಗಿಂತ, ಗೋ-ಪರ ಯೋಜನೆಗಳು ಮುಖ್ಯವಾಯ್ತೇ? ಎಂದು ಅವರು ಫೇಸ್‌ಬುಕ್ ಪೋಸ್ಟ್‌ ಮೂಲಕ ಪ್ರಶ್ನೆ ಎತ್ತಿದ್ದಾರೆ.

ಈ ಯೋಜನೆಗೆ ಹಿಂದಿನಿಂದಲೂ ಸಹ ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ /ಎಸ್ಟಿ ನೌಕರರ ಸಮನ್ವಯ ಸಮಿತಿಯ ಅಧ್ಯಕ್ಷರಾದ ಡಿ. ಶಿವ ಶಂಕರ್ ಮತ್ತು ವಿಧಾನಸಭಾ ಸಚಿವಾಲಯದ ನೌಕರರ ಸಂಘದ ಪಿ.ಗುರುಸ್ವಾಮಿಯವರು ವಿರೋಧಿಸಿದ್ದಾರೆ.

ಇದನ್ನೂ ಓದಿ; ಪುಣ್ಯಕೋಟಿ ಹಸು ದತ್ತು ಯೋಜನೆಗಾಗಿ ಸರ್ಕಾರಿ ನೌಕರರು 100 ಕೋಟಿ ದೇಣಿಗೆ ನೀಡುತ್ತೇವೆ -ಸಿ.ಎಸ್ ಷಡಕ್ಷರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...