Homeಮುಖಪುಟಸರ್ಕಾರಿ ಸ್ವಾಮ್ಯದ ಉದ್ಯಮಗಳನ್ನು ಹಾಗೇ ಮುಂದುವರೆಸಬೇಕು ಎಂದೇನಿಲ್ಲ: ಪ್ರಧಾನಿ ಮೋದಿ

ಸರ್ಕಾರಿ ಸ್ವಾಮ್ಯದ ಉದ್ಯಮಗಳನ್ನು ಹಾಗೇ ಮುಂದುವರೆಸಬೇಕು ಎಂದೇನಿಲ್ಲ: ಪ್ರಧಾನಿ ಮೋದಿ

- Advertisement -
- Advertisement -

“ಸರ್ಕಾರಿ ಸ್ವಾಮ್ಯದ ಉದ್ಯಮಗಳನ್ನು ಹಾಗೇ ಮುಂದುವರೆಸಬೇಕು ಎಂದೇನಿಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿ ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣೆ ಇಲಾಖೆ ಖಾಸಗೀಕರಣ ಕುರಿತಾದ ವೆಬಿನಾರ್‌ನಲ್ಲಿ ಹೇಳಿದ್ದಾರೆ.

2021ನೇ ಸಾಲಿನ ಬಜೆಟ್‌ನಲ್ಲಿ ಪ್ರಸ್ತಾಪಿಸಿರುವ ಹಲವು ಸುಧಾರಣಾ ಕ್ರಮಗಳ ಕುರಿತು ಮಾತನಾಡಿದ ಪ್ರಧಾನಿ, “ವ್ಯಾಪಾರ ವ್ಯವಹಾರಕ್ಕೆ ಬೆಂಬಲ ನೀಡುವುದು ಕೇಂದ್ರ ಸರ್ಕಾರದ ಕರ್ತವ್ಯ. ಆದರೆ ಕೇಂದ್ರ ಸರ್ಕಾರವೇ ನೇರವಾಗಿ ವ್ಯಾಪಾರ ವಹಿವಾಟು ನಡೆಸಬೇಕು, ಕಂಪನಿ ನಡೆಸಬೇಕು ಎನ್ನುವ ಅವಶ್ಯಕತೆ ಇಲ್ಲ. ಈ ಹಿಂದೆ ಕಾಲದ ಅಗತ್ಯಕ್ಕೆ ತಕ್ಕಂತೆ ಸರ್ಕಾರಿ ಸ್ವಾಮ್ಯದ ಕಂಪನಿಗಳನ್ನು ಸ್ಥಾಪಿಸಲಾಗಿತ್ತು, ಜೊತೆಗೆ ಅವುಗಳನ್ನು ಸ್ಥಾಪಿಸಿದ ಉದ್ದೇಶವೂ ವಿಭಿನ್ನವಾಗಿತ್ತು. 50-60 ವರ್ಷಗಳಷ್ಟು ಹಳೆಯ ಕಾಯ್ದೆಗಳನ್ನು ಈಗ ಸುಧಾರಣೆ ಮಾಡಲು ಸಾಧ್ಯವಿದೆ. ನಾವು ಈಗ ಸುಧಾರಣೆಯನ್ನು ತರುತ್ತಿದ್ದೇವೆ. ಹಾಗಾಗಿ ಸಾರ್ವಜನಿಕರ ಹಣವನ್ನು ಎಚ್ಚರಿಕೆಯಿಂದ ಖರ್ಚು ಮಾಡಲು ನಾವು ಆದ್ಯತೆ ನೀಡಿದ್ದೇವೆ” ಎಂದು ಹೇಳಿದ್ದಾರೆ.

“ಕೇಂದ್ರ ಸರ್ಕಾರಿ ಸ್ವಾಮ್ಯದ 4 ಪ್ರಮುಖ ಕ್ಷೇತ್ರಗಳ ಕಂಪನಿಗಳನ್ನು ಹೊರತುಪಡಿಸಿ ಉಳಿದ ಕ್ಷೇತ್ರಗಳಲ್ಲಿರುವ ಸುಮಾರು 100 ಕಂಪನಿಗಳನ್ನು ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿದೆ” ಎಂದು ಮಾಹಿತಿ ನೀಡಿದ್ದಾರೆ ಎಂಬುದಾಗಿ ಲೈವ್ ಮಿಂಟ್ ವರದಿ ಮಾಡಿದೆ.

“ಹಲವು ವರ್ಷಗಳಿಂದ ಸರ್ಕಾರಿ ಸ್ವಾಮ್ಯದ ಕಂಪನಿಗಳನ್ನು ಕೇಂದ್ರ ಸರ್ಕಾರ ನಡೆಸಿಕೊಂಡು ಬಂದಿದೆ ಎಂಬ ಮಾತ್ರಕ್ಕೆ ನಾವು ಅದನ್ನು ಮುಂದುವರೆಸಬೇಕು ಎಂದೇನಿಲ್ಲ. ಸಮಾಜದ ಕಲ್ಯಾಣ ಮತ್ತು ದೇಶದ ಜನತೆಗೆ ಸಂಬಂಧಿಸಿದ ನೀತಿ ನಿಯಮಗಳ ಮೇಲೆ ಮಾತ್ರ ಸರ್ಕಾರದ ಗಮನ ಇರಬೇಕು. ಪ್ರಸ್ತುತ ಇರುವ ವ್ಯವಸ್ಥೆಯಲ್ಲಿ ಅಧಿಕಾರಿಗಳು ತಮ್ಮ ಸಾಮರ್ಥ್ಯವನ್ನು ಸರ್ಕಾರಿ ಸ್ವಾಮ್ಯದ ಕಂಪನಿಗಳಲ್ಲಿ ವ್ಯವಹಾರ ಮಾಡಲು ವಿನಿಯೋಗಿಸುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ವಿಜ್ಞಾನಿಗಳು, ಶಿಕ್ಷಣತಜ್ಞರ ಆಕ್ಷೇಪ: ವೆಬಿನಾರ್ ನಿರ್ಬಂಧ ಹಿಂಪಡೆದ ಕೇಂದ್ರ ಸರ್ಕಾರ

“ಹಲವು ಸರ್ಕಾರಿ ಸ್ವಾಮ್ಯದ ಕಂಪನಿಗಳು ನಷ್ಟದಲ್ಲಿವೆ. ಹಲವು ಕಂಪನಿಗಳಿಗೆ ಜನರ ಹಣದಿಂದ ಬೆಂಬಲ ನೀಡಬೇಕಾದ ಸ್ಥಿತಿ ಇದೆ. ಹಲವು ವರ್ಷಗಳ ಹಿಂದೆ ಯಾರದೋ ಪ್ರಿಯ ಯೋಜನೆಯಾದ ಈ ಕಂಪನಿಗಳನ್ನು ಜನರ ಹಣದಿಂದ ನಡೆಸಬೇಕಾದ ಅವಶ್ಯಕತೆ ಇಲ್ಲ. ಕೇಂದ್ರ ಸರ್ಕಾರ ವ್ಯವಹಾರ ನಡೆಸಲು ಬಯಸುವುದಿಲ್ಲ. ಸರ್ಕಾರ ಖಾಸಗೀಕರಣ ಮಾಡಿದಾಗ ಖಾಸಗಿ ಕಂಪನಿಗಳು ಸರ್ಕಾರಿ ಸ್ವಾಮ್ಯದ ಕಂಪನಿಗಳಲ್ಲಿ ಹೂಡಿಕೆ ಮಾಡುತ್ತವೆ. ಖಾಸಗಿ ಕಂಪನಿಗಳು ಬಂಡವಾಳವನ್ನು ತರುತ್ತವೆ ಮತ್ತು ವಿಶ್ವದರ್ಜೆಯ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುತ್ತವೆ ಮತ್ತು ಹೆಚ್ಚು ಹೆಚ್ಚು ಉದ್ಯೋಗವನ್ನು ಒದಗಿಸುತ್ತವೆ” ಎಂದು ಸ್ಪಷ್ಟನೆ ನೀಡಿದರು.

ಕೇಂದ್ರ ಸರ್ಕಾರವು ಸರ್ಕಾರಿ ಸ್ವಾಮ್ಯದ 100 ಉದ್ಯಮಗಳನ್ನು ಖಾಸಗೀಕರಣಗೊಳಿಸುವ ಮೂಲಕ 2.5 ಲಕ್ಷ ಕೋಟಿ ರೂ.ಗಳನ್ನು ಸಂಗ್ರಹಿಸುವ ಗುರಿ ಹೊಂದಿದೆ. ಖಾಸಗೀಕರಣ ಪ್ರಕ್ರಿಯೆಯಿಂದ ಸಂಗ್ರಹವಾಗುವ ಹಣವನ್ನು ಗ್ರಾಮೀಣ ಭಾಗದಲ್ಲಿ ರಸ್ತೆ ಅಭಿವೃದ್ಧಿಗೆ, ಸ್ವಚ್ಛ ಕುಡಿಯುವ ನೀರು ಪೂರೈಕೆಗೆ ಮತ್ತು ಎಲ್ಲರಿಗೂ ಸೂರು ಕಲ್ಪಿಸಿಕೊಡುವ ಯೋಜನೆಗಳಲ್ಲಿ ವಿನಿಯೋಗಿಸುತ್ತೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ನರೇಂದ್ರ ಮೋದಿ ಸರ್ಕಾರದ ಈ ನಿರ್ಧಾರಗಳ ವಿರುದ್ಧ ಮೊದಲಿನಿಂದಲೂ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಸರ್ಕಾರಿ ಸ್ವಾಮ್ಯದಲ್ಲಿರುವ ಮತ್ತು ಹೆಚ್ಚು ಲಾಭ ಗಳಿಸುತ್ತಿರುವ ಬಹುತೇಕ ಉದ್ಯಮಗಳನ್ನು ಖಾಸಗಿಯವರಿಗೆ ಮಾರಲಾಗಿದೆ ಎಂದು ಆರೋಪಿಸುತ್ತಿದ್ದಾರೆ. ಅಂದರೆ ಕೇವಲ ಅಂಬಾನಿ-ಅದಾನಿಗಾಗಿ ಸರ್ಕಾರ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇತ್ತೀಚೆಗೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದು “ನಾವಿಬ್ಬರು-ನಮಗಿಬ್ಬರು” ಎನ್ನುವ ಸರ್ಕಾರ ಎಂದು ಛೇಡಿಸಿದ್ದರು.

ಇತ್ತೀಚೆಗೆ ವಿಮಾನ ನಿಲ್ದಾಣ ಮತ್ತು ರೈಲುಗಳನ್ನು ಖಾಸಗೀಕರಣಗೊಳಿಸಲಾಗಿತ್ತು. ಇದೀಗ ಕೇಂದ್ರ ಸರ್ಕಾರದಿಂದ ಮತ್ತೊಂದು ಅಚ್ಚರಿಯ ಸುದ್ದಿ ಹೊರಬಿದ್ದಿದೆ.


ಇದನ್ನೂ ಓದಿ: ‘ಮೋದಿ ಉದ್ಯೋಗ ಕೊಡಿ, ಇಲ್ಲ ಕುರ್ಚಿ ಬಿಡಿ’ ವಿಶ್ವದಾದ್ಯಂತ ಟ್ವಿಟರ್ ಟ್ರೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...