Homeಮುಖಪುಟಕಾಸರಗೋಡು ಶಾಲೆಯಲ್ಲಿ ಪ್ಯಾಲೆಸ್ತೀನ್ ಪರ ಮೂಕಾಭಿನಯಕ್ಕೆ ತಡೆ: ತನಿಖೆಗೆ ಆದೇಶಿಸಿದ ಸರ್ಕಾರ

ಕಾಸರಗೋಡು ಶಾಲೆಯಲ್ಲಿ ಪ್ಯಾಲೆಸ್ತೀನ್ ಪರ ಮೂಕಾಭಿನಯಕ್ಕೆ ತಡೆ: ತನಿಖೆಗೆ ಆದೇಶಿಸಿದ ಸರ್ಕಾರ

- Advertisement -
- Advertisement -

ಕಾಸರಗೋಡಿನ ಕುಂಬಳೆ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಕಲೋತ್ಸವದ ವೇಳೆ ಗಾಝಾ ನರಮೇಧ ಕುರಿತ ವಿದ್ಯಾರ್ಥಿಗಳ ಮೂಕಾಭಿನಯ ಪ್ರದರ್ಶನವನ್ನು ಶಿಕ್ಷಕರು ತಡೆದಿರುವ ಘಟನೆ ಶುಕ್ರವಾರ (ಅ.3) ನಡೆದಿದ್ದು, ಈ ಬಗ್ಗೆ ತುರ್ತು ತನಿಖೆಗೆ ಕೇರಳ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಆದೇಶಿಸಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದಿರುವ ಸಚಿವ ಶಿವನ್‌ಕುಟ್ಟಿ, “ಒಂದು ವಿಷಯವನ್ನು ಸ್ಪಷ್ಟಪಡಿಸುತ್ತೇನೆ: ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್ ನಡೆಸುತ್ತಿರುವ ನರಮೇಧದ ವಿರುದ್ಧ ಕೇರಳವು ಯಾವಾಗಲೂ ದೃಢವಾಗಿ ನಿಂತಿದೆ. ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್ ಬೇಟೆಯಾಡುತ್ತಿರುವ ಮಕ್ಕಳೊಂದಿಗೆ ಕೇರಳ ನಿಲ್ಲುತ್ತದೆ” ಎಂದು ತಿಳಿಸಿದ್ದಾರೆ.

“ಪ್ಯಾಲೆಸ್ತೀನ್ ವಿಷಯದ ಕುರಿತ ಮೂಕಾಭಿನಯ ಪ್ರದರ್ಶನವನ್ನು ತಡೆಯಲು ಅಧಿಕಾರ ಕೊಟ್ಟವರು ಯಾರು? ಎಂದು ಪ್ರಶ್ನಿಸಿರುವ ಸಚಿವರು, ಕುಂಬಳೆ ಶಾಲೆಯ ವಿದ್ಯಾರ್ಥಿಗಳಿಗೆ ವೇದಿಕೆಯ ಮೇಲೆ ಮತ್ತೆ ತಮ್ಮ ಮೂಕಾಭಿನಯ ಪ್ರದರ್ಶಿಸಲು ಅವಕಾಶ ನೀಡಲಾಗುವುದು” ಎಂದು ಭರವಸೆ ನೀಡಿದ್ದಾರೆ.

ಕಾಸರಗೋಡು ಜಿಲ್ಲಾಧಿಕಾರಿ ಕೆ. ಇಂಬಸೇಕರ್ ಅವರು ಘಟನೆಯ ಕುರಿತು ಜಿಲ್ಲಾ ಪೊಲೀಸ್ ಮತ್ತು ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಂದ ವರದಿಗಳನ್ನು ಕೇಳಿದ್ದಾರೆ.

ಕುಂಬಳೆ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ ‘ಕಲೋತ್ಸವ’ವನ್ನು ಶಿಕ್ಷಕರು ಮೂಕಾಭಿನಯ ಪ್ರದರ್ಶನ ತಡೆದ ಹಿನ್ನೆಲೆ ಸ್ಥಗಿತಗೊಳಿಸಲಾಗಿದೆ. ಶುಕ್ರವಾರ ಸಂಜೆ ಈ ಘಟನೆ ನಡೆದಿದ್ದು, ಶಿಕ್ಷಕರ ನಡೆ ಖಂಡಿಸಿ ವಿದ್ಯಾರ್ಥಿ ಸಂಘಟನೆಗಳಾದ ಎಂಎಸ್‌ಎಫ್‌ ಮತ್ತು ಎಸ್‌ಎಫ್‌ಐ ಶಾಲೆಗೆ ಪ್ರತಿಭಟನಾ ಮೆರವಣಿಗೆ ನಡೆಸಿವೆ.

ಇಸ್ರೇಲ್‌ ಬಾಂಬ್ ದಾಳಿಗೆ ಗಾಝಾದ ಅಮಾಯಕ ಕಂದಮ್ಮವೊಂದು ಬಲಿಯಾಗುವುದನ್ನು ಮತ್ತು ಗಾಝಾದ ಮಕ್ಕಳ ನೋವನ್ನು ಮೂಕಾಭಿನಯದ ಮೂಲಕ ವಿದ್ಯಾರ್ಥಿಗಳು ಪ್ರದರ್ಶಿಸುತ್ತಿದ್ದರು. ಅರ್ಧ ಪ್ರದರ್ಶನ ಮುಗಿಯುವಾಗ ಶಿಕ್ಷಕರೊಬ್ಬರು ಹಠಾತ್ ಪರದೆ ಎಳೆಸಿದ್ದಾರೆ. ಆದರೂ, ವಿದ್ಯಾರ್ಥಿಗಳು ಪ್ಯಾಲೆಸ್ತೀನ್‌ ಜೊತೆ ಒಗ್ಗಟ್ಟು ಪ್ರದರ್ಶಿಸುವ ಪೋಸ್ಟರ್ ಮತ್ತು ಪ್ಯಾಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ್ದಾರೆ.

ಶಿಕ್ಷಕನ ನಡೆ ಖಂಡಿಸಿ ವೇದಿಕೆ ಮುಂಭಾಗದಲ್ಲಿದ್ದ ವಿದ್ಯಾರ್ಥಿಗಳು ಕೂಡ ವೇದಿಕೆ ಬಳಿಗೆ ತೆರಳಿ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ್ದರು.

“ಹೈಯರ್ ಸೆಕೆಂಡರಿ ವಿದ್ಯಾರ್ಥಿಗಳು ಮೂಕಾಭಿನಯ ಪ್ರದರ್ಶನ ಮಾಡಿದ್ದಾರೆ. ಅವರು ಜಿಲ್ಲಾ ಕ್ರೀಡಾಕೂಟ ಇದ್ದ ಕಾರಣ ಒಂದು ದಿನ ಮೊದಲೇ ಈ ಪ್ರದರ್ಶನ ನೀಡಲು ಅವಕಾಶ ಕೇಳಿದ್ದರು. ಈ ಪ್ರದರ್ಶನದಲ್ಲಿ ಹೆಚ್ಚು ವಿದ್ಯಾರ್ಥಿಗಳು ಇದ್ದರು ಮತ್ತು ಮೃದು ಆಟಿಕೆ, ದುಃಖದಲ್ಲಿರುವ ಪ್ಯಾಲೆಸ್ತೀನ್ ತಾಯಿಯ ಚಿತ್ರದಂತಹ ವಸ್ತುಗಳನ್ನು ಬಳಸಿದ್ದರು. ಇವುಗಳು ಮೂಕಾಭಿನಯ ಪ್ರದರ್ಶನ ಸ್ಪರ್ಧೆಯ ನಿಯಮಗಳಿಗೆ ವಿರುದ್ದವಾಗಿ” ಎಂದು ಶಾಲೆಯ ಮುಖ್ಯ ಶಿಕ್ಷಕಿ ಶೈಲಜಾ ವಿ.ಆರ್ ಸಮರ್ಥಿಸಿಕೊಂಡಿದ್ದಾರೆ.

ಕಾರ್ಯಕ್ರಮದ ಆಯೋಜಕರು ಆರಂಭದಲ್ಲಿ ಪ್ಯಾಲೆಸ್ತೀನ್ ಪರ ಮೂಕಾಭಿನಯಕ್ಕೆ ಅವಕಾಶ ನೀಡಿದ್ದರು. ಆದರೆ, ಭಾವಚಿತ್ರವನ್ನು ಪ್ರದರ್ಶಿಸಿದಾಗ ಪರದೆಯನ್ನು ಇಳಿಸಲಾಯಿತು, ಇದು ವಿವಾದಕ್ಕೆ ಕಾರಣವಾಯಿತು ಎಂದು ವರದಿಗಳು ಹೇಳಿವೆ.

ಶಾಲೆಯಲ್ಲಿ ನಡೆದ ಘಟನೆಯನ್ನು ತಪ್ಪಾಗಿ ಚಿತ್ರಿಸಲಾಗಿದೆ. ಅದನ್ನು ಆಧಾರವಾಗಿಟ್ಟುಕೊಂಡು ವಿದ್ಯಾರ್ಥಿ ಸಂಘಟನೆಗಳು ಮತ್ತು ಸರ್ಕಾರ ಪ್ರತಿಕ್ರಿಯಿಸಿದೆ ಎಂದು ಶಾಲೆಯ ಶಿಕ್ಷಕರು ಹೇಳಿದ್ದಾರೆ.

ಮುಸ್ಲಿಂ ಲೀಗ್‌ನ ವಿದ್ಯಾರ್ಥಿ ವಿಭಾಗವಾದ ಮುಸ್ಲಿಂ ವಿದ್ಯಾರ್ಥಿ ಒಕ್ಕೂಟದ (ಎಂಎಸ್‌ಎಫ್‌) ಸದಸ್ಯರು ಶುಕ್ರವಾರ ಸಂಜೆಯೇ ಶಾಲೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಪರದೆ ಇಳಿಸಿದ ಇಬ್ಬರು ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು. ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆ ಪೊಲೀಸರು ಮಧ್ಯಪ್ರವೇಶಿಸಿದ್ದರು.

ಶಿಕ್ಷಕರ ವಿರುದ್ದ ಕ್ರಮ ಕೈಗೊಳ್ಳುವವರೆಗೆ ಶಾಲೆಯಿಂದ ಕದಲುವುದಿಲ್ಲ ಎಂದು ಎಂಎಸ್‌ಎಫ್ ನಾಯಕರು ಪಟ್ಟು ಹಿಡಿದು ಕುಳಿತಿದ್ದರು. ಪರಿಸ್ಥಿತಿ ಹತೋಟಿಗೆ ತರಲು ಕುಂಬಳೆ ಪೊಲೀಸರು ಕೆಲ ವಿದ್ಯಾರ್ಥಿಗಳನ್ನು ಬಂಧಿಸಿದ್ದರು. ಮಂಜೇಶ್ವರ ಶಾಸಕ ಎ.ಕೆ.ಎಂ ಅಶ್ರಫ್ ಕೂಡ ಸ್ಥಳಕ್ಕೆ ಭೇಟಿ ಕೊಟ್ಟಿದ್ದರು.

ನಂತರ, ಕೇರಳದ ಆಡಳಿತಾರೂಢ ಸಿಪಿಎಂನ ವಿದ್ಯಾರ್ಥಿ ವಿಭಾಗವಾದ ಭಾರತೀಯ ವಿದ್ಯಾರ್ಥಿ ಒಕ್ಕೂಟ (ಎಸ್‌ಎಫ್‌ಐ) ಶಾಲೆಗೆ ಪ್ರತಿಭಟನಾ ಮೆರವಣಿಗೆ ನಡೆಸಿತ್ತು. ಎಸ್‌ಡಿಪಿಐ ಕೂಡ ಶಾಲೆಯ ಹೊರಗೆ ಪ್ರತಿಭಟನೆ ಹಮ್ಮಿಕೊಂಡಿತ್ತು.

ಆರೋಪಿ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಕರು ಮತ್ತು ಪೋಷಕರ ಒಕ್ಕೂಟ (ಪಿಟಿಎ) ಅಧ್ಯಕ್ಷರು ತಿಳಿಸಿದ್ದಾರೆ. ಮೂಕಾಭಿನಯ ಸೇರಿದಂತೆ ಇತರ ಸ್ಪರ್ಥೆಗಳನ್ನು ಮುಂದಿನ ದಿನಗಳಲ್ಲಿ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

“ಇದು ದೇಶದ್ರೋಹದ ಕೃತ್ಯವಲ್ಲ, ಪ್ಯಾಲೆಸ್ತೀನ್‌ ಜೊತೆಗಿನ ಒಗ್ಗಟ್ಟಿನ ಸಂಕೇತವಾಗಿದೆ” ಎಂದು ಒತ್ತಿ ಹೇಳಿರುವ ಪಿಟಿಎ ಅಧ್ಯಕ್ಷರು, ಯುವಜನೋತ್ಸವಗಳು ಪ್ರಸ್ತುತ ಮತ್ತು ಸಮಕಾಲೀನ ವಿಷಯಗಳನ್ನು ಒಳಗೊಂಡಿರುತ್ತವೆ ಎಂದಿದ್ದಾರೆ.

ಕುಂಬಳೆ ಘಟನೆಯ ಒಂದು ದಿನ ಮೊದಲು ಕಣ್ಣೂರಿನಲ್ಲಿ ತಲಶ್ಶೇರಿಯ ಅಂಚರಕಂಡಿ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು, ಕೋಲ್ಕಲಿ (ಜಾನಪದ ಕಲೆ) ಪ್ರದರ್ಶನದ ವೇಳೆ ಪ್ಯಾಲೆಸ್ತೀನ್‌ ಪರ ಘೋಷಣೆಗಳನ್ನು ಹೊಂದಿರುವ ಟಿ-ಶರ್ಟ್‌ಗಳನ್ನು ಧರಿಸಿದ್ದಕ್ಕಾಗಿ ಅವರ ಪ್ರದರ್ಶನವನ್ನು ಮಧ್ಯದಲ್ಲಿಯೇ ನಿಲ್ಲಿಸಲಾಗಿತ್ತು ಎಂದು ವರದಿಯಾಗಿದೆ.

‘ಲವ್ ಜಿಹಾದ್, ಮೆಹಂದಿ ಜಿಹಾದ್’ ಕಾರ್ಯಕ್ರಮಗಳ ಪ್ರಸಾರ : ಝೀ ನ್ಯೂಸ್, ಟೈಮ್ಸ್ ನೌ ನವಭಾರತ್‌ಗೆ ಎನ್‌ಬಿಡಿಎಸ್‌ಎ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...