Homeಮುಖಪುಟಕಾಸರಗೋಡು ಶಾಲೆಯಲ್ಲಿ ಪ್ಯಾಲೆಸ್ತೀನ್ ಪರ ಮೂಕಾಭಿನಯಕ್ಕೆ ತಡೆ: ತನಿಖೆಗೆ ಆದೇಶಿಸಿದ ಸರ್ಕಾರ

ಕಾಸರಗೋಡು ಶಾಲೆಯಲ್ಲಿ ಪ್ಯಾಲೆಸ್ತೀನ್ ಪರ ಮೂಕಾಭಿನಯಕ್ಕೆ ತಡೆ: ತನಿಖೆಗೆ ಆದೇಶಿಸಿದ ಸರ್ಕಾರ

- Advertisement -
- Advertisement -

ಕಾಸರಗೋಡಿನ ಕುಂಬಳೆ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಕಲೋತ್ಸವದ ವೇಳೆ ಗಾಝಾ ನರಮೇಧ ಕುರಿತ ವಿದ್ಯಾರ್ಥಿಗಳ ಮೂಕಾಭಿನಯ ಪ್ರದರ್ಶನವನ್ನು ಶಿಕ್ಷಕರು ತಡೆದಿರುವ ಘಟನೆ ಶುಕ್ರವಾರ (ಅ.3) ನಡೆದಿದ್ದು, ಈ ಬಗ್ಗೆ ತುರ್ತು ತನಿಖೆಗೆ ಕೇರಳ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಆದೇಶಿಸಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದಿರುವ ಸಚಿವ ಶಿವನ್‌ಕುಟ್ಟಿ, “ಒಂದು ವಿಷಯವನ್ನು ಸ್ಪಷ್ಟಪಡಿಸುತ್ತೇನೆ: ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್ ನಡೆಸುತ್ತಿರುವ ನರಮೇಧದ ವಿರುದ್ಧ ಕೇರಳವು ಯಾವಾಗಲೂ ದೃಢವಾಗಿ ನಿಂತಿದೆ. ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್ ಬೇಟೆಯಾಡುತ್ತಿರುವ ಮಕ್ಕಳೊಂದಿಗೆ ಕೇರಳ ನಿಲ್ಲುತ್ತದೆ” ಎಂದು ತಿಳಿಸಿದ್ದಾರೆ.

“ಪ್ಯಾಲೆಸ್ತೀನ್ ವಿಷಯದ ಕುರಿತ ಮೂಕಾಭಿನಯ ಪ್ರದರ್ಶನವನ್ನು ತಡೆಯಲು ಅಧಿಕಾರ ಕೊಟ್ಟವರು ಯಾರು? ಎಂದು ಪ್ರಶ್ನಿಸಿರುವ ಸಚಿವರು, ಕುಂಬಳೆ ಶಾಲೆಯ ವಿದ್ಯಾರ್ಥಿಗಳಿಗೆ ವೇದಿಕೆಯ ಮೇಲೆ ಮತ್ತೆ ತಮ್ಮ ಮೂಕಾಭಿನಯ ಪ್ರದರ್ಶಿಸಲು ಅವಕಾಶ ನೀಡಲಾಗುವುದು” ಎಂದು ಭರವಸೆ ನೀಡಿದ್ದಾರೆ.

ಕಾಸರಗೋಡು ಜಿಲ್ಲಾಧಿಕಾರಿ ಕೆ. ಇಂಬಸೇಕರ್ ಅವರು ಘಟನೆಯ ಕುರಿತು ಜಿಲ್ಲಾ ಪೊಲೀಸ್ ಮತ್ತು ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಂದ ವರದಿಗಳನ್ನು ಕೇಳಿದ್ದಾರೆ.

ಕುಂಬಳೆ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ ‘ಕಲೋತ್ಸವ’ವನ್ನು ಶಿಕ್ಷಕರು ಮೂಕಾಭಿನಯ ಪ್ರದರ್ಶನ ತಡೆದ ಹಿನ್ನೆಲೆ ಸ್ಥಗಿತಗೊಳಿಸಲಾಗಿದೆ. ಶುಕ್ರವಾರ ಸಂಜೆ ಈ ಘಟನೆ ನಡೆದಿದ್ದು, ಶಿಕ್ಷಕರ ನಡೆ ಖಂಡಿಸಿ ವಿದ್ಯಾರ್ಥಿ ಸಂಘಟನೆಗಳಾದ ಎಂಎಸ್‌ಎಫ್‌ ಮತ್ತು ಎಸ್‌ಎಫ್‌ಐ ಶಾಲೆಗೆ ಪ್ರತಿಭಟನಾ ಮೆರವಣಿಗೆ ನಡೆಸಿವೆ.

ಇಸ್ರೇಲ್‌ ಬಾಂಬ್ ದಾಳಿಗೆ ಗಾಝಾದ ಅಮಾಯಕ ಕಂದಮ್ಮವೊಂದು ಬಲಿಯಾಗುವುದನ್ನು ಮತ್ತು ಗಾಝಾದ ಮಕ್ಕಳ ನೋವನ್ನು ಮೂಕಾಭಿನಯದ ಮೂಲಕ ವಿದ್ಯಾರ್ಥಿಗಳು ಪ್ರದರ್ಶಿಸುತ್ತಿದ್ದರು. ಅರ್ಧ ಪ್ರದರ್ಶನ ಮುಗಿಯುವಾಗ ಶಿಕ್ಷಕರೊಬ್ಬರು ಹಠಾತ್ ಪರದೆ ಎಳೆಸಿದ್ದಾರೆ. ಆದರೂ, ವಿದ್ಯಾರ್ಥಿಗಳು ಪ್ಯಾಲೆಸ್ತೀನ್‌ ಜೊತೆ ಒಗ್ಗಟ್ಟು ಪ್ರದರ್ಶಿಸುವ ಪೋಸ್ಟರ್ ಮತ್ತು ಪ್ಯಾಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ್ದಾರೆ.

ಶಿಕ್ಷಕನ ನಡೆ ಖಂಡಿಸಿ ವೇದಿಕೆ ಮುಂಭಾಗದಲ್ಲಿದ್ದ ವಿದ್ಯಾರ್ಥಿಗಳು ಕೂಡ ವೇದಿಕೆ ಬಳಿಗೆ ತೆರಳಿ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ್ದರು.

“ಹೈಯರ್ ಸೆಕೆಂಡರಿ ವಿದ್ಯಾರ್ಥಿಗಳು ಮೂಕಾಭಿನಯ ಪ್ರದರ್ಶನ ಮಾಡಿದ್ದಾರೆ. ಅವರು ಜಿಲ್ಲಾ ಕ್ರೀಡಾಕೂಟ ಇದ್ದ ಕಾರಣ ಒಂದು ದಿನ ಮೊದಲೇ ಈ ಪ್ರದರ್ಶನ ನೀಡಲು ಅವಕಾಶ ಕೇಳಿದ್ದರು. ಈ ಪ್ರದರ್ಶನದಲ್ಲಿ ಹೆಚ್ಚು ವಿದ್ಯಾರ್ಥಿಗಳು ಇದ್ದರು ಮತ್ತು ಮೃದು ಆಟಿಕೆ, ದುಃಖದಲ್ಲಿರುವ ಪ್ಯಾಲೆಸ್ತೀನ್ ತಾಯಿಯ ಚಿತ್ರದಂತಹ ವಸ್ತುಗಳನ್ನು ಬಳಸಿದ್ದರು. ಇವುಗಳು ಮೂಕಾಭಿನಯ ಪ್ರದರ್ಶನ ಸ್ಪರ್ಧೆಯ ನಿಯಮಗಳಿಗೆ ವಿರುದ್ದವಾಗಿ” ಎಂದು ಶಾಲೆಯ ಮುಖ್ಯ ಶಿಕ್ಷಕಿ ಶೈಲಜಾ ವಿ.ಆರ್ ಸಮರ್ಥಿಸಿಕೊಂಡಿದ್ದಾರೆ.

ಕಾರ್ಯಕ್ರಮದ ಆಯೋಜಕರು ಆರಂಭದಲ್ಲಿ ಪ್ಯಾಲೆಸ್ತೀನ್ ಪರ ಮೂಕಾಭಿನಯಕ್ಕೆ ಅವಕಾಶ ನೀಡಿದ್ದರು. ಆದರೆ, ಭಾವಚಿತ್ರವನ್ನು ಪ್ರದರ್ಶಿಸಿದಾಗ ಪರದೆಯನ್ನು ಇಳಿಸಲಾಯಿತು, ಇದು ವಿವಾದಕ್ಕೆ ಕಾರಣವಾಯಿತು ಎಂದು ವರದಿಗಳು ಹೇಳಿವೆ.

ಶಾಲೆಯಲ್ಲಿ ನಡೆದ ಘಟನೆಯನ್ನು ತಪ್ಪಾಗಿ ಚಿತ್ರಿಸಲಾಗಿದೆ. ಅದನ್ನು ಆಧಾರವಾಗಿಟ್ಟುಕೊಂಡು ವಿದ್ಯಾರ್ಥಿ ಸಂಘಟನೆಗಳು ಮತ್ತು ಸರ್ಕಾರ ಪ್ರತಿಕ್ರಿಯಿಸಿದೆ ಎಂದು ಶಾಲೆಯ ಶಿಕ್ಷಕರು ಹೇಳಿದ್ದಾರೆ.

ಮುಸ್ಲಿಂ ಲೀಗ್‌ನ ವಿದ್ಯಾರ್ಥಿ ವಿಭಾಗವಾದ ಮುಸ್ಲಿಂ ವಿದ್ಯಾರ್ಥಿ ಒಕ್ಕೂಟದ (ಎಂಎಸ್‌ಎಫ್‌) ಸದಸ್ಯರು ಶುಕ್ರವಾರ ಸಂಜೆಯೇ ಶಾಲೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಪರದೆ ಇಳಿಸಿದ ಇಬ್ಬರು ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು. ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆ ಪೊಲೀಸರು ಮಧ್ಯಪ್ರವೇಶಿಸಿದ್ದರು.

ಶಿಕ್ಷಕರ ವಿರುದ್ದ ಕ್ರಮ ಕೈಗೊಳ್ಳುವವರೆಗೆ ಶಾಲೆಯಿಂದ ಕದಲುವುದಿಲ್ಲ ಎಂದು ಎಂಎಸ್‌ಎಫ್ ನಾಯಕರು ಪಟ್ಟು ಹಿಡಿದು ಕುಳಿತಿದ್ದರು. ಪರಿಸ್ಥಿತಿ ಹತೋಟಿಗೆ ತರಲು ಕುಂಬಳೆ ಪೊಲೀಸರು ಕೆಲ ವಿದ್ಯಾರ್ಥಿಗಳನ್ನು ಬಂಧಿಸಿದ್ದರು. ಮಂಜೇಶ್ವರ ಶಾಸಕ ಎ.ಕೆ.ಎಂ ಅಶ್ರಫ್ ಕೂಡ ಸ್ಥಳಕ್ಕೆ ಭೇಟಿ ಕೊಟ್ಟಿದ್ದರು.

ನಂತರ, ಕೇರಳದ ಆಡಳಿತಾರೂಢ ಸಿಪಿಎಂನ ವಿದ್ಯಾರ್ಥಿ ವಿಭಾಗವಾದ ಭಾರತೀಯ ವಿದ್ಯಾರ್ಥಿ ಒಕ್ಕೂಟ (ಎಸ್‌ಎಫ್‌ಐ) ಶಾಲೆಗೆ ಪ್ರತಿಭಟನಾ ಮೆರವಣಿಗೆ ನಡೆಸಿತ್ತು. ಎಸ್‌ಡಿಪಿಐ ಕೂಡ ಶಾಲೆಯ ಹೊರಗೆ ಪ್ರತಿಭಟನೆ ಹಮ್ಮಿಕೊಂಡಿತ್ತು.

ಆರೋಪಿ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಕರು ಮತ್ತು ಪೋಷಕರ ಒಕ್ಕೂಟ (ಪಿಟಿಎ) ಅಧ್ಯಕ್ಷರು ತಿಳಿಸಿದ್ದಾರೆ. ಮೂಕಾಭಿನಯ ಸೇರಿದಂತೆ ಇತರ ಸ್ಪರ್ಥೆಗಳನ್ನು ಮುಂದಿನ ದಿನಗಳಲ್ಲಿ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

“ಇದು ದೇಶದ್ರೋಹದ ಕೃತ್ಯವಲ್ಲ, ಪ್ಯಾಲೆಸ್ತೀನ್‌ ಜೊತೆಗಿನ ಒಗ್ಗಟ್ಟಿನ ಸಂಕೇತವಾಗಿದೆ” ಎಂದು ಒತ್ತಿ ಹೇಳಿರುವ ಪಿಟಿಎ ಅಧ್ಯಕ್ಷರು, ಯುವಜನೋತ್ಸವಗಳು ಪ್ರಸ್ತುತ ಮತ್ತು ಸಮಕಾಲೀನ ವಿಷಯಗಳನ್ನು ಒಳಗೊಂಡಿರುತ್ತವೆ ಎಂದಿದ್ದಾರೆ.

ಕುಂಬಳೆ ಘಟನೆಯ ಒಂದು ದಿನ ಮೊದಲು ಕಣ್ಣೂರಿನಲ್ಲಿ ತಲಶ್ಶೇರಿಯ ಅಂಚರಕಂಡಿ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು, ಕೋಲ್ಕಲಿ (ಜಾನಪದ ಕಲೆ) ಪ್ರದರ್ಶನದ ವೇಳೆ ಪ್ಯಾಲೆಸ್ತೀನ್‌ ಪರ ಘೋಷಣೆಗಳನ್ನು ಹೊಂದಿರುವ ಟಿ-ಶರ್ಟ್‌ಗಳನ್ನು ಧರಿಸಿದ್ದಕ್ಕಾಗಿ ಅವರ ಪ್ರದರ್ಶನವನ್ನು ಮಧ್ಯದಲ್ಲಿಯೇ ನಿಲ್ಲಿಸಲಾಗಿತ್ತು ಎಂದು ವರದಿಯಾಗಿದೆ.

‘ಲವ್ ಜಿಹಾದ್, ಮೆಹಂದಿ ಜಿಹಾದ್’ ಕಾರ್ಯಕ್ರಮಗಳ ಪ್ರಸಾರ : ಝೀ ನ್ಯೂಸ್, ಟೈಮ್ಸ್ ನೌ ನವಭಾರತ್‌ಗೆ ಎನ್‌ಬಿಡಿಎಸ್‌ಎ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...