Homeಮುಖಪುಟಸರ್ಕಾರಿ ಸ್ವಾಮ್ಯದ ಉದ್ಯಮಗಳನ್ನು ಹಾಗೇ ಮುಂದುವರೆಸಬೇಕು ಎಂದೇನಿಲ್ಲ: ಪ್ರಧಾನಿ ಮೋದಿ

ಸರ್ಕಾರಿ ಸ್ವಾಮ್ಯದ ಉದ್ಯಮಗಳನ್ನು ಹಾಗೇ ಮುಂದುವರೆಸಬೇಕು ಎಂದೇನಿಲ್ಲ: ಪ್ರಧಾನಿ ಮೋದಿ

- Advertisement -
- Advertisement -

“ಸರ್ಕಾರಿ ಸ್ವಾಮ್ಯದ ಉದ್ಯಮಗಳನ್ನು ಹಾಗೇ ಮುಂದುವರೆಸಬೇಕು ಎಂದೇನಿಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿ ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣೆ ಇಲಾಖೆ ಖಾಸಗೀಕರಣ ಕುರಿತಾದ ವೆಬಿನಾರ್‌ನಲ್ಲಿ ಹೇಳಿದ್ದಾರೆ.

2021ನೇ ಸಾಲಿನ ಬಜೆಟ್‌ನಲ್ಲಿ ಪ್ರಸ್ತಾಪಿಸಿರುವ ಹಲವು ಸುಧಾರಣಾ ಕ್ರಮಗಳ ಕುರಿತು ಮಾತನಾಡಿದ ಪ್ರಧಾನಿ, “ವ್ಯಾಪಾರ ವ್ಯವಹಾರಕ್ಕೆ ಬೆಂಬಲ ನೀಡುವುದು ಕೇಂದ್ರ ಸರ್ಕಾರದ ಕರ್ತವ್ಯ. ಆದರೆ ಕೇಂದ್ರ ಸರ್ಕಾರವೇ ನೇರವಾಗಿ ವ್ಯಾಪಾರ ವಹಿವಾಟು ನಡೆಸಬೇಕು, ಕಂಪನಿ ನಡೆಸಬೇಕು ಎನ್ನುವ ಅವಶ್ಯಕತೆ ಇಲ್ಲ. ಈ ಹಿಂದೆ ಕಾಲದ ಅಗತ್ಯಕ್ಕೆ ತಕ್ಕಂತೆ ಸರ್ಕಾರಿ ಸ್ವಾಮ್ಯದ ಕಂಪನಿಗಳನ್ನು ಸ್ಥಾಪಿಸಲಾಗಿತ್ತು, ಜೊತೆಗೆ ಅವುಗಳನ್ನು ಸ್ಥಾಪಿಸಿದ ಉದ್ದೇಶವೂ ವಿಭಿನ್ನವಾಗಿತ್ತು. 50-60 ವರ್ಷಗಳಷ್ಟು ಹಳೆಯ ಕಾಯ್ದೆಗಳನ್ನು ಈಗ ಸುಧಾರಣೆ ಮಾಡಲು ಸಾಧ್ಯವಿದೆ. ನಾವು ಈಗ ಸುಧಾರಣೆಯನ್ನು ತರುತ್ತಿದ್ದೇವೆ. ಹಾಗಾಗಿ ಸಾರ್ವಜನಿಕರ ಹಣವನ್ನು ಎಚ್ಚರಿಕೆಯಿಂದ ಖರ್ಚು ಮಾಡಲು ನಾವು ಆದ್ಯತೆ ನೀಡಿದ್ದೇವೆ” ಎಂದು ಹೇಳಿದ್ದಾರೆ.

“ಕೇಂದ್ರ ಸರ್ಕಾರಿ ಸ್ವಾಮ್ಯದ 4 ಪ್ರಮುಖ ಕ್ಷೇತ್ರಗಳ ಕಂಪನಿಗಳನ್ನು ಹೊರತುಪಡಿಸಿ ಉಳಿದ ಕ್ಷೇತ್ರಗಳಲ್ಲಿರುವ ಸುಮಾರು 100 ಕಂಪನಿಗಳನ್ನು ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿದೆ” ಎಂದು ಮಾಹಿತಿ ನೀಡಿದ್ದಾರೆ ಎಂಬುದಾಗಿ ಲೈವ್ ಮಿಂಟ್ ವರದಿ ಮಾಡಿದೆ.

“ಹಲವು ವರ್ಷಗಳಿಂದ ಸರ್ಕಾರಿ ಸ್ವಾಮ್ಯದ ಕಂಪನಿಗಳನ್ನು ಕೇಂದ್ರ ಸರ್ಕಾರ ನಡೆಸಿಕೊಂಡು ಬಂದಿದೆ ಎಂಬ ಮಾತ್ರಕ್ಕೆ ನಾವು ಅದನ್ನು ಮುಂದುವರೆಸಬೇಕು ಎಂದೇನಿಲ್ಲ. ಸಮಾಜದ ಕಲ್ಯಾಣ ಮತ್ತು ದೇಶದ ಜನತೆಗೆ ಸಂಬಂಧಿಸಿದ ನೀತಿ ನಿಯಮಗಳ ಮೇಲೆ ಮಾತ್ರ ಸರ್ಕಾರದ ಗಮನ ಇರಬೇಕು. ಪ್ರಸ್ತುತ ಇರುವ ವ್ಯವಸ್ಥೆಯಲ್ಲಿ ಅಧಿಕಾರಿಗಳು ತಮ್ಮ ಸಾಮರ್ಥ್ಯವನ್ನು ಸರ್ಕಾರಿ ಸ್ವಾಮ್ಯದ ಕಂಪನಿಗಳಲ್ಲಿ ವ್ಯವಹಾರ ಮಾಡಲು ವಿನಿಯೋಗಿಸುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ವಿಜ್ಞಾನಿಗಳು, ಶಿಕ್ಷಣತಜ್ಞರ ಆಕ್ಷೇಪ: ವೆಬಿನಾರ್ ನಿರ್ಬಂಧ ಹಿಂಪಡೆದ ಕೇಂದ್ರ ಸರ್ಕಾರ

“ಹಲವು ಸರ್ಕಾರಿ ಸ್ವಾಮ್ಯದ ಕಂಪನಿಗಳು ನಷ್ಟದಲ್ಲಿವೆ. ಹಲವು ಕಂಪನಿಗಳಿಗೆ ಜನರ ಹಣದಿಂದ ಬೆಂಬಲ ನೀಡಬೇಕಾದ ಸ್ಥಿತಿ ಇದೆ. ಹಲವು ವರ್ಷಗಳ ಹಿಂದೆ ಯಾರದೋ ಪ್ರಿಯ ಯೋಜನೆಯಾದ ಈ ಕಂಪನಿಗಳನ್ನು ಜನರ ಹಣದಿಂದ ನಡೆಸಬೇಕಾದ ಅವಶ್ಯಕತೆ ಇಲ್ಲ. ಕೇಂದ್ರ ಸರ್ಕಾರ ವ್ಯವಹಾರ ನಡೆಸಲು ಬಯಸುವುದಿಲ್ಲ. ಸರ್ಕಾರ ಖಾಸಗೀಕರಣ ಮಾಡಿದಾಗ ಖಾಸಗಿ ಕಂಪನಿಗಳು ಸರ್ಕಾರಿ ಸ್ವಾಮ್ಯದ ಕಂಪನಿಗಳಲ್ಲಿ ಹೂಡಿಕೆ ಮಾಡುತ್ತವೆ. ಖಾಸಗಿ ಕಂಪನಿಗಳು ಬಂಡವಾಳವನ್ನು ತರುತ್ತವೆ ಮತ್ತು ವಿಶ್ವದರ್ಜೆಯ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುತ್ತವೆ ಮತ್ತು ಹೆಚ್ಚು ಹೆಚ್ಚು ಉದ್ಯೋಗವನ್ನು ಒದಗಿಸುತ್ತವೆ” ಎಂದು ಸ್ಪಷ್ಟನೆ ನೀಡಿದರು.

ಕೇಂದ್ರ ಸರ್ಕಾರವು ಸರ್ಕಾರಿ ಸ್ವಾಮ್ಯದ 100 ಉದ್ಯಮಗಳನ್ನು ಖಾಸಗೀಕರಣಗೊಳಿಸುವ ಮೂಲಕ 2.5 ಲಕ್ಷ ಕೋಟಿ ರೂ.ಗಳನ್ನು ಸಂಗ್ರಹಿಸುವ ಗುರಿ ಹೊಂದಿದೆ. ಖಾಸಗೀಕರಣ ಪ್ರಕ್ರಿಯೆಯಿಂದ ಸಂಗ್ರಹವಾಗುವ ಹಣವನ್ನು ಗ್ರಾಮೀಣ ಭಾಗದಲ್ಲಿ ರಸ್ತೆ ಅಭಿವೃದ್ಧಿಗೆ, ಸ್ವಚ್ಛ ಕುಡಿಯುವ ನೀರು ಪೂರೈಕೆಗೆ ಮತ್ತು ಎಲ್ಲರಿಗೂ ಸೂರು ಕಲ್ಪಿಸಿಕೊಡುವ ಯೋಜನೆಗಳಲ್ಲಿ ವಿನಿಯೋಗಿಸುತ್ತೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ನರೇಂದ್ರ ಮೋದಿ ಸರ್ಕಾರದ ಈ ನಿರ್ಧಾರಗಳ ವಿರುದ್ಧ ಮೊದಲಿನಿಂದಲೂ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಸರ್ಕಾರಿ ಸ್ವಾಮ್ಯದಲ್ಲಿರುವ ಮತ್ತು ಹೆಚ್ಚು ಲಾಭ ಗಳಿಸುತ್ತಿರುವ ಬಹುತೇಕ ಉದ್ಯಮಗಳನ್ನು ಖಾಸಗಿಯವರಿಗೆ ಮಾರಲಾಗಿದೆ ಎಂದು ಆರೋಪಿಸುತ್ತಿದ್ದಾರೆ. ಅಂದರೆ ಕೇವಲ ಅಂಬಾನಿ-ಅದಾನಿಗಾಗಿ ಸರ್ಕಾರ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇತ್ತೀಚೆಗೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದು “ನಾವಿಬ್ಬರು-ನಮಗಿಬ್ಬರು” ಎನ್ನುವ ಸರ್ಕಾರ ಎಂದು ಛೇಡಿಸಿದ್ದರು.

ಇತ್ತೀಚೆಗೆ ವಿಮಾನ ನಿಲ್ದಾಣ ಮತ್ತು ರೈಲುಗಳನ್ನು ಖಾಸಗೀಕರಣಗೊಳಿಸಲಾಗಿತ್ತು. ಇದೀಗ ಕೇಂದ್ರ ಸರ್ಕಾರದಿಂದ ಮತ್ತೊಂದು ಅಚ್ಚರಿಯ ಸುದ್ದಿ ಹೊರಬಿದ್ದಿದೆ.


ಇದನ್ನೂ ಓದಿ: ‘ಮೋದಿ ಉದ್ಯೋಗ ಕೊಡಿ, ಇಲ್ಲ ಕುರ್ಚಿ ಬಿಡಿ’ ವಿಶ್ವದಾದ್ಯಂತ ಟ್ವಿಟರ್ ಟ್ರೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...