Homeಮುಖಪುಟಕಾಸರಗೋಡು ಶಾಲೆಯಲ್ಲಿ ಪ್ಯಾಲೆಸ್ತೀನ್ ಪರ ಮೂಕಾಭಿನಯಕ್ಕೆ ತಡೆ: ತನಿಖೆಗೆ ಆದೇಶಿಸಿದ ಸರ್ಕಾರ

ಕಾಸರಗೋಡು ಶಾಲೆಯಲ್ಲಿ ಪ್ಯಾಲೆಸ್ತೀನ್ ಪರ ಮೂಕಾಭಿನಯಕ್ಕೆ ತಡೆ: ತನಿಖೆಗೆ ಆದೇಶಿಸಿದ ಸರ್ಕಾರ

- Advertisement -
- Advertisement -

ಕಾಸರಗೋಡಿನ ಕುಂಬಳೆ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಕಲೋತ್ಸವದ ವೇಳೆ ಗಾಝಾ ನರಮೇಧ ಕುರಿತ ವಿದ್ಯಾರ್ಥಿಗಳ ಮೂಕಾಭಿನಯ ಪ್ರದರ್ಶನವನ್ನು ಶಿಕ್ಷಕರು ತಡೆದಿರುವ ಘಟನೆ ಶುಕ್ರವಾರ (ಅ.3) ನಡೆದಿದ್ದು, ಈ ಬಗ್ಗೆ ತುರ್ತು ತನಿಖೆಗೆ ಕೇರಳ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಆದೇಶಿಸಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದಿರುವ ಸಚಿವ ಶಿವನ್‌ಕುಟ್ಟಿ, “ಒಂದು ವಿಷಯವನ್ನು ಸ್ಪಷ್ಟಪಡಿಸುತ್ತೇನೆ: ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್ ನಡೆಸುತ್ತಿರುವ ನರಮೇಧದ ವಿರುದ್ಧ ಕೇರಳವು ಯಾವಾಗಲೂ ದೃಢವಾಗಿ ನಿಂತಿದೆ. ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್ ಬೇಟೆಯಾಡುತ್ತಿರುವ ಮಕ್ಕಳೊಂದಿಗೆ ಕೇರಳ ನಿಲ್ಲುತ್ತದೆ” ಎಂದು ತಿಳಿಸಿದ್ದಾರೆ.

“ಪ್ಯಾಲೆಸ್ತೀನ್ ವಿಷಯದ ಕುರಿತ ಮೂಕಾಭಿನಯ ಪ್ರದರ್ಶನವನ್ನು ತಡೆಯಲು ಅಧಿಕಾರ ಕೊಟ್ಟವರು ಯಾರು? ಎಂದು ಪ್ರಶ್ನಿಸಿರುವ ಸಚಿವರು, ಕುಂಬಳೆ ಶಾಲೆಯ ವಿದ್ಯಾರ್ಥಿಗಳಿಗೆ ವೇದಿಕೆಯ ಮೇಲೆ ಮತ್ತೆ ತಮ್ಮ ಮೂಕಾಭಿನಯ ಪ್ರದರ್ಶಿಸಲು ಅವಕಾಶ ನೀಡಲಾಗುವುದು” ಎಂದು ಭರವಸೆ ನೀಡಿದ್ದಾರೆ.

ಕಾಸರಗೋಡು ಜಿಲ್ಲಾಧಿಕಾರಿ ಕೆ. ಇಂಬಸೇಕರ್ ಅವರು ಘಟನೆಯ ಕುರಿತು ಜಿಲ್ಲಾ ಪೊಲೀಸ್ ಮತ್ತು ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಂದ ವರದಿಗಳನ್ನು ಕೇಳಿದ್ದಾರೆ.

ಕುಂಬಳೆ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ ‘ಕಲೋತ್ಸವ’ವನ್ನು ಶಿಕ್ಷಕರು ಮೂಕಾಭಿನಯ ಪ್ರದರ್ಶನ ತಡೆದ ಹಿನ್ನೆಲೆ ಸ್ಥಗಿತಗೊಳಿಸಲಾಗಿದೆ. ಶುಕ್ರವಾರ ಸಂಜೆ ಈ ಘಟನೆ ನಡೆದಿದ್ದು, ಶಿಕ್ಷಕರ ನಡೆ ಖಂಡಿಸಿ ವಿದ್ಯಾರ್ಥಿ ಸಂಘಟನೆಗಳಾದ ಎಂಎಸ್‌ಎಫ್‌ ಮತ್ತು ಎಸ್‌ಎಫ್‌ಐ ಶಾಲೆಗೆ ಪ್ರತಿಭಟನಾ ಮೆರವಣಿಗೆ ನಡೆಸಿವೆ.

ಇಸ್ರೇಲ್‌ ಬಾಂಬ್ ದಾಳಿಗೆ ಗಾಝಾದ ಅಮಾಯಕ ಕಂದಮ್ಮವೊಂದು ಬಲಿಯಾಗುವುದನ್ನು ಮತ್ತು ಗಾಝಾದ ಮಕ್ಕಳ ನೋವನ್ನು ಮೂಕಾಭಿನಯದ ಮೂಲಕ ವಿದ್ಯಾರ್ಥಿಗಳು ಪ್ರದರ್ಶಿಸುತ್ತಿದ್ದರು. ಅರ್ಧ ಪ್ರದರ್ಶನ ಮುಗಿಯುವಾಗ ಶಿಕ್ಷಕರೊಬ್ಬರು ಹಠಾತ್ ಪರದೆ ಎಳೆಸಿದ್ದಾರೆ. ಆದರೂ, ವಿದ್ಯಾರ್ಥಿಗಳು ಪ್ಯಾಲೆಸ್ತೀನ್‌ ಜೊತೆ ಒಗ್ಗಟ್ಟು ಪ್ರದರ್ಶಿಸುವ ಪೋಸ್ಟರ್ ಮತ್ತು ಪ್ಯಾಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ್ದಾರೆ.

ಶಿಕ್ಷಕನ ನಡೆ ಖಂಡಿಸಿ ವೇದಿಕೆ ಮುಂಭಾಗದಲ್ಲಿದ್ದ ವಿದ್ಯಾರ್ಥಿಗಳು ಕೂಡ ವೇದಿಕೆ ಬಳಿಗೆ ತೆರಳಿ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ್ದರು.

“ಹೈಯರ್ ಸೆಕೆಂಡರಿ ವಿದ್ಯಾರ್ಥಿಗಳು ಮೂಕಾಭಿನಯ ಪ್ರದರ್ಶನ ಮಾಡಿದ್ದಾರೆ. ಅವರು ಜಿಲ್ಲಾ ಕ್ರೀಡಾಕೂಟ ಇದ್ದ ಕಾರಣ ಒಂದು ದಿನ ಮೊದಲೇ ಈ ಪ್ರದರ್ಶನ ನೀಡಲು ಅವಕಾಶ ಕೇಳಿದ್ದರು. ಈ ಪ್ರದರ್ಶನದಲ್ಲಿ ಹೆಚ್ಚು ವಿದ್ಯಾರ್ಥಿಗಳು ಇದ್ದರು ಮತ್ತು ಮೃದು ಆಟಿಕೆ, ದುಃಖದಲ್ಲಿರುವ ಪ್ಯಾಲೆಸ್ತೀನ್ ತಾಯಿಯ ಚಿತ್ರದಂತಹ ವಸ್ತುಗಳನ್ನು ಬಳಸಿದ್ದರು. ಇವುಗಳು ಮೂಕಾಭಿನಯ ಪ್ರದರ್ಶನ ಸ್ಪರ್ಧೆಯ ನಿಯಮಗಳಿಗೆ ವಿರುದ್ದವಾಗಿ” ಎಂದು ಶಾಲೆಯ ಮುಖ್ಯ ಶಿಕ್ಷಕಿ ಶೈಲಜಾ ವಿ.ಆರ್ ಸಮರ್ಥಿಸಿಕೊಂಡಿದ್ದಾರೆ.

ಕಾರ್ಯಕ್ರಮದ ಆಯೋಜಕರು ಆರಂಭದಲ್ಲಿ ಪ್ಯಾಲೆಸ್ತೀನ್ ಪರ ಮೂಕಾಭಿನಯಕ್ಕೆ ಅವಕಾಶ ನೀಡಿದ್ದರು. ಆದರೆ, ಭಾವಚಿತ್ರವನ್ನು ಪ್ರದರ್ಶಿಸಿದಾಗ ಪರದೆಯನ್ನು ಇಳಿಸಲಾಯಿತು, ಇದು ವಿವಾದಕ್ಕೆ ಕಾರಣವಾಯಿತು ಎಂದು ವರದಿಗಳು ಹೇಳಿವೆ.

ಶಾಲೆಯಲ್ಲಿ ನಡೆದ ಘಟನೆಯನ್ನು ತಪ್ಪಾಗಿ ಚಿತ್ರಿಸಲಾಗಿದೆ. ಅದನ್ನು ಆಧಾರವಾಗಿಟ್ಟುಕೊಂಡು ವಿದ್ಯಾರ್ಥಿ ಸಂಘಟನೆಗಳು ಮತ್ತು ಸರ್ಕಾರ ಪ್ರತಿಕ್ರಿಯಿಸಿದೆ ಎಂದು ಶಾಲೆಯ ಶಿಕ್ಷಕರು ಹೇಳಿದ್ದಾರೆ.

ಮುಸ್ಲಿಂ ಲೀಗ್‌ನ ವಿದ್ಯಾರ್ಥಿ ವಿಭಾಗವಾದ ಮುಸ್ಲಿಂ ವಿದ್ಯಾರ್ಥಿ ಒಕ್ಕೂಟದ (ಎಂಎಸ್‌ಎಫ್‌) ಸದಸ್ಯರು ಶುಕ್ರವಾರ ಸಂಜೆಯೇ ಶಾಲೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಪರದೆ ಇಳಿಸಿದ ಇಬ್ಬರು ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು. ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆ ಪೊಲೀಸರು ಮಧ್ಯಪ್ರವೇಶಿಸಿದ್ದರು.

ಶಿಕ್ಷಕರ ವಿರುದ್ದ ಕ್ರಮ ಕೈಗೊಳ್ಳುವವರೆಗೆ ಶಾಲೆಯಿಂದ ಕದಲುವುದಿಲ್ಲ ಎಂದು ಎಂಎಸ್‌ಎಫ್ ನಾಯಕರು ಪಟ್ಟು ಹಿಡಿದು ಕುಳಿತಿದ್ದರು. ಪರಿಸ್ಥಿತಿ ಹತೋಟಿಗೆ ತರಲು ಕುಂಬಳೆ ಪೊಲೀಸರು ಕೆಲ ವಿದ್ಯಾರ್ಥಿಗಳನ್ನು ಬಂಧಿಸಿದ್ದರು. ಮಂಜೇಶ್ವರ ಶಾಸಕ ಎ.ಕೆ.ಎಂ ಅಶ್ರಫ್ ಕೂಡ ಸ್ಥಳಕ್ಕೆ ಭೇಟಿ ಕೊಟ್ಟಿದ್ದರು.

ನಂತರ, ಕೇರಳದ ಆಡಳಿತಾರೂಢ ಸಿಪಿಎಂನ ವಿದ್ಯಾರ್ಥಿ ವಿಭಾಗವಾದ ಭಾರತೀಯ ವಿದ್ಯಾರ್ಥಿ ಒಕ್ಕೂಟ (ಎಸ್‌ಎಫ್‌ಐ) ಶಾಲೆಗೆ ಪ್ರತಿಭಟನಾ ಮೆರವಣಿಗೆ ನಡೆಸಿತ್ತು. ಎಸ್‌ಡಿಪಿಐ ಕೂಡ ಶಾಲೆಯ ಹೊರಗೆ ಪ್ರತಿಭಟನೆ ಹಮ್ಮಿಕೊಂಡಿತ್ತು.

ಆರೋಪಿ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಕರು ಮತ್ತು ಪೋಷಕರ ಒಕ್ಕೂಟ (ಪಿಟಿಎ) ಅಧ್ಯಕ್ಷರು ತಿಳಿಸಿದ್ದಾರೆ. ಮೂಕಾಭಿನಯ ಸೇರಿದಂತೆ ಇತರ ಸ್ಪರ್ಥೆಗಳನ್ನು ಮುಂದಿನ ದಿನಗಳಲ್ಲಿ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

“ಇದು ದೇಶದ್ರೋಹದ ಕೃತ್ಯವಲ್ಲ, ಪ್ಯಾಲೆಸ್ತೀನ್‌ ಜೊತೆಗಿನ ಒಗ್ಗಟ್ಟಿನ ಸಂಕೇತವಾಗಿದೆ” ಎಂದು ಒತ್ತಿ ಹೇಳಿರುವ ಪಿಟಿಎ ಅಧ್ಯಕ್ಷರು, ಯುವಜನೋತ್ಸವಗಳು ಪ್ರಸ್ತುತ ಮತ್ತು ಸಮಕಾಲೀನ ವಿಷಯಗಳನ್ನು ಒಳಗೊಂಡಿರುತ್ತವೆ ಎಂದಿದ್ದಾರೆ.

ಕುಂಬಳೆ ಘಟನೆಯ ಒಂದು ದಿನ ಮೊದಲು ಕಣ್ಣೂರಿನಲ್ಲಿ ತಲಶ್ಶೇರಿಯ ಅಂಚರಕಂಡಿ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು, ಕೋಲ್ಕಲಿ (ಜಾನಪದ ಕಲೆ) ಪ್ರದರ್ಶನದ ವೇಳೆ ಪ್ಯಾಲೆಸ್ತೀನ್‌ ಪರ ಘೋಷಣೆಗಳನ್ನು ಹೊಂದಿರುವ ಟಿ-ಶರ್ಟ್‌ಗಳನ್ನು ಧರಿಸಿದ್ದಕ್ಕಾಗಿ ಅವರ ಪ್ರದರ್ಶನವನ್ನು ಮಧ್ಯದಲ್ಲಿಯೇ ನಿಲ್ಲಿಸಲಾಗಿತ್ತು ಎಂದು ವರದಿಯಾಗಿದೆ.

‘ಲವ್ ಜಿಹಾದ್, ಮೆಹಂದಿ ಜಿಹಾದ್’ ಕಾರ್ಯಕ್ರಮಗಳ ಪ್ರಸಾರ : ಝೀ ನ್ಯೂಸ್, ಟೈಮ್ಸ್ ನೌ ನವಭಾರತ್‌ಗೆ ಎನ್‌ಬಿಡಿಎಸ್‌ಎ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...