Homeಮುಖಪುಟಸರ್ಕಾರಿ ಸ್ವಾಮ್ಯದ ಉದ್ಯಮಗಳನ್ನು ಹಾಗೇ ಮುಂದುವರೆಸಬೇಕು ಎಂದೇನಿಲ್ಲ: ಪ್ರಧಾನಿ ಮೋದಿ

ಸರ್ಕಾರಿ ಸ್ವಾಮ್ಯದ ಉದ್ಯಮಗಳನ್ನು ಹಾಗೇ ಮುಂದುವರೆಸಬೇಕು ಎಂದೇನಿಲ್ಲ: ಪ್ರಧಾನಿ ಮೋದಿ

- Advertisement -
- Advertisement -

“ಸರ್ಕಾರಿ ಸ್ವಾಮ್ಯದ ಉದ್ಯಮಗಳನ್ನು ಹಾಗೇ ಮುಂದುವರೆಸಬೇಕು ಎಂದೇನಿಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿ ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣೆ ಇಲಾಖೆ ಖಾಸಗೀಕರಣ ಕುರಿತಾದ ವೆಬಿನಾರ್‌ನಲ್ಲಿ ಹೇಳಿದ್ದಾರೆ.

2021ನೇ ಸಾಲಿನ ಬಜೆಟ್‌ನಲ್ಲಿ ಪ್ರಸ್ತಾಪಿಸಿರುವ ಹಲವು ಸುಧಾರಣಾ ಕ್ರಮಗಳ ಕುರಿತು ಮಾತನಾಡಿದ ಪ್ರಧಾನಿ, “ವ್ಯಾಪಾರ ವ್ಯವಹಾರಕ್ಕೆ ಬೆಂಬಲ ನೀಡುವುದು ಕೇಂದ್ರ ಸರ್ಕಾರದ ಕರ್ತವ್ಯ. ಆದರೆ ಕೇಂದ್ರ ಸರ್ಕಾರವೇ ನೇರವಾಗಿ ವ್ಯಾಪಾರ ವಹಿವಾಟು ನಡೆಸಬೇಕು, ಕಂಪನಿ ನಡೆಸಬೇಕು ಎನ್ನುವ ಅವಶ್ಯಕತೆ ಇಲ್ಲ. ಈ ಹಿಂದೆ ಕಾಲದ ಅಗತ್ಯಕ್ಕೆ ತಕ್ಕಂತೆ ಸರ್ಕಾರಿ ಸ್ವಾಮ್ಯದ ಕಂಪನಿಗಳನ್ನು ಸ್ಥಾಪಿಸಲಾಗಿತ್ತು, ಜೊತೆಗೆ ಅವುಗಳನ್ನು ಸ್ಥಾಪಿಸಿದ ಉದ್ದೇಶವೂ ವಿಭಿನ್ನವಾಗಿತ್ತು. 50-60 ವರ್ಷಗಳಷ್ಟು ಹಳೆಯ ಕಾಯ್ದೆಗಳನ್ನು ಈಗ ಸುಧಾರಣೆ ಮಾಡಲು ಸಾಧ್ಯವಿದೆ. ನಾವು ಈಗ ಸುಧಾರಣೆಯನ್ನು ತರುತ್ತಿದ್ದೇವೆ. ಹಾಗಾಗಿ ಸಾರ್ವಜನಿಕರ ಹಣವನ್ನು ಎಚ್ಚರಿಕೆಯಿಂದ ಖರ್ಚು ಮಾಡಲು ನಾವು ಆದ್ಯತೆ ನೀಡಿದ್ದೇವೆ” ಎಂದು ಹೇಳಿದ್ದಾರೆ.

“ಕೇಂದ್ರ ಸರ್ಕಾರಿ ಸ್ವಾಮ್ಯದ 4 ಪ್ರಮುಖ ಕ್ಷೇತ್ರಗಳ ಕಂಪನಿಗಳನ್ನು ಹೊರತುಪಡಿಸಿ ಉಳಿದ ಕ್ಷೇತ್ರಗಳಲ್ಲಿರುವ ಸುಮಾರು 100 ಕಂಪನಿಗಳನ್ನು ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿದೆ” ಎಂದು ಮಾಹಿತಿ ನೀಡಿದ್ದಾರೆ ಎಂಬುದಾಗಿ ಲೈವ್ ಮಿಂಟ್ ವರದಿ ಮಾಡಿದೆ.

“ಹಲವು ವರ್ಷಗಳಿಂದ ಸರ್ಕಾರಿ ಸ್ವಾಮ್ಯದ ಕಂಪನಿಗಳನ್ನು ಕೇಂದ್ರ ಸರ್ಕಾರ ನಡೆಸಿಕೊಂಡು ಬಂದಿದೆ ಎಂಬ ಮಾತ್ರಕ್ಕೆ ನಾವು ಅದನ್ನು ಮುಂದುವರೆಸಬೇಕು ಎಂದೇನಿಲ್ಲ. ಸಮಾಜದ ಕಲ್ಯಾಣ ಮತ್ತು ದೇಶದ ಜನತೆಗೆ ಸಂಬಂಧಿಸಿದ ನೀತಿ ನಿಯಮಗಳ ಮೇಲೆ ಮಾತ್ರ ಸರ್ಕಾರದ ಗಮನ ಇರಬೇಕು. ಪ್ರಸ್ತುತ ಇರುವ ವ್ಯವಸ್ಥೆಯಲ್ಲಿ ಅಧಿಕಾರಿಗಳು ತಮ್ಮ ಸಾಮರ್ಥ್ಯವನ್ನು ಸರ್ಕಾರಿ ಸ್ವಾಮ್ಯದ ಕಂಪನಿಗಳಲ್ಲಿ ವ್ಯವಹಾರ ಮಾಡಲು ವಿನಿಯೋಗಿಸುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ವಿಜ್ಞಾನಿಗಳು, ಶಿಕ್ಷಣತಜ್ಞರ ಆಕ್ಷೇಪ: ವೆಬಿನಾರ್ ನಿರ್ಬಂಧ ಹಿಂಪಡೆದ ಕೇಂದ್ರ ಸರ್ಕಾರ

“ಹಲವು ಸರ್ಕಾರಿ ಸ್ವಾಮ್ಯದ ಕಂಪನಿಗಳು ನಷ್ಟದಲ್ಲಿವೆ. ಹಲವು ಕಂಪನಿಗಳಿಗೆ ಜನರ ಹಣದಿಂದ ಬೆಂಬಲ ನೀಡಬೇಕಾದ ಸ್ಥಿತಿ ಇದೆ. ಹಲವು ವರ್ಷಗಳ ಹಿಂದೆ ಯಾರದೋ ಪ್ರಿಯ ಯೋಜನೆಯಾದ ಈ ಕಂಪನಿಗಳನ್ನು ಜನರ ಹಣದಿಂದ ನಡೆಸಬೇಕಾದ ಅವಶ್ಯಕತೆ ಇಲ್ಲ. ಕೇಂದ್ರ ಸರ್ಕಾರ ವ್ಯವಹಾರ ನಡೆಸಲು ಬಯಸುವುದಿಲ್ಲ. ಸರ್ಕಾರ ಖಾಸಗೀಕರಣ ಮಾಡಿದಾಗ ಖಾಸಗಿ ಕಂಪನಿಗಳು ಸರ್ಕಾರಿ ಸ್ವಾಮ್ಯದ ಕಂಪನಿಗಳಲ್ಲಿ ಹೂಡಿಕೆ ಮಾಡುತ್ತವೆ. ಖಾಸಗಿ ಕಂಪನಿಗಳು ಬಂಡವಾಳವನ್ನು ತರುತ್ತವೆ ಮತ್ತು ವಿಶ್ವದರ್ಜೆಯ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುತ್ತವೆ ಮತ್ತು ಹೆಚ್ಚು ಹೆಚ್ಚು ಉದ್ಯೋಗವನ್ನು ಒದಗಿಸುತ್ತವೆ” ಎಂದು ಸ್ಪಷ್ಟನೆ ನೀಡಿದರು.

ಕೇಂದ್ರ ಸರ್ಕಾರವು ಸರ್ಕಾರಿ ಸ್ವಾಮ್ಯದ 100 ಉದ್ಯಮಗಳನ್ನು ಖಾಸಗೀಕರಣಗೊಳಿಸುವ ಮೂಲಕ 2.5 ಲಕ್ಷ ಕೋಟಿ ರೂ.ಗಳನ್ನು ಸಂಗ್ರಹಿಸುವ ಗುರಿ ಹೊಂದಿದೆ. ಖಾಸಗೀಕರಣ ಪ್ರಕ್ರಿಯೆಯಿಂದ ಸಂಗ್ರಹವಾಗುವ ಹಣವನ್ನು ಗ್ರಾಮೀಣ ಭಾಗದಲ್ಲಿ ರಸ್ತೆ ಅಭಿವೃದ್ಧಿಗೆ, ಸ್ವಚ್ಛ ಕುಡಿಯುವ ನೀರು ಪೂರೈಕೆಗೆ ಮತ್ತು ಎಲ್ಲರಿಗೂ ಸೂರು ಕಲ್ಪಿಸಿಕೊಡುವ ಯೋಜನೆಗಳಲ್ಲಿ ವಿನಿಯೋಗಿಸುತ್ತೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ನರೇಂದ್ರ ಮೋದಿ ಸರ್ಕಾರದ ಈ ನಿರ್ಧಾರಗಳ ವಿರುದ್ಧ ಮೊದಲಿನಿಂದಲೂ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಸರ್ಕಾರಿ ಸ್ವಾಮ್ಯದಲ್ಲಿರುವ ಮತ್ತು ಹೆಚ್ಚು ಲಾಭ ಗಳಿಸುತ್ತಿರುವ ಬಹುತೇಕ ಉದ್ಯಮಗಳನ್ನು ಖಾಸಗಿಯವರಿಗೆ ಮಾರಲಾಗಿದೆ ಎಂದು ಆರೋಪಿಸುತ್ತಿದ್ದಾರೆ. ಅಂದರೆ ಕೇವಲ ಅಂಬಾನಿ-ಅದಾನಿಗಾಗಿ ಸರ್ಕಾರ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇತ್ತೀಚೆಗೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದು “ನಾವಿಬ್ಬರು-ನಮಗಿಬ್ಬರು” ಎನ್ನುವ ಸರ್ಕಾರ ಎಂದು ಛೇಡಿಸಿದ್ದರು.

ಇತ್ತೀಚೆಗೆ ವಿಮಾನ ನಿಲ್ದಾಣ ಮತ್ತು ರೈಲುಗಳನ್ನು ಖಾಸಗೀಕರಣಗೊಳಿಸಲಾಗಿತ್ತು. ಇದೀಗ ಕೇಂದ್ರ ಸರ್ಕಾರದಿಂದ ಮತ್ತೊಂದು ಅಚ್ಚರಿಯ ಸುದ್ದಿ ಹೊರಬಿದ್ದಿದೆ.


ಇದನ್ನೂ ಓದಿ: ‘ಮೋದಿ ಉದ್ಯೋಗ ಕೊಡಿ, ಇಲ್ಲ ಕುರ್ಚಿ ಬಿಡಿ’ ವಿಶ್ವದಾದ್ಯಂತ ಟ್ವಿಟರ್ ಟ್ರೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...