Homeಮುಖಪುಟಸರ್ಕಾರಿ ಸ್ವಾಮ್ಯದ ಉದ್ಯಮಗಳನ್ನು ಹಾಗೇ ಮುಂದುವರೆಸಬೇಕು ಎಂದೇನಿಲ್ಲ: ಪ್ರಧಾನಿ ಮೋದಿ

ಸರ್ಕಾರಿ ಸ್ವಾಮ್ಯದ ಉದ್ಯಮಗಳನ್ನು ಹಾಗೇ ಮುಂದುವರೆಸಬೇಕು ಎಂದೇನಿಲ್ಲ: ಪ್ರಧಾನಿ ಮೋದಿ

- Advertisement -
- Advertisement -

“ಸರ್ಕಾರಿ ಸ್ವಾಮ್ಯದ ಉದ್ಯಮಗಳನ್ನು ಹಾಗೇ ಮುಂದುವರೆಸಬೇಕು ಎಂದೇನಿಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿ ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣೆ ಇಲಾಖೆ ಖಾಸಗೀಕರಣ ಕುರಿತಾದ ವೆಬಿನಾರ್‌ನಲ್ಲಿ ಹೇಳಿದ್ದಾರೆ.

2021ನೇ ಸಾಲಿನ ಬಜೆಟ್‌ನಲ್ಲಿ ಪ್ರಸ್ತಾಪಿಸಿರುವ ಹಲವು ಸುಧಾರಣಾ ಕ್ರಮಗಳ ಕುರಿತು ಮಾತನಾಡಿದ ಪ್ರಧಾನಿ, “ವ್ಯಾಪಾರ ವ್ಯವಹಾರಕ್ಕೆ ಬೆಂಬಲ ನೀಡುವುದು ಕೇಂದ್ರ ಸರ್ಕಾರದ ಕರ್ತವ್ಯ. ಆದರೆ ಕೇಂದ್ರ ಸರ್ಕಾರವೇ ನೇರವಾಗಿ ವ್ಯಾಪಾರ ವಹಿವಾಟು ನಡೆಸಬೇಕು, ಕಂಪನಿ ನಡೆಸಬೇಕು ಎನ್ನುವ ಅವಶ್ಯಕತೆ ಇಲ್ಲ. ಈ ಹಿಂದೆ ಕಾಲದ ಅಗತ್ಯಕ್ಕೆ ತಕ್ಕಂತೆ ಸರ್ಕಾರಿ ಸ್ವಾಮ್ಯದ ಕಂಪನಿಗಳನ್ನು ಸ್ಥಾಪಿಸಲಾಗಿತ್ತು, ಜೊತೆಗೆ ಅವುಗಳನ್ನು ಸ್ಥಾಪಿಸಿದ ಉದ್ದೇಶವೂ ವಿಭಿನ್ನವಾಗಿತ್ತು. 50-60 ವರ್ಷಗಳಷ್ಟು ಹಳೆಯ ಕಾಯ್ದೆಗಳನ್ನು ಈಗ ಸುಧಾರಣೆ ಮಾಡಲು ಸಾಧ್ಯವಿದೆ. ನಾವು ಈಗ ಸುಧಾರಣೆಯನ್ನು ತರುತ್ತಿದ್ದೇವೆ. ಹಾಗಾಗಿ ಸಾರ್ವಜನಿಕರ ಹಣವನ್ನು ಎಚ್ಚರಿಕೆಯಿಂದ ಖರ್ಚು ಮಾಡಲು ನಾವು ಆದ್ಯತೆ ನೀಡಿದ್ದೇವೆ” ಎಂದು ಹೇಳಿದ್ದಾರೆ.

“ಕೇಂದ್ರ ಸರ್ಕಾರಿ ಸ್ವಾಮ್ಯದ 4 ಪ್ರಮುಖ ಕ್ಷೇತ್ರಗಳ ಕಂಪನಿಗಳನ್ನು ಹೊರತುಪಡಿಸಿ ಉಳಿದ ಕ್ಷೇತ್ರಗಳಲ್ಲಿರುವ ಸುಮಾರು 100 ಕಂಪನಿಗಳನ್ನು ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿದೆ” ಎಂದು ಮಾಹಿತಿ ನೀಡಿದ್ದಾರೆ ಎಂಬುದಾಗಿ ಲೈವ್ ಮಿಂಟ್ ವರದಿ ಮಾಡಿದೆ.

“ಹಲವು ವರ್ಷಗಳಿಂದ ಸರ್ಕಾರಿ ಸ್ವಾಮ್ಯದ ಕಂಪನಿಗಳನ್ನು ಕೇಂದ್ರ ಸರ್ಕಾರ ನಡೆಸಿಕೊಂಡು ಬಂದಿದೆ ಎಂಬ ಮಾತ್ರಕ್ಕೆ ನಾವು ಅದನ್ನು ಮುಂದುವರೆಸಬೇಕು ಎಂದೇನಿಲ್ಲ. ಸಮಾಜದ ಕಲ್ಯಾಣ ಮತ್ತು ದೇಶದ ಜನತೆಗೆ ಸಂಬಂಧಿಸಿದ ನೀತಿ ನಿಯಮಗಳ ಮೇಲೆ ಮಾತ್ರ ಸರ್ಕಾರದ ಗಮನ ಇರಬೇಕು. ಪ್ರಸ್ತುತ ಇರುವ ವ್ಯವಸ್ಥೆಯಲ್ಲಿ ಅಧಿಕಾರಿಗಳು ತಮ್ಮ ಸಾಮರ್ಥ್ಯವನ್ನು ಸರ್ಕಾರಿ ಸ್ವಾಮ್ಯದ ಕಂಪನಿಗಳಲ್ಲಿ ವ್ಯವಹಾರ ಮಾಡಲು ವಿನಿಯೋಗಿಸುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ವಿಜ್ಞಾನಿಗಳು, ಶಿಕ್ಷಣತಜ್ಞರ ಆಕ್ಷೇಪ: ವೆಬಿನಾರ್ ನಿರ್ಬಂಧ ಹಿಂಪಡೆದ ಕೇಂದ್ರ ಸರ್ಕಾರ

“ಹಲವು ಸರ್ಕಾರಿ ಸ್ವಾಮ್ಯದ ಕಂಪನಿಗಳು ನಷ್ಟದಲ್ಲಿವೆ. ಹಲವು ಕಂಪನಿಗಳಿಗೆ ಜನರ ಹಣದಿಂದ ಬೆಂಬಲ ನೀಡಬೇಕಾದ ಸ್ಥಿತಿ ಇದೆ. ಹಲವು ವರ್ಷಗಳ ಹಿಂದೆ ಯಾರದೋ ಪ್ರಿಯ ಯೋಜನೆಯಾದ ಈ ಕಂಪನಿಗಳನ್ನು ಜನರ ಹಣದಿಂದ ನಡೆಸಬೇಕಾದ ಅವಶ್ಯಕತೆ ಇಲ್ಲ. ಕೇಂದ್ರ ಸರ್ಕಾರ ವ್ಯವಹಾರ ನಡೆಸಲು ಬಯಸುವುದಿಲ್ಲ. ಸರ್ಕಾರ ಖಾಸಗೀಕರಣ ಮಾಡಿದಾಗ ಖಾಸಗಿ ಕಂಪನಿಗಳು ಸರ್ಕಾರಿ ಸ್ವಾಮ್ಯದ ಕಂಪನಿಗಳಲ್ಲಿ ಹೂಡಿಕೆ ಮಾಡುತ್ತವೆ. ಖಾಸಗಿ ಕಂಪನಿಗಳು ಬಂಡವಾಳವನ್ನು ತರುತ್ತವೆ ಮತ್ತು ವಿಶ್ವದರ್ಜೆಯ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುತ್ತವೆ ಮತ್ತು ಹೆಚ್ಚು ಹೆಚ್ಚು ಉದ್ಯೋಗವನ್ನು ಒದಗಿಸುತ್ತವೆ” ಎಂದು ಸ್ಪಷ್ಟನೆ ನೀಡಿದರು.

ಕೇಂದ್ರ ಸರ್ಕಾರವು ಸರ್ಕಾರಿ ಸ್ವಾಮ್ಯದ 100 ಉದ್ಯಮಗಳನ್ನು ಖಾಸಗೀಕರಣಗೊಳಿಸುವ ಮೂಲಕ 2.5 ಲಕ್ಷ ಕೋಟಿ ರೂ.ಗಳನ್ನು ಸಂಗ್ರಹಿಸುವ ಗುರಿ ಹೊಂದಿದೆ. ಖಾಸಗೀಕರಣ ಪ್ರಕ್ರಿಯೆಯಿಂದ ಸಂಗ್ರಹವಾಗುವ ಹಣವನ್ನು ಗ್ರಾಮೀಣ ಭಾಗದಲ್ಲಿ ರಸ್ತೆ ಅಭಿವೃದ್ಧಿಗೆ, ಸ್ವಚ್ಛ ಕುಡಿಯುವ ನೀರು ಪೂರೈಕೆಗೆ ಮತ್ತು ಎಲ್ಲರಿಗೂ ಸೂರು ಕಲ್ಪಿಸಿಕೊಡುವ ಯೋಜನೆಗಳಲ್ಲಿ ವಿನಿಯೋಗಿಸುತ್ತೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ನರೇಂದ್ರ ಮೋದಿ ಸರ್ಕಾರದ ಈ ನಿರ್ಧಾರಗಳ ವಿರುದ್ಧ ಮೊದಲಿನಿಂದಲೂ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಸರ್ಕಾರಿ ಸ್ವಾಮ್ಯದಲ್ಲಿರುವ ಮತ್ತು ಹೆಚ್ಚು ಲಾಭ ಗಳಿಸುತ್ತಿರುವ ಬಹುತೇಕ ಉದ್ಯಮಗಳನ್ನು ಖಾಸಗಿಯವರಿಗೆ ಮಾರಲಾಗಿದೆ ಎಂದು ಆರೋಪಿಸುತ್ತಿದ್ದಾರೆ. ಅಂದರೆ ಕೇವಲ ಅಂಬಾನಿ-ಅದಾನಿಗಾಗಿ ಸರ್ಕಾರ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇತ್ತೀಚೆಗೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದು “ನಾವಿಬ್ಬರು-ನಮಗಿಬ್ಬರು” ಎನ್ನುವ ಸರ್ಕಾರ ಎಂದು ಛೇಡಿಸಿದ್ದರು.

ಇತ್ತೀಚೆಗೆ ವಿಮಾನ ನಿಲ್ದಾಣ ಮತ್ತು ರೈಲುಗಳನ್ನು ಖಾಸಗೀಕರಣಗೊಳಿಸಲಾಗಿತ್ತು. ಇದೀಗ ಕೇಂದ್ರ ಸರ್ಕಾರದಿಂದ ಮತ್ತೊಂದು ಅಚ್ಚರಿಯ ಸುದ್ದಿ ಹೊರಬಿದ್ದಿದೆ.


ಇದನ್ನೂ ಓದಿ: ‘ಮೋದಿ ಉದ್ಯೋಗ ಕೊಡಿ, ಇಲ್ಲ ಕುರ್ಚಿ ಬಿಡಿ’ ವಿಶ್ವದಾದ್ಯಂತ ಟ್ವಿಟರ್ ಟ್ರೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...